ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
“ಚಿಪ್ನಿಂದ ಶಿಪ್ವರೆಗೆ ಎಲ್ಲವೂ ನಿಮ್ಮ ಕೈಗಳಲ್ಲೇ ತಯಾರಾಗಲಿದೆ”: ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಐಐಟಿ ದೆಹಲಿಯಲ್ಲಿ ಮಾತನಾಡಿ, ಭಾರತದ ಯುವಶಕ್ತಿಯನ್ನು 'ಚಿಪ್ನಿಂದ ಶಿಪ್ವರೆಗೆ' ತಂತ್ರಜ್ಞಾನ ಮತ್ತು ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಶ್ಲಾಘಿಸಿದರು. ಯುವ ಆವಿಷ್ಕಾರಕರು ಚಿಪ್ಗಳು, ಹಡಗುಗಳು ಮತ್ತು ಯುದ್ಧನೌಕೆಗಳ ತಯಾರಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ದೇಶವು ಸೆಮಿಕಂಡಕ್ಟರ್ ರಂಗದಲ್ಲಿ ಮುನ್ನಡೆಯುತ್ತಿದ್ದು, ಭಾರತೀಯ ಯುವಕರ ಸಾಮರ್ಥ್ಯದಿಂದ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದೆ ಎಂದು ತಿಳಿಸಿದರು.
- Akshay Pallamajalu
- Updated on: Aug 8, 2026
- 5:34 pm
22 ಕೆರೆ ತುಂಬಿಸುವ ಯೋಜನೆಗೆ ಆದ್ಯತೆ, ಮಾಯಕೊಂಡ ಅಭಿವೃದ್ಧಿಗೆ ಬದ್ಧ: ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ
ಮೊದಲ ಬಾರಿಗೆ ಸಚಿವರಾಗಿರುವ ಕೆ.ಎಸ್. ಬಸವಂತಪ್ಪ ಅವರು ತಮ್ಮ ಕ್ಷೇತ್ರದ ಜನರ ಸೇವೆಗೆ ಸಿದ್ಧರಾಗಿದ್ದಾರೆ. ರೈತರ ಸಮಸ್ಯೆ, ಬೆಳೆ ಹಾನಿ ಪರಿಶೀಲನೆ, ಹಾಗೂ 22 ಕೆರೆ ಯೋಜನೆ ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಪೌರಕಾರ್ಮಿಕರ ಪುತ್ರನಾದ ತಮಗೆ ಸಚಿವ ಸ್ಥಾನ ದೊರೆತಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ನ್ಯಾಯದ ಪ್ರತಿರೂಪ ಎಂದಿದ್ದಾರೆ.
- Akshay Pallamajalu
- Updated on: Aug 8, 2026
- 4:49 pm
‘ಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ’: ಸಚಿವ ವಿಜಯಾನಂದ ಕಾಶಪ್ಪನವರ್ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯ
ಬಾಗಲಕೋಟೆಯ ಸಿದ್ದನಕೊಳ್ಳ ಶ್ರೀಮಠಕ್ಕೆ ಭೇಟಿ ನೀಡಿದ್ದ ಸಚಿವ ವಿಜಯಾನಂದ ಕಾಶಪ್ಪನವರ್ಗೆ ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. "ಸಿಟ್ಟನ್ನು ತ್ಯಾಗ ಮಾಡಿದರೆ ನೀನು ರಾಜ್ಯದ ಮುಖ್ಯಮಂತ್ರಿ ಆಗುತ್ತೀಯಾ" ಎಂದು ಸ್ವಾಮೀಜಿ ಆಶೀರ್ವದಿಸಿದ್ದಾರೆ. ಈ ಭವಿಷ್ಯವು ಉತ್ತರ ಕರ್ನಾಟಕ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
- Akshay Pallamajalu
- Updated on: Aug 8, 2026
- 4:36 pm
‘ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ’: ಅಕ್ರಮ ವಲಸಿಗರ ವೀಡಿಯೊ ವೈರಲ್ ಮಾಡುವವರಿಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
ಸಚಿವ ಪ್ರಿಯಾಂಕ್ ಖರ್ಗೆ ಅವರು ವಲಸಿಗರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸ್ವಯಂಘೋಷಿತ ದಂಡಯಾತ್ರೆಯನ್ನು ಖಂಡಿಸಿದ್ದಾರೆ. ಇಂತಹ ಕೃತ್ಯಗಳು ಅಂತರರಾಷ್ಟ್ರೀಯ ಜಾಲಗಳನ್ನು ಬಲಪಡಿಸುತ್ತವೆ ಎಂದು ಎಚ್ಚರಿಕೆ ನೀಡಿದ ಅವರು, ಮಾಹಿತಿ ಇದ್ದರೆ ಪೊಲೀಸರಿಗೆ ನೀಡಬೇಕು. ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾವಿರಾರು ವಲಸಿಗರನ್ನು ಪತ್ತೆಹಚ್ಚಿ ಎಫ್ಆರ್ಒಗೆ ಹಸ್ತಾಂತರಿಸಿದೆ ಎಂದು ತಿಳಿಸಿದ್ದಾರೆ.
