ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಹಳೆಯ ದಿನ ನೆನಪಿಸಿಕೊಂಡ ಡಿಕೆಶಿ
ವೀರಶೈವ ಧರ್ಮದ ಕುರಿತಾದ ಹಳೆಯ ವಿವಾದವನ್ನು ನೆನಪಿಸಿಕೊಂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಗ ಸೃಷ್ಟಿಯಾದ ಪರಿಸ್ಥಿತಿಯಿಂದ ಸಾರ್ವಜನಿಕರು ಸಿಟ್ಟಾಗಿದ್ದರು. ಆದ್ದರಿಂದ, ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ಹೋಗಿ ಶ್ರೀಗಳ ಕ್ಷಮೆ ಕೇಳಿದ್ದೆವು ಎಂದು ತಿಳಿಸಿದರು. ಟೀಕೆಗಳು ಕ್ಷಣಿಕ, ಆದರೆ ಸಾಧನೆಗಳು ಶಾಶ್ವತ ಎಂದ ಅವರು, ವಿರೋಧಿಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
- Anil Kalkere
- Updated on: Aug 2, 2026
- 11:03 pm
ರಾಜ್ಯದಲ್ಲಿನ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಗೆ ಡಿಸಿಎಂ ಪರಮೇಶ್ವರ್ ಸೂಚನೆ
ವಿಧಾನಸೌಧದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಧಾರ್ಮಿಕ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ಮಾಡಲಾಯಿತು. ರಾಜ್ಯದಲ್ಲಿರುವ 'ಎ' ಮತ್ತು 'ಬಿ' ವರ್ಗದ ದೇವಸ್ಥಾನಗಳಲ್ಲಿ ಸಾಕಷ್ಟು ಹಣವಿದ್ದು, ದೇಗುಲಗಳ ಹೆಸರಿನಲ್ಲೇ ಭೂಮಿ ಖರೀದಿಸುವಂತೆ ಡಿಸಿಎಂ ಸೂಚಿಸಿದ್ದಾರೆ.
- Anil Kalkere
- Updated on: Aug 1, 2026
- 8:47 pm
ನಾಳೆ ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
Karnataka Police Constable Exam: ಆಗಸ್ಟ್ 2ರಂದು ಕರ್ನಾಟಕದಲ್ಲಿ 3,991 ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಯಾವುದೇ ರೀತಿಯ ಅಕ್ರಮದ ಬಗ್ಗೆ ಸುಳಿವಿದ್ದರೆ ನೇರವಾಗಿ ಸಂಪರ್ಕಿಸುವಂತೆ ಕರೆ ನೀಡಿದ್ದಾರೆ.
- Anil Kalkere
- Updated on: Aug 1, 2026
- 6:17 pm
70 ಸಾವಿರಕ ಹುದ್ದೆಗಳ ನೇಮಕಾತಿ: ಸ್ಪರ್ಧಾತ್ಮಕ ಪರೀಕ್ಷೆ- ನೇಮಕಾತಿ ವ್ಯವಸ್ಥೆಯ ಸುಧಾರಣೆಗೆ ಸಮಿತಿ ರಚನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ನೀಡುವಂತಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಕೈಗೊಳ್ಳಲಾಗುವ ಪರೀಕ್ಷೆಗಳ ಸನ್ನದ್ಧತೆಯ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಸಭೆ ನಡೆಸಿದ್ದು, ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ನೀಡಿದ್ದಾರೆ.
- Anil Kalkere
- Updated on: Jul 31, 2026
- 8:35 pm
ಕಾವೇರಿ ಜಲ ವಿವಾದ: CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರ
Cauvery Row: ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ನಮ್ಮಲ್ಲೇ ಶೇ. 66ರಷ್ಟು ಮಳೆ ಕಡಿಮೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.
- Anil Kalkere
- Updated on: Jul 29, 2026
- 6:58 pm
ಕಾವೇರಿ ನೀರು ವಿವಾದ ನಡುವೆಯೂ ತಮಿಳುನಾಡು ಸಿಎಂ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಆಗಸ್ಟ್ 3 ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಒಂದು ಕಡೆ ಸಭೆಗೆ ಸಿದ್ಧತೆಗಳು ಭರದಿಂದ ಸಾಗಿದ್ದರೆ, ಮತ್ತೊಂದೆಡೆ ಕಾವೇರಿ ನೀರು ಬಿಡುಗಡೆ ಆದೇಶ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿವೆ. ಈ ಬೆಳವಣಿಗೆಗಳ ನಡುವೆ ಸಿಎಂ ವಿಜಯ್ ಭೇಟಿ ಕುತೂಹಲ ಮೂಡಿಸಿದೆ.
