ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.
ಯಾದಗಿರಿ: ತಾಪಮಾನ ಏರಿಕೆ ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು, ಆರೋಗ್ಯ ಸಮಸ್ಯೆ ಹೆಚ್ಚಳ
ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೆತ್ತಿ ಸುಡುವ ಬಿಸಿಲಿನಿಂದ ಯಾದಗಿರಿ ಜಿಲ್ಲೆಯ ಜನ ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ತಾಪ ಕಂದಮ್ಮಗಳಿಗೂ ತಟ್ಟಿದೆ. ಬಿಸಿಲಿನ ಝಳ ಹೆಚ್ಚಾಗಿದ್ದಕ್ಕೆ ನವಜಾತ ಶಿಶುಗಳ ಆರೋಗ್ಯದಲ್ಲಿ ಏರುಪೇರು ಹೆಚ್ಚಾಗಿದೆ. ಇದೇ ಕಾರಣಕ್ಕೆ ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ನವಜಾತ ಶಿಶುಗಳ ದಾಖಲಾತಿ ಹೆಚ್ಚಾಗುತ್ತಿದೆ.
- Ameen Sab
- Updated on: Apr 14, 2025
- 8:17 am
ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬುಲೆರೊ ಮತ್ತು ಬಸ್ ನಡುವಿನ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
- Ameen Sab
- Updated on: Apr 11, 2025
- 10:20 am
ನರೇಗಾ ಯೋಜನೆ ಹಣ ಲೂಟಿ ಮಾಡಲು ಪುರುಷರಿಗೆ ಮಹಿಳೆ ವೇಷ ಹಾಕಿಸಿದ ಅಧಿಕಾರಿಗಳು!
ಪಂಚಾಯತ್ ಅಧಿಕಾರಿಗಳು ಪುರುಷರಿಗೆ ಮಹಿಳೆಯರ ವೇಷ ಧರಿಸಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹಣ ಲಪಟಾಯಿಸಲು ಮುಂದಾಗಿ ಲಾಕ್ ಆಗಿರುವಂತಹ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಹಣದ ಆಸೆಗೆ ಅಧಿಕಾರಿಗಳು ಇಂತಹ ಕೆಲಸಕ್ಕೆ ಇಳಿದಿದ್ದು, ಸದ್ಯ ಓರ್ವ ಹೊರ ಗುತ್ತಿಗೆ ನೌಕರನನ್ನು ಕೆಲಸದಿಂದ ವಜಾ ಮಾಡಲಾಗಿದೆ.
- Ameen Sab
- Updated on: Apr 9, 2025
- 3:26 pm
ಯಾದಗಿರಿ: ಅಪ್ರಾಪ್ತೆಯೊಂದಿಗೆ ಪ್ರೀತಿಯ ನಾಟಕ, 2 ವರ್ಷ ಲೈಂಗಿಕ ದೌರ್ಜನ್ಯವೆಸಗಿದ ಪೊಲೀಸ್ ಕಾನ್ಸ್ಟೇಬಲ್
