ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
ರೈಲ್ವೇ ಇಲಾಖೆಯಲ್ಲಿ ಉದ್ಯೋಗದ ಆಮಿಷ: 15 ಯುವಕರಿಗೆ ಒಟ್ಟು 1.50 ಕೋಟಿ ಮಕ್ಮಲ್ ಟೋಪಿ
ವಿಜಯಪುರದಲ್ಲಿ ರೈಲ್ವೇ ಉದ್ಯೋಗದ ಆಮಿಷವೊಡ್ಡಿ 15 ನಿರುದ್ಯೋಗಿ ಯುವಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಟಿಸಿ, ಸಿ ಮತ್ತು ಡಿ ದರ್ಜೆ ಹಾಗೂ ಸ್ಟೇಷನ್ ಮಾಸ್ಟರ್ ಹುದ್ದೆ ಕೊಡಿಸುವುದಾಗಿ ನಂಬಿಸಿ, ಆರೋಪಿಗಳು ನಕಲಿ ನೇಮಕಾತಿ ಪತ್ರಗಳನ್ನು ನೀಡಿದ್ದರು. ನಕಲಿ ತರಬೇತಿಯನ್ನೂ ಏರ್ಪಡಿಸಿದ್ದಾರೆ. ಐದು ವರ್ಷಗಳ ಹಿಂದೆಯೇ ಹಣ ನೀಡಿದ್ದ ಯುವಕರು ಈಗ ನ್ಯಾಯಕ್ಕಾಗಿ ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ.
- Ashok Yadalli
- Updated on: Dec 3, 2025
- 3:37 pm
ಕೂಲಿ ಕೆಲಸದವನ ಪ್ರಾಣ ಪಡೆದ ಅಕ್ರಮ ಸಂಬಂಧ: 6 ತಿಂಗಳ ಬಳಿಕ ಪ್ರಕರಣ ಭೇದಿಸಿದ ಖಾಕಿ
ವಿಜಯಪುರ ಜಿಲ್ಲಾ ಪೊಲೀಸರು 6 ತಿಂಗಳ ಹಿಂದೆ ಸಿಂದಗಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಯಾವುದೇ ಸಾಕ್ಷ್ಯ ದೊರೆಯದಿದ್ದರೂ, ಪೊಲೀಸರು ನಡೆಸಿದ ತೀವ್ರ ತನಿಖೆ ಹಾಗೂ ಬ್ರೇನ್ ಮ್ಯಾಪಿಂಗ್ ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎಂಬುದನ್ನು ಬಯಲಿಗೆಳೆದಿದೆ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
- Ashok Yadalli
- Updated on: Nov 21, 2025
- 5:37 pm
ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್
ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ದೈಹಿಕ ಸಂಬಂಧದ ವಿಡಿಯೋ ಮಾಡಿ 10 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ್ದರು. ಮ್ಯಾನೇಜರ್ ದೂರು ನೀಡಿದ ನಂತರ ನಾಲ್ವರಲ್ಲಿ ಪೈಕಿ ಆರೋಪಿ ಬಂಧಿತನಾಗಿದ್ದಾನೆ. ಇದು ಸರಣಿ ಹನಿಟ್ರ್ಯಾಪ್ ಪ್ರಕರಣಗಳ ಭಾಗವಾಗಿರುವ ಶಂಕೆ ವ್ಯಕ್ತವಾಗಿದೆ.
- Ashok Yadalli
- Updated on: Nov 19, 2025
- 9:04 am
ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ ಹತ್ಯೆ: ಕಾರಣವೇನು?
ಕಳೆದ ತಿಂಗಳು ಡಬಲ್ ಮರ್ಡರ್ ಹಾಗೂ ಮತ್ತೊಂದು ಕೊಲೆಗೆ ಸಾಕ್ಷಿಯಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಹೆಣ ಬಿದ್ದಿದೆ. ಸಹೋದರನ ಸಹಾಯದೊಂದಿಗೆ ಮಹಿಳೆ ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ತನ್ನ ಪ್ರಿಯಕರನನ್ನು ಕೊಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಪೊಲೀಸರು ಮಹಿಳೆ ಹಾಗೂ ಆಕೆಯ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
- Ashok Yadalli
- Updated on: Nov 17, 2025
- 3:31 pm
KBJNL ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಾಪತ್ತೆ
ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತವೊಂದು ನಡೆದಿದೆ. ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆಯಾಗಿದ್ದಾರೆ. ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿದ್ದಾರೆ.
