AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್​ ಪೂಜಾರಿ

ಅಶೋಕ್​ ಪೂಜಾರಿ

Author - TV9 Kannada

ashok.monappapoojary@tv9.com

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಉತ್ತರ ಕನ್ನಡದಲ್ಲಿ ಮಳೆ ಆರ್ಭಟ : ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ : ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಭಾರೀ ಮಳೆಯಿಂದ ಹಲವು ಬಡಾವಣೆಗಳು ಜಲಾವೃತವಾಗಿವೆ. ಸಮೃದ್ಧ ನಗರ, ಶ್ರೀಧರ ನಗರ, ಶ್ರೀರಾಮ ಕಾಲೋನಿ ಮತ್ತು ಅಯ್ಯಪ್ಪ ನಗರದ ಮನೆಗಳಿಗೆ ನೀರು ನುಗ್ಗಿದ್ದು, ಕೋಟೆ ಕೆರೆ ತುಂಬಿ ರಸ್ತೆಯಲ್ಲಿ ಹರಿಯುತ್ತಿದೆ. ಜಲಾವೃತಗೊಂಡ ರಸ್ತೆಗಳಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ.

  • Ashok
  • Updated on: Aug 1, 2026
  • 2:33 pm
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ: ಮೂರ್ತಿ ಸಂರಕ್ಷಣೆಗೆ ದತ್ತಿ ಇಲಾಖೆ ಕ್ರಮ

ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ: ಮೂರ್ತಿ ಸಂರಕ್ಷಣೆಗೆ ದತ್ತಿ ಇಲಾಖೆ ಕ್ರಮ

Gokarna Mahaganapathi Idol: ಗೋಕರ್ಣ ಮಹಾಗಣಪತಿ ಮೂರ್ತಿಯಲ್ಲಿ ಸವಕಳಿ ಕಂಡುಬಂದ ಹಿನ್ನೆಲೆಯಲ್ಲಿ ಸ್ಪರ್ಶ ದರ್ಶನ, ಪೂಜೆ ಹಾಗೂ ಪಂಚಾಮೃತ ಅಭಿಷೇಕಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಕ್ತರಿಗೆ ದೂರದಿಂದ ದರ್ಶನಕ್ಕೆ ಅವಕಾಶ ಮುಂದುವರಿಯಲಿದೆ. ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತೆ ಸುಧಾ ತಳವಾರ ಹೇಳಿದ್ದಾರೆ.

  • Ashok
  • Updated on: Jul 24, 2026
  • 11:05 am
ಐಎನ್ಎಸ್ ಮಾಲ್ವನ್: ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ

ಐಎನ್ಎಸ್ ಮಾಲ್ವನ್: ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ

ಕಾರವಾರದ ಕದಂಬ ನೌಕಾನೆಲೆಯಲ್ಲಿ ಸಂಪೂರ್ಣ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐಎನ್ಎಸ್ ಮಾಲ್ವನ್ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ. ಇದು ಜಲಾಂತರ್ಗಾಮಿಗಳನ್ನು ಪತ್ತೆ ಹಚ್ಚಿ ನಾಶಪಡಿಸುವ ಸಾಮರ್ಥ್ಯ ಹೊಂದಿದೆ. ಶತ್ರುಪಡೆಗಳಿಂದ ಭಾರತದ ಕಡಲತೀರಗಳನ್ನು ರಕ್ಷಿಸುವ ನೌಕಾಪಡೆಯ ಕಾರ್ಯಾಚರಣೆಗೆ ಇದು ಇನ್ನಷ್ಟು ಶಕ್ತಿ ನೀಡಲಿದೆ.