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಸೈದಾಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಎರಡು ವರ್ಷ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಬಾಲಕಿ 18 ವರ್ಷದವಾಳದ ಮೇಲೆ ಮದುವೆ ಮಾಡಿಕೊಂಡದರೂ ಪೊಲೀಸ್ ಕಾನ್ಸ್ಟೇಬಲ್ ಆಕೆಯನ್ನು ಮನೆ ಸೇರಿಸಿಕೊಂಡಿಲ್ಲ. ಸದ್ಯ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
- Ameen Sab
- Updated on: Apr 9, 2025
- 11:56 am
ಐಷಾರಾಮಿ ಜೀವನ ತ್ಯಜಿಸಿದ ಕೋಟ್ಯಾಧೀಶನ ಪುತ್ರಿ: 26ನೇ ವಯಸ್ಸಿಗೆ ಆಡಂಬರದ ಜೀವನಕ್ಕೆ ಯುವತಿ ಗುಡ್ಬೈ
ಈ ಕಾಲದಲ್ಲಿ ತಂದೆ ದೊಡ್ಡ ಶ್ರೀಮಂತ ಇದ್ದರೆ ಸಾಕು ಮಕ್ಕಳು ಸಿರಿ ಸಂಪತ್ತಿನಿಂದ ಮೆರೆಯುವವರೇ ಹೆಚ್ಚು. ಆದ್ರೆ, ಯಾದಗಿರಿ ಯುವತಿಯ ಆಸಕ್ತಿಯೇ ವಿಭಿನ್ನ. ತಂದೆ ಕೋಟ್ಯಾಧೀಶ. ಯಾವುದಕ್ಕೂ ಕಮ್ಮಿ ಇಲ್ಲ. ಆದರೂ ಸಹ 26 ವರ್ಷದ ಯುವತಿ ತಂದೆಯ ಶ್ರೀಮಂತಿಕೆ ಎಲ್ಲಾ ಬಿಟ್ಟು, ಲೌಕಿಕ ಸುಖಭೋಗಗಳಿಂದ ದೂರವಾಗಲು ನಿರ್ಧರಿಸಿ, ಐಷಾರಾಮಿ ಜೀವನ ತ್ಯಜಿಸಿ ಇದೀಗ ಸನ್ಯಾಸತ್ವ ಸ್ವೀಕರಿಸಲು ಮುಂದಾಗಿದ್ದಾರೆ. ಸನ್ಯಾಸತ್ವ ಸ್ವೀಕರಿಸಿದ ಬಳಿಕ ಕೋಟ್ಯಾಧೀಶನ ಪುತ್ರಿಯ ಜೀವನ ಹೇಗಿರಲಿದೆ ಎನ್ನುವುದನ್ನು ತಿಳಿದುಕೊಳ್ಳಿ.
- Ameen Sab
- Updated on: Apr 6, 2025
- 3:58 pm
ರೈತರ ಬೆಳೆಗಳಿಗೆ ನೀರು ಹರಿಸುವಂತೆ ಹೇಳಿದ್ದ ಕೋರ್ಟ್ ಆದೇಶಕ್ಕೂ ಅಡ್ಡಗಾಲು ಹಾಕಿದ ಸರ್ಕಾರ
ಯಾದಗಿರಿ ಜಿಲ್ಲೆಯಲ್ಲಿ ನೀರಿಗಾಗಿ ರಾಜ್ಯ ಸರ್ಕಾರ ಹಾಗೂ ರೈತರ ನಡುವಿನ ಕಾಳಗ ಮುಂದುವರಿದಿದೆ. ಬಸವಸಾಗರ (ನಾರಾಯಣಪುರ) ಜಲಾಶಯ ಭಾಗದ ರೈತರು ರಾಜ್ಯ ಸರ್ಕಾರದ ವಿರುದ್ಧ ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಬೆಳೆಗಳಿಗೆ ನೀರಿಲ್ಲವೆಂದು ಹೋರಾಟ, ಪ್ರತಿಭಟನೆಗಳನ್ನು ಮಾಡಿದರೂ ಸರ್ಕಾರ ಯಾವುದೇ ಸ್ಪಂದನೆ ಮಾಡಿಲ್ಲ. ಹೀಗಾಗಿ ರೈತರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿ ನೀರು ಪಡೆದುಕೊಂಡಿದ್ದರು. ಆದ್ರೆ, ಇದೀಗ ಇದಕ್ಕೆ ರಾಜ್ಯ ಸರ್ಕಾರ ತಡೆಯಾಜ್ಞೆ ತಂದಿದ್ದು ರೈತರ ಕೆಂಗಣ್ಣಿಗೆ ಗುರಿಯಾಗಿದೆ.
- Ameen Sab
- Updated on: Apr 4, 2025
- 3:34 pm
ಪ್ರತಿಭಟನೆ, ಹೋರಾಟಕ್ಕೆ ಮಣಿಯದ ಸರ್ಕಾರಕ್ಕೆ ತಮ್ಮ ಗತ್ತು ತೋರಿಸಿದ ರೈತರು..!
ನಾರಾಯಣಪುರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ದಿನಕ್ಕೊಂದು ಪ್ರತಿಭಟನೆಗಳು, ಹೋರಾಟಗಳು ನಡೆದವು. ತಮ್ಮ ಬೆಳೆಗಳು ಒಣಗುತ್ತಿವೆ ನೀರು ಕೊಡಿ ಎಂದು ರೈತರು ಬೇಡಿಕೊಂಡರು. ಎಲ್ಲಾ ಅಧಿಕಾರಿ, ರಾಜಕಾರಣಿಗಳ ಮನೆ ಬಾಗಿಲಿಗೆ ಹೋಗಿ ನೀರು ಕೊಡಿ ಸ್ವಾಮಿ ಎಂದು ಪರಿ ಪರಿಯಾಗಿ ಬೇಡಿಕೊಂಡ್ರು. ಆದರೂ ಯಾವ ರಾಜಕಾರಣಿ, ಸರ್ಕಾರ ಮಾತು ಕೇಳಿಲ್ಲ. ಇದರಿಂದ ರೈತರ ತಾಳ್ಮೆಯ ಕಟ್ಟೆ ಹೊಡೆದಿದ್ದು, ರೈತರು ಸ್ವತಃ ತಾವೇ ಹೋಗಿ ಕ್ಯಾನಲ್ ಗೇಟ್ಗಳನ್ನು ಎತ್ತಿ ಜಮೀನುಗಳಿಗೆ ನೀರು ಹರಿಸಿಕೊಂಡಿದ್ದಾರೆ. ಅಲ್ಲದೇ ಇದೀಗ ಕೋರ್ಟ್ ಸಹ ರೈತರ ಗುಡ್ನ್ಯೂಸ್ ನೀಡಿದೆ. ಇದರೊಂದಿಗೆ ರೈತರು ಸಿಡಿದೆದ್ದರೆ ಏನಾಗುತ್ತೆ ಎನ್ನುವುದಕ್ಕೆ ಇದೊಂದು ಉದಾಹರಣೆ.
- Ameen Sab
- Updated on: Apr 3, 2025
- 9:47 pm
ನೆತ್ತಿ ಸುಡುತ್ತಿರುವ ಬಿಸಲು: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು
ಯಾದಗಿರಿ ಜಿಲ್ಲೆಯಲ್ಲಿ ಅತಿಯಾದ ಬಿಸಿಲಿನಿಂದಾಗಿ ಜನರು ತಂಪಾದ ನೀರಿಗಾಗಿ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದಾರೆ. ಫ್ರಿಜ್ಗಳಿಗಿಂತ ಮಣ್ಣಿನ ಮಡಕೆಗಳಲ್ಲಿ ನೀರು ತಂಪಾಗಿರುತ್ತದೆ ಎಂಬ ನಂಬಿಕೆಯಿಂದ ಈ ಬೇಡಿಕೆ ಹೆಚ್ಚಾಗಿದೆ. ಕುಂಬಾರರು ಹೆಚ್ಚಿನ ಪ್ರಮಾಣದಲ್ಲಿ ಮಡಿಕೆಗಳನ್ನು ತಯಾರಿಸುತ್ತಿದ್ದು, ರಾಜಸ್ಥಾನ, ಗುಜರಾತ್ ಮುಂತಾದೆಡೆಯಿಂದಲೂ ಬಣ್ಣಬಣ್ಣದ ಮಡಕೆಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಬೇಡಿಕೆ ಹೆಚ್ಚಳದಿಂದ ಮಡಿಕೆ ವ್ಯಾಪಾರ ಜೋರಾಗಿದೆ.