- Akshay Pallamajalu
- Updated on: Aug 8, 2026
- 2:01 pm
‘ವಿಕಸಿತ ಭಾರತ’ ನಿರ್ಮಾಣಕ್ಕೆ ಯುವಶಕ್ತಿ ಅಗತ್ಯ: ದೆಹಲಿ ಐಐಟಿ ಪದವಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಕರೆ
ನವದೆಹಲಿಯ ಐಐಟಿ ಪದವಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವಕರ ಸಾಮರ್ಥ್ಯದ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. 'ವಿಕಸಿತ ಭಾರತ' ನಿರ್ಮಾಣದಲ್ಲಿ ಯುವ ಪೀಳಿಗೆಯ ಪಾತ್ರ ಮಹತ್ವದ್ದಾಗಿದೆ ಎಂದು ಕರೆ ನೀಡಿದರು. ತಂತ್ರಜ್ಞಾನ, ಬಾಹ್ಯಾಕಾಶ ಹಾಗೂ ಡ್ರೋನ್ ಕ್ಷೇತ್ರಗಳಲ್ಲಿ ಸರ್ಕಾರ ಯುವಕರಿಗೆ ಹೊಸ ಅವಕಾಶಗಳನ್ನು ತೆರೆದಿದ್ದು, ರಾಷ್ಟ್ರದ ಪ್ರಗತಿಗೆ ಅವರ ಕೊಡುಗೆ ಅನಿವಾರ್ಯ ಎಂದರು.
- Akshay Pallamajalu
- Updated on: Aug 8, 2026
- 1:26 pm
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
ತುಮಕೂರು ಜಿಲ್ಲೆಯಲ್ಲಿ ಆಹಾರ ಇಲಾಖೆಯು 14 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ. ಗ್ಯಾರಂಟಿ ಯೋಜನೆಯ ಹೊರೆ ತಗ್ಗಿಸುವ ಸಲುವಾಗಿ ರಾಜ್ಯ ಸರ್ಕಾರ ಕೈಗೊಂಡ ಈ ಕ್ರಮದಿಂದ ಅನರ್ಹ ಪಡಿತರ ಚೀಟಿದಾರರಿಗೆ ಆಘಾತ ಉಂಟಾಗಿದೆ. ಐಟಿ ರಿಟರ್ನ್ಸ್ ಸಲ್ಲಿಸುವವರು ಮತ್ತು ಕಾರು ಹೊಂದಿರುವವರು ಸೇರಿದಂತೆ ನಕಲಿ ಕಾರ್ಡುದಾರರನ್ನು ಪತ್ತೆ ಹಚ್ಚಿ, ಅವರ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ.
