ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿ, ವಿಜಯಪುರ

Author - TV9 Kannada

ashok.yadalli@tv9.com

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….

Read More
ವಿಜಯಪುರದಲ್ಲಿ ರೈತರ ಜಮೀನು ವಕ್ಫ್​ ಬೋರ್ಡ್​ಗೆ ಸೇರಿಸುವ ಹುನ್ನಾರ: ಆತಂಕಗೊಂಡ ಅನ್ನದಾತರು

ವಿಜಯಪುರದಲ್ಲಿ ರೈತರ ಜಮೀನು ವಕ್ಫ್​ ಬೋರ್ಡ್​ಗೆ ಸೇರಿಸುವ ಹುನ್ನಾರ: ಆತಂಕಗೊಂಡ ಅನ್ನದಾತರು

ವಿಜಯಪುರ ಜಿಲ್ಲೆಯಲ್ಲಿ ವಕ್ಪ್ ಕಾಯ್ದೆ ಬಗ್ಗೆ ಚರ್ಚೆ ತೀವ್ರಗೊಂಡಿದ್ದು, ಕೆಲ ರೈತರ ಜಮೀನುಗಳ ಆರ್​ಟಿಸಿಯಲ್ಲಿ ವಕ್ಫ್ ಸೇರಿಸಲು ಅಧಿಕಾರಿಗಳು ಮುಂದಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೇ ಕೆಲ ರೈತರಿಗೆ ನೋಟಿಸ್​ ಸಹ ನೀಡಲಾಗಿದೆ. ಇದರಿಂದ ಆತಂಕಗೊಂಡ ರೈತರು ಸಚಿವ ಎಂಪಿ ಪಾಟೀಲ್​ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಇದಕ್ಕೆ ಬಿಜೆಪಿ ಸಹ ಸರ್ಕಾರದ ವಿರುದ್ಧ ಕಿಡಿಕಾರಿದೆ.

ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್​ ವಿರುದ್ಧ ದೂರು

ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್​ ವಿರುದ್ಧ ದೂರು

ಅಕ್ಟೋಬರ್​ 15 ರಂದು ವಿಜಯಪುರ ನಗರದಲ್ಲಿ ವಕ್ಫ್​ ಹಠಾವೋ ದೇಶ ಬಚಾವೋ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಭಾಷಣ ಮಾಡುವ ಭರದಲ್ಲಿ ಸಂಸದ ರಾಹುಲ್​ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್​ ಅಹ್ಮದ್​ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದರು.

ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್: ಸತತ 3 ಬಾರಿ ಅಮಾನತ್ತಾಗಿ ಹ್ಯಾಟ್ರಿಕ್ ಸಾಧನೆ

ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್: ಸತತ 3 ಬಾರಿ ಅಮಾನತ್ತಾಗಿ ಹ್ಯಾಟ್ರಿಕ್ ಸಾಧನೆ

ವಿಜಯಪುರ ಡಿಡಿಪಿಐ ಎನ್‌.ಎಚ್.ನಾಗೂರು ಮತ್ತೆ ಸಸ್ಪೆಂಡ್(suspended) ಆಗಿದ್ದು, ಈ ಮೂಲಕ ಸತತ ಮೂರು ಬಾರಿ ಅಮಾನತಾಗಿದ್ದಾರೆ. ಈ ಹಿಂದೆ 2024 ಜನವರಿ 30 ರಂದು EDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅಮಾನತಾಗಿದ್ದಾರೆ.

Yatnal vs Muslim Leaders: ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್​ ಸವಾಲ್​

Yatnal vs Muslim Leaders: ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್​ ಸವಾಲ್​

ವಿಜಯಪುರ ಜಿಲ್ಲೆಯಲ್ಲಿ ಮುಸ್ಲಿಂ ಮುಖಂಡರು ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ನಡುವೆ ಮಾತಿನ ಸಮರ ಆರಂಭವಾಗಿದೆ. ಸಿಡಿ ಬಿಡುಗಡೆ ಮಾಡುತ್ತೇವೆ ಅಂತ ಬಹಿರಂಗ ಎಚ್ಚರಿಕೆ ನೀಡಿದ್ದ ಮುಸ್ಲಿಂ ಮುಖಂಡರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಕಿಡಿ ಕಾರಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಸಿಡಿ ಶಾಕ್ ಕೊಟ್ಟ ಮುಸ್ಲಿಂ ಮುಖಂಡರು

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಸಿಡಿ ಶಾಕ್ ಕೊಟ್ಟ ಮುಸ್ಲಿಂ ಮುಖಂಡರು

