ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
ಆಸಿಡ್ ದಾಳಿಯ ನರಕಯಾತನೆ, ಅಪರಾಧಿಯನ್ನು ಕ್ಷಮಿಸಿದ ಕರುಣಾಮಯಿ: ದೇವೇಗೌಡರ ಬದುಕಿನ ಶಕ್ತಿಯಾಗಿದ್ದ ಚೆನ್ನಮ್ಮ
Chennamma Deve Gowda Death: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದಿಂದ ಕುಟುಂಬ ದುಃಖತಪ್ತವಾಗಿದೆ. 2001ರಲ್ಲಿ ಚೆನ್ನಮ್ಮ ಹಾಗೂ ಸೊಸೆ ಭವಾನಿ ರೇವಣ್ಣ ಮೇಲೆ ನಡೆದ ಭೀಕರ ಆಸಿಡ್ ದಾಳಿಯ ರಾಜಕೀಯ ಪಿತೂರಿಯನ್ನು ದೇವೇಗೌಡರು 'ವೀಕೆಂಡ್ ವಿತ್ ರಮೇಶ್'ನಲ್ಲಿ ಬಿಚ್ಚಿಟ್ಟಿದ್ದರು. ರೇವಣ್ಣ ಗುರಿಯಾಗಿದ್ದರೂ, ಚೆನ್ನಮ್ಮ ಮತ್ತು ಭವಾನಿ ಆಸಿಡ್ಗೆ ತುತ್ತಾಗಿದ್ದರು. ತಮ್ಮನ ಮಗನೇ ಅಪರಾಧಿಯಾಗಿದ್ದರೂ, ದೇವೇಗೌಡರು ಆತನಿಗೆ ಕ್ಷಮಾದಾನ ನೀಡಿ, ಕೌಟುಂಬಿಕ ಪ್ರೀತಿಗೆ ದೊಡ್ಡ ಉದಾಹರಣೆಯಾಗಿದ್ದಾರೆ. ಈ ಘಟನೆ ಅವರ ಬದುಕಿನ ಕರಾಳ ಸತ್ಯ.
- Akshay Pallamajalu
- Updated on: Jul 18, 2026
- 6:03 pm
ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ; ವಾಹನ ಸವಾರರು, ಪಾದಚಾರಿಗಳು ಹೈರಾಣು
ಜುಲೈ 18 ರಂದು ಬೆಂಗಳೂರಿನಲ್ಲಿ ಮಧ್ಯಾಹ್ನ ದಿಢೀರ್ ಸುರಿದ ಧಾರಾಕಾರ ಮಳೆಯಿಂದ ವೀಕೆಂಡ್ ಮೂಡ್ನಲ್ಲಿದ್ದ ಸಾರ್ವಜನಿಕರು ಪರದಾಡಿದರು. ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಜೆ 3:30ರ ನಂತರ ಅನಿರೀಕ್ಷಿತವಾಗಿ ಸುರಿದ ಮಳೆಯು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯುಂಟುಮಾಡಿತು. ರಸ್ತೆಗಳಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿ, ನಗರದಾದ್ಯಂತ ಸಂಚಾರ ಅಸ್ತವ್ಯಸ್ತಗೊಂಡಿತು. ಮಳೆಯು ಸೆಕೆಯಿಂದ ಕೊಂಚ ನಿರಾಳತೆ ತಂದರೂ, ಸಂಚಾರಕ್ಕೆ ಅಡಚಣೆಯುಂಟಾಯಿತು.
