AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೀನ್​ ಸಾಬ್​

ಅಮೀನ್​ ಸಾಬ್​

ಜಿಲ್ಲಾ ವರದಿಗಾರ - TV9 Kannada

ameen.appu@gmail.com

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಅರ್ಜಿ ಹಾಕಲಾಗದೆ ಆಕಾಂಕ್ಷಿಗಳ ಪರದಾಟ

15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಅರ್ಜಿ ಹಾಕಲಾಗದೆ ಆಕಾಂಕ್ಷಿಗಳ ಪರದಾಟ

ಕರ್ನಾಟಕದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಯಾದಗಿರಿಯಲ್ಲಿ ತೀವ್ರ ಸರ್ವರ್ ಸಮಸ್ಯೆ ಎದುರಿಸುತ್ತಿದ್ದಾರೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸಮೀಪಿಸುತ್ತಿದ್ದು, ಹಗಲು, ರಾತ್ರಿ ಸೈಬರ್ ಸೆಂಟರ್‌ಗಳ ಮುಂದೆ ಕಾದು ಕುಳಿತಿದ್ದಾರೆ. ತಾಂತ್ರಿಕ ಅಡಚಣೆಯಿಂದ ಸಾವಿರಾರು ಮಂದಿಯ ಭವಿಷ್ಯ ಅತಂತ್ರವಾಗಿದೆ.

ಉಚಿತ ಬಸ್ ಇದ್ದರೂ ಮರೀಚಿಕೆಯಾದ ಸೇವೆ: ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಯಾದಗಿರಿಯ ಈ ಗ್ರಾಮಕ್ಕೆ ಬರಲೇ ಇಲ್ಲ ಬಸ್

ಉಚಿತ ಬಸ್ ಇದ್ದರೂ ಮರೀಚಿಕೆಯಾದ ಸೇವೆ: ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಯಾದಗಿರಿಯ ಈ ಗ್ರಾಮಕ್ಕೆ ಬರಲೇ ಇಲ್ಲ ಬಸ್

ಯಾದಗಿರಿ ಜಿಲ್ಲೆಯ ಮಲಕಪ್ಪನಹಳ್ಳಿ ಗ್ರಾಮಕ್ಕೆ ಸ್ವಾತಂತ್ರ್ಯ ಬಂದು 80 ವರ್ಷ ಕಳೆದರೂ ಇನ್ನೂ ಬಸ್ ವ್ಯವಸ್ಥೆ ಇಲ್ಲ. ಶಾಲೆ, ಕಾಲೇಜು, ಆಸ್ಪತ್ರೆ ಹಾಗೂ ಕೆಲಸ ಕಾರ್ಯಗಳಿಗಾಗಿ ಗ್ರಾಮಸ್ಥರು, ಅದರಲ್ಲೂ ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನೇ ಅವಲಂಬಿಸಿದ್ದು, ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಚಿತ ಬಸ್ ಸೌಲಭ್ಯವಿದ್ದರೂ ಬಸ್ ಇಲ್ಲದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು: 9 ತಿಂಗಳ ಬಳಿಕ DDPI ಆಕ್ಷನ್

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು: 9 ತಿಂಗಳ ಬಳಿಕ DDPI ಆಕ್ಷನ್

ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ 9 ತಿಂಗಳ ನಂತರ ಅಮಾನತುಗೊಳಿಸಲಾಗಿದೆ. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ದೂರಿನ ಆಧಾರದ ಮೇಲೆ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರು. ಇದರ ಅನ್ವಯ ಯಾದಗಿರಿ ಡಿಡಿಪಿಐ ಶಿಕ್ಷಕರಾದ ಗುರುರಾಜ್ ಜೋಶಿ ಮತ್ತು ಅಣ್ಣಾಸಾಹೇಬ್ ದೇಶಮುಖ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗಗನಕ್ಕೇರಿದ ಈರುಳ್ಳಿ ದರ: ಬೆಲೆ ಏರಿಕೆಯ ನಡುವೆಯೂ ಸಿಗದ ರೈತರಿಗೆ ಲಾಭ

