AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Kalkere

Anil Kalkere

Author - TV9 Kannada

anil.nanjundappa@tv9.com
ಚಾಮರಾಜನಗರ ಶೂಟೌಟ್ ಪ್ರಕರಣ: ತಮಿಳುನಾಡು ಸಿಎಂ ವಿಜಯ್‌ ಹೇಳಿಕೆಗೆ ಡಿಕೆಶಿ ತಿರುಗೇಟು

ಚಾಮರಾಜನಗರ ಶೂಟೌಟ್ ಪ್ರಕರಣ: ತಮಿಳುನಾಡು ಸಿಎಂ ವಿಜಯ್‌ ಹೇಳಿಕೆಗೆ ಡಿಕೆಶಿ ತಿರುಗೇಟು

ಚಾಮರಾಜನಗರ ಶೂಟೌಟ್ ಪ್ರಕರಣದ ಬಗ್ಗೆ ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ರಾಜ್ಯಗಳ ಕಾನೂನು ಸುವ್ಯವಸ್ಥೆ ಮತ್ತು ಆಡಳಿತದಲ್ಲಿ ಪರಸ್ಪರ ಮಧ್ಯಪ್ರವೇಶಿಸಬಾರದು, ಇದು ಸಂಯುಕ್ತ ರಚನೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ರಾಜ್ಯದ ರಕ್ಷಣೆ ನಮಗೆ ಗೊತ್ತಿದೆ, ಅವರ ಕೆಲಸ ಅವರು ನೋಡಿಕೊಳ್ಳಲಿ ಎಂದು ಡಿಕೆಶಿ ಹೇಳಿದ್ದಾರೆ.

ಹನೂರಿನಲ್ಲಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್​​. ಅಶೋಕ್​​ ಆಗ್ರಹ

ಹನೂರಿನಲ್ಲಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್​​. ಅಶೋಕ್​​ ಆಗ್ರಹ

ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಪ್ರಾಣಿ ಕೊಂದು ಮಾಂಸ ಮಾರಾಟಕ್ಕೆ ಹೋಗುತ್ತಿದ್ದರು , ಹೀಗಾಗಿ ಮೂವರನ್ನು ಎನ್​ಕೌಂಟರ್ ಮಾಡಿದ್ದೇವೆ ಅಂತಾರೆ. ಆದರೆ ಹತ್ಯೆಯಾದವರ ಸಂಬಂಧಿಕರು ನಕಲಿ ಎನ್​ಕೌಂಟರ್ ಅಂತಾರೆ. ಕಳೆದ 10 ವರ್ಷದಲ್ಲಿ ಮೊದಲ ಬಾರಿಗೆ ಅರಣ್ಯದಲ್ಲಿ ಹೀಗಾಗಿದೆ ಎಂದವರು ತಿಳಿಸಿದ್ದಾರೆ.

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ, ಕ್ಯಾಂಟೀನ್ ಸೀಜ್!

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ, ಕ್ಯಾಂಟೀನ್ ಸೀಜ್!

ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಚ್ಚರಿಯ ಸಂಗತಿಗಳನ್ನು ಬಯಲಿಗೆಳೆದಿದ್ದಾರೆ. ತಟ್ಟೆ ಶೇಖರಣಾ ಜಾಗದಲ್ಲಿ ಜಿರಳೆಗಳು ಮತ್ತು ಅಡಿಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾಗಿದೆ. ಸ್ವಚ್ಛತೆ ಕೊರತೆ ಹಾಗೂ ಅವಧಿ ಮೀರಿದ ಪದಾರ್ಥಗಳ ಬಳಕೆ ನಿಯಮ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗೆ ಬೀಗ ಜಡಿದು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ರೆಡಿ !

ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ರೆಡಿ !