  • Ashok
  • Updated on: Jul 22, 2026
  • 3:00 pm
ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗುತ್ತಿದೆ ‘ಮಾಲ್ವಾಣ್’ ಯುದ್ಧನೌಕೆ: ಸ್ವದೇಶಿ ನಿರ್ಮಿತ ಹಡಗಿನ ವಿಶೇಷಗಳೇನು? ಇಲ್ಲಿದೆ ನೋಡಿ

ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗುತ್ತಿದೆ ‘ಮಾಲ್ವಾಣ್’ ಯುದ್ಧನೌಕೆ: ಸ್ವದೇಶಿ ನಿರ್ಮಿತ ಹಡಗಿನ ವಿಶೇಷಗಳೇನು? ಇಲ್ಲಿದೆ ನೋಡಿ

INS Malvan: ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಇಂದು ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತ ಐಎನ್‌ಎಸ್ ಮಾಲ್ವಾಣ್ ಯುದ್ಧನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಲಿದೆ. ಜಲಾಂತರ್ಗಾಮಿ ಪತ್ತೆ ಹಾಗೂ ಸಮುದ್ರ ಭದ್ರತೆಗೆ ಅಗತ್ಯವಾದ ಅತ್ಯಾಧುನಿಕ ವ್ಯವಸ್ಥೆಗಳನ್ನು ಈ ನೌಕೆ ಹೊಂದಿದೆ. ಮಾಲ್ವಾಣ್ ಯುದ್ಧನೌಕೆಯ ವಿಶೇಷತೆಗಳ ಮಾಹಿತಿ ಹಾಗೂ ವಿಡಿಯೋ ಇಲ್ಲಿದೆ.

  • Ashok
  • Updated on: Jul 22, 2026
  • 9:56 am
ಕಾರವಾರ: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಆರೋಗ್ಯ ಇಲಾಖೆ ವಸತಿಗೃಹಗಳು; ಮಜಾ ಮಾಡಲು ಹುಡುಗ-ಹುಡುಗಿಯರು ಬರ್ತಾರೆ

ಕಾರವಾರ: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಆರೋಗ್ಯ ಇಲಾಖೆ ವಸತಿಗೃಹಗಳು; ಮಜಾ ಮಾಡಲು ಹುಡುಗ-ಹುಡುಗಿಯರು ಬರ್ತಾರೆ

ಉತ್ತರ ಕನ್ನಡದ ಅಂಕೋಲಾ ಹಟ್ಟಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ (PHC) ಸರ್ಕಾರಿ ವಸತಿಗೃಹಗಳು ಸಂಪೂರ್ಣ ಪಾಳುಬಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ. ಮಹಿಳೆಯರು ಮತ್ತು ಸಾರ್ವಜನಿಕರು ಓಡಾಡಲು ಭಯಪಡುತ್ತಿದ್ದಾರೆ. ಸಚಿವ ಯು.ಟಿ. ಖಾದರ್ ಅವರ ತಕ್ಷಣದ ಗಮನಕ್ಕೆ ತರಲಾಗಿದ್ದು, ಈ ಅಪಾಯಕಾರಿ ಕಟ್ಟಡಗಳನ್ನು ತೆರವುಗೊಳಿಸಲು ಅಥವಾ ಹೊಸ ಆಸ್ಪತ್ರೆ ನಿರ್ಮಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಿರ್ಲಕ್ಷಿಸಿದರೆ ಸ್ವತಃ ಕೆಡವಲು ಸಿದ್ಧ.

  • Ashok
  • Updated on: Jul 18, 2026
  • 10:13 am
ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ

ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ಮುಂಗಾರು ಮಳೆಯ ಅಬ್ಬರದ ನಡುವೆ ಸಮುದ್ರದ ಅಲೆಗಳಲ್ಲಿ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಭಾರೀ ಮಳೆಯಿಂದ ಸಮುದ್ರ ಉಕ್ಕಿ ಹರಿಯುತ್ತಿದ್ದರೂ, ಪೊಲೀಸರು ಕ್ಷಣಾರ್ಧದಲ್ಲಿ ಸ್ಪೀಡ್ ಬೋಟ್ ಮೂಲಕ ಕಾರ್ಯಾಚರಣೆ ನಡೆಸಿ, ಯುವಕನನ್ನು ಸುರಕ್ಷಿತವಾಗಿ ದಡಕ್ಕೆ ತಂದು ಮಾನವೀಯತೆ ಮೆರೆದಿದ್ದಾರೆ.

