ಕಾರಲ್ಲೂ ಅಧಿಕಾರಿಗಳ ಜೊತೆ ಮೀಟಿಂಗ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಕೃಷ್ಣಭೈರೇಗೌಡ
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಸಮಯ ಉಳಿಸುವ ಸಲುವಾಗಿ ಕಾರಿನಲ್ಲಿ ಪ್ರಯಾಣಿಸುವಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದ ಸಚಿವ ಕೃಷ್ಣ ಭೈರೇಗೌಡರು ಅಧಿಕಾರಿಗಳನ್ನು ತರಾಟೆಗೆ ಪಡೆದಿದ್ದರು.
- Anil Kalkere
- Updated on: Jun 23, 2026
- 12:40 pm
ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ, ಅರ್ಜಿ ಸಲ್ಲಿಸಲು 15 ದಿನ ಅವಕಾಶ
ಮೊನ್ನೇ ಅಂದರೆ ಜೂನ್ 18ರಂದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದಿದ್ದ ಸಂಪುಟ ಸಭೆ ತೀರ್ಮಾನದಂತೆ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಲಾಗಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಪೂರ್ಣಗೊಂಡ ವಾಸದ ಮನೆ ಕಟ್ಟಡಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ, ಇದು ಯಾರ್ಯಾರಿಗೆ ಅನ್ವಯವಾಗಲಿದೆ? ಯಾವ ಅರ್ಜಿ ಸಲ್ಲಿಸಬೇಕು ಎನ್ನುವ ಡಿಟೇಲ್ಸ್ ಇಲ್ಲಿದೆ.
- Anil Kalkere
- Updated on: Jun 22, 2026
- 8:56 pm
ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್: ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರ ಪತ್ತೆಗೆ ಬಿಜೆಪಿ ಹೊಸ ಹಾದಿ ಹಿಡಿದಿದೆ. ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ, ಶಾಸಕರಿಂದ ಆಣೆ ಪ್ರಮಾಣ ಮಾಡಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ ಎಂದು ತಿಳಿಸಿದ್ದಾರೆ.
- Anil Kalkere
- Updated on: Jun 21, 2026
- 9:03 am
ನಿಮಗೆ ಸಚಿವ ಸ್ಥಾನ ಸಿಗುತ್ತಾ ಸರ್ ಎಂದಿದ್ದೇ ತಡ ಸ್ಫೋಟಕ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್
ಮಾಜಿ ಸಚಿವ ಜಮೀರ್ ಅಹ್ಮದ್ ಡಿ.ಕೆ. ಸುರೇಶ್ ಅವರೊಂದಿಗಿನ ಭೇಟಿಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ಸೌಹಾರ್ದಯುತ ಭೇಟಿಯಾಗಿದ್ದು, ರಾಜಕೀಯ ಅಥವಾ ಸಚಿವ ಸ್ಥಾನದ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ. ತಮ್ಮನ್ನು ಮಂತ್ರಿಯನ್ನಾಗಿ ಮಾಡಬೇಕೆಂದು ಅಭಿಮಾನಿಗಳು ಕೇಳುವುದು ಸಹಜ. ಆದರೆ, ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಜಮೀರ್ ಹೇಳಿದ್ದಾರೆ.
- Anil Kalkere
- Updated on: Jun 17, 2026
- 2:19 pm
ಪರಿಷತ್ ಚುನಾವಣೆ: ಜೆಡಿಎಸ್ನಿಂದ ಕಾಂಗ್ರೆಸ್ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್ಡಿಕೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಶಾಸಕರನ್ನು ಜೆಡಿಎಸ್ ಸೆಳೆಯುತ್ತಿದೆ ಎಂಬ ಆರೋಪವನ್ನು ಹೆಚ್.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ. ಜೆಡಿಎಸ್ ಸಣ್ಣ ಪಕ್ಷವಾಗಿದ್ದು, ಕಾಂಗ್ರೆಸ್ನಂತೆ ಹಣ, ಜನಬಲ ಹೊಂದಿಲ್ಲ. ತಮ್ಮ ಪಕ್ಷದ ಮತಗಳು ಚದುರಿಹೋಗಬಾರದು ಎಂಬ ಕಾರಣಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಿದ್ದು, ಆತ್ಮಸಾಕ್ಷಿ ಮತ ಹಾಗೂ ಬಿಜೆಪಿ ಬೆಂಬಲ ಯಾಚಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
- Anil Kalkere
- Updated on: Jun 17, 2026
- 11:15 am
ವಿಧಾನಸೌಧದಲ್ಲೇ ಅಧಿಕಾರಿ, ಸಿಬ್ಬಂದಿ ಕಳ್ಳಾಟ: ಸಮಯ ಪಾಲನೆ ಉಲ್ಲಂಘನೆ; ಸಿಎಂ ಆದೇಶಕ್ಕೂ ಡೋಂಟ್ ಕೇರ್
ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯಪಾಲನೆ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು ಎಂದು ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತಾಗಿದೆ. ಟಿವಿ9 ರಿಯಾಲಿಟಿ ಚೆಕ್ನಲ್ಲಿ ಇದು ಬಹಿರಂಗಗೊಂಡಿದ್ದು, ಅಧಿಕಾರಿಗಳು ತಡವಾಗಿ ಬರುತ್ತಿರುವುದು ಕಂಡುಬಂದಿದೆ.
