AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್​ ಪೂಜಾರಿ, ಮಂಗಳೂರು

ಅಶೋಕ್​ ಪೂಜಾರಿ, ಮಂಗಳೂರು

Author - TV9 Kannada

ashok.monappapoojary@tv9.com

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ದೇವಸ್ಥಾನ ಮುಂಭಾಗ ದಫ್ ಪ್ರದರ್ಶನಕ್ಕೆ ಹಿಂದೂ ಸಂಘಟನೆಗಳು ವಿರೋಧ: ಮಸೀದಿ ಮುಂದೆ ಹನುಮಾನ್ ಚಾಲೀಸ್ ಪಠಣ ಎಚ್ಚರಿಕೆ

ದೇವಸ್ಥಾನ ಮುಂಭಾಗ ದಫ್ ಪ್ರದರ್ಶನಕ್ಕೆ ಹಿಂದೂ ಸಂಘಟನೆಗಳು ವಿರೋಧ: ಮಸೀದಿ ಮುಂದೆ ಹನುಮಾನ್ ಚಾಲೀಸ್ ಪಠಣ ಎಚ್ಚರಿಕೆ

ಕೆವಿಜಿ ಸುಳ್ಯ ಹಬ್ಬ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ವಿಹೆಚ್​ಪಿ ಮತ್ತು ಬಜರಂಗದಳದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರು ಕೊನೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ನಡೆಯಬೇಕಿದ್ದ ದಫ್ ಪ್ರದರ್ಶನ ಕಾರ್ಯಕ್ರಮವನ್ನು ಇದೀಗ ರದ್ದು ಗೊಳಿಸಿದ್ದಾರೆ.

  • Ashok
  • Updated on: Dec 10, 2025
  • 10:30 pm
ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಧರ್ಮಸ್ಥಳ 'ಬುರುಡೆ' ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಸ್​ಐಟಿ ತನಿಖೆಯಲ್ಲಿ  ಸತ್ಯ ಹೊರಬಂದಿದ್ದು, ಎಲ್ಲ ಮಾಹಿತಿಯನ್ನು ತನಿಖಾ ವರದಿ ಬಟಾಬಯಲು ಮಾಡಿದೆ. ಆ ಮೂಲಕ ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಶವ ಹೂಳಲಾಗಿತ್ತು ಎಂಬ ಆರೋಪಕ್ಕೆ ಬಹುತೇಕ ತೆರೆ ಬಿದ್ದಿದ್ದು, ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿದೆ.

  • Ashok
  • Updated on: Dec 10, 2025
  • 12:06 pm
20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ

20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ

‘ಕಾಂತಾರ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

  • Ashok
  • Updated on: Dec 9, 2025
  • 8:26 pm
‘ಕಾಂತಾರದಿಂದ ದೈವಗಳು ಬೀದಿಗೆ ಬಂದಿವೆ’: ದೈವಾರಾಧಕ ತಮ್ಮಣ್ಣ ಶೆಟ್ಟಿ ಅಸಮಾಧಾನ

‘ಕಾಂತಾರದಿಂದ ದೈವಗಳು ಬೀದಿಗೆ ಬಂದಿವೆ’: ದೈವಾರಾಧಕ ತಮ್ಮಣ್ಣ ಶೆಟ್ಟಿ ಅಸಮಾಧಾನ

ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ಶುರುವಾಗಿದೆ. ಈ ಹರಕೆಯ ಕೋಲದ ಸಂದರ್ಭದಲ್ಲಿ ದೈವ ನರ್ತಕ ನಡೆದುಕೊಂಡ ರೀತಿಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಈ ಕುರಿತು ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನಿಸಿಕೆಯನ್ನು ಅವರು ತಿಳಿಸಿದ್ದಾರೆ.

  • Ashok
  • Updated on: Dec 9, 2025
  • 7:18 pm
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​: 16 ಇನ್ಸ್ಟಾಗ್ರಾಮ್ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​: 16 ಇನ್ಸ್ಟಾಗ್ರಾಮ್ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಸಂದೇಶಗಳು ಇನ್ಸ್ಟಾಗ್ರಾಮ್​​ನಲ್ಲಿ ಹರಿದಾಡುತ್ತಿವೆ. ಆರೋಪಿ ಭರತ್ ಕುಮ್ಡೇಲ್​ಗೆ ಬೆದರಿಕೆ ಹಾಕಿರುವ 16 ಇನ್ಸ್ಟಾಗ್ರಾಮಮ್​​ ಖಾತೆಗಳ ವಿರುದ್ಧ ಮಂಗಳೂರು ಪೊಲೀಸರು FIR ದಾಖಲಿಸಿದ್ದಾರೆ. ಇಂತಹ ಪ್ರಚೋದನಕಾರಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

  • Ashok
  • Updated on: Dec 9, 2025
  • 4:13 pm
ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್; ನಿಯಮಗಳ ವಿರುದ್ಧ ಹೋದ ನಟ?

ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್; ನಿಯಮಗಳ ವಿರುದ್ಧ ಹೋದ ನಟ?

ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ದೈವ ನರ್ತಕರ ವರ್ತನೆ ಕುರಿತು ಭಾರೀ ವಿವಾದ ಹುಟ್ಟಿಕೊಂಡಿದೆ. ರಿಷಬ್ ಕಾಲೆ ಮೇಲೆ ಮಲಗಿದ್ದು ದೈವ ನರ್ತಕರೇ ಹೊರತು ದೈವವಲ್ಲ ಎಂಬ ಮಾತು ಕೇಳಿಬಂದಿದೆ. ದೈವಾರಾಧನೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿದಂತೆ ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Ashok
  • Updated on: Dec 9, 2025
  • 10:06 am
ನೀರಿನಲ್ಲಿ ಭಕ್ತರೊಂದಿಗೆ ಆಟವಾಡುತ್ತಿರುವಾಗ ಅಡ್ಡಬಂದ ಸಿಬ್ಬಂದಿಯನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ

ನೀರಿನಲ್ಲಿ ಭಕ್ತರೊಂದಿಗೆ ಆಟವಾಡುತ್ತಿರುವಾಗ ಅಡ್ಡಬಂದ ಸಿಬ್ಬಂದಿಯನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ

ಭಕ್ತರೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡ್ಡ ಬಂದ ಸಿಬ್ಬಂದಿಯನ್ನು ಆನೆ ಎತ್ತಿ ಬಿಸಾಡಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹೌದು... ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ನಡೆದ ನೀರು ಬಂಡಿ ಉತ್ಸವದಲ್ಲಿ ಆನೆ ಯಶಸ್ವಿನಿ ಆಟವಾಡುತ್ತಿತ್ತು. ಭಕ್ತರೊಂದಿಗೆ ನೀರಿನಲ್ಲಿ ಚೆಲ್ಲಾಟವಾಡುತ್ತಿತ್ತು. ಈ ವೇಳೆ ದೇವಸ್ಥಾನದ ಸಿಬ್ಬಂದಿ ಅಡ್ಡಬಂದಿದ್ದಾನೆ. ಇದರಿಂದ ಕೆರಳಿದ ಆನೆ, ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಸೈಡಿಗೆ ಬಿಸಾಡಿದೆ.

  • Ashok
  • Updated on: Dec 3, 2025
  • 5:13 pm
ಪುತ್ತೂರು: ಇಎನ್​ಟಿ ಕ್ಲಿನಿಕ್​ಗೆ ನುಗ್ಗಿ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ

ಪುತ್ತೂರು: ಇಎನ್​ಟಿ ಕ್ಲಿನಿಕ್​ಗೆ ನುಗ್ಗಿ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ

ಇಎನ್​ಟಿ ಕ್ಲಿನಿಕ್​ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯೋರ್ವ ಅಟ್ಟಹಾಸ ನಡೆಸಿರುವ ಘಟನೆ ಪುತ್ತೂರು ತಾಲೂಕಿನ ದಬರಬೆಯಲ್ಲಿ ನಡೆದಿದೆ. ತನ್ನ ಪರಿಚಯಸ್ಥರನ್ನು ತಪಾಸಣೆಗೆ ಬೇಗ ಬಿಟ್ಟಿಲ್ಲ ಎಂದು ರೊಚ್ಚಿಗೆದ್ದ ವ್ಯಕ್ತಿ, ಕ್ಲಿನಿಕ್​​ ಸಿಬ್ಬಂದಿ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿರೋ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

  • Ashok
  • Updated on: Dec 2, 2025
  • 4:20 pm
ರಸ್ತೆ ಗುಂಡಿ ಕಂಡು ಶಾಸಕ ಅಶೋಕ್ ಕುಮಾರ್ ರೈ ಗರಂ: ನಗರಸಭೆ ಕಮಿಷನರ್​​ಗೆ ಖಡಕ್​ ಎಚ್ಚರಿಕೆ

