ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
ವಿಜಯಪುರ: ಅನ್ನದಾತರ ಪಾಲಿಗೆ ಕಂಟಕವಾದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ; ಏಕೆ?
ವಿಜಯಪುರ ಜಿಲ್ಲೆಯ ಕೂಡಗಿ ಎನ್ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದ ಹಾರುಬೂದಿ ಸಂಗ್ರಹಿಸುವ ಕೆರೆಗಳಿಂದ ಅಂತರ್ಜಲ ಕಲುಷಿತಗೊಂಡಿದೆ. ಮಸೂತಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನುಗಳು ಸವಳು ಜವಳಾಗಿ, ಬೆಳೆ ಬೆಳೆಯಲು ಅಸಾಧ್ಯವಾಗಿದೆ. ಬಾವಿ, ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ.
- Ashok Yadalli
- Updated on: Apr 5, 2026
- 9:09 pm
ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ
ಕರ್ನಾಟಕದಲ್ಲಿ ಹೆಣ್ಣು ಸಿಗದೆ ಮದುವೆಯಾಗಲು ಸಾಧ್ಯವಾಗದ ಕಾರಣ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ದುರದೃಷ್ಟಕರ ಘಟನೆಗಳು ನಡೆದಿವೆ. ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಕೃಷಿ ಸಮುದಾಯದಲ್ಲಿ, ವಿವಾಹಕ್ಕೆ ವಧುಗಳನ್ನು ಹುಡುಕುವುದು ಸವಾಲಾಗಿದೆ. ಈ ಕಾರಣದಿಂದ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ.
- Ashok Yadalli
- Updated on: Apr 4, 2026
- 7:24 pm
ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ
ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಇದ್ದಾಗ ಹಿಂದೂಗಳ ರಕ್ಷಣೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
- Ashok Yadalli
- Updated on: Apr 2, 2026
- 2:44 pm
ಬಸ್ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವು: ಇದು ಅಪಘಾತವೋ? ಆತ್ಮಹತ್ಯೆಯೋ? ಎಂಬುದೇ ಈಗ ಅನುಮಾನ
ವಿಜಯಪುರ ಜಿಲ್ಲೆಯಲ್ಲಿ ಬಸ್-ಬೈಕ್ ಡಿಕ್ಕಿಯಾಗಿ 25 ವರ್ಷದ ಯುವಕ ಸಜೀವ ದಹನವಾಗಿದ್ದಾನೆ. ಮೇಲ್ನೋಟಕ್ಕೆ ಅಪಘಾತವೆನಿಸಿದರೂ, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿದೆ. ತನ್ನ ಸಾವಿಗೆ ಕೆಲವರನ್ನು ದೂಷಿಸಿ ಯುವಕ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರೋದು ಅನುಮಾನಕ್ಕೆ ಇಂಬು ನೀಡಿದೆ. ಹೀಗಾಗಿ ಪೊಲೀಸರು ಅಪಘಾತ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
- Ashok Yadalli
- Updated on: Mar 31, 2026
- 4:17 pm
ವಿಜಯಪುರದಲ್ಲೊಂದು ಮನಕಲಕುವ ಘಟನೆ : ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ವಿಜಯಪುರ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ನಡೆದಿದ್ದು, ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆ ತನ್ನ ಆರು, ಮೂರು ಹೆಣ್ಣುಮಕ್ಕಳು ಮತ್ತು ವರ್ಷದ ಗಂಡು ಮಗುವಿನೊಂದಿಗೆ ಸಾವಿಗೆ ಶರಣಾಗಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಮಹಿಳೆಯ ಈ ದುಡುಕಿನ ನಿರ್ಧಾರಕ್ಕೆ ಕಾರಣವೇನು?
- Ashok Yadalli
- Updated on: Mar 27, 2026
- 4:18 pm
ಐತಿಹಾಸಿಕ ಕತಕನಹಳ್ಳಿ ಶ್ರೀಗಳ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ
ವಿಜಯಪುರ ತಾಲೂಕಿನ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರೆಗೆ ಇಂದು ಅದ್ಧೂರಿ ತೆರೆಬಿದ್ದಿದೆ. ಇದೇ ಜಾತ್ರೆಯಲ್ಲಿ ಕೊನೆಯ ದಿನದಂದು ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಈ ಭವಿಷ್ಯವಾಣಿ ಎಂದಿಗೂ ಸುಳ್ಳಾಗಿಲ್ಲ, ಆಗುವುದೂ ಇಲ್ಲಾ ಎನ್ನುವುದು ಭಕ್ತರ ನಂಬಿಕೆ. ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಇದೀಗ ಸ್ವಾಮೀಜಿ ನುಡಿದಿದ್ದಾರೆ.
