AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿ, ವಿಜಯಪುರ

ಜಿಲ್ಲಾ ವರದಿಗಾರ - TV9 Kannada

ashok.yadalli@tv9.com

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….

Read More
ಬರ ಘೋಷಣೆ ವಿಚಾರದಲ್ಲಿ ಸಚಿವ-ಕಾಂಗ್ರೆಸ್ ಶಾಸಕರ ಮಧ್ಯೆ ಲೆಟರ್ ವಾರ್: ಇಲ್ಲಿದೆ ಮಾಹಿತಿ

ಬರ ಘೋಷಣೆ ವಿಚಾರದಲ್ಲಿ ಸಚಿವ-ಕಾಂಗ್ರೆಸ್ ಶಾಸಕರ ಮಧ್ಯೆ ಲೆಟರ್ ವಾರ್: ಇಲ್ಲಿದೆ ಮಾಹಿತಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ ತಾಲೂಕುಗಳ ಬರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ. ಪಾಟೀಲ್ ಹಾಗೂ ಮುದ್ದೇಬಿಹಾಳ ಕಾಂಗ್ರೆಸ್ ಶಾಸಕ ಸಿ.ಎಸ್. ನಾಡಗೌಡ ನಡುವೆ ತೀವ್ರ ಪತ್ರ ಸಮರ ನಡೆದಿದೆ. ಉಭಯ ನಾಯಕರೂ ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ಮಾಡಿದ್ದು ರಾಜಕೀಯ ನಿವೃತ್ತಿಯ ಸವಾಲ್​​ ಬಗ್ಗೆಯೂ ಪ್ರಸ್ತಾಪ ನಡೆದಿದೆ.

ವಿಜಯಪುರ-ಯಶವಂತಪುರ ರೈಲು ಇಂಜಿನ್ ವೈಫಲ್ಯ: ‘ಬಸವ ಎಕ್ಸ್‌ಪ್ರೆಸ್’ ತಡೆದು, ಕಲ್ಲು ತೂರಿ ಪೋಲಿಸ್ ಅಭ್ಯರ್ಥಿಗಳ ತೀವ್ರ ಅಕ್ರೋಶ

ವಿಜಯಪುರ-ಯಶವಂತಪುರ ರೈಲು ಇಂಜಿನ್ ವೈಫಲ್ಯ: ‘ಬಸವ ಎಕ್ಸ್‌ಪ್ರೆಸ್’ ತಡೆದು, ಕಲ್ಲು ತೂರಿ ಪೋಲಿಸ್ ಅಭ್ಯರ್ಥಿಗಳ ತೀವ್ರ ಅಕ್ರೋಶ

ವಿಜಯಪುರದಿಂದ ಹೊರಟ ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ವೈಫಲ್ಯದಿಂದ ಪೋಲಿಸ್ ಪರೀಕ್ಷಾರ್ಥಿಗಳು ಆಕ್ರೋಶಗೊಂಡರು. ಪರೀಕ್ಷೆಗೆ ತಲುಪಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಬಸವ ಎಕ್ಸ್‌ಪ್ರೆಸ್ ತಡೆದು ಕಲ್ಲು ತೂರಾಟ ನಡೆಸಿದರು. ರೈಲ್ವೇ ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಪರ್ಯಾಯ ಇಂಜಿನ್ ಅಳವಡಿಸಿ ರೈಲು ಪ್ರಯಾಣ ಮುಂದುವರಿಸಿತು. ರೈಲ್ವೇ ಇಲಾಖೆಯ ನಿರ್ಲಕ್ಷ್ಯಕ್ಕೆ ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

8 ತಿಂಗಳ ಹಿಂದೆ ಸಮಾಧಿ ಮಾಡಿದ್ದ ಸ್ವಾಮೀಜಿ ದೇಹ ಕೊಳೆಯದಿರುವುದು ಪತ್ತೆ! ವಿಜಯಪುರದಲ್ಲಿ ವಿಸ್ಮಯಕಾರಿ ಘಟನೆ

8 ತಿಂಗಳ ಹಿಂದೆ ಸಮಾಧಿ ಮಾಡಿದ್ದ ಸ್ವಾಮೀಜಿ ದೇಹ ಕೊಳೆಯದಿರುವುದು ಪತ್ತೆ! ವಿಜಯಪುರದಲ್ಲಿ ವಿಸ್ಮಯಕಾರಿ ಘಟನೆ