- Akshay Pallamajalu
- Updated on: Jul 18, 2026
- 4:31 pm
ತಡರಾತ್ರಿ ಬೆಂಗಳೂರಿನ 150ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರ ರೈಡ್
ಬೆಂಗಳೂರು ವೈಟ್ಫೀಲ್ಡ್ ವಿಭಾಗದ ಪೊಲೀಸರು ರಾಜಧಾನಿಯಲ್ಲಿ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿ ಸೈದುಲ್ಲಾ ಅಡಾವತ್ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಹಳೆಯ ಹಾಗೂ ಸಕ್ರಿಯ ರೌಡಿಶೀಟರ್ಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ತಪಾಸಣೆ ಮಾಡಲಾಗಿದೆ. ಅಪರಾಧದಲ್ಲಿ ಭಾಗಿಯಾದವರಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
- Akshay Pallamajalu
- Updated on: Jul 18, 2026
- 2:45 pm
ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ
ಸಂಜಯನಗರದಲ್ಲಿ ತೆರೆದ ಚರಂಡಿಗೆ ಬಿದ್ದು ಬಿಜೆಪಿ ಮುಖಂಡ ಬೇಳೂರು ರಾಘವೇಂದ್ರ ಶೆಟ್ಟಿ ಕಾಲು ಮುರಿದುಕೊಂಡಿದ್ದಾರೆ. GBA ಸಿಬ್ಬಂದಿ ಹೂಳು ಎತ್ತಿದ ನಂತರ ಚೇಂಬರ್ ಮುಚ್ಚದೇ ನಿರ್ಲಕ್ಷ್ಯ ತೋರಿದ್ದೇ ದುರ್ಘಟನೆಗೆ ಕಾರಣ. ಈ ಘಟನೆ ಮಹಾನಗರ ಪಾಲಿಕೆ ಆಡಳಿತದ ಬೇಜವಾಬ್ದಾರಿತನವನ್ನು ಎತ್ತಿ ತೋರಿಸಿದ್ದು, ಸಾರ್ವಜನಿಕ ಸುರಕ್ಷತೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
- Akshay Pallamajalu
- Updated on: Jul 18, 2026
- 1:18 pm
ಕಡಿಮೆ ವೆಚ್ಚದಲ್ಲಿ ವಿಶ್ವಪ್ರಸಿದ್ಧ ಜೋಗ ಜಲಪಾತ ಕಣ್ತುಂಬಿಕೊಳ್ಳಿ: ಪ್ರವಾಸಿಗರಿಗಾಗಿ KSTDC ಬಿಡುಗಡೆ ಮಾಡಿದೆ ಅತ್ಯಾಕರ್ಷಕ ಟೂರ್ ಪ್ಯಾಕೇಜ್
ವೀಕೆಂಡ್ ಪ್ರವಾಸಕ್ಕೆ ಸುವರ್ಣಾವಕಾಶ! KSTDC ಜೋಗ ಜಲಪಾತ ಮತ್ತು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆಕರ್ಷಕ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ಭಾರತದ ಎರಡನೇ ಅತಿ ಎತ್ತರದ ಜಲಪಾತ, ಶರಾವತಿ ಹಿನ್ನೀರಿನ ಸೌಂದರ್ಯ, ಮತ್ತು ಪೂಜ್ಯ ದೇವಾಲಯಕ್ಕೆ ಭೇಟಿ ನೀಡಿ. AC ಕೋಚ್, ಉತ್ತಮ ವಸತಿ, ವೃತ್ತಿಪರ ಗೈಡ್, ಹಾಗೂ LTC ಸೌಲಭ್ಯಗಳೊಂದಿಗೆ ಸುಖಕರ ಯಾತ್ರೆ ಕೈಗೊಳ್ಳಿ. ಪ್ರಕೃತಿ ಹಾಗೂ ಭಕ್ತಿಯ ಸಮ್ಮಿಲನ ಈ ಪ್ಯಾಕೇಜ್.
