ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.
25 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಸಿಕ್ಕಿದ್ದ ಅಬಕಾರಿ ಉಪ ಆಯುಕ್ತ
ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರು ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರನ್ನು 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ ಒಟ್ಟು 75 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಸೂಪರಿಂಟೆಂಡೆಂಟ್ ತಮ್ಮಣ್ಣ ಹಾಗೂ ಕಾನ್ಸ್ಟೇಬಲ್ ಲಕ್ಕಪ್ಪ ಕೂಡ ಸೆರೆಯಾಗಿದ್ದಾರೆ.
- Akshay Pallamajalu
- Updated on: Jan 17, 2026
- 5:18 pm
“ಸಲಿಂಗಕಾಮಿಗಳು ಜಿಮ್ಗೆ ಬರಬಾರದು”: ವಿವಾದ ಸೃಷ್ಟಿಸಿದ ಬೆಂಗಳೂರಿನ ಜೆಸ್ಟ್ ಫಿಟ್ನೆಸ್ ಸ್ಟುಡಿಯೋ ಪೋಸ್ಟರ್
ಬೆಂಗಳೂರಿನ ಜಿಮ್ ಒಂದರಲ್ಲಿ ಸಲಿಂಗಕಾಮಿಗಳಿಗೆ ತೂಕ ಇಳಿಸಿಕೊಳ್ಳಲು ಅವಕಾಶವಿಲ್ಲ ಎಂಬ ವಿಚಿತ್ರ ಪೋಸ್ಟರ್ ಹಾಕಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಸ್ಟ್ ಫಿಟ್ನೆಸ್ ಸ್ಟುಡಿಯೋ ಹಾಕಿದ ಈ ಪೋಸ್ಟರ್ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಲಿಂಗಕಾಮಿಗಳನ್ನು ಗುರಿಯಾಗಿಸಿದ ಈ ನಡೆಗೆ ಅನೇಕರು ಜಿಮ್ ಬಹಿಷ್ಕರಿಸಲು ಕರೆ ನೀಡಿದರು. ತೀವ್ರ ವಿರೋಧದ ನಂತರ, ಜಿಮ್ ತನ್ನ ಕ್ರಮಕ್ಕೆ ಕ್ಷಮೆ ಯಾಚಿಸಿದೆ, ಆದರೆ ಚರ್ಚೆ ಮುಂದುವರಿದಿದೆ.
- Akshay Pallamajalu
- Updated on: Jan 17, 2026
- 4:11 pm
ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್ ಇರುವುದಿಲ್ಲ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜನವರಿ 17 ಮತ್ತು 18 ರಂದು ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ವಿದ್ಯುತ್ ಕಡಿತ ಘೋಷಿಸಿದೆ. ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಗ್ರಿಡ್ ನಿರ್ವಹಣೆ ಮತ್ತು ನವೀಕರಣ ಕಾರ್ಯಗಳಿಗಾಗಿ ಈ ಕಡಿತ ಅಗತ್ಯ. ಬೊಮ್ಮನಹಳ್ಳಿ, ವೈಟ್ಫೀಲ್ಡ್, ಮಾರತಹಳ್ಳಿ ಸೇರಿದಂತೆ ಹಲವು ಪ್ರದೇಶಗಳು ಬಾಧಿತವಾಗಲಿವೆ. ನಿವಾಸಿಗಳು ಮೊಬೈಲ್ ಚಾರ್ಜ್, ಪವರ್ ಬ್ಯಾಂಕ್ ಸಿದ್ಧಪಡಿಸುವಂತಹ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.
- Akshay Pallamajalu
- Updated on: Jan 16, 2026
- 5:16 pm
ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ
ಬೆಂಗಳೂರಿನಲ್ಲಿ ಕೇವಲ 1 ವರ್ಷದ ಅನುಭವ ಇರುವ ಸಾಫ್ಟ್ವೇರ್ ಇಂಜಿನಿಯರ್ಗೆ ವಾರ್ಷಿಕ 35 ಲಕ್ಷ ರೂ. ಪ್ಯಾಕೇಜ್ ಆಫರ್ ಕುರಿತು ವೈರಲ್ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಸೈನ್-ಆನ್ ಬೋನಸ್, ESOP, ಭತ್ಯೆಗಳೂ ಸೇರಿ ಈ ಆಫರ್, ಅನುಭವಿ ಉದ್ಯೋಗಿಗಳಿಗೆ ಸಿಗುವ ವೇತನಕ್ಕಿಂತ ಹೆಚ್ಚಾಗಿದೆ. ಇದು ಐಟಿ ಉದ್ಯಮದಲ್ಲಿ ವೇತನ ತಾರತಮ್ಯ, ಉದ್ಯೋಗಿ ನಿಷ್ಠೆ ಹಾಗೂ ಸಾಮರ್ಥ್ಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Akshay Pallamajalu
- Updated on: Jan 16, 2026
- 4:17 pm
ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ
ಬೆಂಗಳೂರಿನಲ್ಲಿ ಮನೆ ಕೆಲಸದಾಕೆ ಸೌಮ್ಯ ಮಾಲೀಕರ ಬ್ರಾಂಡ್ ವಾಚ್ ಮತ್ತು ಚಿನ್ನಾಭರಣ ಕದ್ದು, ಕದ್ದ ವಾಚ್ ಧರಿಸಿ ವಾಟ್ಸಾಪ್ ಸ್ಟೇಟಸ್ನಲ್ಲಿ ಫೋಟೋ ಹಾಕಿದಳು. ಇದನ್ನೇ ಆಧಾರವಾಗಿಟ್ಟುಕೊಂಡು ಮಾಲೀಕರು ಪೊಲೀಸರಿಗೆ ದೂರು ನೀಡಿದಾಗ ಆಕೆ ಸಿಕ್ಕಿಬಿದ್ದಿದ್ದಾಳೆ. ಸುಮಾರು 4.5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 20,000 ಮೌಲ್ಯದ ವಾಚ್ ವಶಪಡಿಸಿಕೊಳ್ಳಲಾಗಿದೆ.