ಗಗನಕ್ಕೇರಿದ ಈರುಳ್ಳಿ ದರ: ಬೆಲೆ ಏರಿಕೆಯ ನಡುವೆಯೂ ಸಿಗದ ರೈತರಿಗೆ ಲಾಭ

ರಾಜ್ಯದಲ್ಲಿ ಈರುಳ್ಳಿ ಬೆಲೆ ₹70-80ಕ್ಕೆ ಏರಿಕೆಯಾಗಿದ್ದು, ಶೀಘ್ರವೇ ₹100 ತಲುಪುವ ಸಾಧ್ಯತೆಯಿದೆ. ಯಾದಗಿರಿಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಈರುಳ್ಳಿ ಬೆಳೆ ಸಂಪೂರ್ಣ ಕುಸಿದಿದೆ. ಗ್ರಾಹಕರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದರೆ, ರೈತರಿಗೆ ಬೆಳೆ ಇಲ್ಲದ ಕಾರಣ ಲಾಭ ಸಿಗದೆ ಸಂಕಷ್ಟದಲ್ಲಿದ್ದಾರೆ. ದಲ್ಲಾಳಿಗಳು ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

40 ಕಿಮೀ ಚೇಸಿಂಗ್​​​: ಪ್ರಾಣ ಪಣಕ್ಕಿಟ್ಟು ಅಂತಾರಾಜ್ಯ ದನಗಳ್ಳರ​​ ಹೆಡೆಮುರಿ ಕಟ್ಟಿದ ಯಾದಗಿರಿ ಪೊಲೀಸರು!​​

40 ಕಿಮೀ ಚೇಸಿಂಗ್​​​: ಪ್ರಾಣ ಪಣಕ್ಕಿಟ್ಟು ಅಂತಾರಾಜ್ಯ ದನಗಳ್ಳರ​​ ಹೆಡೆಮುರಿ ಕಟ್ಟಿದ ಯಾದಗಿರಿ ಪೊಲೀಸರು!​​

Yadgiri News: ಯಾದಗಿರಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಅಂತಾರಾಜ್ಯ ದನಗಳ್ಳರ ಗ್ಯಾಂಗ್​ ಅನ್ನು ಬಂಧಿಸಿದ್ದಾರೆ. ಆ ಮೂಲಕ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ. ಇನ್ನು 40 ಕಿಮೀ ಚೇಸ್ ಮಾಡಿ ದನಗಳ್ಳರನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ದುರ್ಮರಣ; 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರ

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ದುರ್ಮರಣ; 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರ

ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಎಂಟು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್

ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್

ಆತ ಮನೆ ಸಂಸಾರ ಇಟ್ಟುಕೊಂಡೆ ಅಕ್ರಮವಾಗಿ ಅರಣ್ಯ ಭೂಮಿಯಲ್ಲಿ ದೇವರ ಹೆಸರಲ್ಲಿ ಮಠ ಮಾಡಿಕೊಂಡಿದ್ದಾನೆ. ದೈವ ಶಕ್ತಿಯಿದೆ ಅಂತ ಸಾಕಷ್ಟು ಜನರಿಗೆ ವಂಚಿಸುವ ಕೆಲಸ ಮಾಡಿದ್ದಾನೆ. ಅಷ್ಟೇ ಯಾಕೆ ಮಠದಲ್ಲಿ ಅಪ್ರಾಪ್ತ ಬಾಲಕಿಯರನ್ನ ಅಕ್ರಮವಾಗಿ ಇಟ್ಟುಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೊನೆಗೆ ಕಾಮಿ ಸ್ವಾಮಿಯ ಬಣ್ಣ ಬಯಲಾಗಿದ್ದ ಪೊಲೀಸರ ಅತಿಥಿಯಾಗಿದ್ದಾನೆ.

ಆ ದೇವಿಯ ಸನ್ನಿಧಾನದಲ್ಲಿ ಚೇಳು ಕಚ್ಚಲ್ಲ, ಕಚ್ಚಿದ್ರೂ ವಿಷ ಏರಲ್ಲ! ಯಾದಗಿರಿಯ ಕಂದಕೂರ ಬೆಟ್ಟದಲ್ಲಿ ಮೈನವಿರೇಳಿಸೋ ‘ಚೇಳಿನ ಜಾತ್ರೆ’

ಆ ದೇವಿಯ ಸನ್ನಿಧಾನದಲ್ಲಿ ಚೇಳು ಕಚ್ಚಲ್ಲ, ಕಚ್ಚಿದ್ರೂ ವಿಷ ಏರಲ್ಲ! ಯಾದಗಿರಿಯ ಕಂದಕೂರ ಬೆಟ್ಟದಲ್ಲಿ ಮೈನವಿರೇಳಿಸೋ ‘ಚೇಳಿನ ಜಾತ್ರೆ’