ಆಗಸ್ಟ್​​ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಡಿ.ಕೆ. ಶಿವಕುಮಾರ್​​ ಸಿಎಂ ಆದ ಬಳಿಕ ಮೊದಲ ಅಧಿವೇಶನವಾಗಿದ್ದು, ಭ್ರಷ್ಟಾಚಾರ, ಕಾವೇರಿ ನೀರು, ರೈತರ ಸಮಸ್ಯೆಗಳು, ಕಾನೂನು ಸುವ್ಯವಸ್ಥೆ ಹಾಗೂ ಸಚಿವ ಖಾತೆ ಹಂಚಿಕೆ ಗೊಂದಲದ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಸಾಧನೆಗಳ ಮೂಲಕ ತಿರುಗೇಟು ನೀಡಲು ಸಿದ್ಧವಾಗಿದೆ.

ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ: ಪ್ರಮುಖ ನಾಯಕರು ಭಾಗಿ

ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ: ಪ್ರಮುಖ ನಾಯಕರು ಭಾಗಿ

Har Ghar Tiranga Rally: ಬೆಂಗಳೂರಿನಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬಿಜೆಪಿ ತ್ರಿವರ್ಣ ಧ್ವಜ ಯಾತ್ರೆ ಆಯೋಜಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಕೆ.ಸಿ. ಜನರಲ್ ಆಸ್ಪತ್ರೆಯ ಸಮೀಪದಿಂದ ಆರಂಭವಾದ ಈ ಯಾತ್ರೆಯಲ್ಲಿ ದೇಶಭಕ್ತಿ ಘೋಷಣೆಗಳು ಮೊಳಗಿದವು.

ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ ಹೀಗದಿಂದ್ಯಾಕೆ?

ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ ಹೀಗದಿಂದ್ಯಾಕೆ?

ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವರಿಗೆ ಜವಾಬ್ದಾರಿ ಹಂಚಿಕೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿಗಳ ವಿವೇಚನೆ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ನಿರ್ದೇಶನ ಬಂದರೆ ತಮ್ಮ ಸಚಿವ ಸ್ಥಾನ ತ್ಯಜಿಸಿ ಪಕ್ಷದ ಕೆಲಸಕ್ಕೆ ಬದ್ಧ ಎಂದು ಹೇಳುವ ಮೂಲಕ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ನಿರ್ಣಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಖಡಕ್ ತಿರುಗೇಟು ನೀಡಿದ್ದಾರೆ. ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ, ಕರ್ನಾಟಕ ಖಂಡಿತಾ ಅನುಷ್ಠಾನಗೊಳಿಸಲಿದೆ. ನೆರೆ ರಾಜ್ಯಗಳು ಆಕ್ಷೇಪಿಸಬಾರದೆಂದು ಕೇಂದ್ರವೇ ಸ್ಪಷ್ಟಪಡಿಸಿದೆ. ಆಗಸ್ಟ್ 15ರೊಳಗೆ ಡಿಪಿಆರ್ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್ ಕೂಡ ತಮಿಳುನಾಡು ಅರ್ಜಿಗಳನ್ನು ವಜಾಗೊಳಿಸಿದೆ. ಕರ್ನಾಟಕ ತನ್ನ ಸಂಕಲ್ಪಕ್ಕೆ ಬದ್ಧವಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.

ಸಚಿವ ರಾಮಲಿಂಗಾರೆಡ್ಡಿಗೆ ‘ಅರ್ಚಕರ ಕಣ್ಮಣಿ’ ಬಿರುದು ಸನ್ಮಾನ: ಮುಜರಾಯಿ ಖಾತೆ ನೀಡಲು ಸಿಎಂಗೆ ಅರ್ಚಕರ ಒಕ್ಕೂಟ ಮನವಿ

ಸಚಿವ ರಾಮಲಿಂಗಾರೆಡ್ಡಿಗೆ ‘ಅರ್ಚಕರ ಕಣ್ಮಣಿ’ ಬಿರುದು ಸನ್ಮಾನ: ಮುಜರಾಯಿ ಖಾತೆ ನೀಡಲು ಸಿಎಂಗೆ ಅರ್ಚಕರ ಒಕ್ಕೂಟ ಮನವಿ