  • Ashok
  • Updated on: Jul 17, 2026
  • 11:03 pm
141 ವರ್ಷಗಳ ಹಳೆಯ ಶಾಲೆಯ ಸ್ಥಿತಿ ನೋಡಿ: ಗೆದ್ದಲು ಹಿಡಿದ ಮೇಲ್ಚಾವಣಿ, ಬಿರುಕು ಬಿಟ್ಟ ಮಣ್ಣಿನ ಗೋಡೆಗಳು; ವಿದ್ಯಾರ್ಥಿಗಳ ಜೀವದ ಜತೆ ಚೆಲ್ಲಾಟ

141 ವರ್ಷಗಳ ಹಳೆಯ ಶಾಲೆಯ ಸ್ಥಿತಿ ನೋಡಿ: ಗೆದ್ದಲು ಹಿಡಿದ ಮೇಲ್ಚಾವಣಿ, ಬಿರುಕು ಬಿಟ್ಟ ಮಣ್ಣಿನ ಗೋಡೆಗಳು; ವಿದ್ಯಾರ್ಥಿಗಳ ಜೀವದ ಜತೆ ಚೆಲ್ಲಾಟ

ಅಂಕೋಲಾ ತಾಲೂಕಿನ ಹರವಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 141 ವರ್ಷಗಳ ಕಟ್ಟಡ ಸಂಪೂರ್ಣ ಶಿಥಿಲವಾಗಿದೆ. ಗೆದ್ದಲು ಹಿಡಿದ ಮೇಲ್ಚಾವಣಿ, ಬಿರುಕು ಬಿಟ್ಟ ಗೋಡೆಗಳಿಂದಾಗಿ ಮಕ್ಕಳು ಜೀವಭಯದಲ್ಲೇ ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಸೋರುವ ಕಟ್ಟಡದ ಬಗ್ಗೆ ಪೋಷಕರು ಆತಂಕಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿದಿದೆ. ಮಕ್ಕಳ ಸುರಕ್ಷತೆ ದೊಡ್ಡ ಸವಾಲಾಗಿದೆ.

  • Ashok
  • Updated on: Jul 17, 2026
  • 7:30 pm
ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ ಲಾಟರಿ ದಂಧೆ: ಬೀದರ್ ಮೂಲದ ವ್ಯಕ್ತಿ ಅರೆಸ್ಟ್

ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ ಲಾಟರಿ ದಂಧೆ: ಬೀದರ್ ಮೂಲದ ವ್ಯಕ್ತಿ ಅರೆಸ್ಟ್

ಮುರುಡೇಶ್ವರ ದೇವಾಲಯದ ಹೆಸರನ್ನು ದುರುಪಯೋಗಪಡಿಸಿಕೊಂಡು ಆನ್‌ಲೈನ್‌ನಲ್ಲಿ ನಕಲಿ ಲಕ್ಕಿ ಡ್ರಾ ನಡೆಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ಬೀದರ್ ಮೂಲದ ನರಸಿಂಗ್ ವೆಂಕಟರಾವ್ ತಗರಖೇಡೆ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಸೋಷಿಯಲ್ ಮೀಡಿಯಾ ಮೂಲಕ ನಕಲಿ ಭಿತ್ತಿಪತ್ರಗಳನ್ನು ಸೃಷ್ಟಿಸಿ ಹಣ ವಸೂಲಿ ಮಾಡಲಾಗುತ್ತಿತ್ತು. ದೇವಸ್ಥಾನದ ಆಡಳಿತ ಮಂಡಳಿ ದೂರು ನೀಡಿದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿದರು. ಭಕ್ತರು ಇಂತಹ ವಂಚನೆಗಳಿಂದ ಎಚ್ಚರವಾಗಿರಲು ಮನವಿ ಮಾಡಲಾಗಿದೆ.

