ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಯಾದಗಿರಿ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ
ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷದಿಂದಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ರೌಡಿಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
- Ameen Sab
- Updated on: Mar 23, 2025
- 4:47 pm
ಯಾದಗಿರಿಯಲ್ಲಿ ಡಬಲ್ ಮರ್ಡರ್: 2 ಪ್ರತ್ಯೇಕ ಗ್ಯಾಂಗ್ನಿಂದ ದಲಿತ ಮುಖಂಡ, ಸಹಚರನ ಕೊಲೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಭಯಾನಕ ಡಬಲ್ ಮರ್ಡರ್ ನಡೆದಿದೆ. ದಲಿತ ಮುಖಂಡ ಮತ್ತು ಆತನ ಸಹಚರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೊದಲು ದಲಿತ ಮುಖಂಡನನ್ನು ಹತ್ಯೆ ಮಾಡಲಾಗಿದ್ದು, ನಂತರ ಭಯದಿಂದ ಓಡಿಹೋಗಿದ್ದ ಸಹಚರನನ್ನು ಕೊಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Ameen Sab
- Updated on: Mar 16, 2025
- 3:01 pm
ಯಾದಗಿರಿ: ಸಂಪ್ರದಾಯಿಕ ಬೆಳೆಗೆ ಗುಡ್ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸುರಪುರ ತಾಲ್ಲೂಕಿನ ಲಿಂಗದಳ್ಳಿ ಗ್ರಾಮದ ರೈತ ಹಯ್ಯಾಳಪ್ಪ ಸಾಹುಕಾರರು 18 ಎಕರೆ ಜಮೀನಿನಲ್ಲಿ ಪಪ್ಪಾಯಿ ಬೆಳೆಯನ್ನು ಬೆಳೆದು ವಾರ್ಷಿಕ ಲಕ್ಷಾಂತರ ರೂಪಾಯಿ ಲಾಭ ಗಳಿಸುತ್ತಿದ್ದಾರೆ. 2013 ರವರೆಗೆ ಸಾಂಪ್ರದಾಯಿಕ ಬೆಳೆಗಳಲ್ಲಿ ನಷ್ಟ ಅನುಭವಿಸಿದ್ದ ಅವರು, ತೋಟಗಾರಿಕೆಯತ್ತ ಒಲವು ತೋರಿ ಯಶಸ್ವಿಯಾಗಿದ್ದಾರೆ. ಇದು ಸಾಂಪ್ರದಾಯಿಕ ಕೃಷಿಯಿಂದ ತೋಟಗಾರಿಕೆಗೆ ಮಾರ್ಪಾಡು ಮಾಡುವುದರಿಂದ ಸಿಗುವ ಲಾಭವನ್ನು ತೋರಿಸುತ್ತದೆ.
- Ameen Sab
- Updated on: Mar 3, 2025
- 2:29 pm
ಯಾದಗಿರಿ: ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ದಲಿತ ವಿದ್ಯಾರ್ಥಿಗಳು ಬಳಸಿದ ತಟ್ಟೆಗಳನ್ನು ತೊಳೆಯಲು ಅಡುಗೆ ಸಿಬ್ಬಂದಿ ನಿರಾಕರಿಸಿದ ಘಟನೆ ನಡೆದಿದೆ. 3000 ರೂ. ವೇತನ ಪಡೆಯುವ ಅಡುಗೆ ಸಿಬ್ಬಂದಿ, ದಲಿತ ಮಕ್ಕಳ ತಟ್ಟೆ ತೊಳೆಯಲು ನಿರಾಕರಿಸಿ ಅಡುಗೆ ಮನೆಗೆ ಬೀಗ ಹಾಕಿದ್ದಾರೆ. ಇದರಿಂದಾಗಿ ಮೂರು ದಿನಗಳಿಂದ ಬಿಸಿಯೂಟ ಸ್ಥಗಿತವಾಗಿದೆ. ದಲಿತ ಮುಖಂಡರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ.
