AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Kalkere

Anil Kalkere

Author - TV9 Kannada

anil.nanjundappa@tv9.com
ಇಡಿ ಅಧಿಕಾರಿಗಳಿಗೆ ದೂರು ಕೊಟ್ಟವರು ಯಾರೆಂದು ಗೊತ್ತಿದೆ; ಸಿಎಂಗೆ ಹೇಳಿದ್ದೇನೆ ಎಂದ ಸಚಿವ ಸತೀಶ್​ ಜಾರಕಿಹೊಳಿ

ಇಡಿ ಅಧಿಕಾರಿಗಳಿಗೆ ದೂರು ಕೊಟ್ಟವರು ಯಾರೆಂದು ಗೊತ್ತಿದೆ; ಸಿಎಂಗೆ ಹೇಳಿದ್ದೇನೆ ಎಂದ ಸಚಿವ ಸತೀಶ್​ ಜಾರಕಿಹೊಳಿ

ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಇಡಿ ದಾಳಿ ಮಾಡಿತ್ತು. ಬೆಂಗಳೂರಿನ ಸರ್ಕಾರಿ ನಿವಾಸ, ಖಾಸಗಿ ನಿವಾಸ ಹಾಗೂ ಗೋಕಾಕ್​​ನಲ್ಲಿರುವ ಮನೆ, ಪುತ್ರ, ಪುತ್ರಿ ಹಾಗೂ ಆಪ್ತರಿಗೂ ಶಾಕ್​ ಕೊಟ್ಟಿತ್ತು. ಇ.ಡಿ ಅಧಿಕಾರಿಗಳ ಈ ಮೆಗಾ ಆಪರೇಷನ್ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇಡಿ ಅಧಿಕಾರಿಗಳಿಗೆ ದೂರು ಕೊಟ್ಟರು ಯಾರೆಂದು ನನಗೆ ಗೊತ್ತಿದೆ. ಸಿಎಂಗೆ ಹೇಳಿದ್ದೇನೆ ಎಂದು ಇದೀಗ ಸಚಿವ ಸತೀಶ್​ ಜಾರಕಿಹೊಳಿ ಹೊಸ್​​ ಬಾಂಬ್​ ಸಿಡಿಸಿದ್ದಾರೆ.

ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ: ಕಾರಣ ಇಲ್ಲಿದೆ

ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ: ಕಾರಣ ಇಲ್ಲಿದೆ

ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಹಿಟ್‌ಲಿಸ್ಟ್‌ನಲ್ಲಿ ತಾವೇ ಮೊದಲ ಸ್ಥಾನದಲ್ಲಿದ್ದು, ಇಂತಹ ಬೆದರಿಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಅಲ್ಲದೆ ತಮ್ಮ ಮೇಲಿನ ಆರೋಪಗಳಿಗೆ ಸದನದಲ್ಲಿಯೇ ಅವರು ದಾಖಲೆ ನೀಡಲಿ ಎಂದು ಬಹಿರಂಗ ಸವಾಲೆಸೆದಿದ್ದಾರೆ.

ರಾಜ್ಯದಲ್ಲಿ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟ ಅಸ್ತು: 1 ಲಕ್ಷ ಹೊಸ ಉದ್ಯೋಗ ಸೃಷ್ಟಿ ಗುರಿ

ರಾಜ್ಯದಲ್ಲಿ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟ ಅಸ್ತು: 1 ಲಕ್ಷ ಹೊಸ ಉದ್ಯೋಗ ಸೃಷ್ಟಿ ಗುರಿ

ಕರ್ನಾಟಕದ 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ 'ಉದ್ಯೋಗ ನಿಧಿ' ಯೋಜನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. MSME ಹಾಗೂ ಕೈಗಾರಿಕೆಗಳು ನೇಮಿಸಿಕೊಳ್ಳುವ ಪ್ರತಿ ಹೊಸ ನೌಕರನಿಗೆ ತಿಂಗಳಿಗೆ 2,500 ರೂ. ಪ್ರೋತ್ಸಾಹಧನವನ್ನು ಗರಿಷ್ಠ 24 ತಿಂಗಳು ನೀಡಲಾಗುವುದು. ವಾರ್ಷಿಕ 305 ಕೋಟಿ ರೂ. ವೆಚ್ಚದ ಈ ಯೋಜನೆ ಸ್ಥಳೀಯ ವಲಸೆ ತಡೆಯಲು ನೆರವಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಾವೇರಿ ಜಲವಿವಾದ: ತಕ್ಷಣ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