ರಸ್ತೆ ಗುಂಡಿ ಕಂಡು ಶಾಸಕ ಅಶೋಕ್ ಕುಮಾರ್ ರೈ ಗರಂ: ನಗರಸಭೆ ಕಮಿಷನರ್​​ಗೆ ಖಡಕ್​ ಎಚ್ಚರಿಕೆ

ರಸ್ತೆ ಗುಂಡಿಗಳ ವಿಚಾರವಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಸಭೆ ಕಮಿಷನರ್​ಗೆ ದೂರವಾಣಿ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ. ರಸ್ತೆ ಗುಂಡಿಗಳ ದುರಸ್ತಿ ವಿಳಂಬದ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಕೆಲಸ ಆರಂಭಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ನಿರ್ಲಕ್ಷ್ಯ ಮುಂದುವರಿದರೆ ತಾವೇ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದ್ದಾರೆ.

  • Ashok
  • Updated on: Dec 1, 2025
  • 1:13 pm
PM Modi in Udupi: ಉಡುಪಿಯಲ್ಲಿ ಮೋದಿ ರೋಡ್ ಶೋ, ಪ್ರಧಾನಿಯ ಅದ್ಭುತ ಭಾವಚಿತ್ರ ರಚಿಸಿ ತಂದ ವಿದ್ಯಾರ್ಥಿ

PM Modi in Udupi: ಉಡುಪಿಯಲ್ಲಿ ಮೋದಿ ರೋಡ್ ಶೋ, ಪ್ರಧಾನಿಯ ಅದ್ಭುತ ಭಾವಚಿತ್ರ ರಚಿಸಿ ತಂದ ವಿದ್ಯಾರ್ಥಿ

ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಾವಿರಾರು ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರೆತಿದೆ. ಈ ಸಂದರ್ಭದಲ್ಲಿ, ಎಸ್.ಆರ್. ಪಿಯು ಕಾಲೇಜಿನ ಹೆಬ್ರಿ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ ವಿಶೇಷ ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಪರೀಕ್ಷಿತ್ ಅವರು ತಮ್ಮ ಕೈಯಾರೆ ಪ್ರಧಾನಿ ಮೋದಿ ಮತ್ತು ಅವರ ತಾಯಿಯವರ ಸುಂದರ ಭಾವಚಿತ್ರವನ್ನು ರಚಿಸಿ ತಂದಿದ್ದಾರೆ.

  • Ashok
  • Updated on: Nov 28, 2025
  • 11:44 am
ಮಂಗಳೂರು: ಶಿಲೆಕಲ್ಲು ಗಣಿಗಾರಿಕೆಗೆ ನಲುಗಿದ ತೆಂಕ ಕಜೆಕಾರು ಗ್ರಾಮದ ಜನರು, ಹೈಕೋರ್ಟ್ಗೆ ಮೊರೆ

ಮಂಗಳೂರು: ಶಿಲೆಕಲ್ಲು ಗಣಿಗಾರಿಕೆಗೆ ನಲುಗಿದ ತೆಂಕ ಕಜೆಕಾರು ಗ್ರಾಮದ ಜನರು, ಹೈಕೋರ್ಟ್ಗೆ ಮೊರೆ

ನಿಯಮಗಳನ್ನೆಲ್ಲ ಗಾಳಿಗೆ ತೂರಿ ಶಿಲೆಕಲ್ಲು ಗಣಿಗಾರಿಕೆ ಮಾಡುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ಗ್ರಾಮದ ಹಲವಾರು ಮನೆಗಳ ಜನ ಸಂಕಷ್​ಟಕ್ಕೆ ಸಿಲುಕಿದ್ದಾರೆ. ಸ್ತಳೀಯಾಡಳಿತ, ಸರ್ಕಾರ ತಮ್ಮ ಮೊರೆ ಕೇಳದ ಕಾರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಂತ್ರಸ್ತರು ನ್ಯಾಯದ ನಿರೀಕ್ಷೆಯಲ್ಲಿದ್ದಾರೆ.

  • Ashok
  • Updated on: Nov 28, 2025
  • 9:19 am
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ: ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ: ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

Kukke Subramanya Champa Shashti Celebration: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಅದ್ದೂರಿಯಾಗಿ ನಡೆಯುತ್ತಿದೆ. ನಾಡಿನಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ನಡೆದ ಬ್ರಹ್ಮರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ವಿಡಿಯೋ ಇಲ್ಲಿದೆ.

  • Ashok
  • Updated on: Nov 26, 2025
  • 9:26 am