ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಒಂದೂವರೆ ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು,ಆರೋಗ್ಯ, ಜೀವನಶೈಲಿ, ಅಡುಗೆ, ಫ್ಯಾಷನ್ ಮತ್ತು ಪ್ರಯಾಣದ ಬಗ್ಗೆ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
Shani Dev: ಶನಿವಾರ ತಪ್ಪಿಯೂ ಕೂಡ ಈ ವಸ್ತು ಖರೀದಿಸಬೇಡಿ; ಸಮಸ್ಯೆ ತಪ್ಪಿದಲ್ಲ!
ಹಿಂದೂ ಧರ್ಮ ಮತ್ತು ಜ್ಯೋತಿಷ್ಯದ ಪ್ರಕಾರ, ಶನಿವಾರ ಶನಿದೇವನಿಗೆ ಸಮರ್ಪಿತ ದಿನ. ಶನಿಯ ಕೃಪೆಗೆ ಪಾತ್ರರಾಗಲು ಈ ದಿನ ಕೆಲವು ವಸ್ತುಗಳನ್ನು ಖರೀದಿಸುವುದನ್ನು ನಿಷಿದ್ಧವೆಂದು ಪರಿಗಣಿಸಲಾಗಿದೆ. ಉಪ್ಪು, ಸಾಸಿವೆ ಎಣ್ಣೆ, ಪೊರಕೆ, ಕಪ್ಪು ಪಾದರಕ್ಷೆ ಮತ್ತು ಚೂಪಾದ ವಸ್ತು ಖರೀದಿಸುವುದರಿಂದ ಆರ್ಥಿಕ ನಷ್ಟ, ಆರೋಗ್ಯ ಸಮಸ್ಯೆಗಳು, ಕುಟುಂಬ ಕಲಹ ಹಾಗೂ ವೃತ್ತಿ ಜೀವನದಲ್ಲಿ ಅಡೆತಡೆಗಳು ಎದುರಾಗಬಹುದು. ಶನಿ ದೋಷ ತಪ್ಪಿಸಿ ಶುಭಫಲ ಪಡೆಯಲು ಈ ನಿಯಮ ಪಾಲಿಸಿ.
- Akshatha Vorkady
- Updated on: Feb 7, 2026
- 11:49 am
Saturn-Venus Conjunction: ಮಾರ್ಚ್ನಲ್ಲಿ ಶನಿ- ಶುಕ್ರ ಸಂಯೋಗ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?
ಮಾರ್ಚ್ ತಿಂಗಳು ಜ್ಯೋತಿಷ್ಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಈ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡುತ್ತಿದ್ದು, ಅದರಲ್ಲಿ ಶನಿ ಮತ್ತು ಶುಕ್ರನ ಸಂಯೋಗವು ಅತ್ಯಂತ ಗಮನಾರ್ಹವಾಗಿದೆ. ಶನಿ-ಶುಕ್ರ ಸಂಯೋಗವು ಕೆಲವು ರಾಶಿಗಳಿಗೆ ಅನಿರೀಕ್ಷಿತ ಲಾಭ, ಆರ್ಥಿಕ ಪ್ರಗತಿ ತಂದರೆ, ಇನ್ನು ಕೆಲವು ರಾಶಿಗಳು ಎಚ್ಚರದಿಂದಿರುವುದು ಅಗತ್ಯ.
- Akshatha Vorkady
- Updated on: Feb 7, 2026
- 10:40 am
ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು
ಯಮುನಾ ಎಕ್ಸ್ಪ್ರೆಸ್ವೇ'ನಲ್ಲಿ ಸಾವಿನ ಸರಣಿ ಮುಂದುವರಿದಿದೆ. ಶನಿವಾರ ಮುಂಜಾನೆ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕ ಹಸಿರು ವಲಯದಲ್ಲಿ ಬಸ್ ನಿಲ್ಲಿಸುವ ಬದಲು ರಸ್ತೆಯಲ್ಲೇ ನಿಲ್ಲಿಸಿದ್ದ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಬಸ್ಗೆ ಡಿಕ್ಕಿ ಹೊಡೆದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
- Akshatha Vorkady
- Updated on: Feb 7, 2026
- 10:29 am
PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 5,138 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಅರ್ಜಿ ಸಲ್ಲಿಕೆ ಆನ್ಲೈನ್ ಮೂಲಕ ಫೆಬ್ರವರಿ 08ರಿಂದ 24ರವರೆಗೆ ನಡೆಯಲಿದೆ. ಅರ್ಹತೆ, ವಯೋಮಿತಿ, ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಸ್ಟೈಫಂಡ್ ವಿವರ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಇದು ಉತ್ತಮ ಹೆಜ್ಜೆ.