ವಿಜಯಪುರದ ಮನಗೂಳಿಯಲ್ಲಿ ಎಂಟು ತಿಂಗಳ ಹಿಂದೆ ಸಮಾಧಿ ಮಾಡಿದ್ದ ಸ್ವಾಮೀಜಿಯವರ ದೇಹ ಕೊಳೆಯದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಭಕ್ತರು ತಿಳಿಸಿದ್ದಾರೆ. ಸಮಾಧಿ ತೆರೆದು ದೇಹ ಹೊರತೆಗೆದು, ಬಾಜಾ-ಭಜಂತ್ರಿಯೊಂದಿಗೆ ಮೆರವಣಿಗೆ ನಡೆಸಿ ಗದ್ದುಗೆ ಬಳಿ ಮರು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ವಿಸ್ಮಯಕಾರಿ ಘಟನೆ ಈಗ ವಿಜಯಪುರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: ‘ಗಾಂಧಾರಿ ವಿದ್ಯೆ’ ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ

ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: ‘ಗಾಂಧಾರಿ ವಿದ್ಯೆ’ ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ

ವಿಜಯಪುರದ 'ಲರ್ನರ್ಸ್ ಝೋನ್' ಸಂಸ್ಥೆಯ 6-14 ವರ್ಷದ 17 ಮಕ್ಕಳು 'ಗಾಂಧಾರಿ ವಿದ್ಯೆ' ಕಲಿತು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5.2 ಕಿ.ಮೀ ಸೈಕಲ್ ಸವಾರಿ ಮಾಡಿ ವಿಶ್ವದಾಖಲೆಗೆ ಪ್ರಯತ್ನಿಸಿದ್ದಾರೆ. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಸುಪ್ತಪ್ರತಿಭೆ ಹೆಚ್ಚಿಸುವ ಈ ವಿದ್ಯೆ, ಮೊಬೈಲ್ ವ್ಯಸನದಿಂದ ದೂರವಿರಲು ಸಹಕಾರಿಯಾಗಿದೆ. ಈ ಸಾಧನೆಯ ವಿಡಿಯೊಗಳನ್ನು ವಿಶ್ವದಾಖಲೆ ಸಂಸ್ಥೆಗೆ ಸಲ್ಲಿಸಲಾಗಿದೆ.

ವಿಜಯಪುರದ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ ಕೇಸ್​​: ತಾಯಿ ಮತ್ತು ಮಕ್ಕಳ ಸಾವಿಗೆ ಕಾರಣ ರಿವೀಲ್​​

ವಿಜಯಪುರದ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ ಕೇಸ್​​: ತಾಯಿ ಮತ್ತು ಮಕ್ಕಳ ಸಾವಿಗೆ ಕಾರಣ ರಿವೀಲ್​​

ವಿಜಯಪುರದ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳ ಶವ ಪತ್ತೆಯಾದ ಪ್ರಕರಣಕ್ಕೆ ಕೌಟುಂಬಿಕ ಕಲಹವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪತಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಹೀಗಿದ್ದರೂ ಗ್ರಾಮದಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳಿಗಾಗಿ ಪತಿ ಹುಡುಕಾಟ ನಡೆಸಿದ್ದ. ಅಲ್ಲೆಲ್ಲೂ ಅವರ ಸುಳಿವು ಸಿಗದ ಕಾರಣ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿನಾಪತ್ತೆ ಬಗ್ಗೆ ದೂರು ನೀಡಿದ್ದ ಎನ್ನಲಾಗಿದೆ.

ವಿಜಯಪುರ: ಐತಿಹಾಸಿಕ ಭೂತನಾಳ ಕೆರೆಯಲ್ಲಿ 6 ಶವಗಳು ಪತ್ತೆ!

ವಿಜಯಪುರ: ಐತಿಹಾಸಿಕ ಭೂತನಾಳ ಕೆರೆಯಲ್ಲಿ 6 ಶವಗಳು ಪತ್ತೆ!

ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಜನರ ಮೃತದೇಹಗಳು ಪತ್ತೆಯಾಗಿದ್ದು, ಇಡೀ ನಗರ ಬೆಚ್ಚಿಬಿದ್ದಿದೆ. ಕಳೆದ ಆಗಸ್ಟ್ 24ರಿಂದ ಕಾಣೆಯಾಗಿದ್ದ ಶೋಭಾ ಜಾಲಗೇರಿ ಹಾಗೂ ಅವರ ಐವರು ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಸಂಶಯ ವ್ಯಕ್ತವಾಗಿದ್ದು, ಆದರ್ಶ ನಗರ ಠಾಣೆಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದಂದೇ ಸೂತಕ: ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆ ನಿಗೂಢ ನಾಪತ್ತೆ