- Akshay Pallamajalu
- Updated on: Jan 16, 2026
- 3:02 pm
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ?
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪತ್ನಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಈಶ್ವರಪ್ಪ ಪೂಜಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 14 ವರ್ಷಗಳ ಜೈಲು ಶಿಕ್ಷೆ ಪೈಕಿ 7 ವರ್ಷ ಪೂರೈಸಿದ್ದ ಈಶ್ವರಪ್ಪ ಉತ್ತಮ ನಡತೆ ಹೊಂದಿದ್ದರು. ಜೈಲು ಆವರಣದ ನಿರ್ಮಾಣ ಸ್ಥಳದಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದು, ಸಿಬ್ಬಂದಿ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
- Akshay Pallamajalu
- Updated on: Jan 16, 2026
- 12:52 pm
70 ಸಾವಿರ ರೂ. ಕಾರನ್ನು ಮಾಡಿಫೈ ಮಾಡಿದ ವಿದ್ಯಾರ್ಥಿಗೆ 1 ಲಕ್ಷ ರೂ. ದಂಡ: ಫೈನ್ ಹಾಕಬೇಡಿ ಎಂದು ರಾಜಕಾರಣಿಗಳ ಒತ್ತಡ
ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ ತನ್ನ 70 ಸಾವಿರ ರೂ. ಕಾರಿಗೆ ಅಕ್ರಮ ಸೈಲೆನ್ಸರ್ ಮಾರ್ಪಾಡು ಮಾಡಿ, ವಿಪರೀತ ಶಬ್ದ ಮಾಲಿನ್ಯ ಸೃಷ್ಟಿಸಿದ್ದಕ್ಕೆ 1.11 ಲಕ್ಷ ರೂ. ದಂಡ ಕಟ್ಟಿದ್ದಾನೆ. ಸಾರ್ವಜನಿಕರ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡು, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಈ ಕಠಿಣ ಕ್ರಮವು ಯುವಕರಿಗೆ ಅಕ್ರಮ ವಾಹನ ಮಾರ್ಪಾಡಿನ ವಿರುದ್ಧ ಎಚ್ಚರಿಕೆ ಸಂದೇಶ ಆಗಿದೆ ಎಂದು ಹೇಳಿದ್ದಾರೆ. ಜತೆಗೆ ಈ ಯುವಕನಿಗೆ ರಾಜಕಾರಣಿಗಳ ಪ್ರಭಾವ ಕೂಡ ಇತ್ತು.
- Akshay Pallamajalu
- Updated on: Jan 16, 2026
- 10:54 am
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ
ಕೆ.ಎಚ್. ಮುನಿಯಪ್ಪ ಅವರು ದಲಿತ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಳ ಬಗ್ಗೆ ಮಾತನಾಡಿದ್ದು, ಈ ನಿರ್ಧಾರವನ್ನು ಹೈಕಮಾಂಡ್ಗೆ ಬಿಡಲಾಗಿದೆ ಎಂದರು. ಮಲ್ಲಿಕಾರ್ಜುನ ಖರ್ಗೆ ಉದಾಹರಣೆ ನೀಡಿದ ಅವರು, 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಅಧಿಕಾರಿಗಳ ರಕ್ಷಣೆ ಕುರಿತು ಪ್ರತಿಕ್ರಿಯಿಸಿ, ಇಂತಹ ಘಟನೆಗಳು ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದರು.