- Ameen Sab
- Updated on: Mar 31, 2025
- 7:42 pm
ಯಾದಗಿರಿ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ
ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷದಿಂದಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ರೌಡಿಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
- Ameen Sab
- Updated on: Mar 23, 2025
- 4:47 pm
ಯಾದಗಿರಿಯಲ್ಲಿ ಡಬಲ್ ಮರ್ಡರ್: 2 ಪ್ರತ್ಯೇಕ ಗ್ಯಾಂಗ್ನಿಂದ ದಲಿತ ಮುಖಂಡ, ಸಹಚರನ ಕೊಲೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಭಯಾನಕ ಡಬಲ್ ಮರ್ಡರ್ ನಡೆದಿದೆ. ದಲಿತ ಮುಖಂಡ ಮತ್ತು ಆತನ ಸಹಚರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೊದಲು ದಲಿತ ಮುಖಂಡನನ್ನು ಹತ್ಯೆ ಮಾಡಲಾಗಿದ್ದು, ನಂತರ ಭಯದಿಂದ ಓಡಿಹೋಗಿದ್ದ ಸಹಚರನನ್ನು ಕೊಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Ameen Sab
- Updated on: Mar 16, 2025
- 3:01 pm
ಯಾದಗಿರಿ: ಸಂಪ್ರದಾಯಿಕ ಬೆಳೆಗೆ ಗುಡ್ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸುರಪುರ ತಾಲ್ಲೂಕಿನ ಲಿಂಗದಳ್ಳಿ ಗ್ರಾಮದ ರೈತ ಹಯ್ಯಾಳಪ್ಪ ಸಾಹುಕಾರರು 18 ಎಕರೆ ಜಮೀನಿನಲ್ಲಿ ಪಪ್ಪಾಯಿ ಬೆಳೆಯನ್ನು ಬೆಳೆದು ವಾರ್ಷಿಕ ಲಕ್ಷಾಂತರ ರೂಪಾಯಿ ಲಾಭ ಗಳಿಸುತ್ತಿದ್ದಾರೆ. 2013 ರವರೆಗೆ ಸಾಂಪ್ರದಾಯಿಕ ಬೆಳೆಗಳಲ್ಲಿ ನಷ್ಟ ಅನುಭವಿಸಿದ್ದ ಅವರು, ತೋಟಗಾರಿಕೆಯತ್ತ ಒಲವು ತೋರಿ ಯಶಸ್ವಿಯಾಗಿದ್ದಾರೆ. ಇದು ಸಾಂಪ್ರದಾಯಿಕ ಕೃಷಿಯಿಂದ ತೋಟಗಾರಿಕೆಗೆ ಮಾರ್ಪಾಡು ಮಾಡುವುದರಿಂದ ಸಿಗುವ ಲಾಭವನ್ನು ತೋರಿಸುತ್ತದೆ.
- Ameen Sab
- Updated on: Mar 3, 2025
- 2:29 pm
ಯಾದಗಿರಿ: ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ದಲಿತ ವಿದ್ಯಾರ್ಥಿಗಳು ಬಳಸಿದ ತಟ್ಟೆಗಳನ್ನು ತೊಳೆಯಲು ಅಡುಗೆ ಸಿಬ್ಬಂದಿ ನಿರಾಕರಿಸಿದ ಘಟನೆ ನಡೆದಿದೆ. 3000 ರೂ. ವೇತನ ಪಡೆಯುವ ಅಡುಗೆ ಸಿಬ್ಬಂದಿ, ದಲಿತ ಮಕ್ಕಳ ತಟ್ಟೆ ತೊಳೆಯಲು ನಿರಾಕರಿಸಿ ಅಡುಗೆ ಮನೆಗೆ ಬೀಗ ಹಾಕಿದ್ದಾರೆ. ಇದರಿಂದಾಗಿ ಮೂರು ದಿನಗಳಿಂದ ಬಿಸಿಯೂಟ ಸ್ಥಗಿತವಾಗಿದೆ. ದಲಿತ ಮುಖಂಡರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ.
- Ameen Sab
- Updated on: Feb 24, 2025
- 3:01 pm