ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರೈತರು ಫುಲ್ ಖುಷ್
ಕೃಷ್ಣಾ ನದಿ ಮೇಲ್ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ, ಬಸವಸಾಗರ ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ರಾಯಚೂರಿನ ಗುರ್ಜಾಪುರ ಬ್ರಿಡ್ಜ್-ಕಂ-ಬ್ಯಾರೇಜ್ನ 196 ಗೇಟ್ಗಳನ್ನು ತೆರೆದು ನೀರು ಸುಗಮವಾಗಿ ಹರಿಯುವಂತೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಇದು ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಕೊಂಚ ಸಮಾಧಾನ ತಂದಿದೆ, ಆದರೂ ಕಾಲುವೆ ನೀರು ಬಿಡುಗಡೆಯ ಬಗ್ಗೆ ಅವರಲ್ಲಿ ಕಾಳಜಿ ಇದೆ.
- Ameen Sab
- Updated on: Jul 27, 2026
- 9:31 am
ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾಯ್ತು ಬಂಗಾರದಂತಹ ಬೆಳೆ: ಜೆಸ್ಕಾಂ ವಿರುದ್ಧ ಸಿಟ್ಟಿಗೆದ್ದು ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ!
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಜೆಸ್ಕಾಂ ಇಲಾಖೆಯ ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಬೋರ್ವೆಲ್ ಇದ್ದರೂ ಬೆಳೆಗೆ ನೀರುಣಿಸಲಾಗದೆ ರೈತನೊಬ್ಬ ತಾನು ಬೆಳೆದಿದ್ದ ಎರಡೂವರೆ ಎಕರೆ ಪಪ್ಪಾಯ ತೋಟವನ್ನೇ ಕತ್ತರಿಸಿ ನಾಶಪಡಿಸಿದ್ದಾನೆ. ಕೈಗೆ ಬಂದ ಬೆಳೆ ಕಣ್ಣೆದುರೇ ಒಣಗಿ ಹೋಗಿದ್ದಕ್ಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಣ್ಣೀರಿಟ್ಟಿದ್ದಾನೆ.
- Ameen Sab
- Updated on: Jul 25, 2026
- 11:03 am
ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ
ಯಾದಗಿರಿ ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಂಧೆ ಬಯಲಾಗಿದೆ. ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾದಲ್ಲಿ 82 ಕ್ವಿಂಟಾಲ್ ಸರ್ಕಾರಿ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ದಾಳಿ ವೇಳೆ ದಂದೆಕೋರರು ಅಧಿಕಾರಿಗಳಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾರೆ. ಮಾಜಿ ಜಿ.ಪಂ ಸದಸ್ಯ ಕಿಶನ್ ರಾಠೋಡ್ ಪುತ್ರ ಲೋಹಿತ್ ರಾಠೋಡ್ ವಿರುದ್ಧ FIR ದಾಖಲಾಗಿದೆ. ಬಡವರಿಗಾಗಿ ಮೀಸಲಾದ ಅಕ್ಕಿ ಅಕ್ರಮವಾಗಿ ನೆರೆ ರಾಜ್ಯಗಳಿಗೆ ಸಾಗಿಸಲಾಗುತ್ತಿತ್ತು.
- Ameen Sab
- Updated on: Jul 21, 2026
- 8:37 pm
ಯಾದಗಿರಿಯಲ್ಲಿ 16 ಸಾವಿರಕ್ಕೂ ಹೆಚ್ಚು ಗರ್ಭಧಾರಣೆಗಳ ಮುಂದಿನ ಮಾಹಿತಿಯೇ ಇಲ್ಲ! ತಜ್ಞರ ಸಮಿತಿ ವರದಿಯಲ್ಲಿ ಆಘಾತಕಾರಿ ಅಂಶ ಬಯಲು
Yadgir News: ಯಾದಗಿರಿ ಜಿಲ್ಲೆಯಲ್ಲಿ ಗರ್ಭಧಾರಣೆಗಳ ದಾಖಲೆ ಮತ್ತು ಅವುಗಳ ಮುಂದಿನ ಹಂತದ ಮೇಲ್ವಿಚಾರಣೆಯಲ್ಲಿ ಗಂಭೀರ ಲೋಪಗಳು ಕಂಡುಬಂದಿರುವ ಬಗ್ಗೆ ರಾಜ್ಯಮಟ್ಟದ ಬಹುಶಿಸ್ತೀಯ ತಜ್ಞರ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ಕಳೆದ ಐದು ವರ್ಷಗಳ ಗರ್ಭಧಾರಣೆ ಪ್ರಕರಣಗಳಲ್ಲಿ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಮುಂದಿನ ಮಾಹಿತಿ ಲಭ್ಯವಿಲ್ಲ ಎಂದು ವರದಿ ಉಲ್ಲೇಖಿಸಿದೆ.
