AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ಸೌರಭ್​ನನ್ನು ಕೊಲೆ ಮಾಡಿ ಹಿಮಾಚಲಕ್ಕೆ ಟ್ರಿಪ್​ಗೆ ಹೋಗಿ ಸಾಹಿಲ್, ಮುಸ್ಕಾನ್ ಮಾಡಿದ್ದೇನು?

ಉತ್ತರ ಪ್ರದೇಶದ ಮೀರತ್‌ನಲ್ಲಿ ಪತಿ ಸೌರಭ್ ರಜಪೂತ್ ಹತ್ಯೆಯ ನಂತರ ಹಿಮಾಚಲ ಪ್ರದೇಶಕ್ಕೆ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಕ್ಯಾಬ್​ನಲ್ಲಿ ಪ್ರಯಾಣಿಸಿದ್ದರು. ಕ್ಯಾಬ್ ಚಾಲಕ ಪ್ರಯಾಣದ ಎಲ್ಲಾ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರ ನಡವಳಿಕೆಯನ್ನು ನೋಡಿದರೆ ಯಾರನ್ನೂ ಕೊಲೆ ಮಾಡಿದಂತೆ ಅನ್ನಿಸುತ್ತಿರಲಿಲ್ಲ, ಪ್ರಯಾಣದುದ್ದಕ್ಕೂ ಮುಸ್ಕಾನ್ ರಸ್ತೋಗಿ ಮತ್ತು ಸಾಹಿಲ್ ಶುಕ್ಲಾ ಪರಸ್ಪರ ಹೆಚ್ಚು ಮಾತನಾಡಿರಲಿಲ್ಲ. ಪ್ರವಾಸದ ಸಮಯದಲ್ಲಿ ಮುಸ್ಕಾನ್ ತನ್ನ ತಾಯಿಯಿಂದ ಕೇವಲ ಎರಡು ಕರೆಗಳನ್ನು ಮಾತ್ರ ಸ್ವೀಕರಿಸಿದರು. ಮುಸ್ಕಾನ್ ಮತ್ತು ಸಾಹಿಲ್ ಶುಕ್ಲಾ ಈ ಭೀಕರ ಕೃತ್ಯ ಎಸಗಿದ ನಂತರ ಆರು ದಿನಗಳ ಕಾಲ ಹಿಮಾಚಲದ ಕಸೋಲ್‌ನಲ್ಲಿ ತಂಗಿದ್ದರು.

ಮೀರತ್: ಸೌರಭ್​ನನ್ನು ಕೊಲೆ ಮಾಡಿ ಹಿಮಾಚಲಕ್ಕೆ ಟ್ರಿಪ್​ಗೆ ಹೋಗಿ ಸಾಹಿಲ್, ಮುಸ್ಕಾನ್ ಮಾಡಿದ್ದೇನು?
ಸಾಹಿಲ್, ಮುಸ್ಕಾನ್ Image Credit source: Hindustan Times
ನಯನಾ ರಾಜೀವ್
|

Updated on:Mar 23, 2025 | 8:33 AM

Share

ಮೀರತ್​, ಮಾರ್ಚ್​ 23: ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ನಿತ್ಯ ಹಲವು ಹೊಸ ವಿಚಾರಗಳು ಬಹಿರಂಗಗೊಳ್ಳುತ್ತಿವೆ. ಸೌರಭ್ ರಜಪೂತ್ ಹತ್ಯೆ ಮಾಡಿ, ಆರೋಪಿ ಮುಸ್ಕನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಹಿಮಾಚಲ ಪ್ರದೇಶಕ್ಕೆ ಟ್ರಿಪ್​ಗೆ ಹೋಗಿದ್ದರು. ಅಲ್ಲಿ ಅವರೇನು ಮಾಡಿದ್ದಾರೆ ಎನ್ನುವ ಬಗ್ಗೆ ಕ್ಯಾಬ್​ ಚಾಲಕ ಅಜಬ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಬ್ಬರ ನಡವಳಿಕೆಯೂ ಸಾಮಾನ್ಯವಾಗಿತ್ತು, ಅವರು ಯಾವುದೋ ಘೋರ ಅಪರಾಧ ಮಾಡಿದ್ದಾರೆಂದು ತೋರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಇಂಡಿಯಾ ಟುಡೇ ಜತೆಗೆ ಮಾತನಾಡಿದ ಚಾಲಕ, ಶಿಮ್ಲಾ ಮತ್ತು ಮನಾಲಿಗೆ ಪ್ರವಾಸ ಮಾಡುವಾಗ ಮುಸ್ಕಾನ್ ಮತ್ತು ಸಾಹಿಲ್ ಪರಸ್ಪರ ಹೆಚ್ಚು ಮಾತನಾಡಲಿಲ್ಲ. ಮುಸ್ಕಾನ್ ಗೆ ತನ್ನ ತಾಯಿಯಿಂದ ಎರಡು ಬಾರಿ ಮಾತ್ರ ಕರೆ ಬಂದಿತ್ತು. ಹಿಲ್ ಪ್ರತಿದಿನ ಎರಡು ಬಾಟಲಿ ಮದ್ಯ ಕುಡಿಯುತ್ತಿದ್ದರೆ, ಮುಸ್ಕಾನ್ ಮೂರು ಕ್ಯಾನ್ ಬಿಯರ್ ಕುಡಿಯುತ್ತಿದ್ದರು ಎಂದು ಕ್ಯಾಬ್ ಚಾಲಕ ಮಾಹಿತಿ ನೀಡಿದ್ದಾರೆ.

