ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
ವಿಜಯಪುರದಲ್ಲೊಂದು ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಸ್ವಿಫ್ಟ್ ಡಿಸೈರ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರನ್ನು ಉತ್ನಾಳ ಮತ್ತು ಜುಮನಾಳ ಗ್ರಾಮಗಳ ನಿವಾಸಿಗಳೆಂದು ಗುರುತಿಸಲಾಗಿದೆ.
- Ashok Yadalli
- Updated on: Mar 17, 2025
- 4:01 pm
ರನ್ಯಾ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಸಚಿವರ ನಂಟಿನ ರಹಸ್ಯದ ಬಗ್ಗೆ ಯತ್ನಾಳ್ ಸ್ಫೋಟಕ ಸುಳಿವು
ರನ್ಯಾ ರಾವ್ ಚಿನ್ನ ಅಕ್ರಮ ಸಾಗಾಟ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಟಿ ಜೊತೆ ಲಿಂಕ್ ಹೊಂದಿರುವ ಸಚಿವರ ಹೆಸರನ್ನು ಸೋಮವಾರ ಸದನದಲ್ಲಿ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಇದರೊಂದಿಗೆ, ಚಿನ್ನ ಸ್ಮಗ್ಲಿಂಗ್ ಪ್ರಕರಣ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದ ನಂಟು ಹೊಂದಿರುವ ಸಚಿವರು ಯಾರು? ನಾಳೆ ಯತ್ನಾಳ್ ಹೆಸರು ಬಹಿರಂಗಪಡಿಸಿದ ನಂತರ ಏನಾಗಬಹುದು? ಸದನದಲ್ಲಿ ಭಾರಿ ಕೋಲಹಲ ಮೂಡಬಹುದೇ ಎಂಬ ಪ್ರಶ್ನೆಗಳು ಸೃಷ್ಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಯತ್ನಾಳ್ ಹೇಳಿಕೆಯ ವಿವರಗಳು ಇಲ್ಲಿವೆ.
- Ashok Yadalli
- Updated on: Mar 16, 2025
- 3:36 pm
ವಿಜಯಪುರದಲ್ಲೊಂದು ಮನಕಲಕುವ ಘಟನೆ: ಮಕ್ಕಳನ್ನ ನಂಬಿ ಸಾಲ ಕೊಡಿಸಿದ್ದ ವೃದ್ದ ದಂಪತಿ ಬೀದಿಗೆ
ಕೆಟ್ಟ ಮಕ್ಕಳಿರುತ್ತಾರೆ, ಆದರೆ ಕೆಟ್ಟ ತಂದೆ ತಾಯಿಗಳು ಇರಲ್ಲ ಎಂಬ ಮಾತು ಇಲ್ಲಿ ನಿಜವಾಗಿದೆ. ತಮ್ಮ ಮಗಾ ಚೆನ್ನಾಗಿರಬೇಕು ಎಂದು ಸಹಾಯ ಮಾಡಿದ ವೃದ್ದ ತಂದೆ ತಾಯಿ ಇದೀಗ ಅದೇ ಮಗನಿಂದಲೇ ಬೀದಿ ಪಾಲಾಗಿದ್ದಾರೆ. ಮಗನಿಗೆ ಮಿಡಿದ ಹೆತ್ತ ಕರಳು ಇದೀಗ ಕಣ್ಣೀರು ಹಾಕುತ್ತಾ, ರಸ್ತೆ ಮೇಲೆ ದಿನಗಳನ್ನು ಕಳೆಯುತ್ತಿದ್ದಾರೆ. ಪಾಪಿ ಮಗನಿಂದ ಸಂಕಷ್ಟಕ್ಕೆ ಸಿಲುಕಿದ ವೃದ್ದ ದಂಪತಿಯ ಮನಕಲಕುವ ಘಟನೆ ವಿವರ ಇಲ್ಲಿದೆ.
