ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.
ಡಿ.ಕೆ. ಶಿವಕುಮಾರ್ ಜನ್ಮದಿನಕ್ಕೆ ಹೈಕಮಾಂಡ್ನಿಂದ ‘ಗಿಫ್ಟ್’? ಕುತೂಹಲ ಮೂಡಿಸಿದ ಡಿಕೆ ಸುರೇಶ್ ಹೇಳಿಕೆ
ಡಿಕೆ ಶಿವಕುಮಾರ್ ಅವರ ಜನ್ಮದಿನದಂದು ಹೈಕಮಾಂಡ್ನಿಂದ ಶುಭ ಸುದ್ದಿ ನಿರೀಕ್ಷಿಸಲಾಗಿದೆ. ಈ ಕುರಿತು ಮಾಜಿ ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದರು. ಹಿರಿಯ ಶಾಸಕರ ಸಚಿವ ಸ್ಥಾನದ ಒತ್ತಡ, ಅಧಿಕಾರ ಹಂಚಿಕೆ ಕುರಿತು ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಸೂಕ್ತ ಸಮಯಕ್ಕಾಗಿ ಕಾಯುವಂತೆ ಅವರು ತಿಳಿಸಿದ್ದಾರೆ.
- Akshay Pallamajalu
- Updated on: May 6, 2026
- 2:03 pm
ಇರು ಅಂದ್ರೆ ಇರ್ತೀನಿ, ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್ ನಿರ್ಧಾರವೇ ಫೈನಲ್; ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಪೂರೈಸುವ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಪುನರುಚ್ಚರಿಸಿದ್ದಾರೆ. ಸಂಪುಟ ಪುನರಚನೆ ಕುರಿತು ರಾಹುಲ್ ಗಾಂಧಿ ಭೇಟಿಗೆ ಕಾಯುತ್ತಿರುವುದಾಗಿ ತಿಳಿಸಿದ ಸಿಎಂ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಾಗಿ ಘೋಷಿಸಿದರು. ವಿರೋಧ ಪಕ್ಷಗಳ ತಂತ್ರಗಳನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
- Akshay Pallamajalu
- Updated on: May 6, 2026
- 1:39 pm
TV9 Kannada News Live: ವಚನಾನಂದ ಶ್ರೀಗೆ ಜಾಮೀನು ಮಂಜೂರು; ಕಾಂಗ್ರೆಸ್ ಕೇರಳದಲ್ಲಿ ಗದ್ದುಗೆ, ತಮಿಳುನಾಡಿನಲ್ಲಿ ವಿಜಯ್ ಜೊತೆ ಮೈತ್ರಿ!
ದಾವಣಗೆರೆ ನ್ಯಾಯಾಲಯ ವಚನಾನಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಮಿಳುನಾಡು-ಕೇರಳದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳಾಗಿದ್ದು, ನಟ ವಿಜಯ್ಗೆ ಕಾಂಗ್ರೆಸ್ ಬೆಂಬಲ, ಕೇರಳದಲ್ಲಿ ಕಾಂಗ್ರೆಸ್ ಪುನರಾಗಮನ ಕಂಡಿದೆ. ರಾಜ್ಯದಲ್ಲಿ ಬೀದಿ ನಾಯಿ ಕಡಿತದ ಹಾವಳಿ ಹೆಚ್ಚಾಗಿದ್ದು, ನಾಲ್ಕು ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆಯಿದೆ.
- Akshay Pallamajalu
- Updated on: May 6, 2026
- 9:36 am
ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ!
ಬೆಂಗಳೂರಿನ ಮಹದೇವಪುರದಲ್ಲಿ 23 ವರ್ಷದ ಯುವ ಸಾಫ್ಟ್ವೇರ್ ಇಂಜಿನಿಯರ್ ಸ್ನಾನ ಮಾಡುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಿಸಿದ ಅಮಾನವೀಯ ಘಟನೆ ನಡೆದಿದೆ. ಪಕ್ಕದ ಕಟ್ಟಡದಿಂದ ಮೊಬೈಲ್ ಮೂಲಕ ಈ ಕೃತ್ಯ ಎಸಗಲಾಗಿದ್ದು, ಯುವತಿ ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿಡಿಯೋ ಹರಡುವ ಭೀತಿಯಲ್ಲಿರುವ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಯುತ್ತಿದೆ.
