AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್​ ಆರ್​.

ಹಿರಿಯ ವರದಿಗಾರ - TV9 Kannada

arunkumar.ramesh@tv9.com

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
ಬೆಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಣ್ಣ ಬಣ್ಣದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಹೇಗಿವೆ ನೋಡಿ!

ಬೆಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಣ್ಣ ಬಣ್ಣದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಹೇಗಿವೆ ನೋಡಿ!

ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿದ್ದು, ಮಾರುಕಟ್ಟೆಗೆ ವಿವಿಧ ವಿನ್ಯಾಸದ ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳು ಲಗ್ಗೆ ಇಟ್ಟಿವೆ. ಇನ್ನೊಂದೆಡೆ ಜಲಮಾಲಿನ್ಯ ತಡೆಯಲು ಮಾಲಿನ್ಯ ನಿಯಂತ್ರಣ ಮಂಡಳಿಯು 1,200ಕ್ಕೂ ಹೆಚ್ಚು ಪಿಒಪಿ ಗಣೇಶ ಮೂರ್ತಿಗಳನ್ನು ಜಪ್ತಿ ಮಾಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಣ್ಣಿನ ಗಣಪತಿಯನ್ನೇ ಪೂಜಿಸುವಂತೆ ಸಚಿವ ರಾಮಲಿಂಗರೆಡ್ಡಿ ಕರೆ ನೀಡಿದ್ದಾರೆ.

ಮಳೆಗಾಲದಲ್ಲೇ ಕರ್ನಾಟಕದಲ್ಲಿ ಸುಡು ಬಿಸಿಲು: ಬೆಂಗಳೂರಿನಲ್ಲಿ ತಾಪಮಾನ ಏರಿಕೆ, ಸೆಪ್ಟೆಂಬರ್​ ಉಷ್ಣಾಂಶ ಏರಿಕೆ

ಮಳೆಗಾಲದಲ್ಲೇ ಕರ್ನಾಟಕದಲ್ಲಿ ಸುಡು ಬಿಸಿಲು: ಬೆಂಗಳೂರಿನಲ್ಲಿ ತಾಪಮಾನ ಏರಿಕೆ, ಸೆಪ್ಟೆಂಬರ್​ ಉಷ್ಣಾಂಶ ಏರಿಕೆ

ಮಳೆಗಾಲದ ನಡುವೆಯೇ ಬೆಂಗಳೂರಿನಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಕಳೆದ ಒಂದು ವಾರದಿಂದ 31.7 ಡಿಗ್ರಿ ಸೆಲ್ಶಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಎಲ್ ನಿನೊ ಪರಿಣಾಮ, ಮಳೆ ಮತ್ತು ಮೋಡಗಳ ಕೊರತೆಯಿಂದ ತಾಪಮಾನ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲೂ ಬಿಸಿಲು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್​ ಪಾಟೀಲ್ ತಿಳಿಸಿದ್ದಾರೆ.

8,000 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಮುಂದಾದ ಸರ್ಕಾರ: ಹಿಂದಿನ ಲೆಕ್ಕ ಕೇಳಿದ ತೇಜಸ್ವಿ ಸೂರ್ಯ

8,000 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಮುಂದಾದ ಸರ್ಕಾರ: ಹಿಂದಿನ ಲೆಕ್ಕ ಕೇಳಿದ ತೇಜಸ್ವಿ ಸೂರ್ಯ

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 5500 ಕೋಟಿ ರೂ ಖರ್ಚು ಮಾಡಿದರೂ ರಸ್ತೆ ಪರಿಸ್ಥಿತಿ ಬದಲಾಗಿಲ್ಲ. 8,000 ಕೋಟಿ ರೂ ವೆಚ್ಚದಲ್ಲಿ ಇದೀಗ ಮತ್ತೆ ರಸ್ತೆ ಗುಂಡಿ ಮುಚ್ಚಲು ಹೊರಟಿದ್ದಾರೆ. ಕಳೆದ ಬಾರಿ ಆಗಿರುವ ಖರ್ಚಿನ ಬಗ್ಗೆ ಮಾಹಿತಿನೇ ಇಲ್ಲ. ಇದರ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸಂಸದ ತೇಜಸ್ವಿ ಸೂರ್ಯ ಸಚಿವ ಕೃಷ್ಣಭೈರೇಗೌಡಗೆ ಮನವಿ ಮಾಡಿದ್ದಾರೆ.

