ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್
ಯಾದಗಿರಿ ಲುಂಬಿಣಿ ಉದ್ಯಾನವನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ. ಕಲ್ಲಂಗಡಿ, ಕುಂಬಳಕಾಯಿ, ಹೂವು ಮತ್ತು ಧಾನ್ಯಗಳಿಂದ ಮಹನೀಯರ, ಪ್ರಾಣಿಗಳ ಕಲಾತ್ಮಕ ಕೆತ್ತನೆಗಳು ಗಮನ ಸೆಳೆದಿವೆ. ಸ್ಥಳೀಯ ರೈತರ ಹಣ್ಣು-ಹೂವುಗಳ ಪ್ರದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ. ಇಲ್ಲಿವೆ ನೋಡಿ ಫೋಟೋಸ್.
- Ameen Sab
- Updated on: Jan 27, 2026
- 8:32 pm
ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು
ಯಾದಗಿರಿ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕುರಿಮರಿಗಳನ್ನು ಪಲ್ಲಕ್ಕಿಗೆ ಎಸೆಯುವ ಸಂಪ್ರದಾಯ ನಿಷೇಧಿಸಲಾಗಿದೆ. ಹೀಗಿದ್ದರು ಕೆಲ ಭಕ್ತರು ತಂದಿದ್ದ 778 ಕುರಿಮರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ವಶಕ್ಕೆ ಪಡೆದುಕೊಂಡಿದ್ದ ಕುರಿಮರಿಗಳನ್ನು ಟೆಂಡರ್ ಮೂಲಕ ಮಾರಾಟ ಮಾಡಲಾಗಿದೆ. ಆ ಮೂಲಕ ದೇವಸ್ಥಾನಕ್ಕೆ 23 ಲಕ್ಷಕ್ಕೂ ಹೆಚ್ಚು ಆದಾಯ ಹರಿದು ಬಂದಿದೆ.
- Ameen Sab
- Updated on: Jan 16, 2026
- 9:38 pm
ವಿಚಾರಣೆ ನೆಪದಲ್ಲಿ ಕ್ಯಾನ್ಸರ್ ರೋಗಿ ಮೇಲೆ ಕ್ರೌರ್ಯ?: ಖಾಕಿ ಏಟಿಗೆ ಮುರೀತಾ ವ್ಯಕ್ತಿ ಮೂಳೆ?
ಯಾದಗಿರಿಯಲ್ಲಿ ಕ್ಯಾನ್ಸರ್ ರೋಗಿ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮನಬಂದಂತೆ ಹಲ್ಲೆ ನಡೆಸಿದ್ದು, ಮೆಹಬೂಬ್ ಕಾಲು ಮುರಿದು ಗಾಯಗೊಂಡಿದ್ದಾರೆ. ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ಮೇಲೆ ನಡೆದ ಈ ಅಮಾನವೀಯ ಕೃತ್ಯಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಗಾಯಗೊಂಡ ಮೆಹಬೂಬ್ಗೆ ಕಲಬುರಗಿಯ ಜಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Ameen Sab
- Updated on: Jan 16, 2026
- 2:38 pm
ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು
ಯಾದಗಿರಿ ತಾಲೂಕಿನ ಮೈಲಾಪುರದಲ್ಲಿ ಅದ್ದೂರಿಯಾಗಿ ನಡೆದ ಮೈಲಾರಲಿಂಗನ ಜಾತ್ರೆಗೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಕ್ತರು ಭಂಡಾರ ಎರಚಿ, ಜೈಘೋಷ ಹಾಕಿದರು. ಮೈಲಾರನ ಪಲ್ಲಕ್ಕಿ ಮೆರವಣಿಗೆ, ಹೊನ್ನ ಕೆರೆಯಲ್ಲಿ ಗಂಗ ಸ್ನಾನ, ಮತ್ತು ಕಬ್ಬಿಣದ ಸರಪಳಿ ತುಂಡರಿಸುವ ಸಾಹಸ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ಇಲ್ಲಿವೆ ಫೋಟೋಸ್.
- Ameen Sab
- Updated on: Jan 14, 2026
- 6:37 pm
ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು
ಎಳ್ಳಮಾವಾಸ್ಯೆಯು ಉತ್ತರ ಕರ್ನಾಟಕ ರೈತರ ಪ್ರಮುಖ ಹಬ್ಬಗಳಲ್ಲಿ ಒಂದು. ಈ ದಿನ ಭೂ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಸಮೃದ್ಧ ಫಸಲು ನೀಡುವಂತೆ ಪ್ರಾರ್ಥಿಸಲಾಗುತ್ತದೆ. ವಿವಿಧ ಸಿಹಿ ಖಾದ್ಯಗಳನ್ನು ಸಿದ್ಧಪಡಿಸಿ ಹೊಲಗಳಿಗೆ ತೆರಳಿ, ಭೂಮಿಗೆ 'ಚರಗ' ಚೆಲ್ಲಲಾಗುತ್ತದೆ. ಕುಟುಂಬಸ್ಥರು ಒಟ್ಟಾಗಿ ಸೇರಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಾರೆ. ಹಬ್ಬದ ಫೋಟೋಸ್ ಇಲ್ಲಿವೆ.
