AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವಿನ ದ್ವೇಷ; ಆಸ್ಪತ್ರೆಯಲ್ಲಿದ್ದರೂ ಬಿಡದೆ 5 ವರ್ಷದಲ್ಲಿ 11 ಬಾರಿ ಯುವತಿಗೆ ಕಚ್ಚಿದ ಸರ್ಪ

ಹಾವು ಸೇಡು ತೀರಿಸಿಕೊಳ್ಳುತ್ತದೆ ಎಂದು ಹಿಂದಿನ ಕಾಲದವರು ಬಲವಾಗಿ ನಂಬಿದ್ದರು. ಇದು ನಿಜವೇ? ಎಂಬುದು ಇನ್ನೂ ಸಾಬೀತಾಗಿಲ್ಲ. ವೈಜ್ಞಾನಿಕವಾಗಿ ಹಾವಿನ ದ್ವೇಷಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಉತ್ತರ ಪ್ರದೇಶದ ಯುವತಿಯೊಬ್ಬಳಿಗೆ ಕಳೆದ 5 ವರ್ಷಗಳಲ್ಲಿ 11 ಬಾರಿ ಹಾವೊಂದು ಕಚ್ಚಿದೆ.

ಹಾವಿನ ದ್ವೇಷ; ಆಸ್ಪತ್ರೆಯಲ್ಲಿದ್ದರೂ ಬಿಡದೆ 5 ವರ್ಷದಲ್ಲಿ 11 ಬಾರಿ ಯುವತಿಗೆ ಕಚ್ಚಿದ ಸರ್ಪ
ಹಾವು
ಸುಷ್ಮಾ ಚಕ್ರೆ
|

Updated on: Dec 07, 2024 | 8:05 PM

Share

ನವದೆಹಲಿ: ಉತ್ತರ ಪ್ರದೇಶದ ಮಹೋಬಾದಲ್ಲಿ 19 ವರ್ಷದ ಯುವತಿಯೊಬ್ಬಳಿಗೆ ಕಳೆದ 5 ವರ್ಷಗಳಿಂದ ಪದೇ ಪದೇ ಕಪ್ಪು ಹಾವು ಕಚ್ಚಿರುವ ವಿಚಿತ್ರ ಮತ್ತು ಭಯಾನಕ ಘಟನೆ ಬೆಳಕಿಗೆ ಬಂದಿದೆ. 5 ವರ್ಷಗಳಲ್ಲಿ 11 ಬಾರಿ ಸರ್ಪ ಕಚ್ಚಿದ್ದು, ಇತ್ತೀಚೆಗೆ ಮತ್ತೊಮ್ಮೆ ಕಚ್ಚಿದೆ. ಇದರಿಂದ ಆಕೆಯ ಸ್ಥಿತಿ ಗಂಭೀರವಾಗಿದೆ. ಆಕೆ ಪ್ರಸ್ತುತ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾವಿನ ದ್ವೇಷದ ಈ ಪ್ರಕರಣ ಮಹೋಬಾದ ಚರಖಾರಿ ತೆಹಸಿಲ್‌ನಲ್ಲಿರುವ ಪಂಚಂಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 2019ರಿಂದ ತನ್ನ ಮಗಳು ರೋಷನಿಗೆ ಕಪ್ಪು ಹಾವು ಪದೇ ಪದೇ ಕಚ್ಚುತ್ತಿದೆ ಎಂದು ಯುವತಿಯ ತಂದೆ ದಳಪತ್ ಹೇಳುತ್ತಾರೆ. ಗದ್ದೆಯಲ್ಲಿ ಕೆಲಸ ಮಾಡುವಾಗ ರೋಷನಿ ಆಕಸ್ಮಿಕವಾಗಿ ಹಾವಿನ ಮೇಲೆ ಕಾಲಿಟ್ಟಾಗ ಮೊದಲ ಬಾರಿ ಹಾವು ಕಚ್ಚಿತ್ತು. ವೈದ್ಯಕೀಯ ಚಿಕಿತ್ಸೆಯ ವೇಳೆಯೂ ಹಾವು ಅವಳನ್ನು ಹಿಂಬಾಲಿಸಲು ಪ್ರಾರಂಭಿಸಿತು. ಅಂದಿನಿಂದ 11 ಬಾರಿ ಆಕೆಗೆ ಹಾವು ಕಚ್ಚಿದೆ.

ಇದನ್ನೂ ಓದಿ: Video: ತಿರುಮಲದಲ್ಲಿ 8 ಅಡಿಯ ದೈತ್ಯ ನಾಗರಹಾವು ಪತ್ತೆ: ವೈರಲ್ ವಿಡಿಯೋ

ಆಕೆ ಸಂಬಂಧಿಕರ ಮನೆಗೆ ಹೋದಾಗಲೂ ಹಾವು ಕಡಿತ ಮುಂದುವರಿದಿದೆ ಎಂಬುದು ಅಚ್ಚರಿಯ ಸಂಗತಿ. ಹಾವು ತನ್ನ ಮಗಳನ್ನು ಹಿಂಬಾಲಿಸುವುದು ನಿಲ್ಲಿಸಿಲ್ಲ, ಸಂಬಂಧಿಕರ ಮನೆಗೆ ಹೋದಾಗಲೂ ಅವಳನ್ನು ಕಚ್ಚುತ್ತಿತ್ತು. ಪ್ರತಿ ಬಾರಿ ಕಚ್ಚಿದಾಗ, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ವೈದ್ಯರು ಅವಳನ್ನು ಉಳಿಸುತ್ತಿದ್ದರು ಎಂದು ಆಕೆಯ ತಂದೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Viral: ನಡು ಬೀದಿಯಲ್ಲಿ ನಡೆಯಿತು ಕಾಳಿಂಗ ಸರ್ಪಗಳ ಕಾಳಗ, ಕೊನೆಗೆ ಗೆದ್ದಿದ್ದು ಯಾರು?

ತಮ್ಮ ಮಗಳಿಗೆ ಸರ್ಪ ದೋಷ ಇರಬಹುದು ಎಂದು ರೋಷನಿಯ ತಂದೆ ಪುರೋಹಿತರನ್ನು ಕೂಡ ಸಂಪರ್ಕಿಸಿದರು. ಅವರ ಸಲಹೆಯನ್ನು ಅನುಸರಿಸಿ, ಅವರು ಶಿವನ ವಿಶೇಷ ಪೂಜೆ ಮತ್ತು ಗ್ರಾಮದಲ್ಲಿ ಸಮುದಾಯದ ಹಬ್ಬ ಸೇರಿದಂತೆ ಪ್ರಾರ್ಥನೆ ಮತ್ತು ಆಚರಣೆಗಳನ್ನು ಮಾಡಿದರು. ಈ ಪ್ರಯತ್ನಗಳ ಹೊರತಾಗಿಯೂ ಮತ್ತೆ ಹಾವು ರೋಷನಿಯನ್ನು ಹಿಂಬಾಲಿಸುವುದು ಮತ್ತು ಕಚ್ಚುವುದನ್ನು ಮುಂದುವರೆಸಿದೆ. ಇದು ಅವರ ಕುಟುಂಬಕ್ಕೆ ಆತಂಕ ಉಂಟುಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