ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್ . ಕಾಮ್ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ ಆರೋಪ
ರಾಜ್ಯ ಸರ್ಕಾರ ಕರಾವಳಿ ಭಾಗದ ಗುತ್ತಿಗೆದಾರರನ್ನು ನಿರ್ಲಕ್ಷ್ಯಿಸಿರುವ ಆರೋಪ ಕೇಳಿಬಂದಿದೆ. ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯದ ಕಾರಣ ಕೆಲಸವಿಲ್ಲದೆ ಗುತ್ತಿಗೆದಾರರು ಕಂಗಾಲಾಗಿದ್ದಾರೆ. ಯಂತ್ರೋಪಕರಣಗಳು, ವಾಹನಗಳು ತುಕ್ಕು ಹಿಡಿಯುತ್ತಿವೆ. ಸಾವಿರಾರು ಕೋಟಿ ಬಿಲ್ ಪೆಂಡಿಂಗ್ ಇದ್ದರೂ ಯಾವೊಬ್ಬ ಜನಪ್ರತಿನಿಧಿಯೂ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
- Ashok
- Updated on: Feb 13, 2026
- 11:52 am
ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ
ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿ ಗಲಾಟೆಯಲ್ಲಿ ಇಬ್ಬರು ಸಹಪಾಠಿಗಳಿಗೆ ಚೂರಿಯಿಂದ ಇರಿದಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.
- Ashok
- Updated on: Feb 11, 2026
- 6:36 pm
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ, ಆದರೆ ಅದು… ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ?
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗಳು ಮುಂದುವರಿದಿವೆ. ಯತೀಂದ್ರ ಸಿದ್ದರಾಮಯ್ಯ ಅವರ ‘ಐದು ವರ್ಷ ಸಿದ್ದರಾಮಯ್ಯ ಸಿಎಂ’ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ಇದೀಗ ಇಬ್ಬರೂ ನಾಯಕರು, ಸಿಎಂ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದರೂ, ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ನದ್ದೇ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
- Ashok
- Updated on: Feb 7, 2026
- 11:34 am
ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್
ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ದಿಡುಪೆ ಗ್ರಾಮದ ಮನೆಯೊಂದಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗುತ್ತಿದೆ. ಘಟನೆ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.
- Ashok
- Updated on: Feb 7, 2026
- 9:16 am
ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್
ಕರಾವಳಿಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆಯಲ್ಲಿ ನವ ಗುಳಿಗ ದೈವಾರಾಧನೆ ನಡೆಯಿತು. ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರಪಾಲಕರಾದ ಒಂಬತ್ತು ಗುಳಿಗ ದೈವಗಳಿಗೆ ಏಕಕಾಲದಲ್ಲಿ ನರ್ತನ ಸೇವೆ ಸಲ್ಲಿಸಲಾಯಿತು. ಇದು ತುಳುನಾಡಿನಲ್ಲಿ ಬಹಳ ಅಪರೂಪದ ಘಟನೆಯಾಗಿದ್ದು, ಭಕ್ತರಿಗೆ ರೋಮಾಂಚನಕಾರಿ ಅನುಭವ ನೀಡಿತು. ಫೋಟೋಸ್ ಇಲ್ಲಿವೆ ನೋಡಿ.
- Ashok
- Updated on: Feb 6, 2026
- 6:33 pm
Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ
ಮಂಗಳೂರಿನ ನಂತೂರು ವೃತ್ತದ ಬಳಿ ನಡೆದ ಭೀಕರ ಅಪಘಾತದಲ್ಲಿ 26 ವರ್ಷದ ಯುವತಿ ಖಾಸಗಿ ಬಸ್ಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಭಾವಿ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮದುವೆ ನಿಶ್ಚಿತವಾಗಿದ್ದ ಈಕೆಯ ಸಾವಿಗೆ ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ, ಕುಟುಂಬಸ್ಥರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
- Ashok
- Updated on: Feb 5, 2026
- 3:23 pm
ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಏನೆಲ್ಲಾ ಸೌಲಭ್ಯ, ಹೇಗೆ ಕಾರ್ಯನಿರ್ವಹಿಸುತ್ತೆ?
ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಸೇವೆ ಒದಗಿಸುವ ನಿಟ್ಟಿನಲ್ಲಿ ಮಂಗಳೂರಿನ ಉಳ್ಳಾಲ ಮೀನುಗಾರರು ವಿನೂತನ ಕೆಲಸ ಮಾಡಿದ್ದಾರೆ. ಅದೇನೆಂದರೆ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿದ್ದಾರೆ. ಆ ಮೂಲಕ ಮೀನುಗಾರರು ತಮ್ಮ ರಕ್ಷಣೆಗೆ ತಾವೇ ಮುಂದಾಗಿದ್ದಾರೆ. ಈ ಬೋಟ್ ಏನೆಲ್ಲಾ ಸೌಲಭ್ಯಗಳನ್ನು ಹೊಂದಿದೆ ಎಂಬ ಮಾಹಿತಿ ಇಲ್ಲಿದೆ.
- Ashok
- Updated on: Feb 4, 2026
- 6:46 pm
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
- Ashok
- Updated on: Feb 4, 2026
- 4:29 pm
Mangaluru: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ!
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಇಬ್ಬರು ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಗಲಾಟೆ ತಪ್ಪಿಸಲು ಹೋದ ಯುವತಿ ಮೊದಲು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಆಕೆಯ ಸಂಬಂಧಿ ಕೂಡ ಚಿಕಿತ್ಸೆ ಫಲಿಸದೆ ಜೀವ ಬಿಟ್ಟಿದ್ದಾರೆ. ಪ್ರಕರಣ ಸಂಬಂಧ ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ಮಂಜೇಶ್ವರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
- Ashok
- Updated on: Feb 3, 2026
- 4:33 pm
ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ
ಮಂಗಳೂರಿನಲ್ಲಿರುವ ಪಿಲಿಕುಳ ಝೂನ ಅವ್ಯವಸ್ಥೆ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ತಕ್ಷಣ ಬಂದ್ ಮಾಡುವಂತೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಫೆಬ್ರವರಿ 5ಕ್ಕೆ ವಿಚಾರಣೆ ಮುಂದೂಡಿದೆ.
- Ashok
- Updated on: Feb 2, 2026
- 7:10 pm
ಸಾಧನೆಗೆ ಅಡ್ಡಿಯಾಗದ ಅಂಗವೈಕಲ್ಯ: ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
ಜನನಾನಂತರ ಒಂಭತ್ತು ತಿಂಗಳಲ್ಲಿ ದೇಹದ ಸ್ವಾಧೀನ ಕಳೆದುಕೊಂಡರೂ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ 25 ವರ್ಷದ ಯುವಕ ಅದ್ಭುತ ಸಾಧನೆ ಮಾಡಿ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಕೇವಲ ಹೆಬ್ಬೆರಳಿನ ಸಹಾಯದಿಂದ ಮೊಬೈಲ್ನಲ್ಲಿ ಫೋಟೋ, ವಿಡಿಯೋ ಎಡಿಟಿಂಗ್ ಹಾಗೂ ಆನ್ಲೈನ್ ಉದ್ಯಮ ನಡೆಸುತ್ತಿದ್ದಾರೆ. ಸ್ವಯಂ ದುಡಿಮೆಯಿಂದ ಜೀವನ ನಡೆಸುತ್ತಿರುವ ಇವರು, ಅನೇಕರಿಗೆ ಸ್ಪೂರ್ತಿದಾಯಕವಾಗಿದ್ದಾರೆ.
- Ashok
- Updated on: Jan 27, 2026
- 11:55 am
1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯ
ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್ನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿ ವಿರುದ್ಧ ರಾಜ್ಯದಲ್ಲಿ 13ಕ್ಕೂ ಹೆಚ್ಚು ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ.
- Ashok
- Updated on: Jan 22, 2026
- 8:10 pm