  • Ashok
  • Updated on: Jul 17, 2026
  • 4:00 pm
ಉತ್ತರ ಕನ್ನಡದ ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ, ಅಂಗನವಾಡಿ-ಶಾಲೆಗಳಿಗೆ ರಜೆ

ಉತ್ತರ ಕನ್ನಡದ ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ, ಅಂಗನವಾಡಿ-ಶಾಲೆಗಳಿಗೆ ರಜೆ

Uttara Kannada news: ಉತ್ತರ ಕನ್ನಡದ ಅಂಕೋಲಾ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅಂಕೋಲಾ ತಹಶೀಲ್ದಾರ್ ಈ ಆದೇಶ ಹೊರಡಿಸಿದ್ದಾರೆ. ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

  • Ashok
  • Updated on: Jul 17, 2026
  • 12:00 pm
ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ

Uttara Kannada news: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. 141 ವರ್ಷಗಳ ಹಳೆಯ ಈ ಶಾಲೆ ಕುಸಿಯುವ ಭೀತಿಯಲ್ಲಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುತ್ತಿದ್ದಾರೆ. ಶಿಕ್ಷಕರ ಕೊರತೆ, ಪೋಷಕರ ಆತಂಕಗಳ ನಡುವೆ ಹೊಸ ಕಟ್ಟಡ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ.

  • Ashok
  • Updated on: Jul 17, 2026
  • 8:59 am
ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ; ಬ್ರೆಡ್ ಚೀಸ್ ಕಥೆ ಹೇಳಿದ ಯುವಕರು: ಪುತ್ತೂರಿನಲ್ಲಿ ಎಫ್‌ಐಆರ್ ದಾಖಲು

ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ; ಬ್ರೆಡ್ ಚೀಸ್ ಕಥೆ ಹೇಳಿದ ಯುವಕರು: ಪುತ್ತೂರಿನಲ್ಲಿ ಎಫ್‌ಐಆರ್ ದಾಖಲು

ಪುತ್ತೂರಿನ ಪುರುಷರಕಟ್ಟೆಯಲ್ಲಿ ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ದೂರಿನ ಮೇರೆಗೆ ಒಂದು FIR ದಾಖಲಾಗಿದೆ. ಆದರೆ, ಯುವಕರು ತಮಗೇ ಸುಳ್ಳು ಆರೋಪ ಮಾಡಲಾಗಿದೆ ಎಂದು ಪ್ರತಿ ದೂರು ನೀಡಿದ್ದು, ಎರಡನೇ FIR ದಾಖಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದು, ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ.

  • Ashok
  • Updated on: Jul 9, 2026
  • 10:37 am
ಮಂಗಳೂರಿನ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ಮಂಗಳೂರಿನ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ನಿರಂತರ ಮಳೆಯಿಂದಾಗಿ ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಪ್ರತಿ ಬಾರಿ ಮಳೆಗಾಲದಲ್ಲೇ ಗುಡ್ಡ ಕುಸಿಯುತ್ತಿದ್ದು, ಇದಕ್ಕೆ ಪರಿಹಾರ ಕಂಡು ಹಿಡಿಯುವ ಕೆಲಸವಾಗಿಲ್ಲ. ಇನ್ನು ಪದೇ ಪದೇ ಕೆತ್ತಿಕಲ್‌ನಲ್ಲಿ ಏಕೆ ಗುಡ್ಡ ಕುಸಿಯುತ್ತೆ ಎನ್ನುವುದನ್ನು ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಪರಿಸರ ತಜ್ಞ ದಿನೇಶ್ ಹೊಳ್ಳ, ಲಂಬಾಕೃತಿಯಲ್ಲಿ ಅಗೆದಿರುವುದೇ ಕುಸಿತಕ್ಕೆ ಪ್ರಮುಖ ಕಾರಣ ಎಂದಿದ್ದಾರೆ.

  • Ashok
  • Updated on: Jul 8, 2026
  • 7:10 pm