- Akshay Pallamajalu
- Updated on: Aug 8, 2026
- 12:31 pm
ಕುಚಿಪುಡಿ ನರ್ತಕಿ ಸಾಧನಾ ವಿರುದ್ಧ ಎಕ್ಸ್ನಲ್ಲಿ ಸುಳ್ಳು ಆರೋಪ: ‘ಅವರು ಅಮೆರಿಕನ್ ಪ್ರಜೆ’ ಎಂದು ಸ್ಪಷ್ಟನೆ ನೀಡಿದ ಹೂಸ್ಟನ್ ಅಟಾರ್ನಿ
ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಕುಚಿಪುಡಿ ನರ್ತಕಿ ಸಾಧನಾ ಗೊಲ್ಲಪೂಡಿ ವಿರುದ್ಧ 'ವೀಸಾ ವಂಚನೆ' ಆರೋಪವು ಎಕ್ಸ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ, ಹೂಸ್ಟನ್ನ ಯುಎಸ್ ಅಟಾರ್ನಿ ಏರಾನ್ ರೈಟ್ಜ್, ಸಾಧನಾ ಅವರು ಅಮೆರಿಕದ ಅಧಿಕೃತ ಪೌರತ್ವ ಹೊಂದಿದ ಪ್ರಜೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸುಳ್ಳು ಆರೋಪಗಳಿಗೆ ತೆರೆ ಬಿದ್ದಿದೆ. ತೀವ್ರ ಮನನೊಂದಿರುವ ಸಾಧನಾ, ತಮ್ಮ ಬಗ್ಗೆ ಹರಡುತ್ತಿರುವ ಸುಳ್ಳು ಮಾಹಿತಿಯನ್ನು ವರದಿ ಮಾಡುವಂತೆ ಮನವಿ ಮಾಡಿದ್ದಾರೆ.
- Akshay Pallamajalu
- Updated on: Aug 8, 2026
- 11:51 am
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಏಳು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ನಡೆದ ಈ ಘಟನೆಯಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.
- Akshay Pallamajalu
- Updated on: Aug 8, 2026
- 10:37 am
ನಿರಂತರ ಮಳೆಗೆ ಕುಸಿದ ರಸ್ತೆ: ರಸ್ತೆ ಮಧ್ಯೆ ದೊಡ್ಡ ಕಂದಕ; ಇದು ‘ನರಕದ ಹಾದಿ’ ಎಂದು ನೆಟ್ಟಿಗರ ಆಕ್ರೋಶ
ಆಗ್ರಾದಲ್ಲಿ ಸುರಿದ ಭಾರೀ ಮಳೆಯಿಂದ ಪ್ರಮುಖ ರಸ್ತೆಯೊಂದು ಕುಸಿದು, ಬೃಹತ್ ಸಿಂಕ್ಹೋಲ್ ಸೃಷ್ಟಿಯಾಗಿದೆ. ಕೋಟಿಗಟ್ಟಲೆ ವೆಚ್ಚದಲ್ಲಿ ನಿರ್ಮಿಸಿದ್ದ ರಸ್ತೆ ಒಂದೇ ಮಳೆಗೆ ಕುಸಿದಿದ್ದಕ್ಕೆ ಸಾರ್ವಜನಿಕರು ಮತ್ತು ವಿಪಕ್ಷ ನಾಯಕರು ಕಳಪೆ ಕಾಮಗಾರಿಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ.
