ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
ವಿಜಯಪುರ: ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ 10 ತಿಂಗಳ ಪುಟ್ಟ ಪೋರ!
ವಿಜಯಪುರ ಜಿಲ್ಲೆಯ 10 ತಿಂಗಳ ಪುಟ್ಟ ಬಾಲಕ ರಿಯಾನ್ಸ್ ಪಟ್ಟಣಶೆಟ್ಟಿ ಕೇವಲ 36 ಸೆಕೆಂಡುಗಳಲ್ಲಿ 21 ಮೆಟ್ಟಿಲುಗಳನ್ನು ಹತ್ತುವ ಮೂಲಕ ‘ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಾಧನೆ ಮಾಡಿದ್ದಾನೆ. ಬಾಲಕನ ಈ ಅಸಾಧಾರಣ ಪ್ರತಿಭೆಗೆ ಸಿಎಂ ಡಿಕೆ ಶಿವಕುಮಾರ್ ಕೂಡ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
- Ashok Yadalli
- Updated on: Jul 11, 2026
- 7:37 am
ವಿಜಯಪುರ: ಡಿವೈಡರ್ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಸೇರಿದಂತೆ ತಾಯಿಯೂ ಸಾವು
Vijayapura car accident: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.
- Ashok Yadalli
- Updated on: Jul 10, 2026
- 8:56 pm
ವಿಜಯಪುರ: ಬರಡಾಗಿದ್ದ ಭೂಮಿಯಲ್ಲಿ ಈಗ ಹಾಲಿನ ಹೊಳೆ! ಬಬಲೇಶ್ವರದಲ್ಲಿ ಕ್ಷೀರಕ್ರಾಂತಿ
Vijayapura News: ಒಂದು ಕಾಲದಲ್ಲಿ ಬರಗಾಲದ ಹಣೆಪಟ್ಟಿ ಹೊತ್ತಿದ್ದ ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಈಗ ಸದ್ದಿಲ್ಲದೆ ಕ್ಷೀರಕ್ರಾಂತಿ ಆರಂಭವಾಗಿದೆ. ಸಚಿವ ಎಂಬಿ ಪಾಟೀಲ್ ಮುನ್ನೋಟ ಹಾಗೂ ಬಿಎಲ್ಡಿಇ ಸಂಸ್ಥೆ, ಅಕ್ಷಯಕಲ್ಪ ಮತ್ತು ಕೃಷಿಕಲ್ಪ ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಹಳ್ಳಿಗಳ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತಿದ್ದು, ಇದು ರೈತರ ಆರ್ಥಿಕ ಸ್ವಾವಲಂಬನೆಗೆ ಹೊಸ ದಾರಿ ದೀಪವಾಗಿದೆ.
- Ashok Yadalli
- Updated on: Jul 6, 2026
- 2:12 pm
ಮಧ್ಯಾಹ್ನ ಆದ್ರೆ ಸಾಕು ಬಾರ್, ಡಾಬಾಗಳೇ ಇವ್ರ ಅಡ್ಡ! ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ
ಕರ್ತವ್ಯ ವೇಳೆಯೇ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮದ್ಯಪಾನ ಪಾರ್ಟಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋಗಳು ವೈರಲ್ ಆಗಿವೆ. ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಕ್ರಮವಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Ashok Yadalli