- Ameen Sab
- Updated on: Jul 14, 2026
- 7:49 am
ಯಾದಗಿರಿ: ಮಳೆ ಬಂದರೆ ಕುರಿಗಳಂತೆ ಒಂದೇ ರೂಮಲ್ಲಿ 5 ತರಗತಿಯ ವಿದ್ಯಾರ್ಥಿಗಳು; ಶಿಕ್ಷಣ ಇಲಾಖೆಯ ವಿರುದ್ಧ ಪೋಷಕರ ಆಕ್ರೋಶ
ಯಾದಗಿರಿ ಸರ್ಕಾರಿ ಶಾಲೆಯಲ್ಲಿ 1 ರಿಂದ 5ನೇ ತರಗತಿಯ 70 ವಿದ್ಯಾರ್ಥಿಗಳು ಒಂದೇ ಕೋಣೆಯಲ್ಲಿ ಪಾಠ ಕಲಿಯುವ ದುಸ್ಥಿತಿ ಎದುರಾಗಿದೆ. ಕೊಠಡಿ ಹಾಗೂ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಮಳೆ ಬಂದರೆ ಒಂದೇ ರೂಮಿನಲ್ಲಿ ಕುರಿಗಳಂತೆ ಕೂರುವ ಪರಿಸ್ಥಿತಿ. ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಮಕ್ಕಳ ಭವಿಷ್ಯ ಅಂಧಕಾರದಲ್ಲಿದೆ.
- Ameen Sab
- Updated on: Jul 9, 2026
- 8:40 am
ಜೀವ ಕೈಯಲ್ಲಿ ಹಿಡಿದು ಹಳ್ಳ ದಾಟುವ ಶಾಲಾ ಮಕ್ಕಳು: ಯಾದಗಿರಿಯ ಲಿಂಗಸನಳ್ಳಿ ತಾಂಡದ ಜನರ ದುಸ್ಥಿತಿ; ಕಣ್ಣು ಮುಚ್ಚಿ ಕುಳಿತ ಜನಪ್ರತಿನಿಧಿಗಳು
ಯಾದಗಿರಿ ಜಿಲ್ಲೆಯ ಲಿಂಗಸನಳ್ಳಿ ತಾಂಡದ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣಕ್ಕಾಗಿ ಪ್ರತಿದಿನ ಅಪಾಯಕಾರಿ ಹಳ್ಳವನ್ನು ದಾಟುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಸೇತುವೆ ಇಲ್ಲದ ಕಾರಣ ಮಳೆಗಾಲದಲ್ಲಿ ಶಾಲೆಗೆ ಹೋಗುವುದೇ ಅಸಾಧ್ಯ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಜೀವಭಯದಲ್ಲಿರುವ ಮಕ್ಕಳಿಗೆ ಸುರಕ್ಷಿತ ರಸ್ತೆ ಮತ್ತು ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
- Ameen Sab
- Updated on: Jun 24, 2026
- 11:32 am
ವಿಚಾರಣೆಗೆ ಕರೆದು ಪೊಲೀಸರಿಂದ ಹಲ್ಲೆ ಆರೋಪ: ಠಾಣೆಯಲ್ಲೇ ವೃದ್ಧ ಸಾವು
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ 70 ವರ್ಷದ ವೃದ್ಧನ ಸಾವಿಗೆ ಪೊಲೀಸರ ಹಲ್ಲೆಯೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಚಾರಣೆಗೆ ಕರೆದು ವೃದ್ಧನ ಮೇಲೆ ಪೊಲೀಸರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
- Ameen Sab
- Updated on: Jun 22, 2026
- 6:34 pm
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆಗಳನ್ನು ಬಂದ್ ಮಾಡಿ ವಿಭಿನ್ನ ಪ್ರತಿಭಟನೆ
ಯಾದಗಿರಿಯ ಗುರುಮಠಕಲ್ ತಾಲ್ಲೂಕಿನ ಗೂರನೂರಿನಲ್ಲಿ ಮೇಲ್ವರ್ಗದವರು ದಲಿತರಿಗೆ ಜಮೀನುಗಳಿಗೆ ಹೋಗುವ ದಾರಿಯನ್ನು ಎರಡು ವರ್ಷಗಳಿಂದ ಬಂದ್ ಮಾಡಿದ್ದಾರೆ. ಅಧಿಕಾರಿಗಳ ಸ್ಪಂದನೆ ಇಲ್ಲದ ಕಾರಣ, ನ್ಯಾಯಕ್ಕಾಗಿ ಗ್ರಾಮಸ್ಥರು ಗ್ರಾಮ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿ ಹೋರಾಟ ನಡೆಸುತ್ತಿದ್ದಾರೆ. ಇದರಿಂದ ಶಾಲಾ ಮಕ್ಕಳು ಸಹ ತೊಂದರೆ ಅನುಭವಿಸಿದ್ದಾರೆ.