- Akshatha Vorkady
- Updated on: Feb 6, 2026
- 6:19 pm
Vasthu Tips: ಅಡುಗೆ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ!
ಅಡುಗೆಕೋಣೆ ಮನೆಯ ಹೃದಯಭಾಗವಾಗಿದ್ದು, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ನೇರ ಪ್ರಭಾವ ಬೀರುತ್ತದೆ. ವಾಸ್ತು ಪ್ರಕಾರ, ಶುಚಿಗೊಳಿಸುವ ಸಾಮಗ್ರಿಗಳು, ಔಷಧಗಳು, ಹಳೆಯ ಕಾಗದಗಳು, ಖಾಲಿ ಡಬ್ಬಿಗಳು ಮತ್ತು ಸಿಂಕ್ ಕೆಳಗೆ ಕಸದ ಡಬ್ಬಿ ಇಡುವುದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ ಆರ್ಥಿಕ ನಷ್ಟ ಹಾಗೂ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸಕಾರಾತ್ಮಕತೆ, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕಾಗಿ ಈ ವಸ್ತುಗಳನ್ನು ಅಡುಗೆಮನೆಯಿಂದ ದೂರವಿಡಿ.
- Akshatha Vorkady
- Updated on: Feb 6, 2026
- 5:33 pm
Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಉತ್ತರ ಪ್ರದೇಶದ ಮೈನ್ಪುರಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ್ದಾನೆ. ಈ ಭೀಕರ ಘಟನೆಯಲ್ಲಿ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳು ವೈರಲ್ ಆಗಿವೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪರಾರಿಯಾಗಿರುವ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
- Akshatha Vorkady
- Updated on: Feb 6, 2026
- 3:50 pm
Mahashivaratri 2026: ಮಹಾಶಿವರಾತ್ರಿಯಂದು ಶಿವ ಪೂಜೆಯ ವೇಳೆ ಈ ವಸ್ತು ಬಳಸಲೇಬೇಡಿ
ಮಹಾಶಿವರಾತ್ರಿ ಹಬ್ಬವು ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಅತ್ಯಂತ ಪವಿತ್ರ ಮತ್ತು ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಪಂಚಾಂಗದ ಪ್ರಕಾರ ಈ ವರ್ಷ ಮಹಾಶಿವರಾತ್ರಿ ಫೆಬ್ರವರಿ 15 ರಂದು ಆಚರಿಸಲಾಗುತ್ತದೆ. ಈ ಶುಭ ದಿನದಲ್ಲಿ ಶಿವನಿಗೆ ಯಾವ ವಸ್ತುಗಳನ್ನು ಅರ್ಪಿಸಬೇಕು ಮತ್ತು ಯಾವುದು ತಪ್ಪಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ.