ಕೆ.ಆರ್. ಮಾರುಕಟ್ಟೆಗೆ ಎಂಟ್ರಿ ಫೀಸ್: ಗ್ರಾಹಕರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆ!

ಕೆ.ಆರ್. ಮಾರುಕಟ್ಟೆಗೆ ಎಂಟ್ರಿ ಫೀಸ್: ಗ್ರಾಹಕರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆ!

ಬೆಂಗಳೂರಿನ ಕೆ.ಆರ್. ಮಾರುಕಟ್ಟೆಗೆ ಪ್ರವೇಶಿಸುವ ಸರಕು ವಾಹನಗಳು ಹಾಗೂ ಪ್ರತಿಯೊಂದು ತರಕಾರಿ ಮೂಟೆಗಳ ಮೇಲೆ ಪ್ರತ್ಯೇಕ ಪ್ರವೇಶ ಶುಲ್ಕ ವಿಧಿಸಲು ನಗರ ಪಾಲಿಕೆ ಮುಂದಾಗಿದೆ. ವ್ಯಾಪಾರಿಗಳು ಮತ್ತು ಸಾಗಣೆದಾರರ ಮೇಲಾಗುವ ಈ ಹೆಚ್ಚುವರಿ ವೆಚ್ಚದಿಂದಾಗಿ ದಿನನಿತ್ಯದ ತರಕಾರಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಅಂತಿಮವಾಗಿ ಸಾಮಾನ್ಯ ಗ್ರಾಹಕರಿಗೆ ಭಾರೀ ಆರ್ಥಿಕ ಹೊರೆಯಾಗುವ ಆತಂಕ ಎದುರಾಗಿದೆ.

ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಧ್ಯರಾತ್ರಿ 12ರ ವರೆಗೆ ಭಕ್ತರಿಗೆ ದರ್ಶನ ಅವಕಾಶ

ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಧ್ಯರಾತ್ರಿ 12ರ ವರೆಗೆ ಭಕ್ತರಿಗೆ ದರ್ಶನ ಅವಕಾಶ

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ಪೂಜೆಗಳು, ಅಲಂಕಾರಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತರ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹಲವು ವರ್ಷಗಳಿಂದ ಪೊಲೀಸ್ ಠಾಣಾ ಆವರಣಗಳಲ್ಲಿ ನಿಂತಿರುವ 8500 ಜಪ್ತಿ ವಾಹನಗಳು ಶೀಘ್ರವೇ ಸ್ಥಳಾಂತರ

ಹಲವು ವರ್ಷಗಳಿಂದ ಪೊಲೀಸ್ ಠಾಣಾ ಆವರಣಗಳಲ್ಲಿ ನಿಂತಿರುವ 8500 ಜಪ್ತಿ ವಾಹನಗಳು ಶೀಘ್ರವೇ ಸ್ಥಳಾಂತರ

ಬೆಂಗಳೂರಿನ ಪೊಲೀಸ್ ಠಾಣೆಗಳು, ರಸ್ತೆ ಹಾಗೂ ಫುಟ್‌ಪಾತ್‌ಗಳಲ್ಲಿ ಹಲವು ವರ್ಷಗಳಿಂದ ನಿಂತಿದ್ದ 8,500 ಜಪ್ತಿ ವಾಹನಗಳ ಸ್ಥಳಾಂತರಕ್ಕೆ ಕಂದಾಯ ಇಲಾಖೆಯ ಜಾಗ ಗುರುತಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಯಾವ ಠಾಣೆಯ ವಾಹನವನ್ನು ಯಾವ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬುದನ್ನು ಪೊಲೀಸ್ ಇಲಾಖೆ ನಿರ್ಧರಿಸಲಿದೆ. ಮುಂದಿನ 15–20 ದಿನಗಳಲ್ಲಿ 8,500 ಜಪ್ತಿ ವಾಹನಗಳ ಸ್ಥಳಾಂತರ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ.

ಪರ-ವಿರೋಧ ನಡುವೆ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಮುಂದುವರಿಕೆ: ಈವರೆಗೆ ಎಷ್ಟು ಕ್ಲಿಯರ್?

ಪರ-ವಿರೋಧ ನಡುವೆ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಮುಂದುವರಿಕೆ: ಈವರೆಗೆ ಎಷ್ಟು ಕ್ಲಿಯರ್?