ವರಮಹಾಲಕ್ಷ್ಮಿ ಹಬ್ಬದಂದೇ ಸೂತಕ: ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆ ನಿಗೂಢ ನಾಪತ್ತೆ

Vijayapura News: ಇಬ್ಬರು ಹೆಣ್ಣುಮಕ್ಕಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ತಂದೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ. ವರಮಹಾಲಕ್ಷ್ಮಿ ಹಬ್ಬದಂದೇ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕ: ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಚಿವ ಎಂ.ಬಿ. ಪಾಟೀಲ್​​ ತರಾಟೆ

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕ: ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಚಿವ ಎಂ.ಬಿ. ಪಾಟೀಲ್​​ ತರಾಟೆ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕನ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ತಕ್ಷಣವೇ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಕೂಡಲೇ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡುವ ಜೊತೆಗೆ ಮಮದಾಪುರಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿರುವ ಪ್ರಸಂಗ ನಡೆದಿದೆ.

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್

vijayapura Temple Theft: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಒಂದು ತಿಂಗಳ ಬಳಿಕ ಪೊಲೀಸರು ಭೇದಿಸಿದ್ದಾರೆ. ರೀಲ್ಸ್ ನೋಡಿ ದೇಗುಲದಲ್ಲಿ ಕಳ್ಳತನ ಮಾಡಿದ್ದ ಗುಜರಾತ್ ಮೂಲದ ಮೂವರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಶ್ನೆ ಪತ್ರಿಕೆ, OMR ಸೀಟ್ ನಂಬರ್ ಮಿಸ್ ಮ್ಯಾಚ್: ಗೊಂದಲಗಳಿಗೆ ಡಿಸಿ ತೆರೆ

ಪ್ರಶ್ನೆ ಪತ್ರಿಕೆ, OMR ಸೀಟ್ ನಂಬರ್ ಮಿಸ್ ಮ್ಯಾಚ್: ಗೊಂದಲಗಳಿಗೆ ಡಿಸಿ ತೆರೆ

Police Constable Exam: ಪೊಲೀಸ್​​ ಕಾನ್ಸ್‌ಟೇಬಲ್​ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ಗೊಂದಲ ಉಂಟಾಗಿದ್ದು, ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುವುದಿಲ್ಲ ಎಂದು ಹೊರಬಂದಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಣಾ ಕೇಂದ್ರದಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಜಿಲ್ಲಾಧಿಕಾರಿ ಆನಂದ್ ಕೆ ಸ್ಪಷ್ಟನೆ ಕೂಡ ನೀಡಿದ್ದಾರೆ.

ಬಸ್​​ ಅಡ್ಡಗಟ್ಟಿ ಕಂಡಕ್ಟರ್‌ಗೆ ಥಳಿಸಿದ ಆಟೋ ಚಾಲಕ: ವಿಡಿಯೋ ಮಾಡುತ್ತಿದ್ದ ಪ್ರಯಾಣಿಕನಿಗೂ ಹಲ್ಲೆ!

ಬಸ್​​ ಅಡ್ಡಗಟ್ಟಿ ಕಂಡಕ್ಟರ್‌ಗೆ ಥಳಿಸಿದ ಆಟೋ ಚಾಲಕ: ವಿಡಿಯೋ ಮಾಡುತ್ತಿದ್ದ ಪ್ರಯಾಣಿಕನಿಗೂ ಹಲ್ಲೆ!

Vijayapura News: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯನಿರತ ನಿರ್ವಾಹಕನ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ಬಸ್​​​​ ನಿರ್ವಾಹಕ ಮಲ್ಲು ಲಮಾಣಿ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಲಾಗಿದೆ.

ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ: 14 ಕ್ರಸ್ಟ್ ಗೇಟ್‌ಗಳು ಓಪನ್​​

ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ: 14 ಕ್ರಸ್ಟ್ ಗೇಟ್‌ಗಳು ಓಪನ್​​

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಗೆ ಮಹಾರಾಷ್ಟ್ರ ಮತ್ತು ಕೃಷ್ಣಾ ಕಣಿವೆಯ ಉತ್ತಮ ಮಳೆಯಿಂದ ಜೀವಕಳೆ ಬಂದಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನ 14 ಕ್ರಸ್ಟ್ ಗೇಟ್‌ಗಳನ್ನು ಈ ವರ್ಷದಲ್ಲಿ ಮೊದಲ ಬಾರಿಗೆ ತೆರೆಯಲಾಗಿದ್ದು, ಜಲಾಶಯಕ್ಕೆ 73,162 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 43,567 ಕ್ಯೂಸೆಕ್ ನೀರನ್ನು ಬಸವಸಾಗರಕ್ಕೆ ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.