- Anil Kalkere
- Updated on: Jul 29, 2026
- 12:53 pm
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ, ನಾನು ಹುಟ್ಟುವಾಗಲೇ ಅಪ್ಪ ಶಾಸಕ
: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪುತ್ರಿಯರಾದ ಅನುಸೂಯಾ ಹಾಗೂ ಶೈಲಾಜಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಾಯಿ ಚೆನ್ನಮ್ಮರ ಬಗ್ಗೆ ಕೆಲವೊಂದಿರಷ್ಟು ಸಂಗತಿಳಗನ್ನು ಬಿಚ್ಚಿಟ್ಟಿದ್ದಾರೆ. ಪುತ್ರ ಶೈಲಜಾ ಮಾತನಾಡಿ, ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ. ನಾನು ಹುಟ್ಟುವಾಗಲೇ ಅಪ್ಪ ಶಾಸಕರಾಗಿದ್ದರು. ಲೋಕೋಪಯೋಗಿ ಸಚಿವರಾಗಿದ್ದಾಗ ಸರ್ಕಾರಿ ನಿವಾಸ ಕೊಟ್ಟಿದ್ರು. ಬಾಡಿಗೆ ಮನೆಗೆ ಹೋಗ್ತೀವಿ ಅಂತ ಅಮ್ಮ ಅಪ್ಪ ಹೇಳಿದ್ರು. ಆಗ ಸಮೀಪದಲ್ಲೇ ಬಾಡಿಗೆ ಮನೆ ಹುಡುಕಲು ಹೋದ್ವಿ. ನಮ್ಮನ್ನ ನೋಡೋಕೆ ಹೋದಾಗ ಪ್ರಧಾನಮಂತ್ರಿ ಹೆಂಡ್ತಿ ಬಾಡಿಗೆಗೆ ಬರ್ತಾರಾ ಅಂತ ಪ್ರಶ್ನೆ ಮಾಡಿದ್ರು. ಮನೆ ಕೊಡೋಕೆ ಹಿಂದೆಮುಂದೆ ನೋಡಿದ್ರು. ರಾಜಕೀಯವಾಗಿ ಏನಾದ್ರೂ ಹೇಳ್ತಿದ್ದಾರಾ ಅಂತ ಅನುಮಾನದಿಂದ ನೋಡಿದ್ರು. ಅಗ್ರಿಮೆಂಟ್ ಹಾಕಿಸಿಕೊಳ್ತೀರಾ? ಅದು ಇದು ಅಂತ ಸಾಕಷ್ಟು ಪ್ರಶ್ನೆ ಮಾಡಿದ್ರು ಎಂದು ಹಿಂದಿನ ನೆನಪುಗಳನ್ನ ಮೆಲುಕು ಹಾಕಿದ್ದಾರೆ.
- Anil Kalkere
- Updated on: Jul 24, 2026
- 7:33 pm
ದೆಹಲಿ ಪ್ರಯಾಣಕ್ಕೂ ಮುನ್ನ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ಸಂಪುಟ ವಿಸ್ತರಣೆ ಬಗ್ಗೆ ಸುದೀರ್ಘ ಚರ್ಚೆ
ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆಗಳು ಗರಿಗೆದರಿದ್ದು, ದೆಹಲಿಗೆ ಹೊರಡುವ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಬಿ.ಕೆ. ಹರಿಪ್ರಸಾದ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.
