ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
ಪ್ರಶ್ನೆ ಪತ್ರಿಕೆ, OMR ಸೀಟ್ ನಂಬರ್ ಮಿಸ್ ಮ್ಯಾಚ್: ಗೊಂದಲಗಳಿಗೆ ಡಿಸಿ ತೆರೆ
Police Constable Exam: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ಗೊಂದಲ ಉಂಟಾಗಿದ್ದು, ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುವುದಿಲ್ಲ ಎಂದು ಹೊರಬಂದಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಣಾ ಕೇಂದ್ರದಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಜಿಲ್ಲಾಧಿಕಾರಿ ಆನಂದ್ ಕೆ ಸ್ಪಷ್ಟನೆ ಕೂಡ ನೀಡಿದ್ದಾರೆ.
- Ashok Yadalli
- Updated on: Aug 2, 2026
- 5:40 pm
ಬಸ್ ಅಡ್ಡಗಟ್ಟಿ ಕಂಡಕ್ಟರ್ಗೆ ಥಳಿಸಿದ ಆಟೋ ಚಾಲಕ: ವಿಡಿಯೋ ಮಾಡುತ್ತಿದ್ದ ಪ್ರಯಾಣಿಕನಿಗೂ ಹಲ್ಲೆ!
Vijayapura News: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯನಿರತ ನಿರ್ವಾಹಕನ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ಬಸ್ ನಿರ್ವಾಹಕ ಮಲ್ಲು ಲಮಾಣಿ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಲಾಗಿದೆ.
- Ashok Yadalli
- Updated on: Aug 1, 2026
- 3:12 pm
ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ: 14 ಕ್ರಸ್ಟ್ ಗೇಟ್ಗಳು ಓಪನ್
ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಗೆ ಮಹಾರಾಷ್ಟ್ರ ಮತ್ತು ಕೃಷ್ಣಾ ಕಣಿವೆಯ ಉತ್ತಮ ಮಳೆಯಿಂದ ಜೀವಕಳೆ ಬಂದಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನ 14 ಕ್ರಸ್ಟ್ ಗೇಟ್ಗಳನ್ನು ಈ ವರ್ಷದಲ್ಲಿ ಮೊದಲ ಬಾರಿಗೆ ತೆರೆಯಲಾಗಿದ್ದು, ಜಲಾಶಯಕ್ಕೆ 73,162 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 43,567 ಕ್ಯೂಸೆಕ್ ನೀರನ್ನು ಬಸವಸಾಗರಕ್ಕೆ ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
- Ashok Yadalli
- Updated on: Jul 24, 2026
- 12:36 pm
ಅತಿ ಆಸೆ ಗತಿಗೇಡು: ಲೋನ್ ಆಸೆಗೆ ತಾಳಿ ಅಡವಿಟ್ಟು ಮುಂಗಾಡ ಹಣ ಕಟ್ಟಿ ಮೋಸ ಹೋದ ಮಹಿಳೆಯರು
vijayapura loan scam: ಕಡಿಮೆ ಬಡ್ಡಿ ಸಾಲದ ಆಮಿಷವೊಡ್ಡಿ ನೂರಾರು ಅಮಾಯಕ ಮಹಿಳೆಯರು ಮತ್ತು ಜನರಿಗೆ ಲಕ್ಷಾಂತರ ರೂ ವಂಚಿಸಿದ ದೊಡ್ಡ ಜಾಲವೊಂದು ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. ವಂಚಕರು ನಕಲಿ ಕಚೇರಿ ತೆರೆದು, ಮುಂಗಡ ಹಣ ಪಡೆದು ಪರಾರಿಯಾಗಿದ್ದಾರೆ. ಸಾಲ ಸಿಗಬಹುದೆಂಬ ಆಸೆಗೆ ತಾಳಿ ಅಡವಿಟ್ಟ ಮಹಿಳೆಯರು ಮೋಸ ಹೋಗಿದ್ದಾರೆ.
- Ashok Yadalli
- Updated on: Jul 20, 2026
- 4:47 pm
ವಿಜಯಪುರ: ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ 10 ತಿಂಗಳ ಪುಟ್ಟ ಪೋರ!
ವಿಜಯಪುರ ಜಿಲ್ಲೆಯ 10 ತಿಂಗಳ ಪುಟ್ಟ ಬಾಲಕ ರಿಯಾನ್ಸ್ ಪಟ್ಟಣಶೆಟ್ಟಿ ಕೇವಲ 36 ಸೆಕೆಂಡುಗಳಲ್ಲಿ 21 ಮೆಟ್ಟಿಲುಗಳನ್ನು ಹತ್ತುವ ಮೂಲಕ ‘ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಾಧನೆ ಮಾಡಿದ್ದಾನೆ. ಬಾಲಕನ ಈ ಅಸಾಧಾರಣ ಪ್ರತಿಭೆಗೆ ಸಿಎಂ ಡಿಕೆ ಶಿವಕುಮಾರ್ ಕೂಡ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
- Ashok Yadalli
- Updated on: Jul 11, 2026
- 7:37 am
ವಿಜಯಪುರ: ಡಿವೈಡರ್ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಸೇರಿದಂತೆ ತಾಯಿಯೂ ಸಾವು
Vijayapura car accident: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.
