ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
ಬೇಡವಾಯ್ತು ಹೆತ್ತ ಕರುಳು: 5 ಮಕ್ಕಳಿದ್ರೂ ತಾಯಿಗೆ ಸಿಗದ ಆಸರೆ; ವೃದ್ಧಾಶ್ರಮಕ್ಕೆ ದಾಖಲು
ಉತ್ತರ ಕನ್ನಡದ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದಲ್ಲಿ ಅಮಾನವೀಯ ಘಟನೆ ಒಂದು ನಡೆದಿದೆ. ಐವರು ಮಕ್ಕಳ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಲಿವರ್ ಸಮಸ್ಯೆಯಿಂದ ಹಾಸಿಗೆ ಹಿಡಿದ ತಾಯಿಯನ್ನು ಮಕ್ಕಳು ನಿರ್ಲಕ್ಷಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ತಾಯಿಯನ್ನು ನೋಡಿಕೊಳ್ಳಲು ಹಿಂದೇಟು ಹಾಕಲಾಗಿದ್ದು, ಇದೀಗ ವೃದ್ಧಾಶ್ರಮಕ್ಕೆ ಸೇರಿಸಲು ಮುಂದಾಗಿದ್ದಾರೆ.
- Ashok
- Updated on: Sep 11, 2026
- 7:49 pm
ಅಂಕೋಲಾದಲ್ಲಿ ನಕಲಿ ದಾಖಲೆ ಸೃಷ್ಟಿಸಿ 2 ಕೋಟಿ ರೂ. ಬೆಲೆಬಾಳುವ ಜಮೀನು ಮಾರಾಟ: ಸಬ್ ರಿಜಿಸ್ಟ್ರಾರ್ ಸಿಬ್ಬಂದಿ ಸೇರಿ ಐವರ ಬಂಧನ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಕಲಿ ಆಧಾರ್ ಕಾರ್ಡ್ ಹಾಗೂ ಸುಳ್ಳು ದಾಖಲೆ ಸೃಷ್ಟಿಸಿ 2 ಕೋಟಿ ರೂ. ಬೆಲೆಬಾಳುವ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಬೃಹತ್ ಭೂಮಾಫಿಯಾ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಬ್ ರಿಜಿಸ್ಟ್ರಾರ್ ಕಚೇರಿಯ ಸಿಬ್ಬಂದಿ ಸೇರಿ ಐವರನ್ನು ಬಂಧಿಸಲಾಗಿದೆ.
- Ashok
- Updated on: Sep 10, 2026
- 11:22 am
ಉತ್ತರ ಕನ್ನಡ: ಭಾರಿ ಪ್ರಮಾಣದ ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ
ಉತ್ತರ ಕನ್ನಡದಲ್ಲಿ ವನ್ಯಜೀವಿ ಕಳ್ಳಸಾಗಣೆ ಜಾಲವನ್ನು ಶಿರಸಿ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿ ಭೇದಿಸಿದೆ. ಯಲ್ಲಾಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಂಕರ್ ಸಿದ್ದಿ, ನರಸಿಂಹ ಸಿದ್ದಿ ಎಂಬಿಬ್ಬರನ್ನು ಬಂಧಿಸಲಾಗಿದೆ. ಕೋಟ್ಯಂತರ ಮೌಲ್ಯದ 15 ಕೆ.ಜಿ.ಗೂ ಹೆಚ್ಚು ಪ್ಯಾಂಗೋಲಿನ್ ಚಿಪ್ಪುಗಳು, ಹುಲಿ ಹಾಗೂ ಚಿರತೆ ಉಗುರು-ಹಲ್ಲುಗಳು, ಕಾಡೆಮ್ಮೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಆರೋಪಿಗಳಿಗಾಗಿ ತನಿಖೆ ಮುಂದುವರಿದಿದೆ.