- Akshay Pallamajalu
- Updated on: Aug 7, 2026
- 5:26 pm
ಅಗ್ಗಿಪೆಟ್ಟಿಗೆಯಲ್ಲಿ ಹಿಡಿಯುತ್ತೆ ಈ ಪಟ್ಟು ಸೀರೆ: ಸಿರಿಸಿಲ್ಲಾ ನೇಕಾರರ ವಿಸ್ಮಯಕಾರಿ ಕಲೆಗೆ ಒಬಾಮಾ, ಮೋದಿ ಫಿದಾ
ತೆಲಂಗಾಣದ ಸಿರಿಸಿಲ್ಲಾ ನೇಕಾರರು ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ ಮಡಚಬಹುದಾದ ಅತ್ಯಂತ ಸೂಕ್ಷ್ಮವಾದ ಪಟ್ಟು ಸೀರೆಯನ್ನು ತಯಾರಿಸಿ ವಿಶ್ವದ ಗಮನ ಸೆಳೆದಿದ್ದಾರೆ. ಶುದ್ಧ ರೇಷ್ಮೆ ದಾರ ಹಾಗೂ ನೈಸರ್ಗಿಕ ಬಣ್ಣಗಳಿಂದ ಸಾಂಪ್ರದಾಯಿಕ ಇಕ್ಕತ್ ಶೈಲಿಯಲ್ಲಿ ನೇಯ್ದ ಈ ಸೀರೆಯನ್ನು ತಯಾರಿಸಲು 6 ದಿನ ಬೇಕು. ನಲ್ಲ ವಿಜಯ್ ಕುಮಾರ್ ಕುಟುಂಬದ ಈ ಕೌಶಲ ಒಬಾಮಾ, ಮೋದಿಗೂ ಗೌರವ ಸಲ್ಲಿಸಿದೆ. ಇದು ಕೇವಲ ಕಲೆಯಲ್ಲ, ಭಕ್ತಿಯ ಪ್ರತೀಕವೂ ಹೌದು.
- Akshay Pallamajalu
- Updated on: Aug 7, 2026
- 4:09 pm
ಸಾಗರ ಉತ್ಪನ್ನಗಳ ರಫ್ತಿನಲ್ಲಿ ಕರ್ನಾಟಕಕ್ಕೆ ಅಭೂತಪೂರ್ವ ಯಶಸ್ಸು: 5,371 ಕೋಟಿ ರೂ.ಗೆ ಜಿಗಿದ ರಫ್ತು ಮೌಲ್ಯ, ದೇಶದಲ್ಲೇ 5ನೇ ಸ್ಥಾನ
ಕರ್ನಾಟಕವು ಸಾಗರ ಉತ್ಪನ್ನಗಳ ರಫ್ತಿನಲ್ಲಿ FY2025-26ರಲ್ಲಿ ಭರ್ಜರಿ ಸಾಧನೆ ಮಾಡಿದೆ. ರಫ್ತು ಮೌಲ್ಯ 5,371.85 ಕೋಟಿ ರೂ. ಗೆ ಏರಿಕೆ ಕಂಡಿದ್ದು, ಶೇ. 56.1 ರಷ್ಟು ಪ್ರಗತಿ ದಾಖಲಿಸಿದೆ. ಇದು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು. ದೇಶದಲ್ಲಿ ಕರ್ನಾಟಕ 6ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದೆ ಮತ್ತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಅತಿ ಹೆಚ್ಚು ಶೇಕಡಾವಾರು ಬೆಳವಣಿಗೆಯನ್ನು ಸಾಧಿಸಿದೆ.
- Akshay Pallamajalu
- Updated on: Aug 7, 2026
- 1:24 pm
ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ಡ್ರಗ್ಸ್ ಹಾವಳಿ: 54 ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ‘ಸ್ವಯಂಪ್ರೇರಿತ’ ದೂರು
ಉಪ ಲೋಕಾಯುಕ್ತರು ಹಂಪಿಯಲ್ಲಿ ನಡೆಯುತ್ತಿರುವ ಪಾರಂಪರಿಕ ಸಂರಕ್ಷಣಾ ನಿಯಮ ಉಲ್ಲಂಘನೆ, ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆಗಳ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. 54 ಅಧಿಕಾರಿಗಳಿಗೆ ಸೆಪ್ಟೆಂಬರ್ 1 ರೊಳಗೆ 'ಕ್ರಮ ಕೈಗೊಂಡ ವರದಿ' ಸಲ್ಲಿಸಲು ಆದೇಶಿಸಿದ್ದಾರೆ. ಇದು ಹಂಪಿ ರಕ್ಷಣೆಗೆ ಕೈಗೊಂಡಿರುವ ಕಠಿಣ ಕ್ರಮವಾಗಿದೆ.
- Akshay Pallamajalu
- Updated on: Aug 7, 2026
- 12:35 pm