ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಯಾದಗಿರಿ: ಹೊಲಕ್ಕೆ ದೃಷ್ಟಿಯಾಗಬಾರದೆಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!
ಕಷ್ಟಪಟ್ಟು ಉತ್ತು, ಬಿತ್ತಿ ಬೆಳೆದ ಬೆಳೆಯನ್ನ ಉಳಿಸಿಕೊಳ್ಳಲು ರೈತರು ಇನ್ನಿಲ್ಲದ ಸರ್ಕಸ್ ಮಾಡುತ್ತಾರೆ. ಆದರೆ ಯಾದಗಿರಿಯಲ್ಲಿ ರೈತನೊಬ್ಬ ಮಾಡಿರುವ ಪ್ಲ್ಯಾನ್ ಸದ್ಯ ವೈರಲ್ ಆಗಿದೆ. ತನ್ನ ಹೊಲಕ್ಕೆ ಯಾರ ದೃಷ್ಟಿಯೂ ಬೀಳಬಾರದು ಎಂದು ಆತ ದೃಷ್ಟಿಬೊಂಬೆ ಹಾಕೋ ಬದಲು, ಮಾದಕ ತಾರೆ ಸನ್ನಿ ಲಿಯೋನ್ ಫೋಟೋ ಹಾಕಿದ್ದಾನೆ. ಇದರಿಂದ ಜನರ ದೃಷ್ಟಿ ಹೊಲದತ್ತ ಹೋಗದೆ ಭಾವಚಿತ್ರದ ಕಡೆ ಇರುತ್ತೆ ಎಂಬುದು ಆತನ ನಂಬಿಕೆ.
- Ameen Sab
- Updated on: Nov 28, 2025
- 12:47 pm
Yadgir: ಬೋನಾಳ್ ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳು ಯಾವವು?
ಬೋನಾಳ್ ಪಕ್ಷಿಧಾಮವು ದೇಶ-ವಿದೇಶಗಳ ಹಕ್ಕಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ನವೆಂಬರ್ನಿಂದ ಫೆಬ್ರವರಿವರೆಗೆ ಆಸ್ಟ್ರೇಲಿಯಾ ಸೇರಿದಂತೆ ಹಲವೆಡೆಯಿಂದ ಬರುವ ವಲಸೆ ಹಕ್ಕಿಗಳು ಇಲ್ಲಿನ ನೈಸರ್ಗಿಕ ಸೌಂದರ್ಯವನ್ನು ಹೆಚ್ಚಿಸುತ್ತವೆ. ಹಚ್ಚ ಹಸಿರಿನ ಪರಿಸರದಲ್ಲಿ ವಿವಿಧ ಜಾತಿಯ ಹಕ್ಕಿಗಳ ಕಲರವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ವೀಕೆಂಡ್ ಮತ್ತು ರಜಾ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಿದೆ.
- Ameen Sab
- Updated on: Nov 24, 2025
- 2:47 pm
ಯಾದಗಿರಿ: ಹಲ್ಲೆಗೊಳಗಾಗಿದ್ದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ ಸಾವು; ನಾಲ್ವರು ಆರೋಪಿಗಳು ವಶ
ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಪರಾರಿಯಾಗಿದ್ದಾರೆ.
- Ameen Sab
- Updated on: Nov 15, 2025
- 1:01 pm
ಯಾದಗಿರಿ: ದಾರಿಯಲ್ಲಿ ಸಿಕ್ಕ 1.45 ಲಕ್ಷ ರೂ. ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಸುರಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ದಯಾನಂದ ಅವರು ದಾರಿಯಲ್ಲಿ ಸಿಕ್ಕಿದ್ದ ಹಣವನ್ನು ರೈತ ಗಾದಪ್ಪ ಅವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಹತ್ತಿ ಬೆಳೆ ಮಾರಿ ಮನೆಗೆ ಹೋಗುವಾಗ ರೈತ ಗೌಡಪ್ಪ ಪಾಟೀಲ್ ರಸ್ತೆಯಲ್ಲಿ 1 ಲಕ್ಷದ 47 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದರು.
- Ameen Sab
- Updated on: Nov 13, 2025
- 10:34 am
ಯಾದಗಿರಿ: ಕುಡಿಯೋಕಷ್ಟೇ ಅಲ್ಲ, ಸ್ನಾನಕ್ಕೂ ಯೋಗ್ಯವಲ್ಲ ಭೀಮಾ ನದಿ ನೀರು!