ಬೆಂಗಳೂರಿನಲ್ಲಿ ನಡೆದ ರಾಜ್ಯ ಮುಜರಾಯಿ ದೇಗುಲಗಳ ಅರ್ಚಕರ ಬೃಹತ್ ಸಮಾವೇಶದಲ್ಲಿ ಸಚಿವ ರಾಮಲಿಂಗಾರೆಡ್ಡಿಗೆ 'ಅರ್ಚಕರ ಕಣ್ಮಣಿ' ಬಿರುದು ನೀಡಿ ಸನ್ಮಾನಿಸಲಾಯಿತು. ಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಮಳೆ-ಬೆಳೆಗಾಗಿ ರುದ್ರಜಪ, ಬಡ ಅರ್ಚಕರಿಗೆ ಮನೆಗಳು ಹಾಗೂ ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ಮರುಹಂಚಿಕೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಅರ್ಚಕರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ: ‘ಮನಸ್ಸಿಗೆ ನೋವಾಗಿದೆ’ ಎಂದ ಬಸವರಾಜ ಹೊರಟ್ಟಿ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ: ‘ಮನಸ್ಸಿಗೆ ನೋವಾಗಿದೆ’ ಎಂದ ಬಸವರಾಜ ಹೊರಟ್ಟಿ

Basavaraj Horatti: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ರಾಜೀನಾಮೆ ನೀಡುವಂತೆ ಸಿಎಂ ಡಿಕೆ ಶಿವಕುಮಾರ್​ ಸೂಚಿಸಿದ್ದಾರೆ. ಸದ್ಯ ಈ ವಿಚಾರಕ್ಕೆ ಬಸವರಾಜ ಹೊರಟ್ಟಿ ಬೇಸರಗೊಂಡಿದ್ದಾರೆ. ವಿಪಕ್ಷ ನಾಯಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಕ್ಕೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು

‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಕ್ಕೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲಾವಾರು ಪ್ರಾತಿನಿಧ್ಯ ನೀಡದ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಸಿಎಂ ಬದಲಾವಣೆ ಬಗ್ಗೆಯೂ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಿದಾಗಲೆಲ್ಲ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಅವರು ಹೇಳಿದ್ದಾರೆ.

‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಸಚಿವ ಸ್ಥಾನ ಸಿಕ್ಕಿದ್ದಕ್ಕೆ ವರಿಷ್ಠರಿಗೆ ಧನ್ಯವಾದ ಹೇಳಿದ ಶಿವಲಿಂಗೇಗೌಡ

‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಸಚಿವ ಸ್ಥಾನ ಸಿಕ್ಕಿದ್ದಕ್ಕೆ ವರಿಷ್ಠರಿಗೆ ಧನ್ಯವಾದ ಹೇಳಿದ ಶಿವಲಿಂಗೇಗೌಡ

ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಶಾಸಕ ಶಿವಲಿಂಗೇಗೌಡ ಅವರು ತಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯದ ಜನತೆಗೆ, ಜೊತೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು. ಯಾವುದೇ ಖಾತೆಯ ನಿರೀಕ್ಷೆ ಇಲ್ಲದೆ, ಜನರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಹಳೆಯ ದಿನ ನೆನಪಿಸಿಕೊಂಡ ಡಿಕೆಶಿ

ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಹಳೆಯ ದಿನ ನೆನಪಿಸಿಕೊಂಡ ಡಿಕೆಶಿ

ವೀರಶೈವ ಧರ್ಮದ ಕುರಿತಾದ ಹಳೆಯ ವಿವಾದವನ್ನು ನೆನಪಿಸಿಕೊಂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಗ ಸೃಷ್ಟಿಯಾದ ಪರಿಸ್ಥಿತಿಯಿಂದ ಸಾರ್ವಜನಿಕರು ಸಿಟ್ಟಾಗಿದ್ದರು. ಆದ್ದರಿಂದ, ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ಹೋಗಿ ಶ್ರೀಗಳ ಕ್ಷಮೆ ಕೇಳಿದ್ದೆವು ಎಂದು ತಿಳಿಸಿದರು. ಟೀಕೆಗಳು ಕ್ಷಣಿಕ, ಆದರೆ ಸಾಧನೆಗಳು ಶಾಶ್ವತ ಎಂದ ಅವರು, ವಿರೋಧಿಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.