- Ameen Sab
- Updated on: Feb 24, 2025
- 3:01 pm
ಒಂದು ವರ್ಷದಿಂದ ಆರೋಗ್ಯ ಇಲಾಖೆ ನೌಕರರಿಗಿಲ್ಲ ಸಂಬಳ: ಹಣವಿಲ್ಲದೆ ಕುಟುಂಬ ನಿರ್ವಹಣೆಗೆ ಪರದಾಟ
ಯಾದಗಿರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರು ಕಳೆದ ಒಂದು ವರ್ಷದಿಂದ ಸಂಬಳ ಪಡೆಯದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸುಮಾರು 120ಕ್ಕೂ ಹೆಚ್ಚು ನೌಕರರು ಸಂಬಳವಿಲ್ಲದೆ ಕುಟುಂಬ ನಿರ್ವಹಣೆಗೆ ಪರದಾಡುತ್ತಿದ್ದು, ಸರ್ಕಾರದ ಹಸ್ತಕ್ಷೇಪ ಅಗತ್ಯವಿದೆ. ಇಲಾಖೆಯು 5 ಕೋಟಿಗೂ ಅಧಿಕ ಸಂಬಳ ಬಾಕಿ ಉಳಿಸಿಕೊಂಡಿದೆ.
- Ameen Sab
- Updated on: Feb 21, 2025
- 8:42 pm
ಯುವಕನಿಗೆ ಬೈಕ್ ಡಿಕ್ಕಿ: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪಿಎಸ್ಐ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೆಂಭಾವಿ ಪೊಲೀಸ್ ಠಾಣೆಯ ಪಿಎಸ್ಐ ಅಮೋಜ್ ಕಾಂಬ್ಳೆ ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ. ಪಿಎಸ್ಐ ಅವರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Ameen Sab
- Updated on: Feb 20, 2025
- 10:22 pm
ಯಾದಗಿರಿ: ನಿವೃತ್ತ ಮಹಿಳಾ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 10 ಲಕ್ಷ ರೂ. ದೋಚಿದ ಸೈಬರ್ ವಂಚಕರು
ಯಾದಗಿರಿ ಜಿಲ್ಲೆಯ ನಿವೃತ್ತ ಮಹಿಳಾ ಅಧಿಕಾರಿಯೊಬ್ಬರು ಸೈಬರ್ ಅಪರಾಧಿಗಳಿಂದ 10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಯ ಸೋಗಿನಲ್ಲಿ ವಂಚಕ, ಡಿಜಿಟಲ್ ಅರೆಸ್ಟ್ ಮಾಡಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಸಂತ್ರಸ್ತೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದು ಯಾದಗಿರಿಯಲ್ಲಿ ನಡೆದ ಮೊದಲ ಡಿಜಿಟಲ್ ಅರೆಸ್ಟ್ ಪ್ರಕರಣವಾಗಿದೆ.
- Ameen Sab
- Updated on: Feb 18, 2025
- 10:52 am
ಯಾದಗಿರಿಯಲ್ಲಿ ಸಾರಿಗೆ ಬಸ್ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದ ಬಳಿ ಕೆಕೆಆರ್ಟಿಸಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್ ಚಾಲಕ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಎಲ್ಲಾ ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Ameen Sab
- Updated on: Feb 8, 2025
- 1:06 pm
ಬೈಕ್ಗೆ ಸಾರಿಗೆ ಬಸ್ ಡಿಕ್ಕಿ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ದುರ್ಮರಣ!
ಬೈಕ್ಗೆ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಸಾರಿಗೆ ಬಸ್ ಗುದ್ದಿದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲಿ ಉಸಿರು ಚೆಲ್ಲಿದ್ದರೆ.ಇನ್ನಿಬ್ಬರು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯ ಕೊನೆಯುಸಿರೆಳೆದಿದ್ದಾರೆ. ದುರಂತ ಅಂದ್ರೆ, ಊರ ಜಾತ್ರೆಗೆಂದು ತೆರಳುತ್ತಿದ್ದವರು ಮಸಣ ಸೇರಿದ್ದಾರೆ.