ಯಾದಗಿರಿ ಜಿಲ್ಲೆಯ ಕಂದಕೂರ ಗ್ರಾಮದ ಕೊಂಡಮಾಯಿ ದೇವಿ ಬೆಟ್ಟದಲ್ಲಿ ಪ್ರತಿ ವರ್ಷ ನಾಗರಪಂಚಮಿ ದಿನದಂದು ಮೈನವಿರೇಳಿಸುವ 'ಚೇಳಿನ ಜಾತ್ರೆ' ನಡೆಯುತ್ತದೆ. ಭಕ್ತರು ವಿಷಕಾರಿ ಜೀವಂತ ಚೇಳುಗಳನ್ನು ಭಯವಿಲ್ಲದೆ ಕೈಯಲ್ಲಿ ಹಿಡಿದು ಸಂಭ್ರಮಿಸುತ್ತಾರೆ. ವಿಸ್ಮಯವೆಂದರೆ ದೇವಿಯ ಸನ್ನಿಧಿಯಲ್ಲಿ ಚೇಳು ಕಚ್ಚುವುದಿಲ್ಲ, ಕಚ್ಚಿದರೂ ವಿಷ ಏರುವುದಿಲ್ಲ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆಯಿಂದಾಗಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾದಗಿರಿ ಜಿಲ್ಲೆಯ ಗುರುಸಣಗಿ ಬ್ಯಾರೇಜ್​ನಿಂದ 1.2 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ದೇವಸ್ಥಾನಗಳು ಜಲಾವೃತವಾಗಿವೆ. ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮತ್ತು ಜಾನುವಾರು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಯಾದಗಿರಿ: ಕಡೇಚೂರಿನಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ಯಾದಗಿರಿ: ಕಡೇಚೂರಿನಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದ ಸಿ.ಐ.ಎಲ್ ಲ್ಯಾಬೊರೇಟರಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಂ ಸಿಂಗ್, ಸಂಜಯ್ ಸಿಂಗ್, ಗಣೇಶ್ ಮೃತಪಟ್ಟ ದುರ್ದೈವಿಗಳು. ಸುರಕ್ಷತಾ ಕ್ರಮಗಳ ಲೋಪದಿಂದ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರೈತರು ಫುಲ್ ಖುಷ್

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರೈತರು ಫುಲ್ ಖುಷ್

ಕೃಷ್ಣಾ ನದಿ ಮೇಲ್ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ, ಬಸವಸಾಗರ ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ರಾಯಚೂರಿನ ಗುರ್ಜಾಪುರ ಬ್ರಿಡ್ಜ್-ಕಂ-ಬ್ಯಾರೇಜ್‌ನ 196 ಗೇಟ್‌ಗಳನ್ನು ತೆರೆದು ನೀರು ಸುಗಮವಾಗಿ ಹರಿಯುವಂತೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಇದು ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಕೊಂಚ ಸಮಾಧಾನ ತಂದಿದೆ, ಆದರೂ ಕಾಲುವೆ ನೀರು ಬಿಡುಗಡೆಯ ಬಗ್ಗೆ ಅವರಲ್ಲಿ ಕಾಳಜಿ ಇದೆ.

ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾಯ್ತು ಬಂಗಾರದಂತಹ ಬೆಳೆ: ಜೆಸ್ಕಾಂ ವಿರುದ್ಧ ಸಿಟ್ಟಿಗೆದ್ದು ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ!

ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾಯ್ತು ಬಂಗಾರದಂತಹ ಬೆಳೆ: ಜೆಸ್ಕಾಂ ವಿರುದ್ಧ ಸಿಟ್ಟಿಗೆದ್ದು ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ!

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಜೆಸ್ಕಾಂ ಇಲಾಖೆಯ ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಬೋರ್‌ವೆಲ್ ಇದ್ದರೂ ಬೆಳೆಗೆ ನೀರುಣಿಸಲಾಗದೆ ರೈತನೊಬ್ಬ ತಾನು ಬೆಳೆದಿದ್ದ ಎರಡೂವರೆ ಎಕರೆ ಪಪ್ಪಾಯ ತೋಟವನ್ನೇ ಕತ್ತರಿಸಿ ನಾಶಪಡಿಸಿದ್ದಾನೆ. ಕೈಗೆ ಬಂದ ಬೆಳೆ ಕಣ್ಣೆದುರೇ ಒಣಗಿ ಹೋಗಿದ್ದಕ್ಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಣ್ಣೀರಿಟ್ಟಿದ್ದಾನೆ.