ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಪೋಕ್ಸೋ ಪ್ರಕರಣ: ಮಲ್ಲಿಕಾರ್ಜು ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್
ಕಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ. ಹಾಗಾದ್ರೆ, ಮುತ್ಯಾ ಜೈಲುಪಾಲಾಗುತ್ತಾರಾ?.
- Ameen Sab
- Updated on: Mar 9, 2026
- 5:10 pm
UPSC Result 2025: ಯುಪಿಎಸ್ಸಿ ಪರೀಕ್ಷೆಯಲ್ಲಿ ಯಾದಗಿರಿ ಅಭ್ಯರ್ಥಿಗಳ ಸಾಧನೆ! ವೈದ್ಯ ವೃತ್ತಿ ಬಿಟ್ಟು ಯುಪಿಎಸ್ಸಿ ಗೆದ್ದ ಯುವತಿ
ಯಾದಗಿರಿ ಜಿಲ್ಲೆಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ನಾಲ್ವರು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬುದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಡಾ. ನಿವೇದಿತಾ ಬಾವಿಮನಿ, ಸಂದೀಪ್ ಬಾಡದ್, ಬಸವರಾಜ್ ಜವಳಿ, ಚಂದ್ರಶೇಖರ್ ಅವರ ಈ ಸಾಧನೆ ಜಿಲ್ಲೆಯ ಜನರಿಗೆ ಹೆಮ್ಮೆ ತಂದಿದೆ. ಡಾ. ನಿವೇದಿತಾ ವೈದ್ಯ ವೃತ್ತಿ ತ್ಯಜಿಸಿ ಯುಪಿಎಸ್ಸಿ ಸಾಧನೆ ಮಾಡಿರುವುದು ವಿಶೇಷವಾಗಿದ್ದು, ಅವರ ಪರಿಶ್ರಮ, ಕುಟುಂಬದ ಬೆಂಬಲವೇ ಈ ಯಶಸ್ಸಿಗೆ ಕಾರಣವೆಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
- Ameen Sab
- Updated on: Mar 7, 2026
- 11:33 am
ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಫೋಕ್ಸೋ ಪ್ರಕರಣ ಸಂಬಂಧ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ರಕ್ಷರಾಗಿದ್ದು, ಇಂದು (ಮಾರ್ಚ್ 25) ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಂಜೆ ಆರು ಗಂಟೆಯಿಂದ ಮುತ್ಯಾನನ್ನು ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣ ಅವರು ವಿಚಾರಣೆ ನಡೆಸಿದ್ದಾರೆ. ಬಳಿಕ ಮುತ್ಯಾನ ನಾಲ್ಕು ಮೊಬೈಲ್ಗಳನ್ನು ವಶಕ್ಕೆ ಪಡೆದುಕೊಂಡು ಕಳುಹಿಸಿದ್ದಾರೆ.
- Ameen Sab
- Updated on: Mar 5, 2026
- 9:50 pm
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾನನ್ನು ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್
ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (pocso Case) ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ವಿಚಾರಣೆಗೆ ಹಾಜರಾಗಿದ್ದು, ಮೊದಲು ಪೊಲೀಸರು ಮುತ್ಯಾನನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಟೆಸ್ಟ್ ಪ್ರಕ್ರಿಯೆ ನಡೆಸಿದ್ದಾರೆ.
- Ameen Sab
- Updated on: Mar 5, 2026
- 5:03 pm
ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ
ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿದ್ದ ಮುತ್ಯಾ ಮೊದಲು ವಿಡಿಯೋ ಬಿಡುಗಡೆ ಮಾಡಿ ತಾವು ಎಲ್ಲೂ ಹೋಗಿಲ್ಲ. ಭಯಪಡಬೇಡಿ ಎಂದು ಭಕ್ತರಿಗೆ ಸಂದೇಶ ರವಾನಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮುತ್ಯಾ ಪೊಲೀಸರ ಮುಂದೆ ಪ್ರತ್ಯಕ್ಷರಾಗಿದ್ದಾರೆ.
- Ameen Sab
- Updated on: Mar 5, 2026
- 3:06 pm
ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್
ಮದ್ಯದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಕೆಲಸ ಕೊಡಿಸಿದ ಗೆಳೆಯನನ್ನೇ ಸ್ನೇಹಿತ ಕೊಂದಿದ್ದಾನೆ. ಸುರಪುರ ತಾಲ್ಲೂಕಿನ ಕ್ರಶರ್ ಬಳಿ ನಡೆದ ಈ ಘಟನೆಯಲ್ಲಿ ಆರೋಪಿ ತಪ್ಪೊಪ್ಪಿಕೊಂಡಿದ್ದು, ಮೃತ ಕುಟುಂಬ ನ್ಯಾಯಕ್ಕೆ ಆಗ್ರಹಿಸಿದೆ.
- Ameen Sab
- Updated on: Mar 3, 2026
- 7:10 pm
ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ
ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಜೆಎಂಸಿ ಕೋರ್ಟ್ನಲ್ಲಿ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧರ ಆಗಲಿದೆ. ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ.
