ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ?
Karnataka Governmnet employees DA hiked: ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತ ವೇತನದಾರರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ನೌಕರರ ತುಟ್ಟಿಭತ್ಯೆಯನ್ನು ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿ ಆರ್ಥಿಕ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ.
- Anil Kalkere
- Updated on: May 11, 2026
- 2:41 pm
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ ಬಗ್ಗೆ ಸಚಿವ ಮುನಿಯಪ್ಪ ಹೇಳಿದ್ದಿಷ್ಟು
ಕರ್ನಾಟಕ ಸರ್ಕಾರವು ನಾಗಮೋಹನ್ದಾಸ್ ವರದಿಯ ಆಧಾರದ ಮೇಲೆ ಒಳಮೀಸಲಾತಿ ನಿರ್ಧಾರವನ್ನು ಕೈಗೊಂಡಿದೆ. ಇದು ಸುಮಾರು 40 ವರ್ಷಗಳ ಹೋರಾಟಕ್ಕೆ ದೊರೆತ ಫಲವಾಗಿದ್ದು, ರೋಸ್ಟರ್ ಬಿಂದುವಿನ ಸಮಸ್ಯೆಗಳನ್ನು ಪರಿಹರಿಸುವ ಗುರಿ ಹೊಂದಿದೆ. ಶೋಷಿತ ಮತ್ತು ವಂಚಿತ ಸಮುದಾಯಗಳ 101 ಜಾತಿಗಳಿಗೆ ನ್ಯಾಯ ಒದಗಿಸುವ ಈ ನಿರ್ಧಾರದಿಂದ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
- Anil Kalkere
- Updated on: May 9, 2026
- 2:52 pm
ಅತ್ತ ಗೆದ್ದು ಬಿಎಸ್ವೈ ಭೇಟಿಯಾದ ಜೀವರಾಜ್: ಇತ್ತ ಸಿಎಂ ಭೇಟಿ ಮಾಡಿದ ರಾಜೇಗೌಡ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರುಎಣಿಕೆ ಬಿಗ್ ಹೈಡ್ರಾಮಾಗೆ ಕಾರಣವಾಗಿತ್ತು. ಮತ್ತೆ ನಾವೇ ಗೆದ್ದಿದ್ದೇವೆ ಅಂತ ಕಾಂಗ್ರೆಸ್ ಸಂಭ್ರಮಾಚರಣೆ ಮಾಡಿತ್ತು. ಆದರೆ ರಾತ್ರಿ ಕಳೆದು ಬೆಳಗಾಗೋದ್ರಲ್ಲೇ ಫಲಿತಾಂಶಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿತ್ತು. ಸದ್ಯ ಬಿಜೆಪಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಬಿಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ. ಇತ್ತ ರಾಜೇಗೌಡ ಕೂಡ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.
- Anil Kalkere
- Updated on: May 6, 2026
- 3:38 pm
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ ಸದ್ದು ಮಾಡುತ್ತಿದೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ, ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ.
- Anil Kalkere
- Updated on: Apr 21, 2026
- 5:01 pm
ಕರ್ನಾಟಕ ಲೋಕಾಯುಕ್ತದ 40 ವರ್ಷಗಳ ಸಾರ್ಥಕ ಪಯಣ: ಸಾಧನೆಯ ಹಾದಿ ಮೆಲುಕು ಹಾಕಿದ ನ್ಯಾಯಮೂರ್ತಿಗಳು
ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಉದ್ಘಾಟಿಸಿದರು. ಈ ವೇಳೆ ನಾಲ್ಕು ದಶಕಗಳ ಕಾರ್ಯಸೇವೆ ಮೆಲುಕು ಹಾಕಲಾಯಿತು.