- Ameen Sab
- Updated on: Feb 5, 2025
- 6:16 pm
ಯಾದಗಿರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನೇ ಹತ್ಯೆಗೈದ ಪತ್ನಿ
ಆತನಿಗೆ ಹೆಂಡತಿ ಅಂದ್ರೆ ಪಂಚಪ್ರಾಣ. ಆದ್ರೆ, ಆಕೆ ಪರಪುರುಷನೊಂದಿಗೆ ವ್ಯಾಮೋಹಕ್ಕೆ ಸಿಲುಕಿದ್ದಳು. ಆಕೆಗೆ ಪತಿ ಮನೆಯಲ್ಲಿ ಪ್ರೀತಿಗೆ ಯಾವುದೇ ಕೊರತೆ ಇರಲಿಲ್ಲ. ಮದುವೆಯಾಗಿ ಮಕ್ಕಳಿದ್ರೂ ಅಡ್ಡ ದಾರಿ ಹಿಡಿದಿದ್ಲು. ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಗೆ ಚಟ್ಟ ಕಟ್ಟಿ ಹೃದಯಾಘಾತದ ಕಥೆ ಕಟ್ಟಿದ್ದಾಳೆ. ಪರ ಪುರುಷನ ಸಂಗಕ್ಕೆ ಗಂಡನ ಹೆಣ ಬೀಳಿಸಿದ ಪತ್ನಿ ಇದೀಗ ಕಂಬಿ ಎಣಿಸುತ್ತಿದ್ದಾಳೆ.
- Ameen Sab
- Updated on: Jan 30, 2025
- 6:07 pm
ಯಾದಗಿರಿ: ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿ!
ಯಾದಗಿರಿಯಲ್ಲಿ ಮೀಟರ್ ಬಡ್ಡಿಯ ಸಾಲ ಮರುಪಾವತಿಯ ವಿಳಂಬದಿಂದಾಗಿ ಭೀಕರ ಘಟನೆ ನಡೆದಿದೆ. ಯಾಸೀನ್ ಎಂಬಾತ ಖಾಸೀಂ ಎಂಬ ವ್ಯಕ್ತಿಯಿಂದ 35,000 ರೂಪಾಯಿ ಸಾಲ ಪಡೆದಿದ್ದನು. ಸಾಲ ತೀರಿಸದ ಕಾರಣ ಯಾಸೀನ್ ಖಾಸೀಂ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಗಾಯಗೊಂಡ ಖಾಸೀಂ ಕಲಬುರಗಿಯಲ್ಲಿ ಮೃತಪಟ್ಟಿದ್ದಾನೆ. ಯಾಸೀನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Ameen Sab
- Updated on: Jan 24, 2025
- 1:59 pm
ದೂರು ಸ್ವೀಕರಿಸದಿದ್ದರೆ ಎದುರಾಳಿಯನ್ನು ಕೊಲ್ಲುವೆ: ಪೊಲೀಸ್ ಮಹಾನಿರ್ದೇಶಕರನ್ನೇ ಟ್ಯಾಗ್ ಮಾಡಿ ವ್ಯಕ್ತಿ ಟ್ವೀಟ್
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮದ ಶರೀಫ್ ಅವರ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಒಂದು ತಿಂಗಳಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಆಕ್ರೋಶಗೊಂಡ ಶರೀಫ್, ತನ್ನ ಎದುರಾಳಿಗಳನ್ನು ಕೊಲ್ಲುವುದಾಗಿ ಎಕ್ಸ್ ನಲ್ಲಿ ಬರೆದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದಾರೆ.
- Ameen Sab
- Updated on: Jan 20, 2025
- 1:38 pm