AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್​ ಪೂಜಾರಿ, ಮಂಗಳೂರು

ಅಶೋಕ್​ ಪೂಜಾರಿ, ಮಂಗಳೂರು

Author - TV9 Kannada

ashok.monappapoojary@tv9.com

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು!

ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು!

ಕರಾವಳಿಯಲ್ಲಿ ತಾಪಮಾನ ಏರಿಕೆಯಿಂದಾಗಿ ಮೀನುಗಳು ಸಮುದ್ರದ ಆಳಕ್ಕೆ ಸರಿದಿದ್ದು, ಮಂಗಳೂರಿನಲ್ಲಿ ಮತ್ಸ್ಯಕ್ಷಾಮ ಎದುರಾಗಿದೆ. ಭಾರಿ ನಷ್ಟದ ಭೀತಿಯಿಂದಾಗಿ ಮೀನುಗಾರರು ಸಾವಿರಾರು ಬೋಟ್‌ಗಳನ್ನು ಸಮುದ್ರಕ್ಕೆ ಇಳಿಸದೆ ಬಂದರಿನಲ್ಲೇ ಲಂಗರು ಹಾಕಿದ್ದಾರೆ. ಇದರಿಂದ ಮತ್ಸ್ಯೋದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕೋಟಿ ಕೋಟಿ ವಹಿವಾಟು ನಡೆಸುವ ಮತ್ಸ್ಯೋದ್ಯಮ ಈಗ ಭಾರಿ ನಷ್ಟಕ್ಕೆ ಸಿಲುಕಿದೆ.

  • Ashok
  • Updated on: Apr 16, 2026
  • 7:11 am
ಮಂಗಳೂರು ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ?

ಮಂಗಳೂರು ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ?

ಮೂಡುಶೆಡ್ಡೆಯ ಆಶಿಕ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರೀತಿ ನಿರಾಕರಿಸಿ, ಅವಮಾನಿಸಿದ್ದ ಪ್ರೇಯಸಿಯ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ. ಆಶಿಕ್ ಪ್ರೀತಿಸುತ್ತಿದ್ದ ಯುವತಿ, ಆಕೆಯ ತಾಯಿ ಸೇರಿ ಮೂವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ಯಾಪ್​ ಚಾಟ್ಸ್, ವಿಡಿಯೋ ಕಾಲ್ ಸಾಕ್ಷ್ಯಗಳಾಗಿವೆ ಎನ್ನಲಾಗಿದೆ.

  • Ashok
  • Updated on: Apr 12, 2026
  • 12:18 pm
ತಾಯಿ ಸತ್ತ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ ಈಗ ಟಾಪರ್! ಸಾಧನೆಗೆ ಅಮ್ಮನ ಮಾತುಗಳೇ ಸ್ಪೂರ್ತಿಯಾಗಿದ್ದು ಹೇಗೆ?

ತಾಯಿ ಸತ್ತ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ ಈಗ ಟಾಪರ್! ಸಾಧನೆಗೆ ಅಮ್ಮನ ಮಾತುಗಳೇ ಸ್ಪೂರ್ತಿಯಾಗಿದ್ದು ಹೇಗೆ?

ದ್ವಿತೀಯ ಪಿಯುಸಿ ಪರೀಕ್ಷೆಯ ಸಮಯದಲ್ಲೇ ತಾಯಿಯನ್ನು ಕಳೆದುಕೊಂಡ ದಿಶಾ, ಧೃತಿಗೆಡದೆ ಉಳಿದ ಪರೀಕ್ಷೆಗಳನ್ನು ಬರೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾಳೆ. ಆಕೆ ಎದೆಗುಂದದಂತೆ ಯಾವಾಗಲೂ ಧೈರ್ಯ ಹೇಳುತ್ತಿದ್ದ ತಾಯಿಯ ಮಾತುಗಳೆ ತನ್ನನ್ನು ಈ ಸಾಧನೆ ಮಾಡುವಂತೆ ಪ್ರೇರೇಪಿಸಿತು ಎಂದು ದಿಶಾ ಹೇಳಿದ್ದಾಳೆ. ಸಿಎ ಮಾಡಬೇಕೆಂದ ಕನಸು ಹೊತ್ತಿರುವ ಈಕೆ ತಾಯಿಯನ್ನು ಕಳೆದುಕೊಂಡ ದುಃಖದಲ್ಲೂ ಸಾಧನೆ ಮಾಡಿರುವುದು ವಿದ್ಯಾರ್ಥಿಗಳಿಗೂ ಮಾದರಿಯಾಗಿದೆ.

  • Ashok
  • Updated on: Apr 10, 2026
  • 11:30 am
ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ ಮಂಡಲಿ ಶುಭಾಶಯಗಳನ್ನ ತಿಳಿಸಿದೆ.