ಕೃಷ್ಣಬೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗುತ್ತಿದ್ದಂತೆಯೇ ಮೊದಲಿಗೆ ಅಕ್ರಮ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಕ್ಕೆ ಕೈಹಾಕಿದರು. ಸಾರ್ವಜನಿಕರ ಸುಗಮ ಓಡಾಟಕ್ಕೆ ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸುವ ಗುರಿಯೊಂದಿಗೆ ಆರಂಭವಾದ ಈ ಕಾರ್ಯಾಚರಣೆಗೆ ಪರ-ವಿರೋಧಗಳು ವ್ಯಕ್ತವಾಗಿದ್ದು, ಬೀದಿಬದಿ ವ್ಯಾಪಾರಿಗಳು ತೀವ್ರ ಆಕ್ರೋಶಗೊಂಡಿದ್ದಾರೆ. ಆದರೆ, ಈ ಎಲ್ಲಾ ವಿರೋಧಗಳ ನಡುವೆಯೂ ಕೃಷ್ಣಬೈರೇಗೌಡ ಅವರು ಹಲವೆಡೆ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಿ ಕೊಂಚ ಯಶಸ್ಸು ಕಂಡಿದ್ದಾರೆ.

4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್: ಫಲಾನುಭವಿಗಳಿಗೆ ಎಚ್ಚರಿಕೆ

4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್: ಫಲಾನುಭವಿಗಳಿಗೆ ಎಚ್ಚರಿಕೆ

ಬೆಂಗಳೂರಿನ ಖಾಲಿ ನಿವೇಶನಗಳ ಸ್ವಚ್ಛತೆ ಮಾಲೀಕರ ಜವಾಬ್ದಾರಿಯಾಗಿದೆ. ಜಿಬಿಎ ಕಾಯಿದೆ ಅನ್ವಯ, ನಿವೇಶನಗಳನ್ನು ಸ್ವಚ್ಛವಾಗಿಡದಿದ್ದರೆ ಸರ್ಕಾರದಿಂದ ಸ್ವಚ್ಛಗೊಳಿಸಿ ಶುಲ್ಕ ವಿಧಿಸಲಾಗುವುದು. ಬಿಡಿಎ ಸೈಟ್‌ಗಳನ್ನು ಐದು ವರ್ಷದೊಳಗೆ ನಿರ್ಮಿಸದಿದ್ದರೆ ಸರ್ಕಾರ ವಾಪಸ್ ಪಡೆಯುವ ಅಧಿಕಾರ ಹೊಂದಿದೆ ಎಂದು ಸಚಿವ ಕೃಷ್ಣಬೈರೇಗೌಡರು ಸ್ಪಷ್ಟಪಡಿಸಿದ್ದಾರೆ. ನಗರದ ಸುಧಾರಣೆಗಾಗಿ ಸಹಕಾರಕ್ಕೆ ಮನವಿ ಮಾಡಿದ್ದಾರೆ.

ಖುದ್ದು ಖಾಲಿ ನಿವೇಶನದ ಗಿಡಗಂಟೆ ಸ್ವಚ್ಛಗೊಳಿಸಿದ ಸಚಿವ ಕೃಷ್ಣಭೈರೇಗೌಡ: ಖಾಲಿ ಸೈಟ್ ಸ್ವಚ್ಛಗೊಳಿಸುವ ಗಡುವು ಇಂದಿಗೆ ಮುಕ್ತಾಯ

ಖುದ್ದು ಖಾಲಿ ನಿವೇಶನದ ಗಿಡಗಂಟೆ ಸ್ವಚ್ಛಗೊಳಿಸಿದ ಸಚಿವ ಕೃಷ್ಣಭೈರೇಗೌಡ: ಖಾಲಿ ಸೈಟ್ ಸ್ವಚ್ಛಗೊಳಿಸುವ ಗಡುವು ಇಂದಿಗೆ ಮುಕ್ತಾಯ

ಬೆಂಗಳೂರಿನ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟೆ ಹಾಗೂ ತ್ಯಾಜ್ಯ ತೆರವುಗೊಳಿಸಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ಸ್ವಚ್ಛತಾ ಅಭಿಯಾನ ಆರಂಭಿಸಿದೆ. ದೊಮ್ಮಲೂರು ಲೇಔಟ್‌ನಲ್ಲಿ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಮಾಲೀಕರು ಸ್ವಚ್ಛಗೊಳಿಸದ ನಿವೇಶನಗಳನ್ನು ಜಿಬಿಎ ಸಿಬ್ಬಂದಿಯೇ ಸ್ವಚ್ಛಗೊಳಿಸಿ ವೆಚ್ಚವನ್ನು ಮಾಲೀಕರಿಂದಲೇ ವಸೂಲಿ ಮಾಡಲಿದೆ.