ಕಾವೇರಿ ಜಲವಿವಾದ: ತಕ್ಷಣ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

ತಮಿಳುನಾಡಿಗೆ ದಿನಕ್ಕೆ 6,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಎಂಎ ನೀಡಿರುವ ಆದೇಶವನ್ನು ವಿರೋಧಿಸಿ, ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವಂತೆ ಬಿಜೆಪಿ ನಾಯಕರಾದ ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ತಾಂತ್ರಿಕ ತಜ್ಞರ ಜೊತೆಗೆ ಬದಲಾದ ಪರಿಸ್ಥಿತಿಯ ಬಗ್ಗೆ ಕುಲಂಕುಶವಾಗಿ ಚರ್ಚೆ ಮಾಡಿ ಅದಕ್ಕೆ ನ್ಯಾಯಾಂಗ ತಂಡಕ್ಕೆ ಹೊಸ ಶಕ್ತಿಯನ್ನು ತುಂಬಿ ಇದನ್ನು ಮಾಡದೆ ಇದ್ದರೆ ಬರುವಂತಹ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶ ಬೆಂಗಳೂರು ನೀರಿನ ಆಹಾಕಾರದಲ್ಲಿ ಮುಳುಗುತ್ತದೆ ಎಂದು ಎಚ್ಚರಿಸಿದ್ದಾರೆ.

108 ಆ್ಯಂಬುಲೆನ್ಸ್​ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ ಎಂದ ಅಶೋಕ್​​

108 ಆ್ಯಂಬುಲೆನ್ಸ್​ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ ಎಂದ ಅಶೋಕ್​​

108 ಆ್ಯಂಬುಲೆನ್ಸ್ ಸಿಬ್ಬಂದಿ ಸೆಪ್ಟೆಂಬರ್ 20ರಿಂದ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ಹಿನ್ನೆಲೆಯಲ್ಲಿ, ತುರ್ತು ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಪುಟಗಟ್ಟಲೆ ಜಾಹೀರಾತು ಕೊಡೋದಕ್ಕೆ ಹಣವಿದೆ, ಸಾಧನಾ ಸಮಾವೇಶಗಳಿಗೆ ಹಣವಿದೆ. ಆದರೆ ಜನರ ಜೀವ ಉಳಿಸುವ 108 ಸಿಬ್ಬಂದಿಗೆ ನ್ಯಾಯ ಕೊಡಲು ಹಣವಿಲ್ಲವೇ? ಎಂದವರು ಪ್ರಶ್ನಿಸಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್​​ ಆರೋಪ ಮಾಡಿದ ಅಶೋಕ್​

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್​​ ಆರೋಪ ಮಾಡಿದ ಅಶೋಕ್​

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ-ಸಾಕ್ಸ್ ವಿತರಿಸಿರುವುದರ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆಯಲ್ಲೂ ಶೇ.40 ಕಮಿಷನ್ ಹೊಡೆಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾವೇರಿ 6ನೇ ಹಂತದ ಹೆಸರಿನಲ್ಲಿ 7,000 ಕೋಟಿ ಹೊಸ ಲೂಟಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಸೋರಿಕೆ ಮತ್ತು ಅಕ್ರಮ ಸಂಪರ್ಕ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದವರು ವಾಗ್ದಾಳಿ ನಡೆಸಿದ್ದಾರೆ.

ಮೊಬೈಲ್​​ ಟಾರ್ಚ್​​ ಬೆಳಕಲ್ಲಿ ಬಸ್​​ ಚಾಲನೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ

ಮೊಬೈಲ್​​ ಟಾರ್ಚ್​​ ಬೆಳಕಲ್ಲಿ ಬಸ್​​ ಚಾಲನೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ

ಧಾರವಾಡದ ಕುಂದಗೋಳದಲ್ಲಿ ಬಸ್ ಹೆಡ್‌ಲೈಟ್ ಕೈಕೊಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ 15 ಕಿ.ಮೀ ಬಸ್ ಚಲಾಯಿಸಿದ ಘಟನೆ ಖಂಡಿಸಿ, ಪ್ರಯಾಣಿಕರ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಿನ್ನೆ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯಿಂದ ಅತ್ತಿಗೇರಿಗೆ ಹೊರಟಿದ್ದ ಬಸ್​​ನ ಹೆಡ್‌ಲೈಟ್ ತಾಂತ್ರಿಕ ದೋಷದಿಂದ ಕುಂದಗೋಳ ತಾಲೂಕಿನ ಸಂಶಿ ಬಳಿ ಬಂದ್​​ ಆಗಿತ್ತು. ಪ್ರಯಾಣಿಕರನ್ನು ಅರ್ಧಕ್ಕೆ ಇಳಿಸಲು ಸಾಧ್ಯವಾಗದ ಕಾರಣ, ಪ್ರಯಾಣಿಕರ ಮೊಬೈಲ್​​ ಟಾರ್ಚ್‌ ಬೆಳಕಿನಲ್ಲಿ ಚಾಲಕ ಅತ್ತಿಗೇರಿವರೆಗೆ ಬಸ್ ಚಲಾಯಿಸಿದ್ದರು.

ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಚಾಲನೆ

ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಚಾಲನೆ

ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ನಿವಾರಣೆಗೆ 28 ಕೋಟಿ ವೆಚ್ಚದ ಮೋಡ ಬಿತ್ತನೆ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ HAL ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಈ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಜಲಸಂಪನ್ಮೂಲ ಇಲಾಖೆಯ ವತಿಯಿಂದ 60 ದಿನಗಳ ಕಾಲ ನಡೆಯಲಿರುವ ಈ ಯೋಜನೆ, ರೈತರಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗುವ ನಿರೀಕ್ಷೆಯಿದೆ.

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್

ಮಂಗಳೂರು KRIDL ವಿಭಾಗದಲ್ಲಿ ಸಚಿವರ ಹೆಸರಿನಲ್ಲಿ ಶೇ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರವನ್ನೇ ಇಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರೋಪದ ಕುರಿತ ತನಿಖೆಗೆ ಆಗ್ರಹಿಸಿದ್ದಾರೆ.

ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ; ಇದಕ್ಕಾಗಿ 20 ಕೋಟಿ ರೂ. ವೆಚ್ಚ

ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ; ಇದಕ್ಕಾಗಿ 20 ಕೋಟಿ ರೂ. ವೆಚ್ಚ

ಗೃಹಲಕ್ಷ್ಮೀ ಯೋಜನೆಯ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲು ಕರ್ನಾಟಕ ಸರ್ಕಾರ ಮಹತ್ವದ ಪರಿಶೀಲನಾ ಅಭಿಯಾನ ಆರಂಭಿಸಿದೆ. 20 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಸಮಿತಿ ಸದಸ್ಯರು ಮನೆ-ಮನೆಗೆ ಭೇಟಿ ನೀಡಿ ಭಾವಚಿತ್ರ ಮತ್ತು ಬಯೋಮೆಟ್ರಿಕ್ ಮೂಲಕ ಪರಿಶೀಲನೆ ನಡೆಸಲಿದ್ದಾರೆ. ಯೋಜನೆಯ ದುರ್ಬಳಕೆ ತಡೆಗಟ್ಟಿ, ಅರ್ಹರಿಗೆ ಮಾತ್ರ ಸಹಾಯಧನ ತಲುಪಿಸುವುದು ಈ ಪ್ರಕ್ರಿಯೆಯ ಮುಖ್ಯ ಉದ್ದೇಶವಾಗಿದೆ.

ನಿರ್ವಹಣಾ ಕಾಮಗಾರಿ ಹಿನ್ನೆಲೆ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲುಗಳ ವೇಗದ ಮಿತಿ ಕಡಿತ

ನಿರ್ವಹಣಾ ಕಾಮಗಾರಿ ಹಿನ್ನೆಲೆ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲುಗಳ ವೇಗದ ಮಿತಿ ಕಡಿತ

ನಮ್ಮ ಮೆಟ್ರೋ ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ನಡುವೆ ಓಪನ್ ವೆಬ್ ಗರ್ಡರ್ ನಿರ್ವಹಣಾ ಕಾಮಗಾರಿ ಹಿನ್ನೆಲೆ, ರೈಲುಗಳ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 40 ಕಿ.ಮೀ.ಗೆ ಕಡಿತಗೊಳಿಸಲಾಗಿದೆ. ನಿರ್ವಹಣಾ ಕಾರ್ಯವು 2026ರ ಅಕ್ಟೋಬರ್ ಎರಡನೇ ವಾರದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಾರ್ಯ ಪೂರ್ಣಗೊಂಡ ನಂತರ ತಾಂತ್ರಿಕ ಮೌಲ್ಯಮಾಪನದ ಆಧಾರದ ಮೇಲೆ ತಾತ್ಕಾಲಿಕ ವೇಗ ನಿರ್ಬಂಧವನ್ನು ಮರುಪರಿಶೀಲಿಸಲಾಗುವುದು ಎಂದು ಬಿಎಂಆರ್​​ಸಿಎಲ್​ ತಿಳಿಸಿದೆ.

ಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ, ಇದಕ್ಕಾಗಿಯೇ  1 ದಿನ ವಿಶೇಷ ಅಧಿವೇಶನ

ಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ, ಇದಕ್ಕಾಗಿಯೇ 1 ದಿನ ವಿಶೇಷ ಅಧಿವೇಶನ

ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಳೆದ ವಾರ ನಡೆದ ವಿಧಾನಸಭೆ ಅಧಿವೇಶನದಲ್ಲೂ ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಲಾಗಿದೆ. ಈ ಕುರಿತು ಕಾನೂನು ಹೋರಾಲು‌ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಬೇರೆ ವಿಷಯಗಳ ಬಗ್ಗೆಯೂ ಮಾತನಾಡಿದ್ದು, ಅದು ಈ ಕೆಳಗಿನಂತಿದೆ.