- Akshay Pallamajalu
- Updated on: May 6, 2026
- 8:47 am
ವಿವಾಹಕ್ಕೆ ವಯಸ್ಸಿನ ಅಂತರ ಅಡ್ಡಿಯಲ್ಲ: ಪ್ರಬುದ್ಧ ಸಂಗಾತಿಯಿಂದ ಕುಟುಂಬಕ್ಕೆ ಶ್ರೇಯಸ್ಸು
ಪ್ರಾಚೀನ ಕಾಲದಿಂದಲೂ ವಿವಾಹದಲ್ಲಿ ವಯಸ್ಸಿನ ಅಂತರದ ಬಗ್ಗೆ ಚರ್ಚೆಗಳಿವೆ. ಗಂಡು ತಮ್ಮಿಗಿಂತ ಹಿರಿಯ ವಯಸ್ಸಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ, ಅಶುಭವೇ ಎಂಬ ಪ್ರಶ್ನೆಗೆ, ಯಾವುದೇ ಶಾಸ್ತ್ರಗಳಲ್ಲಿ ಇದಕ್ಕೆ ನಿರ್ಬಂಧವಿಲ್ಲ. ವಸಿಷ್ಠ-ಅರುಂಧತಿ, ಅರ್ಜುನ-ಉಲೂಪಿ, ಶ್ರೀಕೃಷ್ಣ-ಸತ್ಯಭಾಮಾ ಸೇರಿದಂತೆ ಪುರಾಣ ಮತ್ತು ಆಧುನಿಕ ಕಾಲದ ಅನೇಕ ಉದಾಹರಣೆಗಳು ಇದಕ್ಕೆ ಪೂರಕವಾಗಿವೆ. ಹಿರಿಯ ವಯಸ್ಸಿನ ಹೆಣ್ಣಿನ ಅನುಭವವು ಕುಟುಂಬದ ಪ್ರಗತಿಗೆ ಸಹಕಾರಿಯಾಗುತ್ತದೆ.
- Akshay Pallamajalu
- Updated on: May 6, 2026
- 7:26 am
Daily Horoscope: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆಸ್ತಿ ಯೋಗ
ಡಾ. ಬಸವರಾಜ ಗುರೂಜಿ ಅವರು 2026ರ ಮೇ 6ರ ದೈನಿಕ ರಾಶಿಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಮೇಷದಿಂದ ಮೀನದವರೆಗಿನ ಎಲ್ಲಾ ದ್ವಾದಶ ರಾಶಿಗಳಿಗೆ ಚಂದ್ರನ ಸಂಚಾರ ಮತ್ತು ಗ್ರಹಗಳ ಶುಭಫಲದ ಆಧಾರದ ಮೇಲೆ ಆರ್ಥಿಕ, ವೃತ್ತಿ, ಕೌಟುಂಬಿಕ ಮತ್ತು ಆರೋಗ್ಯ ವಿಷಯಗಳಲ್ಲಿನ ಪ್ರಭಾವವನ್ನು ವಿವರಿಸಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರದ ವಿವರಗಳನ್ನು ನೀಡಲಾಗಿದೆ.
- Akshay Pallamajalu
- Updated on: May 6, 2026
- 7:04 am
Karnataka AQI Update: ರಾಜ್ಯದ ವಾಯು ಗುಣಮಟ್ಟದಲ್ಲಿ ಸುಧಾರಣೆ: ಬೆಂಗಳೂರಿನಲ್ಲಿ ಮಳೆ ತಂದ ತಂಪು, ಶಿವಮೊಗ್ಗದ ಗಾಳಿ ಅತ್ಯಂತ ಸ್ವಚ್ಛ!
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಿಂದ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ಬೆಂಗಳೂರಿನಲ್ಲಿ AQI 96-118 ರಷ್ಟಿದ್ದು, ಬಹುತೇಕ ಪ್ರದೇಶಗಳಲ್ಲಿ ಸಾಧಾರಣವಾಗಿದೆ. ಮೈಸೂರಿನಲ್ಲಿ ಅತ್ಯುತ್ತಮ ವಾಯು ಗುಣಮಟ್ಟ ದಾಖಲಾಗಿದೆ. ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್ನಂತಹ ದಟ್ಟಣೆ ಪ್ರದೇಶಗಳಲ್ಲಿ ಮಾಲಿನ್ಯ ತುಸು ಹೆಚ್ಚಿದ್ದರೂ, ಮಳೆಯ ನಂತರ ಇನ್ನಷ್ಟು ಸುಧಾರಣೆ ನಿರೀಕ್ಷಿಸಲಾಗಿದೆ. ಉಸಿರಾಟದ ಸಮಸ್ಯೆ ಇರುವವರು ಎಚ್ಚರ ವಹಿಸುವುದು ಉತ್ತಮ.
