ಆರ್ಎಸ್ಎಸ್ ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್ನಲ್ಲಿ ಬಡ್ತಿ ಸಿಗುತ್ತೆ: ಶಾಸಕ ಯತ್ನಾಳ್ ಆರೋಪ
Basanagouda Patil Yatnal on Congress: ಕಾಂಗ್ರೆಸ್ ಪಕ್ಷದಲ್ಲಿ ಆರ್ಎಸ್ಎಸ್, ಹಿಂದೂ ಧರ್ಮ ಮತ್ತು ದೇಶದ ವಿರುದ್ಧ ಮಾತನಾಡುವವರಿಗೆ ಪ್ರಮೋಷನ್ ನೀಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಆರೋಪಿಸಿದ್ದಾರೆ. ನೇರ ನೇಮಕಾತಿ ಪ್ರಕ್ರಿಯೆಯನ್ನು ಭ್ರಷ್ಟಾಚಾರಕ್ಕೆ ದಾರಿ ಎಂದಿರುವ ಅವರು, ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
- Anil Kalkere
- Updated on: Jul 9, 2026
- 5:13 pm
ಬಿಜೆಪಿ ಸಭೆಯಲ್ಲಿ ಅಡ್ಡಮತದಾನಕ್ಕೆ ಹಿರಿಯರ ಆಕ್ಷೇಪ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
MLC ಚುನಾವಣೆಯ ಅಡ್ಡಮತದಾನದ ಕುರಿತು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಸೂಕ್ತ ತರಬೇತಿ ನೀಡದಿರುವುದು ಅಡ್ಡಮತದಾನಕ್ಕೆ ಕಾರಣವೆಂದು ಹಿರಿಯ ನಾಯಕರು ಆಕ್ಷೇಪಿಸಿದರು. ಶಾಸಕರ ಮೇಲಿನ ವಿಶ್ವಾಸವೇ ತಪ್ಪಾಯ್ತು ಎಂದು ಆರ್. ಅಶೋಕ್ ಹೇಳಿದ್ದಾರೆ. ಇದೇ ವೇಳೆ ಸುಧಾಕರ್-ವಿಶ್ವನಾಥ್ ನಡುವಿನ ಕಿತ್ತಾಟಕ್ಕೆ ಹೈಕಮಾಂಡ್ ಮಧ್ಯಪ್ರವೇಶಿಸಿ ಸಂಧಾನ ನಡೆಸಿದೆ.
- Anil Kalkere
- Updated on: Jul 5, 2026
- 11:13 pm
RSS ತರಾಟೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ: ಸುಧಾಕರ್-SR ವಿಶ್ವನಾಥ್ ಸಂಧಾನ ಸಕ್ಸಸ್
ಶಿಸ್ತಿನ ಸಂಘಟನೆ ಬಿಜೆಪಿ ಎಂಬುದು ಕರ್ನಾಟಕದ ಮಟ್ಟಿಗೆ ಅತಿದೊಡ್ಡ ಜೋಕ್ ಆಗಿ ಕಾಣಿಸುತ್ತಿದೆ. ಹೌದು....ಈಗಾಗಲೇ, ಅಡ್ಡ ಮತದಾನದಿಂದ ಆಂತರಿಕ ಸಂಘರ್ಷ ಏರ್ಪಟ್ಟಿರುವ ಹೊತ್ತಿನಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಕಚ್ಚಾಟಗಳು ನಡೆಯುತ್ತಿವೆ. ಬಿಜೆಪಿಯ ಪ್ರಭಾವಿಗಳು ಬೀದಿ ಕಾಳಗದಲ್ಲಿ ತೊಡಗಿದ್ದಾರೆ. ಈ ಒಳಜಗಳಿಗೆ ಬ್ರೇಕ್ ಹಾಕಲು ಆರ್ಎಸ್ಎಸ್, ಹಿರಿಯ ಬಿಜೆಪಿ ನಾಯಕರು ಮಧ್ಯೆ ಪ್ರವೇಶ ಮಾಡಿದ್ದು, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ S.R.ವಿಶ್ವನಾಥ್ ಸಂಧಾನ ಸಭೆ ಸಕ್ಸಸ್ ಆಗಿದೆ. ಅಷ್ಟಕ್ಕೂ ಸಂಧಾನ ಸಭೆ ಏನೆಲ್ಲಾ ಆಯ್ತು ಎನ್ನುವುದು ಇಲ್ಲಿದೆ.