- Anil Kalkere
- Updated on: Apr 18, 2026
- 6:06 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮತದಾರರು, ಒಟ್ಟು ವಾರ್ಡ್ಗಳು ಮತ್ತು ಯಾವ ವಾರ್ಡ್ಗಳಲ್ಲಿ ಹೆಚ್ಚು ಮತದಾರರಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Anil Kalkere
- Updated on: Apr 18, 2026
- 3:07 pm
ಜಮೀರ್ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು
ದಾವಣಗೆರೆ ಉಪಚುನಾವಣೆ ಟಿಕೆಟ್ ಬಂಡಾಯದ ಕಿಚ್ಚು ಸಚಿವ ಜಮೀರ್ ಅಹ್ಮದ್ ಅವರ ಬುಡಕ್ಕೆ ಬಂದಿದೆ. ಅಲ್ಪಸಂಖ್ಯಾತ ನಾಯಕರ ರಾಜೀನಾಮೆಗೆ ಜಮೀರ್ ಪ್ರಚೋದನೆ ನೀಡಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜಮೀರ್ ಜೊತೆ ಸುದೀರ್ಘ ಚರ್ಚೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ಗೆ ಸಮಜಾಯಿಷಿ ನೀಡಲು ಸಿಎಂ ತಾಕೀತು ಮಾಡಿದ್ದಾರೆ. ಜಮೀರ್ ಮೇಲೆಯೂ ಕ್ರಮದ ಸಾಧ್ಯತೆ ಇದೆ.
- Anil Kalkere
- Updated on: Apr 15, 2026
- 6:38 am
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸಾವಿರರು ಜನರಿಗೆ ಉದ್ಯೋಗವಕಾಶ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯಲ್ಲಿ ಕರ್ನಾಟಕಕ್ಕೆ ಭಾರಿ ಆರ್ಥಿಕ ಉತ್ತೇಜನ ದೊರೆತಿದೆ. ಒಟ್ಟು 18,430.44 ಕೋಟಿ ರೂ. ಮೊತ್ತದ 17 ಹೊಸ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದು ರಾಜ್ಯದಾದ್ಯಂತ 15,032 ಹೊಸ ಉದ್ಯೋಗವಕಾಶ ಸೃಷ್ಟಿಯಾಗಲಿದೆ.
- Anil Kalkere
- Updated on: Apr 13, 2026
- 10:32 pm
ಗಾಯಾಳುವಿಗೆ ನೆರವಾದ ಹೆಚ್.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಕ್ರಂ ಎಂಬ ವ್ಯಕ್ತಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುವನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಸೇರಿಸಿ, ತಕ್ಷಣ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಹೆಚ್ಡಿಕೆ ಸೂಚಿಸಿದ್ದು, ಅವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
- Anil Kalkere
- Updated on: Apr 12, 2026
- 12:45 pm
ನನ್ನಿಂದ ಅಂತಾ ತಪ್ಪು ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್
ದಾವಣಗೆರೆ ಬೈಎಲೆಕ್ಷನ್ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಹೈಕಮಾಂಡ್ ದೊಡ್ಡ ಶಾಕ್ ನೀಡಿದೆ. ದಾವಣಗೆರೆ ಬೈಎಲೆಕ್ಷನ್ ಪ್ರಚಾರದಿಂದ ದೂರ ಉಳಿದಿರುವುದು, ಷಡ್ಯಂತ್ರದ ಆರೋಪದಲ್ಲಿ ಇಬ್ಬರ ತಲೆದಂಡ ಆಗಿದೆ. KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Anil Kalkere
- Updated on: Apr 11, 2026
- 5:29 pm
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು
ದಾವಣಗೆರೆ ಉಪಚುನಾವಣೆ ಬಳಿಕ ಅಲ್ಪಸಂಖ್ಯಾತ ನಾಯಕರ ವಿರುದ್ಧದ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆರೋಪಗಳಿಗೆ ಸಾಕ್ಷಿ ಕೇಳಿರುವ ಅವರು, ಇದರ ಹಿಂದೆ ಷಡ್ಯಂತ್ರವಿದೆ ಎಂದು ಶಂಕಿಸಿದ್ದಾರೆ. ಪ್ರಚಾರಕ್ಕೆ ಕರೆಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಬ್ಬಾರ್, ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟಿನ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.
- Anil Kalkere
- Updated on: Apr 11, 2026
- 4:31 pm
20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಟಿಬಿ ಜಯಚಂದ್ರ
ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರಚನೆಯ ಬೇಡಿಕೆ ಜೋರಾಗಿದೆ. ಮೂರು ವರ್ಷಗಳ ಅವಧಿ ಮುಗಿದಿದ್ದು, ಇತರರಿಗೂ ಅವಕಾಶ ನೀಡಲು ಹಿರಿಯ ಶಾಸಕರು ದೆಹಲಿಯ ಹೈಕಮಾಂಡ್ ಭೇಟಿಗೆ ನಿರ್ಧರಿಸಿದ್ದಾರೆ. ಕರ್ನಾಟಕದವರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
- Anil Kalkere
- Updated on: Apr 11, 2026
- 1:22 pm