- Ameen Sab
- Updated on: Jun 19, 2026
- 12:54 pm
ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಅರಣ್ಯದಲ್ಲಿ ಕಾಡುಹಂದಿ ಬೇಟೆಯಾಡಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ ನಡೆದಿದೆ. ಕಿಡಿಗೇಡಿಗಳು ಆರ್ಎಫ್ಒ ಭಾಗಪ್ಪಗೌಡ ಹಾಗೂ ಗಸ್ತುಪಾಲಕರನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿದ್ದಾರೆ. ಈ ಸಂಬಂಧ ಕೊಡೇಕಲ್ ಪೊಲೀಸರು 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ನಾಲ್ವರನ್ನು ಈಗಾಗಲೇ ಜೈಲಿಗಟ್ಟಿದ್ದಾರೆ.
- Ameen Sab
- Updated on: Jun 5, 2026
- 2:09 pm
ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಗಾಳಿ ಸಹಿತ ಭಾರಿ ಮಳೆಗೆ ಮನೆಯ ಶೀಟ್ಗಳು ಹಾರಿಹೋಗಿವೆ. ರಾತ್ರಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬವು ತಾತ್ಕಾಲಿಕವಾಗಿ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದು, ಈ ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
- Ameen Sab
- Updated on: May 24, 2026
- 12:55 pm
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!
ಬೇಸಿಗೆಯ ಪರಿಣಾಮವಾಗಿ ಉತ್ತರ ಕರ್ನಾಟಕದ ಹಲವೆಡೆ ನೀರಿನ ಅಭಾವ ಎದುರಾಗಿದ್ದು, ಜಿಲ್ಲೆಯಾದ್ಯಂತ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಿದೆ. ಬಂಡಳ್ಳಿ ಗ್ರಾಮದ ನಿವಾಸಿಗಳು ತಮ್ಮ ಮೂಲಭೂತ ಸೌಕರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಪ್ರತಿಭಟನೆಗೆ ಇಳಿದಿದ್ದಾರೆ. ಯಾದಗಿರಿ ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ameen Sab
- Updated on: May 18, 2026
- 12:20 pm
ಆಟವಾಡುತ್ತಿದ್ದ ಮಕ್ಕಳ ಮೇಲೆ ಕುಸಿದ ಮನೆಯ ಗೋಡೆ: ಓರ್ವ ಬಾಲಕಿ ಸಾವು, ಮತ್ತಿಬ್ಬರಿಗೆ ಗಾಯ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಭಾರೀ ಮಳೆಯಿಂದ ದುರಂತ ಸಂಭವಿಸಿದೆ. ಮಳೆ ಮತ್ತು ಬಿರುಗಾಳಿಗೆ ದುರ್ಬಲಗೊಂಡಿದ್ದ ಮನೆಯ ಗೋಡೆ ಕುಸಿದು 8 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಯಾದಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Ameen Sab
- Updated on: May 12, 2026
- 1:48 pm