- Akshay Pallamajalu
- Updated on: May 6, 2026
- 6:46 am
ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ
ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ, ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಸಾಧಾರಣ ಮಳೆ ನಿರೀಕ್ಷೆ. ಮಲೆನಾಡು ಭಾಗದಲ್ಲಿ ಹೆಚ್ಚಿದ ಮಳೆಯು ಕಾಫಿ ಬೆಳೆಗಾರರಿಗೆ ಆಶಾದಾಯಕವಾಗಿದೆ. ಆದರೆ, ಉತ್ತರ ಕರ್ನಾಟಕದ ಬೆಳಗಾವಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ 38°C ದಾಟಿ ತೀವ್ರ ಬಿಸಿಲು ಮುಂದುವರಿಯಲಿದೆ. ಮುಂದಿನ 3 ದಿನ ರಾಜ್ಯದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
- Akshay Pallamajalu
- Updated on: May 6, 2026
- 6:46 am
ಬೆಂಗಳೂರು: ರಾಜಕಾಲುವೆ ಮೇಲೆ ಯುವಕನ ಹುಚ್ಚಾಟ
ಬೆಂಗಳೂರಿನ ಉತ್ತರಹಳ್ಳಿ ಬಳಿ ಯುವಕನೊಬ್ಬ ರಾಜಕಾಲುವೆ ಗ್ರಿಲ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹೈಡ್ರಾಮಾದಿಂದ ಸ್ಥಳದಲ್ಲಿ ಆತಂಕ ಮೂಡಿತ್ತು. ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಸುಬ್ರಹ್ಮಣ್ಯಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ಈ ವರ್ತನೆಗೆ ಕಾರಣ ತಿಳಿಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
- Akshay Pallamajalu
- Updated on: May 5, 2026
- 8:47 pm
ಬಾಗಲಕೋಟೆ, ದಾವಣಗೆರೆ ಉಪಸಮರದಲ್ಲಿ ಬಿಜೆಪಿಗೆ ಹಿನ್ನಡೆ; ಆಡಳಿತ ಪಕ್ಷದ ಪ್ರಭಾವಕ್ಕೆ ಗೆಲುವು ಎಂದ ವಿಜಯೇಂದ್ರ
ಬಿ. ವೈ. ವಿಜಯೇಂದ್ರರವರು ಇತ್ತೀಚಿನ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಫಲಿತಾಂಶಗಳ ಕುರಿತು ಮಾತನಾಡಿದ್ದಾರೆ. ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಸಾಮಾನ್ಯವಾಗಿದ್ದರೂ, ಬಿಜೆಪಿ ಗೆಲ್ಲುವ ವಿಶ್ವಾಸ ಹೊಂದಿತ್ತು. ಕಾರ್ಯಕರ್ತರು ಶ್ರಮಿಸಿದರೂ ನಿರೀಕ್ಷಿತ ಮತಗಳು ಬರಲಿಲ್ಲ. ಶ್ರೀನಿವಾಸದಾಸ್ ಕರಿಯಪ್ಪನವರ ಪ್ರಯತ್ನ ಶ್ಲಾಘಿಸಿ, ಭವಿಷ್ಯದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.
- Akshay Pallamajalu
- Updated on: May 5, 2026
- 8:28 pm
TV9 Kannada News Live: ಬಂಗಾಳದಲ್ಲಿ ‘ದೀದಿ’ ಹಠ; ನಾನು ರಾಜೀನಾಮೆ ನೀಡುವುದಿಲ್ಲ: ಜೀವರಾಜ್ ವಿರುದ್ಧ ಎಫ್ಐಆರ್ಗೆ ಹೈಕೋರ್ಟ್ ತಡೆ!
ಈ ಹೊತ್ತಿನ ಪ್ರಮುಖ ಸುದ್ದಿಗಳೆಂದರೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ನಿರಾಕರಿಸಿದ್ದು, ಬಿಜೆಪಿ ಅಕ್ರಮ ಆರೋಪಿಸಿದ್ದಾರೆ. ರಾಜ್ಯದಲ್ಲಿ ಶೃಂಗೇರಿ ಅಂಚೆ ಮತ ವಿವಾದದಲ್ಲಿ ಡಿ.ಎನ್. ಜೀವರಾಜ್ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. ಕಾಸರಗೋಡಿನಲ್ಲಿ ಕೇರೆ ಹಾವಿನ ಮೈಗೆ ಚಿನ್ನದ ಉಂಗುರ ಸಿಕ್ಕಿಹಾಕಿಕೊಂಡಿದ್ದು ವೈರಲ್ ಆಗಿದೆ. ದಳಪತಿ ವಿಜಯ್ಗೆ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
- Akshay Pallamajalu
- Updated on: May 5, 2026
- 6:59 pm
Bangalore Rain: ಬೆಂಗಳೂರಿನಲ್ಲಿ ಮತ್ತೆ ವರುಣನ ಆಗಮನ: ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಶುರು!
ಬೆಂಗಳೂರು ಮಳೆ ಹವಾಮಾನ ವರದಿ: ಬೆಂಗಳೂರಿನಲ್ಲಿ ಭಾರೀ ಮಳೆ ಪ್ರಾರಂಭವಾಗಿದ್ದು, ನಗರದ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮೇ 8 ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ತಗ್ಗು ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಜಾಗರೂಕರಾಗಿರಿ, ಸಂಚಾರ ದಟ್ಟಣೆ ಹೆಚ್ಚಾಗಬಹುದು. ಕಳೆದ ವಾರದ ಘಟನೆಗಳನ್ನು ತಪ್ಪಿಸಲು ಎಚ್ಚರ ವಹಿಸುವುದು ಉತ್ತಮ.
- Akshay Pallamajalu
- Updated on: May 5, 2026
- 5:35 pm