- Anil Kalkere
- Updated on: Jul 5, 2026
- 9:15 pm
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಮತ್ತೊಂದು ವಿಡಿಯೋ ರಿಲೀಸ್ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ
Voter List Revision: ಯಶವಂತಪುರ ಕ್ಷೇತ್ರದ ಎಸ್ಐಆರ್ ಪ್ರಕ್ರಿಯೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ಫೋಟೋ ಇರುವ ಪುಸ್ತಕ ಬಳಸಿ ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರು ರಾಮಮಂದಿರ ಬಗ್ಗೆ ಮಾತನಾಡುತ್ತಾರೆ. ಆದರೆ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಹೊರಟಿದೆ ಎಂದವರು ಆರೋಪಿಸಿದ್ದಾರೆ.
- Anil Kalkere
- Updated on: Jul 3, 2026
- 2:43 pm
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ನಡೆಸಿದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು ನೋಡಿ
ರಾಮನಗರದಲ್ಲಿ ನಡೆದ SIR ಪ್ರಕ್ರಿಯೆಯ ವಿವಾದ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. SIR ನಿಯಮಾನುಸಾರ ನಡೆಯಬೇಕು, ಮತದಾನದ ಹಕ್ಕು ಕಸಿಯುವಂತಿಲ್ಲ ಎಂದರು. ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಲಿದೆ. ಅಲ್ಲದೆ, ತಾವು ಕೇಳಿದ 12 ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆಯೂ ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.
- Anil Kalkere
- Updated on: Jul 3, 2026
- 11:30 am
‘ಸರ್ಕಾರಿ ಒಟಿಟಿ ಆರಂಭಿಸಿ’; ಸಿಎಂ ಡಿಕೆ ಶಿವಕುಮಾರ್ ಬಳಿ ಬೇಡಿಕೆ ಇಟ್ಟ ಚಲನಚಿತ್ರ ವಾಣಿಜ್ಯ ಮಂಡಳಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ನೇತೃತ್ವದ ನಿಯೋಗವು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿತು. ಒಟಿಟಿ ವೇದಿಕೆಗಳಲ್ಲಿ ಕನ್ನಡ ಸಿನಿಮಾಗಳಿಗೆ ಬೇಡಿಕೆ ಇಲ್ಲದಿರುವುದನ್ನು ಹೈಲೈಟ್ ಮಾಡಿದ ನಿಯೋಗ, ಸರ್ಕಾರಿ ಒಟಿಟಿ ಆರಂಭಿಸಲು ಕೋರಿತು. ಚಿತ್ರಮಂದಿರಗಳ ಉಳಿವು, ಹೊಸ ಚಲನಚಿತ್ರ ನೀತಿ ಹಾಗೂ ಬಾಕಿ ಇರುವ ರಾಜ್ಯ ಪ್ರಶಸ್ತಿಗಳ ವಿತರಣೆಗೂ ಈ ವೇಳೆ ಆಗ್ರಹಿಸಲಾಯಿತು.
- Anil Kalkere
- Updated on: Jul 1, 2026
- 8:21 pm
ಬೆಂಗಳೂರು ಅಭಿವೃದ್ಧಿ ಪ್ಯಾಕೇಜ್ನಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೇ ಸಿಂಹಪಾಲು: ತಾರತಮ್ಯದ ಆರೋಪ ಮಾಡಿದ ಪ್ರತಿಪಕ್ಷ ಬಿಜೆಪಿ
ಬೆಂಗಳೂರು ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಒಟ್ಟು 2,000 ಕೋಟಿ ರೂ. ವಿಶೇಷ ಪ್ಯಾಕೇಜ್ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಸಿಂಹಪಾಲು ದೊರೆತಿದೆ. ಅತಿ ಹೆಚ್ಚು ಅನುದಾನ ಪಡೆದ ಮೊದಲ ನಾಲ್ಕು ಕ್ಷೇತ್ರಗಳು ‘ಕೈ’ ಪಾಳಯದ ಪಾಲಾಗಿದ್ದು, ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
- Anil Kalkere
- Updated on: Jun 29, 2026
- 12:17 pm
12 ಶಾಸಕರು ಅಡ್ಡಮತದಾನ, ಕೋಡ್ ವರ್ಡ್ ಪಾಲಿಸದೇ ಎಡವಟ್ಟು: ಸತ್ಯಶೋಧನಾ ಸಮಿತಿ ವರದಿಯ ಸ್ಫೋಟಕ ಅಂಶ ಬಹಿರಂಗ
BJP MLAs Cross Voting: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣ, ಈಗ ಕಮಲಪಡೆಯಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಸತ್ಯಾಂಶ ಪತ್ತೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಚಿಸಿದ್ದ ಸತ್ಯಶೋಧನಾ ಸಮಿತಿ ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಹಾಗಿದ್ರೆ ವರದಿಯಲ್ಲಿ ಏನಿದೆ? ಯಾವ ಶಿಫಾರಸುಗಳಿವೆ? ಪಕ್ಷದ ಮುಂದಿನ ನಡೆ ಏನು? ಈ ಕುರಿತ ಇನ್ಸೈಡ್ ವರದಿ ಇಲ್ಲಿದೆ.