- Akshay Pallamajalu
- Updated on: Jul 18, 2026
- 12:27 pm
“ಬಟ್ಟೆ ಗಂಟು ಬಿಚ್ಚಿದರೆ ರಕ್ತ ವಾಂತಿ ಮಾಡಿ ಸಾಯ್ತೀಯಾ” ಎಂದು ಹೆದರಿಸಿ ಬಂಗಾರ, ನಗದು ದೋಚಿದ ಬೆಂಗಳೂರಿನ ನಕಲಿ ಸ್ವಾಮೀಜಿ
ಬೆಂಗಳೂರಿನಲ್ಲಿ ನಕಲಿ ಸ್ವಾಮೀಜಿಯಿಂದ ಮಹಿಳೆಯೊಬ್ಬರು ವಂಚನೆಗೊಳಗಾಗಿದ್ದಾರೆ. ಮಗಳ ವೈವಾಹಿಕ ಸಮಸ್ಯೆ ಪರಿಹಾರಕ್ಕಾಗಿ ಬಂದ ಗೀತಾ ಎಂಬುವರಿಂದ ನಕಲಿ ಸ್ವಾಮೀಜಿ ವಿಶೇಷ ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನಾಭರಣ ಮತ್ತು 1.3 ಲಕ್ಷ ರೂ. ನಗದು ದೋಚಿದ್ದಾನೆ. ಪೂಜೆ ವೇಳೆ ಬೂದಿ ಎರಚಿ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದು, ಬಳಿಕ ಬೆದರಿಸಿ ಮೋಸ ಮಾಡಿದ್ದಾನೆ. ಬಾಗಲಗುಂಟೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Akshay Pallamajalu
- Updated on: Jul 18, 2026
- 11:29 am
ಖಾಸಗಿಯಾಗಿ ಅಭಿವೃದ್ಧಿಗೊಂಡ ಭಾರತದ ಮೊದಲ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ: ಬಾಹ್ಯಾಕಾಶಕ್ಕೆ ಹಾರಲಿವೆ ಪ್ರಧಾನಿ ಮೋದಿ ಪೋಸ್ಟ್ಕಾರ್ಡ್
ಶ್ರೀಹರಿಕೋಟದಿಂದ ಸ್ಕೈರೂಟ್ ಏರೋಸ್ಪೇಸ್ನ 'ವಿಕ್ರಮ್-1' ರಾಕೆಟ್ ಉಡಾವಣೆ ಆಗಲಿದೆ. ಇದು ಭಾರತದಿಂದ ಬಾಹ್ಯಾಕಾಶ ಕಕ್ಷೆ ತಲುಪಲಿರುವ ಮೊದಲ ಸಂಪೂರ್ಣ ಖಾಸಗಿ ರಾಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 'ಮಿಷನ್ ಆಗಮನ್' ಯೋಜನೆಯಡಿ ಈ ಉಡಾವಣೆ ನಡೆಯಲಿದೆ, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಬರೆಯಲಿದೆ. ಪ್ರಧಾನಿ ಮೋದಿ ಸೇರಿದಂತೆ ಹಲವರ ಭಾವನಾತ್ಮಕ ಪೋಸ್ಟ್ಕಾರ್ಡ್ಗಳನ್ನು ಇದು ಹೊತ್ತೊಯ್ಯಲಿದೆ.
- Akshay Pallamajalu
- Updated on: Jul 18, 2026
- 9:38 am
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಬಳಿ ಕಣ್ಣೀರು ಹಾಕಿದ ದೇವೇಗೌಡ; ಇನ್ನು ಆ ದೇವರೇ ಕಾಪಾಡಬೇಕು ಎಂದ ಹೆಚ್ಡಿಕೆ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟುಂಬ ಸದಸ್ಯರಾದ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತೀವ್ರ ಗದ್ಗದಿತರಾಗಿ ಕಣ್ಣೀರು ಹಾಕಿದ್ದಾರೆ. ವೈದ್ಯರು ತಮ್ಮ ಕೈಮೀರಿ ಪ್ರಯತ್ನಿಸಿದ್ದಾರೆ, ಇನ್ನು ದೇವರೇ ಕಾಪಾಡಬೇಕು ಎಂದು ಕುಮಾರಸ್ವಾಮಿ ಭಾವುಕರಾಗಿದ್ದಾರೆ.
- Akshay Pallamajalu
- Updated on: Jul 17, 2026
- 10:47 pm
ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದರು. ಈ ಭೇಟಿಯು ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವನ್ನು ಹೊಂದಿತ್ತು. ರಾಜಕೀಯ ಮುಖಂಡರ ಈ ಸೌಜನ್ಯದ ಭೇಟಿ ಮಾಧ್ಯಮಗಳ ಗಮನ ಸೆಳೆದಿದೆ.