- Updated on: Jun 25, 2026
- 5:00 pm
ಬಿಡದಿ ಜಮೀನು ವಿವಾದ: ‘ನನ್ನ ಹೆಸರಲ್ಲಿರೋದು 32 ಎಕರೆ ಮಾತ್ರ, ನೂರಲ್ಲ; ನೋವಾಗಿದ್ದರೆ ವಿಷಾದಿಸುವೆ ಎಂದ ಸಚಿವ
ಬಿಡದಿ ಸ್ಮಾರ್ಟ್ ಟೌನ್ಶಿಪ್ ಭೂಸ್ವಾಧೀನ ಕುರಿತು ರಾಜಕೀಯ ವಿವಾದ ಭುಗಿಲೆದ್ದಿದೆ. ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿ 100 ಎಕರೆ ಜಮೀನಿದೆ ಎಂದು ಸಚಿವ ಎಂ.ಬಿ. ಪಾಟೀಲ್, ಆರೋಪಿಸಿದ್ದು, ಇದಕ್ಕೆ ಸ್ವತಃ ಅನಿತಾ ಸ್ಪಷ್ಟನೆ ನೀಡಿ ತಮ್ಮ ಹೆಸರಿನಲ್ಲಿ ಅಷ್ಟು ಜಮೀನು ಇಲ್ಲ ಎಂದಿದ್ದಾರೆ. ಇನ್ನೊಂದೆಡೆ ಸುಳ್ಳು ಆರೋಪಗಳಿಗೆ ಮಾನಹಾನಿ ಮೊಕದ್ದಮೆ ಹೂಡುವುದಾಗಿ ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ಇದರ ಬೆನ್ನಲ್ಲೇ ಎಂಬಿ ಪಾಟೀಲ್ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
- Ashok Yadalli
- Updated on: Jun 24, 2026
- 3:17 pm
ಖಗೋಳ ವಿಸ್ಮಯ: ವಿಜಯಪುರದಲ್ಲಿ ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣದ ಉಂಗುರ!
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದಲ್ಲಿ ಅಪರೂಪದ ಖಗೋಳ ವಿಸ್ಮಯವೊಂದು ಕಾಣಿಸಿದೆ. ಶನಿವಾರ ಬೆಳಿಗ್ಗೆ ಆಕಾಶದಲ್ಲಿ ಸೂರ್ಯನ ಸುತ್ತಲೂ ಸೃಷ್ಟಿಯಾದ ಆಕರ್ಷಕ ಸ್ವರ್ಣ ವರ್ಣದ ಉಂಗುರಾಕೃತಿಯನ್ನು (Sun Halo) ಕಂಡು ಸಾರ್ವಜನಿಕರು ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಬೆರಗಾಗಿದ್ದಾರೆ. ಸೂರ್ಯನ ಸುತ್ತ ಸೃಷ್ಟಿಯಾದ ಸ್ವರ್ಣ ವರ್ಣದ ಉಂಗುರಾಕೃತಿಯ ವಿಡಿಯೋ ಇಲ್ಲಿದೆ.
- Ashok Yadalli
- Updated on: Jun 20, 2026
- 2:56 pm
ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಲೀಗ್: ಇಲ್ಲಿವೆ ರೇಸ್ನ ರೋಚಕ ಕ್ಷಣಗಳು!
ಸೈಕ್ಲಿಸ್ಟ್ಗಳ ತವರೂರು ವಿಜಯಪುರದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್' ಪ್ರಥಮ ಬಾರಿಗೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಪ್ರೊಫೆಷನಲ್ ಹಾಗೂ ಸಾಮಾನ್ಯ ವಿಭಾಗಗಳಲ್ಲಿ ನೂರಾರು ಮಹಿಳಾ ಕ್ರೀಡಾಪಟುಗಳು ಭಾಗವಹಿಸಿ ಪದಕ ಮುಡಿಗೇರಿಸಿಕೊಂಡರು. 2028ರ ಒಲಿಂಪಿಕ್ಸ್ ಸಿದ್ಧತೆಗೆ ಪೂರಕವಾದ ಈ ಕ್ರೀಡಾಕೂಟದ ಕೆಲ ಚಿತ್ರಗಳು ಇಲ್ಲಿವೆ.