ಇಬ್ಬರೂ ಕೂಡ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಿದರು. ಅವರು ಹೋಳಿ ಆಚರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಈ ಸಂಪೂರ್ಣ ಪ್ರಕರಣದ ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಸತ್ಯವನ್ನು ಹೊರಗೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ
Image
ಮೀರತ್ ಕೊಲೆ; ಗಂಡನ ಜೊತೆ ಮುಸ್ಕಾನ್ ಡ್ಯಾನ್ಸ್ ಮಾಡಿದ ಹಳೇ ವಿಡಿಯೋ ವೈರಲ್
Image
ಮಗಳನ್ನು ಗಲ್ಲಿಗೇರಿಸಿ ಎಂದು ಕಣ್ಣೀರಿಟ್ಟ ಆರೋಪಿ ಮಹಿಳೆಯ ಪೋಷಕರು
Image
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ!
Image
ಮನೆಯ ಬಾವಿಯಲ್ಲಿ 4 ತಿಂಗಳ ಹೆಣ್ಣು ಮಗುವಿನ ಶವ ಪತ್ತೆ, ಕೊಂದಿದ್ಯಾರು?

ಮತ್ತಷ್ಟು ಓದಿ: ಮೀರತ್‌: ಪ್ರಿಯಕರನ ಜತೆ ಸೇರಿ ಪತಿಯ ಕೊಲೆಗೈದ ಮಹಿಳೆ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಸೀಲ್

ಮಾರ್ಚ್ 4 ರಂದು ಮೀರತ್‌ನಲ್ಲಿ ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಅದೇ ದಿನ, ಆರೋಪಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಸ್ವಿಫ್ಟ್ ಡಿಜೈರ್ ಕ್ಯಾಬ್ ಬುಕ್ ಮಾಡಿ ಶಿಮ್ಲಾ-ಮನಾಲಿಗೆ 15 ದಿನಗಳ ಪ್ರವಾಸಕ್ಕೆ ತೆರಳಿದರು.

ಇಬ್ಬರೂ 54,000 ರೂ.ಗೆ ಕಾರನ್ನು ಬುಕ್ ಮಾಡಿದ್ದರು. ಪ್ರವಾಸದ ಸಮಯದಲ್ಲಿ, ಮುಸ್ಕಾನ್ ಅವರಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದರು, ಶಿಮ್ಲಾದ ಹೋಟೆಲ್‌ನಲ್ಲಿ ಸಾಹಿಲ್‌ನ ಹುಟ್ಟುಹಬ್ಬಕ್ಕೆ ಕೇಕ್ ತರಲು ಕೇಳಿದ್ದರು. ಸಾಹಿಲ್ ಪ್ರತಿದಿನ ಸಂಜೆ ಮದ್ಯಪಾನ ಮಾಡುತ್ತಿದ್ದನು ಆದರೆ ಮುಸ್ಕಾನ್ ಕುಡಿದಿದ್ದನ್ನು ಅವನು ಎಂದಿಗೂ ನೋಡಿಲ್ಲ. ಆದಾಗ್ಯೂ, ಅವರು ಮೀರತ್‌ಗೆ ಹಿಂತಿರುಗುತ್ತಿರುವಾಗ ಮುಸ್ಕಾನ್ ಮದ್ಯಪಾನ ಮಾಡುವುದನ್ನು ನೋಡಿದ್ದೇನೆ ಎಂದಿದ್ದಾರೆ.

ಮುಸ್ಕಾನ್ ಮತ್ತು ಸಾಹಿಲ್ ವಿಚಾರಣೆಯ ಸಮಯದಲ್ಲಿ ಮಾರ್ಚ್ 4 ರಂದು ಸೌರಭ್‌ನನ್ನು ಕೊಂದಿದ್ದಾಗಿ ಒಪ್ಪಿಕೊಂಡರು. ಕೊಲೆಯ ನಂತರ, ಅವರು ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿ, ಡ್ರಮ್‌ನಲ್ಲಿ ಇರಿಸಿ ಸಿಮೆಂಟ್‌ನಿಂದ ಮುಚ್ಚಿದರು. ಇದಾದ ನಂತರ ಇಬ್ಬರೂ ಶಿಮ್ಲಾ-ಮನಾಲಿಗೆ ಭೇಟಿ ನೀಡಲು ಹೋದರು. ಪ್ರಸ್ತುತ ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Sun, 23 March 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