- Ashok
- Updated on: Sep 9, 2026
- 12:45 pm
ಜ್ಞಾನದ ದೀಪ ಹಚ್ಚುವವರ ಬದುಕಿನಲ್ಲಿ 17 ತಿಂಗಳಿಂದ ಕತ್ತಲೆ: ಉತ್ತರ ಕನ್ನಡದ 219 ಗ್ರಂಥಾಲಯ ಮೇಲ್ವಿಚಾರಕರ ಕಣ್ಣೀರು
ಉತ್ತರ ಕನ್ನಡ ಜಿಲ್ಲೆಯ 219 ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು 17 ತಿಂಗಳಿಂದ ಪೂರ್ಣ ವೇತನವಿಲ್ಲದೆ ಪರದಾಡುತ್ತಿದ್ದಾರೆ. ಜಿಲ್ಲಾ ಪಂಚಾಯತ್ನಿಂದ ಬರಬೇಕಾದ ಹೆಚ್ಚುವರಿ ವೇತನ ಬಾಕಿ ಉಳಿದಿದ್ದು, ಇಲಾಖೆಗಳ ನಡುವಿನ ಒಳಜಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ತಮ್ಮ ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ಮೇಲ್ವಿಚಾರಕರು ಎಚ್ಚರಿಸಿದ್ದಾರೆ. ಈ ಅನ್ಯಾಯಕ್ಕೆ ಶೀಘ್ರ ಪರಿಹಾರ ಕೋರಿದ್ದಾರೆ.
- Ashok
- Updated on: Sep 2, 2026
- 7:29 pm
ಪೋಸ್ಟಿಂಗ್ಗಾಗಿ ಲಕ್ಷಾಂತರ ರೂ ಡೀಲ್: ಪಿಎಸ್ಐಗಳ ಆಡಿಯೋ ವೈರಲ್; ಮೂವರ ತಲೆದಂಡ
PSI Posting Viral Audio: ಹಳಿಯಾಳ PSI ಪೋಸ್ಟಿಂಗ್ಗೆ ಹಣದ ಡೀಲ್ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಮೂವರು PSIಗಳ ಅಮಾನತಿಗೆ ಕಾರಣವಾಗಿದೆ. ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರ, ಮೇಲಾಧಿಕಾರಿಗಳಿಗೆ ತಿಂಗಳು ಹಪ್ತಾ ವಸೂಲಿ ಆರೋಪಗಳು ಕೇಳಿಬಂದಿವೆ. ಸದ್ಯ ಈ ಪ್ರಕರಣದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.
- Ashok
- Updated on: Aug 31, 2026
- 7:54 pm
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 24 ಮಂದಿ ಮೀನುಗಾರರ ರಕ್ಷಣೆ
Uttara Kannada news: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ವೊಂದು ಅವಘಡಕ್ಕೀಡಾಗಿ ಮುಳುಗಿದೆ. ಬೋಟ್ನಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್ಗಳ ಸಿಬ್ಬಂದಿ ರಕ್ಷಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾರವಾರ ವ್ಯಾಪ್ತಿಯಲ್ಲಿ ಆಗಾಗ ಮೀನುಗಾರಿಕಾ ಬೋಟ್ಗಳು ಮುಳುಗಡೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
- Ashok
- Updated on: Aug 31, 2026
- 9:02 am
ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ ಪತಿ! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಾಕ್ಷಸೀ ಕೃತ್ಯ
Uttara Kannada News: ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕುಟುಂಬಸ್ಥರನ್ನು ನಂಬಿಸಲು ಯತ್ನಿಸಿದ್ದ ವ್ಯಕ್ತಿಯೊಬ್ಬನ ರಾಕ್ಷಸೀ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಬಳಿ ಘಟನೆ ನಡೆದಿದ್ದು, ಸದ್ಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಬಳಿಕ ಆರೋಪಿ ಗಣಪತಿ ನಾಯ್ಕ ಎಂಬಾತನನ್ನು ಬಂಧಿಸಲಾಗಿದೆ.
- Ashok
- Updated on: Aug 29, 2026
- 7:25 am
ಅಣುವಿದ್ಯುತ್ ಸ್ಥಾವರದ ಕಲುಷಿತ ನೀರು ಬೇಡ: ಕಾರವಾರಕ್ಕೆ ಕದ್ರಾ ಜಲಾಶಯದ ನೀರು ಪೂರೈಕೆಗೆ ವಿರೋಧ; PMOಗೆ ದೂರು!