- Ashok Yadalli
- Updated on: Nov 11, 2025
- 5:00 pm
ವಿಜಯಪುರದಲ್ಲಿ ಭೂಕಂಪದ ಗುಮ್ಮ: 2 ತಿಂಗಳಲ್ಲಿ 12ಕ್ಕೂ ಹೆಚ್ಚು ಬಾರಿ ನಡುಗಿದ ಭೂಮಿ, ಕಾರಣವೇನು?
ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಗುಮ್ಮ ಹೊಕ್ಕಿದೆ. ಸಿಂದಗಿ ಬಸವನಬಾಗೇವಾಡಿ ಹಾಗೂ ವಿಜಯಪುರ ಭಾಗಗಳಲ್ಲಿ ಭೂಮಿ ನಡುಗಿರೋ ಆತಂಕ ಮೇಲಿಂದ ಮೇಲೆ ಆಗುತ್ತಿದೆ. ಸಿಂದಗಿಯಲ್ಲಿ ಸರಣಿ ರೂಪದಲ್ಲಿ ಕಂಪನದ ಅನುಭವ ನಡೆದಿತ್ತು. ಇದೀಗ ಬಸವನಬಾಗೇವಾಡಿ ಹಾಗೂ ವಿಜಯಪುರ ತಾಲೂಕಿನ ಭಾಗಗಳಲ್ಲಿ ಭೂಮಿ ನಡುಗಿರೋ ಅನುಭವ ಉಂಟಾಗುತ್ತಿದ್ದು, ಇದು ಜನರ ಭಯಕ್ಕೆ ಕಾರಣವಾಗಿದೆ. ವಿಜ್ಞಾನಿಗಳ ತಂಡ ಆಗಮಿಸಿ ಪರೀಕ್ಷೆಯನ್ನಾದರೂ ಮಾಡಿ ದೈರ್ಯ ತುಂಬೋ ಕೆಲಸ ಮಾಡಬೇಕೆಂದು ಜನರು ಒತ್ತಾಯಿಸಿದ್ದಾರೆ.
- Ashok Yadalli
- Updated on: Nov 2, 2025
- 3:16 pm
ವಿಜಯಪುರದಲ್ಲಿ ವಾಸವಿದ್ದ ತಮಿಳುನಾಡು ಮೂಲದ ಉಗ್ರನ ಬಗ್ಗೆ ಹೊರಬಿತ್ತು ಸ್ಫೋಟಕ ಮಾಹಿತಿ: ಕರ್ನಾಟಕದ ಹಲವೆಡೆ ಓಡಾಡಿದ್ದ ಪಾತಕಿ
ವಿಜಯಪುರದಲ್ಲಿ ಕೆಲವು ತಿಂಗಳುಗಳ ಹಿಂದೆ ಬಂಧಿತನಾದ 1998ರ ಕೊಯಮತ್ತೂರು ಸ್ಫೋಟದ ಆರೋಪಿ ಉಗ್ರ ಟೈಲರ್ ರಾಜಾ ಮನೆಯಲ್ಲಿ ನಕಲಿ ಆಧಾರ್, ಬ್ಯಾಂಕ್ ಪಾಸ್ಬುಕ್ ಸೇರಿ ಹಲವು ದಾಖಲೆಗಳು ಪತ್ತೆಯಾಗಿವೆ. ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ನಡೆಸಿದ ಶೋಧದಲ್ಲಿ ಈ ಸಂಗತಿ ಬಹಿರಂಗವಾಗಿದೆ. ಇದು ನಕಲಿ ಆಧಾರ್ ಮಾಫಿಯಾ ಕುರಿತು ಅನುಮಾನಗಳನ್ನು ಹುಟ್ಟುಹಾಕಿದೆ.