- Ameen Sab
- Updated on: Dec 19, 2025
- 6:19 pm
ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ
ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರ ವಿರುದ್ಧ ದಾಳಿ ನಡೆಸಿ, 67 ಸಾವಿರ ಮೆಟ್ರಿಕ್ ಟನ್ ಮರಳು ಹಾಗೂ 20 ವಾಹನಗಳನ್ನು ಜಪ್ತಿ ಮಾಡಿದ್ದು, 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
- Ameen Sab
- Updated on: Dec 18, 2025
- 9:08 pm
ಗುರುಮಠಕಲ್: ವಸತಿ ನಿಲಯದಲ್ಲಿ ಊಟ ಸೇವಿಸಿ 28 ವಿದ್ಯಾರ್ಥಿನಿಯರು ಅಸ್ವಸ್ಥ, ಮೂವರ ಸ್ಥಿತಿ ಗಂಭೀರ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್ನಲ್ಲಿ ಊಟ ಸೇವಿಸಿದ 28 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ಗೆ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Ameen Sab
- Updated on: Dec 11, 2025
- 1:23 pm
ವೈದ್ಯರ ನಿರ್ಲಕ್ಷ್ಯ ಆರೋಪ: ಹಾವೇರಿಯಲ್ಲಿ ತಾಯಿ ಗರ್ಭದಿಂದ ಜೀವಂತ ಹೊರ ಬರಲೇ ಇಲ್ಲ ಮಗು!
ಯಾದಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಹೊಟ್ಟೆಯಲ್ಲೇ ಗಂಡು ಮಗು ಸಾವನ್ನಪ್ಪಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸರಿಯಾದ ಚಿಕಿತ್ಸೆ ಮತ್ತು ಬೆಡ್ ಸಿಗದ ಕಾರಣ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಗುವಿನ ಮೃತದೇಹದೊಂದಿಗೆ ಆಸ್ಪತ್ರೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸಿ, ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Ameen Sab
- Updated on: Dec 7, 2025
- 2:08 pm
ಮದುವೆ ಮೆರವಣಿಗೆಯಲ್ಲಿ ಸದ್ದು ಮಾಡಿದ ಬಂದೂಕು: ಗ್ರಾಮ ಪಂಚಾಯ್ತಿ ಸದಸ್ಯನಿಂದ ಫೈರಿಂಗ್
ಮದುವೆ ಮೆರವಣಿಗೆಯಲ್ಲಿ ಬಂದೂಕಿನ ಸದ್ದಾಗಿದೆ. ಸಂಬಂಧಿಕರ ಮದುವೆ ಮೆರವಣಿಗೆ ವೇಳೆ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರೌಡಿಶೀಟರ್ನಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಡಿಯೋ ನೋಡಿ.
- Ameen Sab
- Updated on: Dec 6, 2025
- 10:17 pm
ಯಾದಗಿರಿ: ಹೊಲಕ್ಕೆ ದೃಷ್ಟಿಯಾಗಬಾರದೆಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!
ಕಷ್ಟಪಟ್ಟು ಉತ್ತು, ಬಿತ್ತಿ ಬೆಳೆದ ಬೆಳೆಯನ್ನ ಉಳಿಸಿಕೊಳ್ಳಲು ರೈತರು ಇನ್ನಿಲ್ಲದ ಸರ್ಕಸ್ ಮಾಡುತ್ತಾರೆ. ಆದರೆ ಯಾದಗಿರಿಯಲ್ಲಿ ರೈತನೊಬ್ಬ ಮಾಡಿರುವ ಪ್ಲ್ಯಾನ್ ಸದ್ಯ ವೈರಲ್ ಆಗಿದೆ. ತನ್ನ ಹೊಲಕ್ಕೆ ಯಾರ ದೃಷ್ಟಿಯೂ ಬೀಳಬಾರದು ಎಂದು ಆತ ದೃಷ್ಟಿಬೊಂಬೆ ಹಾಕೋ ಬದಲು, ಮಾದಕ ತಾರೆ ಸನ್ನಿ ಲಿಯೋನ್ ಫೋಟೋ ಹಾಕಿದ್ದಾನೆ. ಇದರಿಂದ ಜನರ ದೃಷ್ಟಿ ಹೊಲದತ್ತ ಹೋಗದೆ ಭಾವಚಿತ್ರದ ಕಡೆ ಇರುತ್ತೆ ಎಂಬುದು ಆತನ ನಂಬಿಕೆ.
- Ameen Sab
- Updated on: Nov 28, 2025
- 12:47 pm
Yadgir: ಬೋನಾಳ್ ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳು ಯಾವವು?
ಬೋನಾಳ್ ಪಕ್ಷಿಧಾಮವು ದೇಶ-ವಿದೇಶಗಳ ಹಕ್ಕಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ನವೆಂಬರ್ನಿಂದ ಫೆಬ್ರವರಿವರೆಗೆ ಆಸ್ಟ್ರೇಲಿಯಾ ಸೇರಿದಂತೆ ಹಲವೆಡೆಯಿಂದ ಬರುವ ವಲಸೆ ಹಕ್ಕಿಗಳು ಇಲ್ಲಿನ ನೈಸರ್ಗಿಕ ಸೌಂದರ್ಯವನ್ನು ಹೆಚ್ಚಿಸುತ್ತವೆ. ಹಚ್ಚ ಹಸಿರಿನ ಪರಿಸರದಲ್ಲಿ ವಿವಿಧ ಜಾತಿಯ ಹಕ್ಕಿಗಳ ಕಲರವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ವೀಕೆಂಡ್ ಮತ್ತು ರಜಾ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಿದೆ.
- Ameen Sab
- Updated on: Nov 24, 2025
- 2:47 pm
ಯಾದಗಿರಿ: ಹಲ್ಲೆಗೊಳಗಾಗಿದ್ದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ ಸಾವು; ನಾಲ್ವರು ಆರೋಪಿಗಳು ವಶ
ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಪರಾರಿಯಾಗಿದ್ದಾರೆ.
- Ameen Sab
- Updated on: Nov 15, 2025
- 1:01 pm