- Ashok Yadalli
- Updated on: Jun 14, 2026
- 9:41 am
ಚಡಚಣ ಬ್ಯಾಂಕ್ ದರೋಡೆಯಾಗಿ 9 ತಿಂಗಳಾದರೂ ಸಿಗದ ಚಿನ್ನ: ಬ್ಯಾಂಕ್ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ
ವಿಜಯಪುರ ಜಿಲ್ಲೆಯ ಚಡಚಣ ಎಸ್ಬಿಐ ಬ್ಯಾಂಕ್ನಲ್ಲಿ 9 ತಿಂಗಳ ಹಿಂದೆ ನಡೆದಿದ್ದ 20 ಕೆಜಿ ಚಿನ್ನದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾತು ಕೊಟ್ಟರೂ ಪರಿಹಾರ ನೀಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗ್ರಾಹಕರು ರಾತ್ರಿಯಿಡೀ ಬ್ಯಾಂಕ್ಗೆ ಬೀಗ ಹಾಕಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಸಂಧಾನ ನಡೆಸಿದ್ದಾರೆ.
- Ashok Yadalli
- Updated on: Jun 11, 2026
- 9:48 am
ವಿಜಯಪುರ: ಎಸ್ಪಿ ಲಕ್ಷ್ಮಣ ನಿಂಬರಗಿ ಹೆಸರಲ್ಲೇ ನಕಲಿ ಫೇಸ್ಬುಕ್ ಖಾತೆ! ಲಕ್ಷ ಲಕ್ಷ ಪೀಕಿದ್ದ ಕಿಲಾಡಿ ಅಂದರ್
ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಪಿಡಬ್ಲ್ಯೂಡಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ 5 ಲಕ್ಷ ರೂಪಾಯಿಗೂ ಹೆಚ್ಚು ವಂಚಿಸಿದ್ದ ಬೆಳಗಾವಿ ಮೂಲದ ವ್ಯಕ್ತಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗೋಗಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ.
- Ashok Yadalli
- Updated on: Jun 8, 2026
- 2:05 pm
ವಿಜಯೇಂದ್ರ ಮತ್ತು ಅಶೋಕ್ಗೆ ಹುಷಾರ್ ಆಗಿರಿ ಎಂದಿದ್ದೇಕೆ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿದ್ದರಾಮಯ್ಯರ ರಾಜಕೀಯ ಶೈಲಿಯನ್ನು ಪ್ರಶಂಸಿಸಿದ್ದು, ಅವರು ವೈಯಕ್ತಿಕ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಹೇಳಿದ್ದಾರೆ. ಇದರ ಜೊತೆಗೆ, ಭೀಮಾ ನದಿದಂಡೆಯಲ್ಲಿ ಹೆಚ್ಚುತ್ತಿರುವ ಅಪರಾಧ ಮತ್ತು ಕೊಲೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಅಪರಾಧಿಗಳಿಗೆ ಶಿಕ್ಷೆ ನೀಡುವಂತೆ ಎಸ್ಪಿ ಅವರಿಗೆ ಮನವಿ ಮಾಡಿದ್ದಾರೆ.
- Ashok Yadalli
- Updated on: May 31, 2026
- 3:51 pm
ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಸಿಬ್ಬಂದಿ ನೇಮಕಾತಿ ಹಾಗೂ ಪಿಎಚ್ಡಿ ಪದವಿ ಪ್ರದಾನ ವಿಚಾರವಾಗಿ ಗಂಭೀರ ಭ್ರಷ್ಟಾಚಾರ ಮತ್ತು ನಿಯಮಬಾಹಿರ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಸರ್ಕಾರದ ಅನುಮತಿ ಪಡೆಯದೆ ಸಿಬ್ಬಂದಿ ನೇಮಕ ಮತ್ತು ಪಿಎಚ್ಡಿ ಪ್ರವೇಶದಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.
- Ashok Yadalli
- Updated on: May 29, 2026
- 6:35 pm
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ 6 ಮಂದಿಯ ಬರ್ಬರ ಕೊಲೆ
ವಿಜಯಪುರದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆ ನ್ಯಾಯ ಪಂಚಾಯತಿಗೆಂದು ತೆರಳಿದ್ದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದಿದೆ. ಭೀಕರ ಕೊಲೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಅಮಾನುಷ ಕೃತ್ಯ ಭಾರಿ ಚರ್ಚೆಗೂ ಗ್ರಾಸವಾಗಿದೆ.
- Ashok Yadalli
- Updated on: May 29, 2026
- 7:49 pm