- Ashok Yadalli
- Updated on: Mar 15, 2025
- 11:03 am
ವಿಜಯಪುರದಲ್ಲಿ ಅಕ್ರಮ ಕಸಾಯಿಖಾನೆಗಳ ದರ್ಬಾರ್: ಜಾನುವಾರುಗಳ ತ್ಯಾಜ್ಯ ಚರಂಡಿಗೆ, ದುರ್ವಾಸನೆ
ವಿಜಯಪುರದ ವಾರ್ಡ್ ನಂಬರ್ 7 ರ ಶಾಪೂರ ಅಗಸಿಯಲ್ಲಿ, ಅಕ್ರಮ ಕಸಾಯಿಖಾನೆಗಳು ಹೆಚ್ಚುತ್ತಿವೆ. ಜಾನುವಾರುಗಳ ರಕ್ತ ಮತ್ತು ತ್ಯಾಜ್ಯ ಚರಂಡಿಗೆ ಬಿಡಲಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆನ್ನಲಾಗುತ್ತಿದೆ. ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಮತ್ತು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
- Ashok Yadalli
- Updated on: Mar 13, 2025
- 5:53 pm
ಮೊಣಕಾಲು ಮತ್ತು ಚಪ್ಪೆಯ ಎಲಬು ಮರು ಜೋಡಣೆ ಶಸ್ತ್ರಚಿಕಿತ್ಸೆ ಮಾಡಿ ಸೈ ಎನಿಸಿಕೊಂಡ ವಿಜಯಪುರ ಜಿಲ್ಲಾಸ್ಪತ್ರೆ ವೈದ್ಯರು
ವಿಜಯಪುರ ಜಿಲ್ಲಾಸ್ಪತ್ರೆಯು ಮೊಣಕಾಲು ಮತ್ತು ಚಪ್ಪೆಯ ಎಲುಬು ಮರುಜೋಡಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿಮುಗಿಸಿದೆ. ಇದು ಖಾಸಗಿ ಆಸ್ಪತ್ರೆಗಳಿಗೆ ಹೋಲಿಸಿದರೆ ಬಹಳ ಅಗ್ಗವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ ಲಭ್ಯವಿದ್ದು, ಬಡ ರೋಗಿಗಳು ಪ್ರಯೋಜನ ಪಡೆಯಬಹುದಾಗಿದೆ. ಆಪರೇಷನ್ಗೆ ಒಳಗಾದವರು ಸಂತಸ ವ್ಯಕ್ತಪಡಿಸಿದ್ದಾರೆ.
- Ashok Yadalli
- Updated on: Mar 12, 2025
- 8:21 pm
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಆಡಿದ್ದ ವಿಜಯಪುರದ ಆಟಗಾರನಿಗೆ ಇದೆಂಥ ಸ್ಥಿತಿ, ಗುಡಿಸಿಲಿನಲ್ಲಿ ವಾಸ
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಆಡಿದ್ದ ವಿಜಯಪುರದ ಆಟಗಾರ ಇನ್ನೂ ಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಸೂಕ್ತವಾದ ವಸತಿ ಮತ್ತು ಆರ್ಥಿಕ ನೆರವು ಅವರಿಗೆ ಇನ್ನೂ ದೊರೆತಿಲ್ಲ. ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ಸಹಾಯದ ಅಗತ್ಯವಿದೆ. ವಿಕಲಚೇತನ ಕ್ರಿಕೆಟ್ ಲೋಕದಲ್ಲಿ ಮತ್ತಷ್ಟು ಸಾಧನೆ ಮಾಡಲು ರಾಜೇಶ್ ಅವರಿಗೆ ಸಾದ್ಯವಾಗುತ್ತದೆ ಎಂದು ಸ್ನೇಹಿತರು ಹೇಳಿದ್ದಾರೆ.
- Ashok Yadalli
- Updated on: Mar 5, 2025
- 8:56 am
ರಜೆ ಸಿಗಲಿಲ್ಲ, ಮಗ ಉಳಿಯಲಿಲ್ಲ, ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು: ಕಾನ್ಸಸ್ಟೇಬಲ್ ಅಳಲು
ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಎ.ಎಸ್. ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದಿಂದ ಮೃತಪಟ್ಟಿದೆ. ಮಗು ಆಸ್ಪತ್ರೆಗೆ ದಾಖಲಾಗಿದ್ದಾಗ ಅಧಿಕಾರಿಗಳು ರಜೆ ನೀಡಿಲ್ಲ ಎಂದು ಕಾನ್ಸ್ಟೆಬಲ್ ಎ.ಎಸ್. ಬಂಡುಗೋಳ ಆರೋಪ ಮಾಡಿದ್ದಾರೆ. ಹಿರಿಯ ಅಧಿಕಾರಿಗಳು ರಜೆ ನೀಡದಿದ್ದಕ್ಕೆ ಕಾನ್ಸ್ಟೆಬಲ್ ಎ.ಎಸ್. ಬಂಡುಗೋಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಿದ್ದರೆ ಏನಿದು ಪ್ರಕರಣ? ಇಲ್ಲಿದೆ ವಿವರ
- Ashok Yadalli
- Updated on: Mar 4, 2025
- 11:52 am
ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ: ಬಬಲಾದಿಯ ಸದಾಶಿವ ಮುತ್ಯಾ ಕಾಲಜ್ಞಾನ ಭವಿಷ್ಯ
ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಅವರು 2025ರ ಕುರಿತು ಆಘಾತಕಾರಿ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ಬದಲಾವಣೆ, ಭೂಕಂಪ, ಅಗ್ನಿ ಅನಾಹುತಗಳು, ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ರಾಜಕೀಯ ಅಸ್ಥಿರತೆ ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ವಿವರಗಳಿಗೆ ಮುಂದೆ ಓದಿ.