- Ashok Yadalli
- Updated on: Nov 1, 2025
- 10:18 am
ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ಮಗನ ತಪ್ಪಿಗೆ ಕ್ಷಮೆಯಾಚಿಸಿದ ತಂದೆ
ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಥಳಿತಕ್ಕೊಳಗಾಗಿದ್ದ ಟೋಲ್ ಸಿಬ್ಬಂದಿ ಯಾವುದೇ ದೂರು ದಾಖಲಿಸದೇ ಇದ್ದರೂ, ತನ್ನ ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಜು ಗೌಡ ಪಾಟೀಲ್ ಹೇಳಿದ್ದಾರೆ.
- Ashok Yadalli
- Updated on: Oct 31, 2025
- 10:38 am
ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ
ವಿಜಯಪುರದ ಕನ್ನೊಳ್ಳಿ ಟೋಲ್ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಪಾಟೀಲ್ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಟೋಲ್ ಶುಲ್ಕ ಕೇಳಿದ್ದಕ್ಕೆ 'ನಾನು ವಿಜುಗೌಡ ಪುತ್ರ' ಎಂದು ಹೇಳಿದಾಗ ಸಿಬ್ಬಂದಿ ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಸಮರ್ಥ ಗೌಡ ಸಿಬ್ಬಂದಿಯನ್ನು ಥಳಿಸಿದ್ದಾರೆ.
- Ashok Yadalli
- Updated on: Oct 30, 2025
- 4:20 pm
ಬೇರೊಬ್ಬರ ಜತೆ ಬೈಕಿನಲ್ಲಿ ಹೋಗುತ್ತಿದ್ದ ಹೆಂಡ್ತಿಯನ್ನ ನೆಲಕ್ಕೆ ಬೀಳಿಸಿ ಮಚ್ಚಿನಿಂದ ಮನಬಂದಂತೆ ಹೊಡೆದ ಪತಿ
ಹಾಡಹಗಲೇ ನಡುರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಪತಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಯಮನಪ್ಪ(60) ಮಚ್ಚಿನಿಂದ ತನ್ನ ಪತ್ನಿ ಅನಸೂಯ ಮಾದಾರ್(50) ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಸಾರ್ವಜನಿಕರು ತಡೆಯಲು ಬಂದವರಿಗೆ ಯಮನಪ್ಪ ಅವಾಜ್ ಹಾಕಿ ಮನಬಂದಂತೆ ಮಚ್ಚಿನಿಂದ ದಾಳಿ ಮಾಡಿದ್ದಾನೆ.ಕೊನೆಗೆ ಸಾರ್ವಜನಿಕರು ಯಮನಪ್ಪನಿಗೆ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡುವ ಭಯಾನಕ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಗಾಯಾಳು ಅನಸೂಯ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Ashok Yadalli
- Updated on: Oct 24, 2025
- 5:40 pm
ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ
ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಕರುಳ ಕುಡಿಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Ashok Yadalli
- Updated on: Oct 17, 2025
- 1:16 pm
Raju Talikote: ಮುಸ್ಲಿಂ ಸಂಪ್ರದಾಯದಂತೆ ನೆರವೇರಿತು ರಾಜು ತಾಳಿಕೋಟೆ ಅಂತ್ಯಕ್ರಿಯೆ
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯ ಖಬರಸ್ತಾನದಲ್ಲಿ ರಾಜು ತಾಳಿಕೋಟೆ ಅವರ ಅಂತ್ಯಕ್ರಿಯೆ ನೆರವೇರಿತು. ರಾಜು ತಾಳಿಕೋಟೆ ಜೊತೆ ನಾಟಕಗಳಲ್ಲಿ ವೇದಿಕೆ ಹಂಚಿಕೊಂಡಿದ್ದ ಅನೇಕ ಕಲಾವಿದರು, ಸ್ಥಳೀಯ ನಾಯಕರು ಅಂತಿಮ ನಮನ ಸಲ್ಲಿಸಿದದರು. ಶಿವಾನಂದ ಪಾಟೀಲ್, ಉಮಾಶ್ರೀ, ಅಶೋಕ ಮನಗೂಳಿ, ಎ.ಎಸ್. ಪಾಟೀಲ್ ನಡಹಳ್ಳಿ ಕೂಡ ರಂಗಾಶ್ರಮಕ್ಕೆ ಬಂದು ಅಂತಿಮ ದರ್ಶನ ಪಡೆದರು.
- Ashok Yadalli
- Updated on: Oct 14, 2025
- 8:10 pm