  • Ashok
  • Updated on: Apr 9, 2026
  • 11:13 pm
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರು ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪ್

ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರು ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪ್

2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಇಂದು (ಏಪ್ರಿಲ್ 09) ಆನ್​​ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್​​ಲೈನ್​​​ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು...ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.

  • Ashok
  • Updated on: Apr 9, 2026
  • 4:24 pm
ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ

ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ

ಮಂಗಳೂರಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ದಾಟುತ್ತಿದ್ದು, ಆರೋಗ್ಯ ಇಲಾಖೆ ಶಾಖಾಘಾತದ ಎಚ್ಚರಿಕೆ ನೀಡಿದೆ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿಗೆ ಬರದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದ್ದು, ಹತ್ತಿ ಬಟ್ಟೆ ಹಾಗೂ ಹೆಚ್ಚಿನ ನೀರಿನ ಬಳಕೆಗೆ ವೈದ್ಯರು ಸಲಹೆ ನೀಡಿದ್ದಾರೆ. ಬಿಸಿಲಿನ ತಾಪ ಮೀನುಗಾರಿಕೆ ಮೇಲೂ ಪ್ರಭಾವ ಬೀರಿದೆ.

  • Ashok
  • Updated on: Apr 3, 2026
  • 12:01 pm
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಬಂಟ್ವಾಳದ ಸಜಿಪಮುನ್ನೂರು ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದ ಬೋಳಿಯಾರು ಮೂಲದ ಭಾರತಿ ಎಂಬ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಹತ್ತಾರು ಅಡಿ ದೂರಕ್ಕೆ ಎತ್ತಿ ಎಸೆಯಲ್ಪಟ್ಟಿದ್ದಾರೆ. ಮಗಳ ಜೊತೆ ದೈವದ ಕಟ್ಟೆಗೆ ಕಾಣಿಕೆ ಸಲ್ಲಿಸಲು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ.

  • Ashok
  • Updated on: Apr 1, 2026
  • 2:49 pm
ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ತೆರೆದುಕೊಂಡು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಪುತ್ತೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಅಕ್ಕ-ತಂಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವೈರಲ್ ಆಗುತ್ತಿದೆ.

  • Ashok
  • Updated on: Mar 31, 2026
  • 1:32 pm
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಉಜಿರೆಯ ಜಾತ್ರೆಯಲ್ಲಿ ಹಿಂದೂ ಸ್ನೇಹಿತೆಯರೊಂದಿಗೆ ಬಂದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ, ಅಪಹರಿಸಿರುವ ಘಟನೆ ನಡೆದಿದೆ. "ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?" ಎಂದು ಪ್ರಶ್ನಿಸಿ ಬಾಲಕನಿಗೆ ಹಲ್ಲೆ ಮಾಡಿ, ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಸಂತ್ರಸ್ತನ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಸಿದ್ದಾರೆ.

  • Ashok
  • Updated on: Mar 19, 2026
  • 12:53 pm
ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಅನ್ಯ ಧರ್ಮದ ವ್ಯಕ್ತಿಯ ಮೂಲಕ‌ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ತುಳುನಾಡಿನಾದ್ಯಂತ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ದೈವಸ್ಥಾನದ ಆಡಳಿತ ಮಂಡಳಿಗಳು, ದೈವರಾಧಕರು ಈ ವಿಚಾರ ಕೇಳಿ ಗೊಂದಲಕ್ಕೆ ಒಳಗಾಗಿದ್ದಾರೆ. ಆದ್ರೆ ಇದೀಗ ಆರೋಪ ಹೊತ್ತ ದೈವ ನರ್ತಕರು ಈ ಆರೋಪಗಳನ್ನು ತಳ್ಳಿ ಹಾಕಿದ್ದು, ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದಾರೆ.ಹಾಗಾದ್ರೆ ಏನಿದು ವಿವಾದ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್.

  • Ashok
  • Updated on: Mar 18, 2026
  • 6:54 pm
ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ನಿತ್ಯ ಭೇಟಿ ನೀಡುವ ಲಕ್ಷಾಂತರ ಭಕ್ತರು ಪರದಾಡುವಂತಾಗಿದೆ. ಇನ್ನು ಹದಿನಾರು ವರ್ಷ ಕಳೆದರೂ ಮಾಸ್ಟರ್ ಪ್ಲ್ಯಾನ್​​ ಪೂರ್ಣಗೊಂಡಿಲ್ಲ. ಹೀಗಾಗಿ ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ ಎನ್ನುವಂತಾಗಿದೆ.

  • Ashok
  • Updated on: Mar 17, 2026
  • 9:40 pm
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

  • Ashok
  • Updated on: Mar 17, 2026
  • 9:41 pm