- Ashok Yadalli
- Updated on: Mar 1, 2025
- 2:51 pm
24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದ ವ್ಯಕ್ತಿಯನ್ನು ಮನೆ ಸೇರಿಸಿದ ಕುಂಭಮೇಳ
ಉತ್ತರಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರೋ ಮಹಾಕುಂಭ ಮೇಳಕ್ಕೆ ತೆರೆ ಬೀಳುತ್ತಿದೆ. 45 ಕೋಟಿ ಜನರು ಪುಣ್ಯ ಸ್ನಾನ ಮಾಡಿದರು ಎನ್ನಲಾಗುತ್ತಿದೆ. ಇನ್ನು ಪ್ರಯಾಗ್ ರಾಜ್ ಗೆ ಹೋಗುವಾಗ ಅನೇಕ ತೊಂದರೆಗಳು ಟ್ರಾಫಿಕ್ ಜಾಮ್ ಸಮಸ್ಯೆ ಅಪಘಾತವಾಗಿ ಅನೇಕರ ಸಾವು ನೋವು ಘಟನೆಗಳು ನಡೆದಿವೆ. ಇಷ್ಟರ ಮದ್ಯೆ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭ ಮೇಳ 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವನನ್ನು ವಾಪಸ್ ಮನೆಗೆ ಕರೆ ತರುವುದಕ್ಕೆ ಕಾರಣವಾಗಿದೆ.
- Ashok Yadalli
- Updated on: Feb 25, 2025
- 11:17 pm
ರಸ್ತೆ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಕುಂಭಮೇಳ ಯಾತ್ರಿಕರ ಸಾವು
ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದ ವಿಜಯಪುರ ಜಿಲ್ಲೆಯ ಇಬ್ಬರು ಯಾತ್ರಿಗಳು ಗುಜರಾತ್ನ ಪೋರ್ಬಂದರ್ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚಡಚಣದ ವಿಶ್ವನಾಥ ಅವಜಿ ಮತ್ತು ಮಲ್ಲಿಕಾರ್ಜುನ ಸದ್ದಲಗಿ ಮೃತರು. 17 ಜನರ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದ ವಾಹನ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ. ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
- Ashok Yadalli
- Updated on: Feb 25, 2025
- 1:34 pm
ಕಿರುಸಾಲ, ಬಡ್ಡಿ ವ್ಯವಹಾರ: ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯ 104 ಕಡೆ ಪೊಲೀಸರು ದಾಳಿ
ವಿಜಯಪುರ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಅಕ್ರಮ ಬಡ್ಡಿ ವ್ಯವಹಾರ ನಡೆಸುವವರಿಗೆ ಸಂಬಂಧಿಪಟ್ಟ ಸ್ಥಳಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯಲ್ಲಿ 104 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ನಗದು, ಚೆಕ್ಗಳು ಮತ್ತು ಇತರ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
- Ashok Yadalli
- Updated on: Feb 20, 2025
- 8:29 pm
ವಿಜಯಪುರ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ್ಯಾಗಿಂಗ್: ಪ್ರಧಾನಿಗೆ ದೂರು, ಐವರ ಬಂಧನ
ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯ ಮೇಲೆ ರ್ಯಾಗಿಂಗ್ ಆರೋಪ ಕೇಳಿಬಂದಿದೆ. ಹಮೀಮ್ ಎಂಬ ವಿದ್ಯಾರ್ಥಿ, ಸೀನಿಯರ್ಸ್ ಹಲ್ಲೆ ಮತ್ತು ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಿ ಪ್ರಧಾನಿ ಮತ್ತು ರಾಜ್ಯ ಮುಖ್ಯಮಂತ್ರಿಗಳಿಗೆ ಟ್ವೀಟ್ ಮಾಡಿದ್ದಾರೆ. ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
- Ashok Yadalli
- Updated on: Feb 19, 2025
- 9:05 pm