- Anil Kalkere
- Updated on: Jul 15, 2026
- 6:08 pm
ಬಿಡದಿ ಟೌನ್ಶಿಪ್ ವಿವಾದ: ಯೋಜನೆ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ
Bidadi Township Row ಬಿಡದಿ ಟೌನ್ಶಿಪ್ ಯೋಜನೆ ಕೈಬಿಡುವಂತೆ ಆಗ್ರಹಿಸಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ. ಉದ್ದೇಶಿತ ಯೋಜನೆಯ ಜಾಗದಲ್ಲಿರುವವರ ಪೈಕಿ 10,580 ಮಂದಿ ಸಣ್ಣ ರೈತರಾಗಿರುತ್ತಾರೆ. ಶೇ. 82ರಷ್ಟು ಜನ ಒಂದು ಎಕರೆಗಿಂತ ಕಮ್ಮಿ ಹಿಡುವಳಿ ಹೊಂದಿರುವ ಅತಿ ಸಣ್ಣ ರೈತರು ಎಂಬುದನ್ನೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
- Anil Kalkere
- Updated on: Jul 14, 2026
- 2:50 pm
ಆರ್ಎಸ್ಎಸ್ ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್ನಲ್ಲಿ ಬಡ್ತಿ ಸಿಗುತ್ತೆ: ಶಾಸಕ ಯತ್ನಾಳ್ ಆರೋಪ
Basanagouda Patil Yatnal on Congress: ಕಾಂಗ್ರೆಸ್ ಪಕ್ಷದಲ್ಲಿ ಆರ್ಎಸ್ಎಸ್, ಹಿಂದೂ ಧರ್ಮ ಮತ್ತು ದೇಶದ ವಿರುದ್ಧ ಮಾತನಾಡುವವರಿಗೆ ಪ್ರಮೋಷನ್ ನೀಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಆರೋಪಿಸಿದ್ದಾರೆ. ನೇರ ನೇಮಕಾತಿ ಪ್ರಕ್ರಿಯೆಯನ್ನು ಭ್ರಷ್ಟಾಚಾರಕ್ಕೆ ದಾರಿ ಎಂದಿರುವ ಅವರು, ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
- Anil Kalkere
- Updated on: Jul 9, 2026
- 5:13 pm
ಬಿಜೆಪಿ ಸಭೆಯಲ್ಲಿ ಅಡ್ಡಮತದಾನಕ್ಕೆ ಹಿರಿಯರ ಆಕ್ಷೇಪ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
MLC ಚುನಾವಣೆಯ ಅಡ್ಡಮತದಾನದ ಕುರಿತು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಸೂಕ್ತ ತರಬೇತಿ ನೀಡದಿರುವುದು ಅಡ್ಡಮತದಾನಕ್ಕೆ ಕಾರಣವೆಂದು ಹಿರಿಯ ನಾಯಕರು ಆಕ್ಷೇಪಿಸಿದರು. ಶಾಸಕರ ಮೇಲಿನ ವಿಶ್ವಾಸವೇ ತಪ್ಪಾಯ್ತು ಎಂದು ಆರ್. ಅಶೋಕ್ ಹೇಳಿದ್ದಾರೆ. ಇದೇ ವೇಳೆ ಸುಧಾಕರ್-ವಿಶ್ವನಾಥ್ ನಡುವಿನ ಕಿತ್ತಾಟಕ್ಕೆ ಹೈಕಮಾಂಡ್ ಮಧ್ಯಪ್ರವೇಶಿಸಿ ಸಂಧಾನ ನಡೆಸಿದೆ.
- Anil Kalkere
- Updated on: Jul 5, 2026
- 11:13 pm
RSS ತರಾಟೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ: ಸುಧಾಕರ್-SR ವಿಶ್ವನಾಥ್ ಸಂಧಾನ ಸಕ್ಸಸ್
ಶಿಸ್ತಿನ ಸಂಘಟನೆ ಬಿಜೆಪಿ ಎಂಬುದು ಕರ್ನಾಟಕದ ಮಟ್ಟಿಗೆ ಅತಿದೊಡ್ಡ ಜೋಕ್ ಆಗಿ ಕಾಣಿಸುತ್ತಿದೆ. ಹೌದು....ಈಗಾಗಲೇ, ಅಡ್ಡ ಮತದಾನದಿಂದ ಆಂತರಿಕ ಸಂಘರ್ಷ ಏರ್ಪಟ್ಟಿರುವ ಹೊತ್ತಿನಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಕಚ್ಚಾಟಗಳು ನಡೆಯುತ್ತಿವೆ. ಬಿಜೆಪಿಯ ಪ್ರಭಾವಿಗಳು ಬೀದಿ ಕಾಳಗದಲ್ಲಿ ತೊಡಗಿದ್ದಾರೆ. ಈ ಒಳಜಗಳಿಗೆ ಬ್ರೇಕ್ ಹಾಕಲು ಆರ್ಎಸ್ಎಸ್, ಹಿರಿಯ ಬಿಜೆಪಿ ನಾಯಕರು ಮಧ್ಯೆ ಪ್ರವೇಶ ಮಾಡಿದ್ದು, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ S.R.ವಿಶ್ವನಾಥ್ ಸಂಧಾನ ಸಭೆ ಸಕ್ಸಸ್ ಆಗಿದೆ. ಅಷ್ಟಕ್ಕೂ ಸಂಧಾನ ಸಭೆ ಏನೆಲ್ಲಾ ಆಯ್ತು ಎನ್ನುವುದು ಇಲ್ಲಿದೆ.
- Anil Kalkere
- Updated on: Jul 5, 2026
- 9:15 pm