- Anil Kalkere
- Updated on: Jun 15, 2026
- 8:22 pm
ಮೊದಲ ಭಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್: ಮೆಟ್ರೋದಲ್ಲಿ ಸಂಚರಿಸಲು ಸಿಎಂ ನಿರ್ಧಾರ
ಸಿಎಂ ಡಿಕೆ ಶಿವಕುಮಾರ್ ಇಂದು ಕನಕಪುರ ಮತ್ತು ಹಾರೋಹಳ್ಳಿಯಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿ.ಎಂ. ಆದ ಬಳಿಕ ಸ್ವಕ್ಷೇತ್ರಕ್ಕೆ ಇದು ಅವರು ಮೊದಲ ಭಾರಿಗೆ ಭೇಟಿ ನೀಡುತ್ತಿದ್ದಾರೆ. ಇನ್ನು ಜೀರೋ ಟ್ರಾಫಿಕ್ನಿಂದ ವಾಹನ ಸವಾರರಿಗೆ ತೊಂದರೆ ಹಿನ್ನೆಲೆ ಮೆಟ್ರೋದಲ್ಲಿ ಸಂಚರಿಸಲಿದ್ದಾರೆ.
- Anil Kalkere
- Updated on: Jun 7, 2026
- 9:20 am
ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ
ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ನಿನ್ನೆ ಬೆಳಗ್ಗೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಇದೀಗ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ. ಸಭೆ ಮೇಲೆ ಸಭೆ, ಮನವೊಲಿಸುವ ಪ್ರಯತ್ನದ ಬಳಿಕ ಇದೀಗ ಈ ನಿರ್ಧಾರಕೈಗೊಳ್ಳಲಾಗಿದೆ. ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿರುವ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
- Anil Kalkere
- Updated on: Jun 6, 2026
- 5:15 pm
ಡಿಕೆ ಶಿವಕುಮಾರ್ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಡ್ಲೆಕಾಯಿ ಅಂದರೆ ಅಚ್ಚುಮೆಚ್ಚು. ಅವರ ನಿವಾಸದ ಬಳಿ ಸುಮಾರು 20-25 ವರ್ಷಗಳಿಂದ ಕಡ್ಲೆಕಾಯಿ ಮಾರುವ ವ್ಯಾಪಾರಿಯೊಬ್ಬರು ಡಿಕೆಶಿಗೆ ನಿರಂತರವಾಗಿ ಕಡ್ಲೆಕಾಯಿ ಪೂರೈಸುತ್ತಿದ್ದಾರೆ. ಈಗ ಸಿಎಂ ಆದರೂ ಅವರಿಗೆ ಕಡ್ಲೆಕಾಯಿ ತಲುಪಿಸುವೆ ಎಂದು ವ್ಯಾಪಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಡವರ ಬಾದಾಮಿ ಎಂದೇ ಕರೆಯಲ್ಪಡುವ ಕಡ್ಲೆಕಾಯಿಯೊಂದಿಗೆ ಡಿ.ಕೆ. ಶಿವಕುಮಾರ್ ಅವರ ಬಾಂಧವ್ಯ ಅನನ್ಯ.
- Anil Kalkere
- Updated on: Jun 3, 2026
- 2:54 pm
ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ
ಕರ್ನಾಟಕ ಯುವ ಕಾಂಗ್ರೆಸ್ನಲ್ಲಿ ರಾಜಕೀಯ ಬೆಳವಣಿಗೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳಿಗೆ ಕೊಕ್ ಕೊಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಎರಡು ಗುಂಪುಗಳ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.ಇದರ ಮಧ್ಯೆ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
- Anil Kalkere
- Updated on: May 18, 2026
- 3:44 pm
ಗದಗಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಕೇಸ್: 664 ಗ್ರಾಂ ಆಂಟಿಕ್ ಚಿನ್ನದ ಮೌಲ್ಯ 8 ಕೋಟಿ ರೂ
ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿದ್ದ ಪ್ರಾಚೀನ ಚಿನ್ನಾಭರಣಗಳ ನಿಧಿ ರಾಜ್ಯಾದ್ಯಂತ ಕುತೂಹಲ ಕೆರಳಿಸಿತ್ತು. ಒಟ್ಟು 664 ಗ್ರಾಂ ತೂಕದ ಈ ಚಿನ್ನಾಭರಣಗಳು ಸುಮಾರು 600 ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಲಾಗಿದೆ. ಇವುಗಳ ಪ್ರಾಚೀನ ಮೌಲ್ಯದಿಂದಾಗಿ, ಈ ನಿಧಿಯ ಬೆಲೆ 8 ಕೋಟಿ ರೂಪಾಯಿ ಎಂದು ನಿರ್ಧರಿಸಲಾಗಿದೆ.
- Anil Kalkere
- Updated on: May 16, 2026
- 6:38 pm
6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್, ಬೆಂಗಳೂರಿಗರಿಗೆ ಬಂಪರ್ ಗಿಫ್ಟ್!
ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಅದರ ಜತೆಗೆ ಇದೀಗ ಬೆಂಗಳೂರಿಗೆ ಸೀಮಿತವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಇಂದು 13) 6ನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಏನದು 6ನೇ ಗ್ಯಾರಂಟಿ ಎನ್ನುವ ಡಿಟೇಲ್ಸ್ ಇಲ್ಲಿದೆ.
- Anil Kalkere
- Updated on: May 13, 2026
- 3:16 pm