- Anil Kalkere
- Updated on: Jun 27, 2026
- 9:28 pm
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ವರದಿ ಸಲ್ಲಿಕೆ ಮುನ್ನವೇ ಸ್ಫೋಟಕ ಮಾಹಿತಿ ಬಹಿರಂಗ
ಬೆಳಗಾವಿಯ ಹಿರಿಯ ಶಾಸಕನಿಂದಲೇ ಅಡ್ಡ ಮತದಾನವಾಗಿರುವ ಶಂಕಿ ವ್ತಕ್ತವಾಗಿದ್ದು, ಈ ಬಗ್ಗೆ ಕೇಂದ್ರ ನಾಯಕತ್ವದ ಮುಂದೆಯು ಬೆಳಗಾವಿ ರಾಜಕಾರಣ ಪ್ರಸ್ತಾಪವಾಗಿದೆ. ಇನ್ನು ಈ ಬಗ್ಗೆ ಬಿಜೆಪಿಯ ಸಮಿತಿ ಸಭೆಯಲ್ಲೂ ಭಾರೀ ಚರ್ಚೆಯಾಗಿದ್ದು, ಇದರ ಕುರಿತು ಕೇಂದ್ರ ನಾಯಕರು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಗಾದ್ರೆ, ಅಡ್ಡಮತದಾನ ಮಾಡಿದ ಶಾಸಕನನ್ನು ಪತ್ತೆ ಮಾಡಲಾಯ್ತಾ? ಯಾರವರು ಎನ್ನುವುದು ಮಾತ್ರ ನಿಗೂಢವಾಗಿದೆ.
- Anil Kalkere
- Updated on: Jun 27, 2026
- 4:03 pm
ಗ್ಯಾರಂಟಿ ಚಕ್ಕರ್ನಲ್ಲಿ ಆರೋಗ್ಯ ಇಲಾಖೆ ಐಸಿಯುಗೆ! ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ
ರಾಜ್ಯ ಆರೋಗ್ಯ ಇಲಾಖೆಯ ಅವ್ಯವಸ್ಥೆ ಹಾಗೂ 'ನಮ್ಮ ಕ್ಲಿನಿಕ್' ಸಿಬ್ಬಂದಿಗೆ ಕಳೆದ 3 ತಿಂಗಳಿಂದ ಸಂಬಳ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಇಲಾಖೆಯಲ್ಲಿನ 35,196 ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡದಿದ್ದರೆ ಮತ್ತು ಬಾಕಿ ವೇತನ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಎಚ್ಚರಿಸಿದೆ.
- Anil Kalkere
- Updated on: Jun 27, 2026
- 10:12 am
ಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ
Bengaluru News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಮಾರಕೃಪಾ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ. ಪೂಜೆ ನೆರವೇರಿಸಿ ಆಡಳಿತಾತ್ಮಕ ಕಾರ್ಯಗಳಿಗೆ ಚಾಲನೆ ನೀಡಿದ ಅವರು, ರಾಜ್ಯದ ಆಡಳಿತ ಚಟುವಟಿಕೆಗಳಿಗೆ ವೇಗ ನೀಡಲಿದ್ದಾರೆ. ಕಚೇರಿಯಲ್ಲಿ ಅಜ್ಜಯ್ಯನ ಭಾವಚಿತ್ರವನ್ನು ಇರಿಸುವ ಮೂಲಕ ವಿಶೇಷ ಗಮನ ಸೆಳೆದಿದ್ದಾರೆ.
- Anil Kalkere
- Updated on: Jun 24, 2026
- 2:43 pm
ಕಾರಲ್ಲೂ ಅಧಿಕಾರಿಗಳ ಜೊತೆ ಮೀಟಿಂಗ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೃಷ್ಣಭೈರೇಗೌಡ
TV9 Kannada News: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಸಮಯ ಉಳಿಸುವ ಸಲುವಾಗಿ ಕಾರಿನಲ್ಲಿ ಪ್ರಯಾಣಿಸುವಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದ ಸಚಿವ ಕೃಷ್ಣ ಭೈರೇಗೌಡರು ಅಧಿಕಾರಿಗಳನ್ನು ತರಾಟೆಗೆ ಪಡೆದಿದ್ದರು.
- Anil Kalkere
- Updated on: Jun 23, 2026
- 2:05 pm