- Akshay Pallamajalu
- Updated on: Jan 15, 2026
- 3:07 pm
ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್
ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಏರುತ್ತಿದ್ದು, ಯುವಕರ ಆನ್ಲೈನ್ ವಂಚನೆ ಜಾಲಗಳು ಸಕ್ರಿಯವಾಗಿವೆ. ಕಾಲೇಜು ಬಿಟ್ಟ ಮೊಹಮ್ಮದ್ ಉಜೈಫ್, ತನ್ನ ತಾಯಿ ಜೊತೆ ಸೇರಿ 4200 ಬ್ಯಾಂಕ್ ಖಾತೆಗಳನ್ನು ನಿರ್ವಹಿಸಿ 24 ಕೋಟಿ ರೂ.ಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಪ್ರೇಮ್ ತನೇಜಾ ಜೊತೆಗೂ ಸಂಬಂಧವಿದೆ. ಜನರಿಂದ ಆಧಾರ್, ಪ್ಯಾನ್ ಪಡೆದು ಬ್ಯಾಂಕ್ ಖಾತೆ ತೆರೆದು ಹಣ ದೋಚುತ್ತಿದ್ದರು. ಐಷಾರಾಮಿ ಜೀವನ ನಡೆಸುತ್ತಿದ್ದ ಉಜೈಫ್, ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ.
- Akshay Pallamajalu
- Updated on: Jan 15, 2026
- 2:48 pm
ಬೆಂಗಳೂರು ಸಂಚಾರ ನಿಯಮ ಉಲ್ಲಂಘನೆ 82% ಏರಿಕೆ: ವಾಹನ ಸವಾರರಿಗೆ ಬಿಗ್ ಶಾಕ್!
ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು 2025ರಲ್ಲಿ ಶೇ. 82ರಷ್ಟು ಹೆಚ್ಚಾಗಿವೆ. ಅತಿವೇಗ, ನಿರ್ಲಕ್ಷ್ಯ, ತಪ್ಪು ದಿಕ್ಕಿನ ಚಾಲನೆ ಮತ್ತು ಫುಟ್ಪಾತ್ ಪಾರ್ಕಿಂಗ್ಗೆ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪೊಲೀಸರು ದಾಖಲಿಸಿರುವ ಪ್ರಕರಣಗಳು 6,872ಕ್ಕೆ ಏರಿವೆ. ವಾಹನ ಸವಾರರು ಎಚ್ಚರದಿಂದಿರಬೇಕು. ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ.
- Akshay Pallamajalu
- Updated on: Jan 15, 2026
- 10:06 am
Karnataka air quality: ಕರಾವಳಿ ಜಿಲ್ಲೆಗಳಲ್ಲಿ ಕಳಪೆ ಗಾಳಿ ಗುಣಮಟ್ಟ, ಅಸ್ತಮಾ, ಉಸಿರಾಟ ತೊಂದರೆ ಹೆಚ್ಚಾಗಲಿದೆ
ಕರ್ನಾಟಕದ ಹಲವು ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟದಲ್ಲಿ ಏರಿಳಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಕಳಪೆ ಮಟ್ಟದ AQI ದಾಖಲಾಗಿದ್ದು, ಕಲಬುರಗಿ ಮತ್ತು ಚಿಕ್ಕಮಗಳೂರಿನಲ್ಲಿ ಉತ್ತಮ ಗುಣಮಟ್ಟವಿದೆ. ರಸ್ತೆ ಕಾಮಗಾರಿ, ವಾಹನಗಳ ಹೊಗೆ, ಚಳಿಗಾಲದ ಮಂಜು ವಾಯುಮಾಲಿನ್ಯಕ್ಕೆ ಕಾರಣವಾಗಿವೆ. ಅಸ್ತಮಾ ಇರುವವರು ಎಚ್ಚರಿಕೆ ವಹಿಸಲು, ಮಾಸ್ಕ್ ಧರಿಸಲು ತಜ್ಞರು ಸಲಹೆ ನೀಡಿದ್ದಾರೆ. ಗಾಳಿ ಗುಣಮಟ್ಟ ಸಂಜೆಯ ವೇಳೆಗೆ ಬದಲಾಗುವ ಸಾಧ್ಯತೆಯಿದೆ.
- Akshay Pallamajalu
- Updated on: Jan 15, 2026
- 7:39 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ
Karnataka Weather: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನವಿದ್ದು, ಬೆಂಗಳೂರಿನಲ್ಲಿ ಹಿತಕರ ವಾತಾವರಣವಿದೆ (ಗರಿಷ್ಠ 28-29°C). ಆದರೆ, ಬೀದರ್, ಕಲಬುರಗಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನ, ದಕ್ಷಿಣ ಒಳನಾಡಿನಲ್ಲಿ ಒಣ ಹಾಗೂ ರಾತ್ರಿ ವೇಳೆ ಚಳಿ ಹೆಚ್ಚಿರಲಿದೆ.
- Akshay Pallamajalu
- Updated on: Jan 15, 2026
- 7:05 am