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಆಗಾಗ ಸಿಡಿ ಸುದ್ದು ಮಾಡುತ್ತಿರುತ್ತದೆ. ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಸಿಡಿಗಳು ಇವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಕೆಲ ಸಿಡಿಗಳು ರಿಲೀಸ್ ಆಗಿವೆ. ಇನ್ನೂ ಕೆಲವು ಹಾಗೆ ಮರೆಯಾಗಿ ಉಳಿದಿವೆ. ಇದರ ಮಧ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದು, ಸಿಡಿ ಬಿಡುಗಡೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಮೇಲೆ ಹೊರಬಂದ ವಿಜಯಪುರದ ಆರೋಪಿಗಳಿಗೆ ಅದ್ದೂರಿ ಸ್ವಾಗತ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಮೇಲೆ ಹೊರಬಂದ ವಿಜಯಪುರದ ಆರೋಪಿಗಳಿಗೆ ಅದ್ದೂರಿ ಸ್ವಾಗತ

ಕಳೆದ 2017 ರ ಸೆಪ್ಟಂಬರ್ 5 ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ವಿಜಯಪುರದ ಇಬ್ಬರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಕಳೆದ 6 ವರ್ಷಗಳಿಂದ ಕಾರಾಗೃಹದಲ್ಲಿದ್ದ ಪರಶುರಾಮ್, ಮನೋಹರ್​ ವಾಪಸ್​​ ತವರಿಗೆ ಆಗಮಿಸಿದ್ದು, ಹಿಂದೂ ಸಂಘಟನೆ ಮುಖಂಡರಿಂದ ಸ್ವಾಗತ, ಸನ್ಮಾನ ಮಾಡಲಾಗಿದೆ.

ದಸರಾ ಹಬ್ಬದಲ್ಲಿ ಅನ್ಯ ಕೋಮಿನವರ ಬಳಿ ವ್ಯಾಪಾರ ಮಾಡಬಾರದು- ಯತ್ನಾಳ್​ ವಿವಾದಾತ್ಮಕ ಹೇಳಿಕೆ

ದಸರಾ ಹಬ್ಬದಲ್ಲಿ ಅನ್ಯ ಕೋಮಿನವರ ಬಳಿ ವ್ಯಾಪಾರ ಮಾಡಬಾರದು- ಯತ್ನಾಳ್​ ವಿವಾದಾತ್ಮಕ ಹೇಳಿಕೆ

ಹಿಜಾಬ್ ವಿಚಾರ, ಹಲಾಲ್ ಕಟ್, ಜಟಕಾ ಕಟ್ ವಿಚಾರ ರಾಜ್ಯದಲ್ಲಿ ಪ್ರತಿಧ್ವನಿಸಿದ ಬಳಿಕ ಕೋಮು ಸೌಹಾರ್ದತೆಯ ವಿಚಾರವಾಗಿ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಇದರ ಜೊತೆಗೆ ಹಿಂದೂ ಸಮಾಜದ ಹಬ್ಬ ಹರಿ ದಿನಗಳು ಬಂದಾಗ ಅನ್ಯ ಕೋಮಿನವರ ಜೊತೆಗೆ ವ್ಯಾಪಾರ ವಹಿವಾಟು ನಡೆಸುವ ವಿಚಾರವೂ ಚರ್ಚೆಗೆ ಬರುತ್ತಿದೆ. ಈ ವಿಚಾರದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​, ಹಿಂದೂ ಸಮಾಜದ ಹಬ್ಬಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಬಳಿ ಖರೀಧಿ ಮಾಡಬೇಡಿ ಎಂದು ಹೇಳುತ್ತಲೇ ಬಂದಿದ್ಧಾರೆ. ಸಧ್ಯ ನಾಡಹಬ್ಬ ದಸರಾದಲ್ಲೂ ಮುಸ್ಲಿಂ ವ್ಯಾಪಾರಸ್ಥರ ಬಳಿ ವ್ಯಾಪಾರ ವಹಿವಾಟು ಮಾಡಬಾರದು ಎಂದು ಪ್ರಕಟಣೆ ನೀಡಿದ್ದಾರೆ. ಈ ಕುರಿತ ವರದಿ ಇಲ್ಲಿದೆ.

ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯರನ್ನು ಹಾಡಿಹೊಗಳಿದ ವಿಜಯಪುರ ಮಹಿಳೆ

ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯರನ್ನು ಹಾಡಿಹೊಗಳಿದ ವಿಜಯಪುರ ಮಹಿಳೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ಎಂಬುವವರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ದೇವಿಗೆ ಬೆಳ್ಳಿ ಕಿರೀಟ ಮಾಡಿಸಿರುವಂತಹ ಘಟನೆ ನಡೆದಿದೆ. ಈ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ವಿಜಯಪುರದ ಮಹಿಳೆ..!