Karwar drinking water: ಕಾರವಾರದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಕದ್ರಾ ಜಲಾಶಯದ ನೀರು ಪೂರೈಸಲು ಸಿದ್ಧತೆ ನಡೆದಿದೆ. ಆದರೆ, ಈ ನೀರನ್ನು ಕೈಗಾ ಅಣು ವಿದ್ಯುತ್ ಸ್ಥಾವರದ ರಿಯಾಕ್ಟರ್ ಕೂಲಿಂಗ್ಗೆ ಬಳಸಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ನೀರು ವಿಕಿರಣದಿಂದ ಕಲುಷಿತವಾಗುವ ಆತಂಕ ವ್ಯಕ್ತವಾಗಿದ್ದು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
- Ashok
- Updated on: Aug 26, 2026
- 3:58 pm
ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಎಚ್ಚರಿಕೆ ಕೊಟ್ಟ ಪೋಲಿಸ್
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಲಾಗಿತ್ತು. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಧ್ವಜವನ್ನು ವಶಪಡಿಸಿಕೊಂಡರು. ಮೆರವಣಿಗೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಂಡು, ಧ್ವಜ ಹಾರಿಸದಂತೆ ಎಚ್ಚರಿಕೆ ನೀಡಿದರು. ಈ ಘಟನೆಯು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಮುಂಜಾಗ್ರತಾ ಕ್ರಮವನ್ನು ಎತ್ತಿ ತೋರಿಸುತ್ತದೆ.
- Ashok
- Updated on: Aug 26, 2026
- 3:11 pm
ನೌಕಾನೆಲೆಗಾಗಿ ಭೂಮಿ ಕಳೆದುಕೊಂಡವರ ಪರದಾಟ: ಯಾರು ಕೇಳೋರಿಲ್ಲ ದೇಶದ ರಕ್ಷಣೆಗೆ ಭೂಮಿ ಕೊಟ್ಟವರ ಸಂಕಟ
Karwar News: ದೇಶದ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿ ಜಮೀನು ಬಿಟ್ಟುಕೊಟ್ಟ ಕುಟುಂಬಗಳ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾ ಬಳಿ ಕದಂಬ ನೌಕಾನೆಲೆ ನಿರ್ಮಾಣಕ್ಕಾಗಿ ತಮ್ಮ ಫಲವತ್ತಾದ ಭೂಮಿಯನ್ನು ತ್ಯಾಗ ಮಾಡಿದ 400ಕ್ಕೂ ಹೆಚ್ಚು ಕುಟುಂಬಗಳು, ಇಂದು ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ನರಕಯಾತನೆ ಅನುಭವಿಸುತ್ತಿವೆ.
- Ashok
- Updated on: Aug 21, 2026
- 10:24 pm
ತದಡಿ ಬಂದರಿನಲ್ಲಿ ಹೂಳಿನ ಕಂಟಕ: 2 ಬೋಟು ಮುಳುಗಡೆ, ಲಕ್ಷಾಂತರ ರೂ. ನಷ್ಟ; ಮೀನುಗಾರರ ಆಕ್ರೋಶ
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಮೀನುಗಾರಿಕಾ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದರಿಂದ ಕಳೆದ ಎರಡು ವಾರಗಳಲ್ಲಿ ಐದು ಬೋಟುಗಳಿಗೆ ಹಾನಿಯಾಗಿದೆ, ಎರಡು ಬೋಟುಗಳು ಸಂಪೂರ್ಣ ಮುಳುಗಿವೆ. ಸಮರ್ಪಕವಾಗಿ ಹೂಳೆತ್ತುವ ಕಾಮಗಾರಿ ನಡೆಯದಿದ್ದುದು ದುರಂತಕ್ಕೆ ಕಾರಣ. ಇದರಿಂದ ಮೀನುಗಾರರು ಭಾರಿ ನಷ್ಟ ಅನುಭವಿಸುತ್ತಿದ್ದು, ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
- Ashok
- Updated on: Aug 20, 2026
- 6:11 am
ಕುಮಟಾ ತದಡಿ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎರಡೇ ದಿನಗಳಲ್ಲಿ 2ನೇ ಬೋಟ್ ದುರಂತ
Uttara Kannada news: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಲಕ್ಷ್ಮೀ ಕೃಪಾ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಇದರಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದ್ದು, ಸುಮಾರು 20 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ. ಕಳೆದ ಒಂದು ವರ್ಷದಿಂದ ಪದೇಪದೇ ಇಂತಹ ಘಟನೆಗಳು ಸಂಭವಿಸುತ್ತಿರುವುದು ಆತಂಕ ಮೂಡಿಸಿದೆ.
- Ashok
- Updated on: Aug 18, 2026
- 1:23 pm