B Khata to A Khata Conversion: ಬಿ ಖಾತೆ ಟು ಎ ಖಾತೆ ಗಡುವು ಅಂತ್ಯ: ಲಕ್ಷಾಂತರ ಆಸ್ತಿ ಮಾಲೀಕರು ‘ಎ-ಖಾತೆ’ ಭಾಗ್ಯದಿಂದ ವಂಚಿತ!

B Khata to A Khata Conversion: ಬಿ ಖಾತೆ ಟು ಎ ಖಾತೆ ಗಡುವು ಅಂತ್ಯ: ಲಕ್ಷಾಂತರ ಆಸ್ತಿ ಮಾಲೀಕರು ‘ಎ-ಖಾತೆ’ ಭಾಗ್ಯದಿಂದ ವಂಚಿತ!

ಬೆಂಗಳೂರಿನಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಲು ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಜಿಬಿಎ ವೆಬ್‌ಸೈಟ್‌ ಸರ್ವರ್ ಸಮಸ್ಯೆ ಹಾಗೂ ಅಧಿಕಾರಿಗಳ ವಿಳಂಬ ನೀತಿಯಿಂದ 7.50 ಲಕ್ಷ ಆಸ್ತಿಗಳ ಪೈಕಿ ಕೇವಲ 20,000 ಮನೆಗಳಿಗೆ ಮಾತ್ರ ಎ-ಖಾತೆ ಲಭಿಸಿದೆ. ಇನ್ನು ಮುಂದೆ ಎ-ಖಾತೆ ಪಡೆಯಲು ಪೂರ್ಣ ಶುಲ್ಕ ಪಾವತಿಸಬೇಕಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಗಡುವು ವಿಸ್ತರಣೆಗೆ ಆಗ್ರಹಿಸಿದ್ದಾರೆ.

SIR ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

SIR ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

SIR process Election Commission: ರಾಜ್ಯದಲ್ಲಿ ಜೂನ್ 30ರಿಂದ ಆಗಸ್ಟ್ 17ರವರೆಗೆ ನಡೆದ ಎಸ್ಐಆರ್ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಒಟ್ಟು 4.46 ಕೋಟಿ ಮತದಾರರ ವಿವರ ಲಭ್ಯವಾಗಿದೆ. ಸೆಪ್ಟೆಂಬರ್ 23ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 27ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ.

ಹಳ್ಳ ಹಿಡಿದ ಬಿ-ಖಾತೆಯಿಂದ ಎ-ಖಾತೆ ನೀಡುವ ಯೋಜನೆ: ಆಗಿದ್ದೇನು?

ಹಳ್ಳ ಹಿಡಿದ ಬಿ-ಖಾತೆಯಿಂದ ಎ-ಖಾತೆ ನೀಡುವ ಯೋಜನೆ: ಆಗಿದ್ದೇನು?

ರಾಜ್ಯ ಸರ್ಕಾರದ 6ನೇ ಗ್ಯಾರಂಟಿ 'ಭೂ ಗ್ಯಾರಂಟಿ' ಅಡಿಯಲ್ಲಿ ಆರಂಭಿಸಲಾದ ಮಹತ್ವಾಕಾಂಕ್ಷೆಯ 'ನನ್ನ ಖಾತಾ ನನ್ನ ಹಕ್ಕು' ಯೋಜನೆ ಇದೀಗ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ತಾಂತ್ರಿಕ ಎಡವಟ್ಟುಗಳ ಸುಳಿಗೆ ಸಿಲುಕಿದೆ. ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳಲು GBA ನೀಡಿದ್ದ ಗಡುವು ಮುಕ್ತಾಯ ಹಂತಕ್ಕೆ ಬಂದಿದ್ದು, ಲಕ್ಷಾಂತರ ಆಸ್ತಿ ಮಾಲೀಕರು ಎ-ಖಾತೆ ಭಾಗ್ಯದಿಂದ ವಂಚಿತರಾಗುವ ಆತಂಕ ಎದುರಾಗಿದೆ.