ಭೀಮಾನದಿ ನೀರು ತೀವ್ರವಾಗಿ ಕಲುಷಿತಗೊಂಡಿರುವುದು ಬಯಲಾಗಿದೆ. ಈ ಬಗ್ಗೆ ಟಿವಿ9 ನಡೆಸಿದ ರಿಯಾಲಿಟಿ ಚೆಕ್ ನಡೆಸಿದ್ದು, ಯಾದಗಿರಿ ನಗರದ ಚರಂಡಿ ನೀರು ನೇರವಾಗಿ ಭೀಮಾನದಿಗೆ ಸೇರುತ್ತಿರುವುದು ಕಾಣಿಸಿದೆ. ನದಿ ನೀರು ಡಿ ದರ್ಜೆಗೆ ಇಳಿದಿದೆ. ಇದು ಕುಡಿಯಲು, ಸ್ನಾನಕ್ಕೂ ಯೋಗ್ಯವಲ್ಲ. ಆದರೂ ನಗರದ ಜನರಿಗೆ ಇದೇ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ.
- Ameen Sab
- Updated on: Nov 4, 2025
- 12:40 pm
RSS ಪಥ ಸಂಚಲನ: ಶಾಂತಿ ಸಭೆ ಯಶಸ್ವಿ, ಪಟ್ಟು ಸಡಿಲಿಸಿದ ದಲಿತ ಸಂಘಟನೆ
ಯಾದಗಿರಿಯ ಕೆಂಭಾವಿಯಲ್ಲಿ ಪಥಸಂಚಲನ ಸಂಬಂಧ ಆರ್ ಎಸ್ ಎಸ್ ಹಾಗೂ ದಲಿತ ಸಂಘಟನೆಗಳ ನಡುವಿನ ಜಟಾಪಟಿ ಅಂತ್ಯವಾಗಿದೆ. ಇಂದು (ನವೆಂಬರ್ 03) ಸುರಪುರ ತಾಲೂಕಾಡಳಿತ ನಡೆಸಿದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತ ಸಂಘಟನೆ ತನ್ನ ಪಟ್ಟು ಸಡಿಲಿಸಿದೆ. ಹೀಗಾಗಿ ನಾಳೆ ಕೆಂಭಾವಿಯಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕೆಲ ಷರತ್ತುಗೊಳೊಂದಿಗೆ ಅನುಮತಿ ನೀಡಲಾಗಿದೆ.
- Ameen Sab
- Updated on: Nov 3, 2025
- 8:06 pm
ಕಲಬುರಗಿ ಬಳಿಕ ಯಾದಗಿರಿಯಲ್ಲೂ RSS ಪಥಸಂಚಲನಕ್ಕೆ ಅಡ್ಡಿ: ಅಷ್ಟಕ್ಕೂ ಆಗಿದ್ದೇನು?
ಯಾದಗಿರಿಯ ಕೆಂಭಾವಿಯಲ್ಲಿ ನ.4 ರಂದು ಪಥಸಂಚಲನ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಡ್ಡಿ ಉಂಟಾಗಿದೆ. ದಂಡ (ದೊಣ್ಣೆ) ಹಿಡಿದು ಪಥಸಂಚಲನ ನಡೆಸಬಾರದು ಎಂದು ದಲಿತ ಸಂಘರ್ಷ ಸಮಿತಿ ಹೇಳಿದ್ದು, ಈ ಕುರಿತು ತಾಲೂಕು ಆಡಳಿತ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದೆ.
- Ameen Sab
- Updated on: Nov 2, 2025
- 3:16 pm
ಧಾರಾಕಾರ ಮಳೆಗೆ ತತ್ತರಿಸಿದ ಶಹಾಪುರ: ಸಗರ ಗ್ರಾಮದಲ್ಲಿ ಹಳ್ಳದಂತಾದ ರಸ್ತೆಗಳು
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ವರುಣ ಅಬ್ಬರಿಸಿದ್ದಾನೆ. ನಿರಂತರ ಮಳೆಯಿಂದಾಗಿ ಸಗರ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಯಲ್ಲೇ ಹಳ್ಳದ ರೀತಿ ಮಳೆ ನೀರು ಹರಿದಿದೆ. ಕೆಲ ಮನೆಗಳು ಮತ್ತು ಅಂಗಡಿಗೂ ಕೊಳಚೆ ನೀರು ಪ್ರವೇಶಿಸಿದ ಕಾರಣ ನಿವಾಸಿಗಳು ಪರದಾಟ ನಡೆಸಿದ್ದಾರೆ.