ಗೃಹಲಕ್ಷ್ಮಿ ಯೋಜನೆ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ವಿಜಯಪುರದ ಮಹಿಳೆ..!

ಯಾರೇನೇ ಹೇಳಲಿ, ಸಿದ್ದರಾಮಯ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಹಣವನ್ನು ಕೆಲ ಗೃಹಿಣಿಯರು ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇಂದು (ಅ,11) ಆಯುಧ ಪೂಜೆ ದಿನದಂದು ಬೆಳಗಾವಿ ಜಿಲ್ಲೆಯ ಮಹಿಳೆಯೊಬ್ಬರು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದಲೇ ತನ್ನ ಮಗನಿಗೆ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರದಲ್ಲಿ ಯಜಮಾನಿ ನಾಡದೇವಿಗೆ ಕಿರೀಟ ಮಾಡಿಸಿ ನೀಡಿದ್ದಾರೆ.

ವಕ್ಫ್ ಆಸ್ತಿ ಬಸನಗೌಡ ಯತ್ನಾಳ್​​ ಅಪ್ಪನ ಆಸ್ತಿ ಅಲ್ಲ: ಜಮೀರ್​ ಕಿಡಿ

ವಕ್ಫ್ ಆಸ್ತಿ ಬಸನಗೌಡ ಯತ್ನಾಳ್​​ ಅಪ್ಪನ ಆಸ್ತಿ ಅಲ್ಲ ಎಂದು ಜಮೀರ್​ ಕಿಡಿ ಕಾಡಿದ್ದಾರೆ. ವಿಜಯಪುರ ನಗರದಲ್ಲಿ ವಕ್ಫ್​​ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್, ಇದು ನಿಮ್ಮಪ್ಪನ ಆಸ್ತಿ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ. ಸಮಾಜಕ್ಕೆ ಒಳ್ಳೇದಾಗಲೆಂದು ದಾನ ಮಾಡಿರುವ ಆಸ್ತಿ ಎಂದಿದ್ದಾರೆ.

ಗಣಿತದಲ್ಲಿ ಕಡಿಮೆ ಅಂಕ ಬಂತೆಂದು ವಿದ್ಯಾರ್ಥಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಕೋಚಿಂಗ್ ಸೆಂಟರ್​ನ ವಾರ್ಡನ್

ಗಣಿತದಲ್ಲಿ ಕಡಿಮೆ ಅಂಕ ಬಂತೆಂದು ವಿದ್ಯಾರ್ಥಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಕೋಚಿಂಗ್ ಸೆಂಟರ್​ನ ವಾರ್ಡನ್

ವಿದ್ಯಾರ್ಥಿ ಗಣಿತ ವಿಷಯದ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರೋ ಕಾರಣ ವಿದ್ಯಾರ್ಥಿಯ ತೊಡೆಭಾಗ‌ ಹಾಗೂ ಬೆನ್ನಿನ‌ ಮೇಲೆ ವಾರ್ಡನ್ ಹಲ್ಲೆ ಮಾಡಿದ್ದಾನೆ. ವಿಜಯಪುರ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರ ಭಾಗದಲ್ಲಿರೋ ಎಕ್ಷಲೆಂಟ್ ಕೋಚಿಂಗ್ ಸೆಂಟರ್‌ ನಲ್ಲಿ ಘಟನೆ ನಡೆದಿದೆ.

ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: ಆರೋಪಿ ಸೊಹೇಲ್, ಜುಬೇರ್ ಹೆಡೆಮುರಿ ಕಟ್ಟಿದ ಪೋಲಿಸರು

ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: ಆರೋಪಿ ಸೊಹೇಲ್, ಜುಬೇರ್ ಹೆಡೆಮುರಿ ಕಟ್ಟಿದ ಪೋಲಿಸರು

ಮಂಡ್ಯ, ದಾವಣಗೆರೆ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಮಾಡಿದ್ದ ದುರುಳರು ವಿಜಯಪುರದಲ್ಲೂ ಗಲಭೆ ಉಂಟು ಮಾಡಲು ಮುಂದಾಗಿದ್ದರು. ಆದರೆ, ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ‌ ಆರೋಪಿಗಳನ್ನು ಬಂಧಿಸಿದ್ದು, ಕೋಮ ಗಲಾಟೆ ತಪ್ಪಿಸಿದ್ದಾರೆ. ಮಾಡಬಾರದ ಕೆಲಸ ಮಾಡಿದ ಇಬ್ಬರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