AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Kalkere

Anil Kalkere

Author - TV9 Kannada

anil.nanjundappa@tv9.com
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​? ರಾಮಲಿಂಗಾರೆಡ್ಡಿ ಏನಂದ್ರು?

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​? ರಾಮಲಿಂಗಾರೆಡ್ಡಿ ಏನಂದ್ರು?

ರಾಜ್ಯ ಬಜೆಟ್​​ ಬಗ್ಗೆ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್​​ ಹುಸೇನ್​​ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವೀಗ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ.

RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ

RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಅವರು ಆರ್​ಎಸ್​ಎಸ್​ ನಿಷೇಧದ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಆರ್​ಎಸ್​ಎಸ್​ ಅನ್ನು ನಿಷೇಧಿಸುವುದು ಅಸಾಧ್ಯ ಎಂದು ಜಾರಕಿಹೊಳಿ ಹೇಳಿದ್ದಾರೆ. ಸಂಘಟನೆ ನಿಷೇಧಕ್ಕೂ ಮತ್ತು ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ‌ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂಗ್ರೆಸ್ ನಲ್ಲಿ‌ ಸ್ವಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗ್ತಿದೆ ಅಂತ ವಿಪಕ್ಷಗಳು ಹೊಸ ಬಾಂಬ್​​ ಸಿಡಿಸಿರೋದೀಗ ರಾಜಕೀಯ ಚದುರಂಗದಲ್ಲಿ ಮಾತಿನ ಸಮರಕ್ಕೆ ಕಾರಣವಾಗಿದೆ.

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?

ಮಧ್ಯಪ್ರಾಚ್ಯದಲ್ಲಿನ ಯುದ್ಧ ಸನ್ನಿವೇಶದಿಂದಾಗಿ ದುಬೈ ಸೇರಿದಂತೆ ಹಲವೆಡೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ 2 ಪುಟಗಳ ಪತ್ರ ಬರೆದಿದ್ದಾರೆ. ವಾಯು ಸಂಚಾರ ಅಸ್ತವ್ಯಸ್ತಗೊಂಡು ಸಾವಿರಾರು ಭಾರತೀಯರು ಆತಂಕದಲ್ಲಿದ್ದು, ಕೂಡಲೇ ವಿಶೇಷ ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಮತ್ತು ನೆರವು ನೀಡಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ದಾಖಲೆ ಬಜೆಟ್ ಮಂಡಿಸಲು ಸಜ್ಜಾಗುತ್ತಿರುವ ಸಿಎಂ: ಸಿದ್ದರಾಮಯ್ಯ 17ನೇ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ

ದಾಖಲೆ ಬಜೆಟ್ ಮಂಡಿಸಲು ಸಜ್ಜಾಗುತ್ತಿರುವ ಸಿಎಂ: ಸಿದ್ದರಾಮಯ್ಯ 17ನೇ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಕರ್ನಾಟಕದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ದಾಖಲೆಯ ಬಜೆಟ್ ಆಗಿದೆ. ರಾಜ್ಯ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಒಟ್ಟು 14 ದಿನಗಳ ಕಾಲ ನಡೆಯಲಿದೆ. ಸಿದ್ದರಾಮಯ್ಯ ದಾಖಲೆಯ ಬಜೆಟ್​​ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಮುಖ್ಯವಾದವುಗಳ ಮಾಹಿತಿ ಇಲ್ಲಿದೆ.

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಮಹತ್ವದ ಆದೇಶ

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಅವಧಿ ವಿಸ್ತರಣೆಗೆ ನಿನ್ನೆಯಷ್ಟೇ ಮನವಿ ಮಾಡಿದ್ದರು.

ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು

ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು

ಮದ್ಯ ಪರವಾನಗಿ ಲಂಚ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಮತ್ತು ಕಾನ್ಸ್‌ಟೇಬಲ್ ಲಕ್ಕಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 25 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಬಂಧನವಾದ ಬೆನ್ನಲ್ಲೇ ಬಿಜೆಪಿ ನಾಯಕರು ಆಡಿಯೋ ರಿಲೀಸ್ ಮಾಡಿ, ಸಚಿವರ ಪಾತ್ರದ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ

ತಾನು ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಕೆ.ಎನ್​​. ರಾಜಣ್ಣ ಹೇಳಿದ್ದಾರೆ. ನಾನು ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವನಲ್ಲ. ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ ಎಂದಿದ್ದಾರೆ. ಪಕ್ಷದ ಅಧ್ಯಕ್ಷ ಗಿರಿ ಕೊಟ್ರೆ ಮಂತ್ರಿ ಸ್ಥಾನ ಬಿಡ್ತೀನಿ ಎಂದು ಸಚಿವನಾಗಿದ್ದಾಗಲೇ ಹೇಳಿದ್ದೆ ಎಂದೂ ತಿಳಿಸಿದ್ದಾರೆ.

ಬಳ್ಳಾರಿ ಗಲಾಟೆ ಪ್ರಕರಣದ​ ಬಗ್ಗೆ ಪರಮೇಶ್ವರ್​​ ಬಿಗ್ ​​ಅಪ್ಡೇಟ್​:  ಕೇಸ್ ತನಿಖೆ ಸಿಐಡಿಗೆ?

ಬಳ್ಳಾರಿ ಗಲಾಟೆ ಪ್ರಕರಣದ​ ಬಗ್ಗೆ ಪರಮೇಶ್ವರ್​​ ಬಿಗ್ ​​ಅಪ್ಡೇಟ್​: ಕೇಸ್ ತನಿಖೆ ಸಿಐಡಿಗೆ?

ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್​​ ಅಪ್ಡೇಟ್​​ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಪ್ರಕರಣದ ಬಗ್ಗೆ ಚರ್ಚೆ ನಡೆಸಿ, ಅಗತ್ಯಬಿದ್ರೆ ತನಿಖೆಯನ್ನು ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಬ್ಯಾನರ್ ಗಲಾಟೆ ವೇಳೆ ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್​​ ರಿವಾಲ್ವರ್​​ನಿಂದಲೇ ಗುಂಡು ಹಾರಿರೋದು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ: ಕರ್ನಾಟಕ ಸಿಎಂ ಆಗ್ರಹವೇನು?

ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ: ಕರ್ನಾಟಕ ಸಿಎಂ ಆಗ್ರಹವೇನು?

ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದು ವಿಬಿ-ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಹೊಸ ಕಾಯ್ದೆಯು MGNREGA ಅನುದಾನ ಹಂಚಿಕೆಯನ್ನು 90:10 ರಿಂದ 60:40ಕ್ಕೆ ಬದಲಿಸಿ, ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೇರುತ್ತದೆ. ಇದು ಸಂವಿಧಾನದ 258 ಮತ್ತು 280ನೇ ವಿಧಿಗಳ ಉಲ್ಲಂಘನೆಯಾಗಿದ್ದು, ಸಹಕಾರಿ ಫೆಡರಲಿಸಂಗೆ ಮಾರಕವಾಗಿದೆ. ಕಾಯ್ದೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದಿರುವುದು ಸಹ ಖಂಡನೀಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​

ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​

ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇರಳ ಸರ್ಕಾರ ನಮ್ಮ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ರಾಜೀವ್ ಚಂದ್ರಶೇಖರ್ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ನಮಗೂ ಕೇರಳ ಗೂ ಅವಿನಾಭಾವ ಸಂಬಂಧ ಇದೆ. ರಾಜಕೀಯ ಮಾಡುವವರು ಮಾಡಿಕೊಳ್ಳಲಿ ಎಂದಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ. ಕಾಂಗ್ರೆಸ್​ನ 140 ಶಾಸಕರು ಕೂಡ ಒಂದೇ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.