ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ
ಸಾಮಾಜಿಕ ಬಹಿಷ್ಕಾರವೆಂಬ ಅನಿಷ್ಟದ ಪಿಡುಗು ಇನ್ನೂ ಕರ್ನಾಟಕದಲ್ಲಿ ಅಲ್ಲಲ್ಲಿ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಮೈಸೂರು, ಶಿವಮೊಗ್ಗದಿಂದ ಸಾಮಾಜಿಕ ಬಹಿಷ್ಕಾರದ ವರದಿಯಾಗಿದ್ದವು. ಇದೀಗ ಯಾದಗಿರಿ ಸರದಿ. ಜಿಲ್ಲೆಯ ಶಹಾಪುರ ನಗರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಸದ್ಯ ಸಂತ್ರಸ್ತರು ಟಿವಿ9 ಬಳಿ ಅಳಲು ತೋಡಿಕೊಂಡು, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
- Ameen Sab
- Updated on: Feb 14, 2026
- 9:21 am
Yadgir: ಮದ್ಯ ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ
ತಾಯಿಯೇ ತನ್ನ 11 ವರ್ಷದ ಮಗಳ ಕತ್ತು ಹಿಸುಕಿ ಕೊಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಗಳನ್ನು ಕೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕತೆ ಕಟ್ಟಿದ್ದ ಮಹಿಳೆಯ ನಾಟಕ ಪೊಲೀಸರ ತನಿಖೆ ವೇಳೆ ಬಯಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ತಂದೆಯಿಲ್ಲದ ಕುಟುಂಬಕ್ಕೆ ಪುಟ್ಟ ಮಕ್ಕಳೇ ಆಸರೆಯಾಗಿದ್ದರು ಎನ್ನಲಾಗಿದ್ದು, ತನಿಖೆ ಮುಂದುವರಿದಿದೆ.
- Ameen Sab
- Updated on: Feb 10, 2026
- 5:37 pm
ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು
ಯಾದಗಿರಿ ಜಿಲ್ಲೆಯ ರೈತರು ಶೇಂಗಾ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ವಿಂಟಾಲ್ಗೆ 12 ಸಾವಿರವಿದ್ದ ದರ 4-6 ಸಾವಿರಕ್ಕೆ ಕುಸಿದಿದೆ. ಎಪಿಎಂಸಿ ದಲ್ಲಾಳಿಗಳು ಮತ್ತು ಕಮಿಷನ್ ಏಜೆಂಟರು ಹೊರಗಿನ ವ್ಯಾಪಾರಿಗಳನ್ನು ಹಿಂತಿರುಗಿಸಿ ರೈತರಿಗೆ ಮೋಸ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.
- Ameen Sab
- Updated on: Feb 6, 2026
- 8:22 pm
ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್ನಲ್ಲಿ ಕೆಲಸ! SSLC ಫಲಿತಾಂಶ ಹೆಚ್ಚಿಸಲು ವಿನೂತನ ಪ್ರಯೋಗ
ಯಾದಗಿರಿಯ ಕಕ್ಕೇರ ಸರ್ಕಾರಿ ಪ್ರೌಢಶಾಲೆಯು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ದಿನದ 24 ಗಂಟೆಯೂ ತೆರೆದಿರುತ್ತದೆ! ಮೊಬೈಲ್ ಗೀಳಿನಿಂದ ಹೊರತಂದು ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಹಗಲು ರಾತ್ರಿ ಬೋಧನೆ ಮಾಡುತ್ತಿದ್ದಾರೆ. ಇದರಿಂದ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯ ಫಲಿತಾಂಶ ಸುಧಾರಣೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ. ಶಿಕ್ಷಕರ ಈ ವಿನೂತನ ಪ್ರಯತ್ನಕ್ಕೆ ಇಲಾಖೆಯ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
- Ameen Sab
- Updated on: Feb 6, 2026
- 6:48 am
ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ
ಯಾದಗಿರಿ ಜಿಲ್ಲೆಯ ಯುವ ರೈತ ಬರಡಾದ ಪ್ರದೇಶದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬಿಟ್ಟು, ಕೇವಲ ಮೂರೂವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದು ಭರ್ಜರಿ ಯಶಸ್ಸು ಗಳಿಸಿದ್ದಾರೆ. ನೀರಿನ ಕೊರತೆಯ ಸವಾಲನ್ನು ಮೆಟ್ಟಿ ನಿಂತು, ಎರಡು ತಿಂಗಳಲ್ಲಿ 16 ಲಕ್ಷ ರೂ ನಿವ್ವಳ ಲಾಭ ಗಳಿಸಿ, ಇತರ ರೈತರಿಗೆ ಮಾದರಿಯಾಗಿದ್ದಾರೆ.
- Ameen Sab
- Updated on: Feb 1, 2026
- 9:22 pm
ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್
ಯಾದಗಿರಿ ಲುಂಬಿಣಿ ಉದ್ಯಾನವನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ. ಕಲ್ಲಂಗಡಿ, ಕುಂಬಳಕಾಯಿ, ಹೂವು ಮತ್ತು ಧಾನ್ಯಗಳಿಂದ ಮಹನೀಯರ, ಪ್ರಾಣಿಗಳ ಕಲಾತ್ಮಕ ಕೆತ್ತನೆಗಳು ಗಮನ ಸೆಳೆದಿವೆ. ಸ್ಥಳೀಯ ರೈತರ ಹಣ್ಣು-ಹೂವುಗಳ ಪ್ರದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ. ಇಲ್ಲಿವೆ ನೋಡಿ ಫೋಟೋಸ್.