- Ashok Yadalli
- Updated on: Mar 22, 2026
- 7:00 pm
ಮುಸ್ಲಿಮರಿಗೆ ಕಾಂಗ್ರೆಸ್ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್ ಹೊಸ ಬಾಂಬ್
ದಾವಣಗೆರೆ ಉಪಚುನಾವಣೆ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಯಡಿಯೂರಪ್ಪ ಕುಟುಂಬ ಮತ್ತು ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಶಾಮನೂರು ಮಲ್ಲಿಕಾರ್ಜುನ್ ಪುತ್ರನಿಗೆ ಬಿಜೆಪಿ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ ಎಂದು ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
- Ashok Yadalli
- Updated on: Mar 19, 2026
- 4:49 pm
ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಕುರಿತು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಬದಲಾವಣೆ ಆದರೂ ಆಶ್ಚರ್ಯವಿಲ್ಲ ಎಂದು ಬಾಂಬ್ ಸಿಡಿಸಿದ್ದಾರೆ.
- Ashok Yadalli
- Updated on: Mar 19, 2026
- 7:40 pm
ಶಾಸಕ ಯತ್ನಾಳ್ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ
ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಮತ್ತು ಅಬೋಲಿ ಅವರ ಆರತಕ್ಷತೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭಕ್ಕೆ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಗಣ್ಯರು ಆಗಮಿಸಿ ನವದಂಪತಿಗಳನ್ನು ಹಾರೈಸಿದರು. ಕಲಾವಿದರ ಸ್ವಾಗತದೊಂದಿಗೆ ವಧು-ವರರು ಆಗಮಿಸಿ, ಮಂತ್ರ-ಘೋಷಗಳ ಮಧ್ಯೆ ಹಾರ ಬದಲಾಯಿಸಿಕೊಂಡರು.
- Ashok Yadalli
- Updated on: Mar 15, 2026
- 4:14 pm
ವಿಶ್ವಗುರು ಬಸವಣ್ಣ-ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಮಾತು: ಸಿಡಿದೆದ್ದ ಅನುಯಾಯಿಗಳು
ವ್ಯಕ್ತಿ ಓರ್ವ ಬಸವಣ್ಣ ಮತ್ತು ಅಕ್ಕಮಹಾದೇವಿ ಕುರಿತು ಫೇಸ್ಬುಕ್ನಲ್ಲಿ ಅಶ್ಲೀಲ ಮತ್ತು ಅವಮಾನಕಾರಿ ಪೋಸ್ಟ್ ಮಾಡಿದಕ್ಕೆ ಬಸವಾದಿ ಶರಣ ಅನುಯಾಯಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕೂಡಲೇ ಪೋಸ್ಟ್ ಹರಿಬಿಟ್ಟ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
- Ashok Yadalli
- Updated on: Mar 12, 2026
- 10:10 pm
ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್
ವಿಜಯಪುರದ ವಿಶೇಷ ನ್ಯಾಯಾಲಯವು ಐದು ವರ್ಷದ ಮಗಳ ಅತ್ಯಾಚಾರ ಪ್ರಕರಣದಲ್ಲಿ ತಂದೆಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣದಲ್ಲಿ ಆರೋಪಿ ತಂದೆ ತಪ್ಪಿತಸ್ಥರೆಂದು ಸಾಬೀತಾಗಿದೆ. 2025 ಆಗಸ್ಟ್ 30ರಂದು ಘಟನೆ ನಡೆದಿತ್ತು.
- Ashok Yadalli
- Updated on: Mar 6, 2026
- 10:24 pm
ಬಬಲಾದಿ ಕಾಲಜ್ಞಾನ ನಿಜವಾಯಿತೇ?: ಯುದ್ಧ ಆಯಿತು, ಮುಂದೆ ಪ್ರವಾಹ, ಭಾರತಕ್ಕೆ ಗಡಿ ಆತಂಕ!
ಉತ್ತರ ಕರ್ನಾಟಕದ ಬಬಲಾದಿ ಶ್ರೀ ಸದಾಶಿವ ಮುತ್ಯಾರ ಮಠದ ಕಾಲಜ್ಞಾನದ ಭವಿಷ್ಯವಾಣಿಗಳು ಮತ್ತೆ ಚರ್ಚೆಗೆ ಬಂದಿವೆ. ಮಠದಲ್ಲಿ ನುಡಿದಿದ್ದ "ಗಡಿಯಲ್ಲಿ ಯುದ್ಧ, ಜಾಗತಿಕ ಕೆಡಕು" ಎಂಬ ಅಶುಭ ಮುನ್ಸೂಚನೆಗಳು ಇರಾನ್-ಅಮೆರಿಕಾ-ಇಸ್ರೇಲ್ ಸಂಘರ್ಷ ಮತ್ತು ಮಧ್ಯಪ್ರಾಚ್ಯದ ಬಾಂಬ್ ದಾಳಿಗಳ ಮೂಲಕ ಅಕ್ಷರಶಃ ನಿಜವಾಗುತ್ತಿವೆ. ಯುದ್ಧದ ಜೊತೆಗೆ ಮಳೆ-ಬೆಳೆ ವ್ಯತ್ಯಯ ಮತ್ತು ಪ್ರವಾಹದ ಭೀತಿಯನ್ನೂ ಭವಿಷ್ಯ ನುಡಿದಿದ್ದು, ಇದು ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ ಎಂದು ಸಿದ್ರಾಮಪ್ಪ ಹೋಳಿಮಠ ತಿಳಿಸಿದ್ದರು.
- Ashok Yadalli
- Updated on: Mar 2, 2026
- 12:00 pm