- Ameen Sab
- Updated on: Mar 2, 2026
- 8:53 pm
ಪಿಯು ಬೋರ್ಡ್, ಕಾಲೇಜಿನ ಎಡವಟ್ಟು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಯಾದಗಿರಿಯಲ್ಲಿ ಪಿಯು ಮಂಡಳಿ ಹಾಗೂ ಕಾಲೇಜಿನ ಎಡವಟ್ಟಿನಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಹಾಲ್ ಟಿಕೆಟ್ನಲ್ಲಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗಿ ನಮೂದಾಗಿದ್ದರಿಂದ ಬೇರೆ ಬೇರೆ ಊರುಗಳಿಂದ ಬಂದವರು ಕೇಂದ್ರ ಹುಡುಕಲು ಗಂಟೆಗಟ್ಟಲೆ ಅಲೆದಾಡಿರುವ ಪ್ರಸಂಗ ನಡೆದಿದೆ.
- Ameen Sab
- Updated on: Feb 28, 2026
- 9:16 am
ಪೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಪೋಕ್ಸೋ ಕೇಸ್ ರದ್ದು ಕೋರಿ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಸೋಮವಾರ ವಿಚಾರಣೆ ನಡೆಯಲಿದೆ.ಪೋಷಕರೇ ದೂರು ನೀಡಿಲ್ಲ, ಆದ್ರೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೊಂದೆಡೆ ಸ್ವಯಂ ಘೋಷಿತ ದೇವಮಾನ ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ಕೇಸ್ ದಾಖಲಿಸಿರೋದು ಭಕ್ತರನ್ನು ಕೆರಳಿಸಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಆವರಣದಲ್ಲಿ ಭಕ್ತರು ಮಹತ್ವದ ಸಭೆ ನಡೆಸಿದ್ದು, ಮುಂದಿನ ಕಾನೂನು ಹೋರಾಟ ಸೇರಿ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದರು.
- Ameen Sab
- Updated on: Feb 27, 2026
- 3:38 pm
ಬಾಲಕಿ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಯಾದಗಿರಿ ಮಲ್ಲಿಕಾರ್ಜುನ ಮುತ್ಯಾ ಪೋಕ್ಸೋ ಕೇಸ್ ಕುರಿತು ಬಾಲಕಿ ಪೋಷಕರು ಮಹಾರಾಷ್ಟ್ರದ ಸೊಲ್ಲಾಪುರದಿಂದ ವಿಡಿಯೋ ಹೇಳಿಕೆ ನೀಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುತ್ಯಾ ತಮ್ಮ ಮಗಳಿಗೆ ಹುಟ್ಟುಹಬ್ಬದ ಆಶೀರ್ವಾದ ನೀಡಿದ್ದಾರೆಂದು ಅವರು ಸ್ಪಷ್ಟಪಡಿಸಿದ್ದಾರೆ. ಮೂರು-ನಾಲ್ಕು ವರ್ಷಗಳಿಂದ ಮಠಕ್ಕೆ ಭೇಟಿ ನೀಡುತ್ತಿದ್ದೇವೆ, ಮುತ್ಯಾ ದೇವರ ಸಮಾನ. ವಿಡಿಯೋವನ್ನು ದುರುದ್ದೇಶದಿಂದ ತಿರುಚಿ ಹರಿಬಿಡಲಾಗಿದೆ ಎಂದಿದ್ದಾರೆ.
- Ameen Sab
- Updated on: Feb 26, 2026
- 4:43 pm
ಪೋಕ್ಸೋ ಕೇಸ್:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್
ಮಲ್ಲಿಕಾರ್ಜುನ ಮುತ್ಯಾ.. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂಗಾಣದ ಎರಡ್ಮೂರು ಜಿಲ್ಲೆಯಲ್ಲೂ ಈ ಸ್ವಯಂಘೋಷಿತ ದೇವಮಾನವ ಫುಲ್ ಫೇಮಸ್. ಮುತ್ಯಾನ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ಆದ್ರೆ, ಇದೊಂದು ವಿಡಿಯೋ ಈಗ ಮುತ್ಯಾನಿಗೆ ಕಂಟಕ ತಂದೊಡ್ಡಿದೆ. ಸೋಷಿಯಲ್ ಮೀಡಿಯಾದಿಂದಲೇ ಖ್ಯಾತಿ ಗಳಿಸಿದ್ದ ಮುತ್ಯಾನಿಗೆ ಸೋಷಿಯಲ್ ಮೀಡಿಯಾನೇ ಮುಳುವಾಗಿದೆ. ಬಾಲಕಿ ಜೊತೆ ಅನುಚಿತ ವರ್ತಿಸಿರೋ ಇದೇ ವಿಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
- Ameen Sab
- Updated on: Feb 26, 2026
- 3:51 pm
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ?
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಶಹಾಪುರದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ದೇವಮಾನವ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬಂಧನದ ಭೀತಿಯಿಂದ ಮುತ್ಯಾ ತಲೆಮರೆಸಿಕೊಂಡಿದ್ದಾರೆ ಎಂಬ ವದಂತಿ ಇದ್ದು, ಈ ನಡುವೆ ಪೊಲೀಸರು ಮಠದಲ್ಲಿ ಸ್ಥಳ ಮಹಜರು ಕಾರ್ಯ ನಡೆಸಿದ್ದಾರೆ. ಭಕ್ತರು ಮಾತ್ರ ಇದು ಮುತ್ಯಾ ಮತ್ತು ಮಠದ ಹೆಸರು ಕೆಡಿಸುವ ಕೆಲಸ ಎಂದು ದೂರಿದ್ದಾರೆ.
- Ameen Sab
- Updated on: Feb 26, 2026
- 1:21 pm