- Akshay Pallamajalu
- Updated on: Jul 17, 2026
- 10:15 pm
ಬೀದಿಬದಿ ವ್ಯಾಪಾರಿಗಳು ಬಡವರು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೆಂಗಳೂರಿನ ಫುಟ್ಪಾತ್ ಒತ್ತುವರಿ ಕುರಿತು ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಪಾದಚಾರಿಗಳ ಓಡಾಟಕ್ಕೆ ಫುಟ್ಪಾತ್ಗಳನ್ನು ಮುಕ್ತಗೊಳಿಸಬೇಕು ಎಂದರು. ಬೀದಿಬದಿ ವ್ಯಾಪಾರಿಗಳಿಗಾಗಿ ಹಾಕರ್ಸ್ ಝೋನ್ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಬಡ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಅವರನ್ನು ಸ್ಥಳಾಂತರಿಸಬಾರದು ಎಂದು ಅವರು ಪ್ರತಿಪಾದಿಸಿದರು.
- Akshay Pallamajalu
- Updated on: Jul 17, 2026
- 5:43 pm
ನಮ್ಮ ಮೆಟ್ರೋದಲ್ಲಿ ಹುಚ್ಚಾಟಕ್ಕೆ ಬೀಳಲಿದೆ ಬ್ರೇಕ್: ದಂಡದ ಮೊತ್ತ 25,000 ರೂ.ವರೆಗೆ ಏರಿಕೆ
ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಹೊಸ ನಿಯಮಾವಳಿ ಮತ್ತು ಪರಿಷ್ಕೃತ ದಂಡವನ್ನು ಜಾರಿಗೊಳಿಸಿದೆ. ಮೆಟ್ರೋ ನಿಲ್ದಾಣ ಹಾಗೂ ರೈಲಿನಲ್ಲಿ ಹುಚ್ಚಾಟ, ರೀಲ್ಸ್ ಮಾಡುವುದು, ಜೋರು ಸಂಗೀತ, ಹಳಿಗಳ ಮೇಲೆ ಅನಧಿಕೃತ ಪ್ರವೇಶ, ಟಿಕೆಟ್ ದುರ್ಬಳಕೆ, ಅಸಭ್ಯ ವರ್ತನೆ ಹಾಗೂ ನಿಷಿದ್ಧ ವಸ್ತುಗಳ ಸಾಗಾಟಕ್ಕೆ ಭಾರಿ ದಂಡ ವಿಧಿಸಲಾಗುವುದು. ಸಾರ್ವಜನಿಕರ ಸುರಕ್ಷತೆ ಕಾಪಾಡುವುದು ಇದರ ಉದ್ದೇಶ. ಪ್ರತಿ ಮೂರು ವರ್ಷಗಳಿಗೊಮ್ಮೆ ದಂಡದ ಮೊತ್ತವು ಶೇ.10ರಷ್ಟು ಹೆಚ್ಚಲಿದೆ.
- Akshay Pallamajalu
- Updated on: Jul 18, 2026
- 7:46 am
ನಿರುದ್ಯೋಗಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್: ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ರಾಜ್ಯದಲ್ಲಿ 72,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇದರಲ್ಲಿ ಕ್ರೀಡಾಪಟುಗಳಿಗೆ 2% (ಪೊಲೀಸ್ ಇಲಾಖೆಯಲ್ಲಿ 3%) ಮೀಸಲಾತಿ ಅಡಿಯಲ್ಲಿ ಸುಮಾರು 2,000 ಹುದ್ದೆಗಳು ಲಭ್ಯವಿವೆ. ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ಹಾಗೂ 50 ಕೋಚ್ಗಳ ನೇಮಕಾತಿಯನ್ನು ಮಂತ್ರಿ ಪರಮೇಶ್ವರ್ ಘೋಷಿಸಿದ್ದಾರೆ.
- Akshay Pallamajalu
- Updated on: Jul 16, 2026
- 2:22 pm