- Ameen Sab
- Updated on: Jan 27, 2026
- 8:32 pm
ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು
ಯಾದಗಿರಿ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕುರಿಮರಿಗಳನ್ನು ಪಲ್ಲಕ್ಕಿಗೆ ಎಸೆಯುವ ಸಂಪ್ರದಾಯ ನಿಷೇಧಿಸಲಾಗಿದೆ. ಹೀಗಿದ್ದರು ಕೆಲ ಭಕ್ತರು ತಂದಿದ್ದ 778 ಕುರಿಮರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ವಶಕ್ಕೆ ಪಡೆದುಕೊಂಡಿದ್ದ ಕುರಿಮರಿಗಳನ್ನು ಟೆಂಡರ್ ಮೂಲಕ ಮಾರಾಟ ಮಾಡಲಾಗಿದೆ. ಆ ಮೂಲಕ ದೇವಸ್ಥಾನಕ್ಕೆ 23 ಲಕ್ಷಕ್ಕೂ ಹೆಚ್ಚು ಆದಾಯ ಹರಿದು ಬಂದಿದೆ.
- Ameen Sab
- Updated on: Jan 16, 2026
- 9:38 pm
ವಿಚಾರಣೆ ನೆಪದಲ್ಲಿ ಕ್ಯಾನ್ಸರ್ ರೋಗಿ ಮೇಲೆ ಕ್ರೌರ್ಯ?: ಖಾಕಿ ಏಟಿಗೆ ಮುರೀತಾ ವ್ಯಕ್ತಿ ಮೂಳೆ?
ಯಾದಗಿರಿಯಲ್ಲಿ ಕ್ಯಾನ್ಸರ್ ರೋಗಿ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮನಬಂದಂತೆ ಹಲ್ಲೆ ನಡೆಸಿದ್ದು, ಮೆಹಬೂಬ್ ಕಾಲು ಮುರಿದು ಗಾಯಗೊಂಡಿದ್ದಾರೆ. ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ಮೇಲೆ ನಡೆದ ಈ ಅಮಾನವೀಯ ಕೃತ್ಯಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಗಾಯಗೊಂಡ ಮೆಹಬೂಬ್ಗೆ ಕಲಬುರಗಿಯ ಜಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Ameen Sab
- Updated on: Jan 16, 2026
- 2:38 pm
ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು
ಯಾದಗಿರಿ ತಾಲೂಕಿನ ಮೈಲಾಪುರದಲ್ಲಿ ಅದ್ದೂರಿಯಾಗಿ ನಡೆದ ಮೈಲಾರಲಿಂಗನ ಜಾತ್ರೆಗೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಕ್ತರು ಭಂಡಾರ ಎರಚಿ, ಜೈಘೋಷ ಹಾಕಿದರು. ಮೈಲಾರನ ಪಲ್ಲಕ್ಕಿ ಮೆರವಣಿಗೆ, ಹೊನ್ನ ಕೆರೆಯಲ್ಲಿ ಗಂಗ ಸ್ನಾನ, ಮತ್ತು ಕಬ್ಬಿಣದ ಸರಪಳಿ ತುಂಡರಿಸುವ ಸಾಹಸ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ಇಲ್ಲಿವೆ ಫೋಟೋಸ್.
- Ameen Sab
- Updated on: Jan 14, 2026
- 6:37 pm
ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು
ಎಳ್ಳಮಾವಾಸ್ಯೆಯು ಉತ್ತರ ಕರ್ನಾಟಕ ರೈತರ ಪ್ರಮುಖ ಹಬ್ಬಗಳಲ್ಲಿ ಒಂದು. ಈ ದಿನ ಭೂ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಸಮೃದ್ಧ ಫಸಲು ನೀಡುವಂತೆ ಪ್ರಾರ್ಥಿಸಲಾಗುತ್ತದೆ. ವಿವಿಧ ಸಿಹಿ ಖಾದ್ಯಗಳನ್ನು ಸಿದ್ಧಪಡಿಸಿ ಹೊಲಗಳಿಗೆ ತೆರಳಿ, ಭೂಮಿಗೆ 'ಚರಗ' ಚೆಲ್ಲಲಾಗುತ್ತದೆ. ಕುಟುಂಬಸ್ಥರು ಒಟ್ಟಾಗಿ ಸೇರಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಾರೆ. ಹಬ್ಬದ ಫೋಟೋಸ್ ಇಲ್ಲಿವೆ.
- Ameen Sab
- Updated on: Dec 19, 2025
- 6:19 pm
ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ
ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರ ವಿರುದ್ಧ ದಾಳಿ ನಡೆಸಿ, 67 ಸಾವಿರ ಮೆಟ್ರಿಕ್ ಟನ್ ಮರಳು ಹಾಗೂ 20 ವಾಹನಗಳನ್ನು ಜಪ್ತಿ ಮಾಡಿದ್ದು, 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
- Ameen Sab
- Updated on: Dec 18, 2025
- 9:08 pm
ಗುರುಮಠಕಲ್: ವಸತಿ ನಿಲಯದಲ್ಲಿ ಊಟ ಸೇವಿಸಿ 28 ವಿದ್ಯಾರ್ಥಿನಿಯರು ಅಸ್ವಸ್ಥ, ಮೂವರ ಸ್ಥಿತಿ ಗಂಭೀರ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್ನಲ್ಲಿ ಊಟ ಸೇವಿಸಿದ 28 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ಗೆ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Ameen Sab
- Updated on: Dec 11, 2025
- 1:23 pm