- Ameen Sab
- Updated on: Oct 27, 2025
- 11:26 am
ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ; ಪೊಲೀಸರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಗರಂ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದ ಕಾಲುವೆಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ಪ್ರಕರಣ ಹೊಸ ಸಂಚಲನ ಸೃಷ್ಟಿಸಿದೆ. ಯುವತಿಯನ್ನು ಕಾರಿನಲ್ಲಿ ಅಪಹರಿಸಿ, ಕೊಲೆ ಮಾಡಿ, ಕಾಲುವೆಗೆ ಎಸೆದಿದ್ದಾರೆಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರ ನಿರ್ಲಕ್ಷ್ಯ ಗ್ರಾಮಸ್ಥರ ಕೋಪಕ್ಕೆ ಗುರಿಯಾಗಿದೆ. ಈ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆಗೆ ಇಳಿದಿದ್ದಾರೆ.
- Ameen Sab
- Updated on: Oct 26, 2025
- 12:30 pm
ಅಳಿಯನ ಜೊತೆ ಅಕ್ರಮ ಸಂಬಂಧ ಆರೋಪ: ಮಹಿಳೆ ಮೇಲೆ ಕುಟುಂಬಸ್ಥರಿಂದಲೇ ಅಮಾನವೀಯ ಕೃತ್ಯ
ಅಳಿಯನ ಜೊತೆ ಅಕ್ರಮ ಸಂಬಂಧ ಆರೋಪ ಹಿನ್ನಲೆ ಕುಟುಂಬಸ್ಥರೇ ಮಹಿಳೆಯೋರ್ವರನ್ನ ನಗ್ನಗೊಳಿಸಿ, ತಲೆ ಬೋಳಿಸಿ ವಿಕೃತಿ ಮೆರೆದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದೆ. ಅಕ್ಟೋಬರ್ 16ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- Ameen Sab
- Updated on: Oct 26, 2025
- 6:58 am
ವೀರಶೈವ -ಲಿಂಗಾಯತ ಎರಡೂ ಒಂದೇ: ಶರಣಬಸಪ್ಪ ದರ್ಶನಾಪುರ
ಮೀಸಲಾತಿಗಾಗಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೇಳಿರಬಹುದು. ಆದರೆ ನಮ್ಮ ಪ್ರಕಾರ ವೀರಶೈವ ಲಿಂಗಾಯತ ಅನ್ನೋದು ಎರಡೂ ಒಂದೇ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ. ಬಹುಸಂಖ್ಯಾತರು ಇರುವ ಕಡೆ ಭಿನ್ನಾಭಿಪ್ರಾಯ ಇರೋದು ಸಹಜ. ಮಹಾಸಭಾ ಏನು ತೀರ್ಮಾನ ಮಾಡುತ್ತೆ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
- Ameen Sab
- Updated on: Oct 8, 2025
- 6:54 pm
ಯಾದಗಿರಿ: ದೈಹಿಕ ಸಂಪರ್ಕಕ್ಕೆ ಒಲ್ಲೆ ಎಂದ ಪತ್ನಿಯ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಪತಿ
ಯಾದಗಿರಿಯ ಸುರಪುರದ ಡೊಣ್ಣಿಗೇರದಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಕೌಂಟುಂಬಿಕ ಹಿಂಸೆಯಿಂದಾಗಿ ತವರು ಮನೆ ಸೇರಿದ್ದ ಮಹಿಳೆಯನ್ನು ಹುಡುಕಿಕೊಂಡು ಬಂದಿದ್ದ ಆಕೆಯ ಪತಿಯೇ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇಷ್ಟಕ್ಕೂ ಈ ಕೊಲೆ ನಡೆದಿದ್ದು, ಮಹಿಳೆ ಪತಿಯ ಜತೆ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ್ದಕ್ಕೆ ಎನ್ನಲಾಗಿದೆ.
- Ameen Sab
- Updated on: Oct 6, 2025
- 12:27 pm