- Akshatha Vorkady
- Updated on: Feb 6, 2026
- 2:47 pm
Rouble Nagi: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ
ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಶಿಕ್ಷಕರಿಗೆ ನೀಡಲಾಗುವ ವಿಶ್ವದ ಅತ್ಯಂತ ಪ್ರತಿಷ್ಠಿತ ಗೌರವವನ್ನು ಭಾರತದ ರೂಬಲ್ ನಾಗಿ (Rouble Nagi) ಅವರು ಪಡೆದಿದ್ದು, ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಫೆಬ್ರವರಿ 5 ರಂದು ದುಬೈನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರೂಬಲ್ ನಾಗಿ 5,000ಕ್ಕೂ ಅಧಿಕ ಸಾಧಕರ ನಡುವೆ ಅತ್ಯುತ್ತಮ ಶಿಕ್ಷಕರಾಗಿ ಆಯ್ಕೆಯಾಗಿದ್ದು, ಪ್ರಶಸ್ತಿಯ ಜೊತೆಗೆ 1 ಮಿಲಿಯನ್ ಡಾಲರ್ (ಸುಮಾರು 8.3 ಕೋಟಿ ರೂ.) ಬಹುಮಾನವನ್ನು ಗೆದ್ದಿದ್ದಾರೆ. ಆದ್ದರಿಂದ ರೂಬಲ್ ನಾಗಿ ಯಾರು?, ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಏನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
- Akshatha Vorkady
- Updated on: Feb 6, 2026
- 12:22 pm
Swapna Shastra: ಕನಸಿನಲ್ಲಿ ರಕ್ತ ಕಂಡರೆ ಏನರ್ಥ, ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ
ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ರಕ್ತ ಕಾಣುವುದು ಆಂತರಿಕ ಭಾವನೆಗಳು, ಒತ್ತಡ ಅಥವಾ ಜೀವನದ ಬದಲಾವಣೆಗಳ ಪ್ರತಿಬಿಂಬ. ಇದು ಭಾವನಾತ್ಮಕ ಗಾಯ, ಶಕ್ತಿಯ ನಷ್ಟ ಅಥವಾ ಹೊಸ ಆರಂಭದ ಸಂಕೇತವಾಗಿರಬಹುದು. ಇಂತಹ ಕನಸುಗಳು ಕೇವಲ ಭಯದ ಸಂಕೇತವಲ್ಲ, ಬದಲಾಗಿ ಮನಸ್ಸು ಮತ್ತು ಆತ್ಮ ನೀಡುವ ಸಂದೇಶ. ಶಾಂತಿ ಪಡೆಯಲು ಧ್ಯಾನ ಹಾಗೂ ಭಾವನೆ ಹಂಚಿಕೊಳ್ಳುವಂತಹ ಪರಿಹಾರಗಳನ್ನು ಇಲ್ಲಿ ವಿವರಿಸಲಾಗಿದೆ.
- Akshatha Vorkady
- Updated on: Feb 6, 2026
- 10:47 am
ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ; ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ
ಆದಾಯ ತೆರಿಗೆ ಇಲಾಖೆಯು ಕ್ರೀಡಾ ಕೋಟಾದಡಿ MTS ಮತ್ತು ತೆರಿಗೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 46 ಹುದ್ದೆಗಳಿಗೆ ಕ್ರೀಡಾ ಸಾಧನೆ ಮಾಡಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 21 ಕೊನೆಯ ದಿನಾಂಕವಾಗಿದೆ. ಇದು ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಿ.
- Akshatha Vorkady
- Updated on: Feb 5, 2026
- 5:48 pm
UPSC CSE and IFS Notification OUT: UPSC ನಾಗರಿಕ ಸೇವಾ ಪರೀಕ್ಷೆ; 933 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ
ಕೇಂದ್ರ ಲೋಕಸೇವಾ ಆಯೋಗವು (UPSC) 2026ರ CSE ಮತ್ತು IFS ಪರೀಕ್ಷೆಗಳಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 933 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನಾಂಕ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ, ಪ್ರಯತ್ನಗಳ ಸಂಖ್ಯೆ ಮತ್ತು ಅರ್ಜಿ ಶುಲ್ಕದ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ.
- Akshatha Vorkady
- Updated on: Feb 5, 2026
- 5:12 pm
CBI Recruitment 2026: ಸೆಂಟ್ರಲ್ ಬ್ಯಾಂಕ್ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ. ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ ವಿಭಾಗಗಳಲ್ಲಿರುವ ಈ ಹುದ್ದೆಗಳಿಗೆ ಪದವಿ, MBA/PGDM ಅಥವಾ IIBF ಪ್ರಮಾಣಪತ್ರದೊಂದಿಗೆ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಬ್ಯಾಂಕಿಂಗ್ ವಲಯದಲ್ಲಿ ಉಜ್ವಲ ವೃತ್ತಿಜೀವನ ರೂಪಿಸಿಕೊಳ್ಳಬಹುದು.
- Akshatha Vorkady
- Updated on: Feb 5, 2026
- 4:11 pm