- Ashok Yadalli
- Updated on: Jul 10, 2026
- 8:56 pm
ವಿಜಯಪುರ: ಬರಡಾಗಿದ್ದ ಭೂಮಿಯಲ್ಲಿ ಈಗ ಹಾಲಿನ ಹೊಳೆ! ಬಬಲೇಶ್ವರದಲ್ಲಿ ಕ್ಷೀರಕ್ರಾಂತಿ
Vijayapura News: ಒಂದು ಕಾಲದಲ್ಲಿ ಬರಗಾಲದ ಹಣೆಪಟ್ಟಿ ಹೊತ್ತಿದ್ದ ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಈಗ ಸದ್ದಿಲ್ಲದೆ ಕ್ಷೀರಕ್ರಾಂತಿ ಆರಂಭವಾಗಿದೆ. ಸಚಿವ ಎಂಬಿ ಪಾಟೀಲ್ ಮುನ್ನೋಟ ಹಾಗೂ ಬಿಎಲ್ಡಿಇ ಸಂಸ್ಥೆ, ಅಕ್ಷಯಕಲ್ಪ ಮತ್ತು ಕೃಷಿಕಲ್ಪ ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಹಳ್ಳಿಗಳ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತಿದ್ದು, ಇದು ರೈತರ ಆರ್ಥಿಕ ಸ್ವಾವಲಂಬನೆಗೆ ಹೊಸ ದಾರಿ ದೀಪವಾಗಿದೆ.
- Ashok Yadalli
- Updated on: Jul 6, 2026
- 2:12 pm
ಮಧ್ಯಾಹ್ನ ಆದ್ರೆ ಸಾಕು ಬಾರ್, ಡಾಬಾಗಳೇ ಇವ್ರ ಅಡ್ಡ! ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ
ಕರ್ತವ್ಯ ವೇಳೆಯೇ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮದ್ಯಪಾನ ಪಾರ್ಟಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋಗಳು ವೈರಲ್ ಆಗಿವೆ. ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಕ್ರಮವಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Ashok Yadalli
- Updated on: Jun 25, 2026
- 5:00 pm
ಬಿಡದಿ ಜಮೀನು ವಿವಾದ: ‘ನನ್ನ ಹೆಸರಲ್ಲಿರೋದು 32 ಎಕರೆ ಮಾತ್ರ, ನೂರಲ್ಲ; ನೋವಾಗಿದ್ದರೆ ವಿಷಾದಿಸುವೆ ಎಂದ ಸಚಿವ
ಬಿಡದಿ ಸ್ಮಾರ್ಟ್ ಟೌನ್ಶಿಪ್ ಭೂಸ್ವಾಧೀನ ಕುರಿತು ರಾಜಕೀಯ ವಿವಾದ ಭುಗಿಲೆದ್ದಿದೆ. ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿ 100 ಎಕರೆ ಜಮೀನಿದೆ ಎಂದು ಸಚಿವ ಎಂ.ಬಿ. ಪಾಟೀಲ್, ಆರೋಪಿಸಿದ್ದು, ಇದಕ್ಕೆ ಸ್ವತಃ ಅನಿತಾ ಸ್ಪಷ್ಟನೆ ನೀಡಿ ತಮ್ಮ ಹೆಸರಿನಲ್ಲಿ ಅಷ್ಟು ಜಮೀನು ಇಲ್ಲ ಎಂದಿದ್ದಾರೆ. ಇನ್ನೊಂದೆಡೆ ಸುಳ್ಳು ಆರೋಪಗಳಿಗೆ ಮಾನಹಾನಿ ಮೊಕದ್ದಮೆ ಹೂಡುವುದಾಗಿ ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ಇದರ ಬೆನ್ನಲ್ಲೇ ಎಂಬಿ ಪಾಟೀಲ್ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
- Ashok Yadalli
- Updated on: Jun 24, 2026
- 3:17 pm
ಖಗೋಳ ವಿಸ್ಮಯ: ವಿಜಯಪುರದಲ್ಲಿ ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣದ ಉಂಗುರ!
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದಲ್ಲಿ ಅಪರೂಪದ ಖಗೋಳ ವಿಸ್ಮಯವೊಂದು ಕಾಣಿಸಿದೆ. ಶನಿವಾರ ಬೆಳಿಗ್ಗೆ ಆಕಾಶದಲ್ಲಿ ಸೂರ್ಯನ ಸುತ್ತಲೂ ಸೃಷ್ಟಿಯಾದ ಆಕರ್ಷಕ ಸ್ವರ್ಣ ವರ್ಣದ ಉಂಗುರಾಕೃತಿಯನ್ನು (Sun Halo) ಕಂಡು ಸಾರ್ವಜನಿಕರು ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಬೆರಗಾಗಿದ್ದಾರೆ. ಸೂರ್ಯನ ಸುತ್ತ ಸೃಷ್ಟಿಯಾದ ಸ್ವರ್ಣ ವರ್ಣದ ಉಂಗುರಾಕೃತಿಯ ವಿಡಿಯೋ ಇಲ್ಲಿದೆ.
- Ashok Yadalli
- Updated on: Jun 20, 2026
- 2:56 pm
ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಲೀಗ್: ಇಲ್ಲಿವೆ ರೇಸ್ನ ರೋಚಕ ಕ್ಷಣಗಳು!
ಸೈಕ್ಲಿಸ್ಟ್ಗಳ ತವರೂರು ವಿಜಯಪುರದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್' ಪ್ರಥಮ ಬಾರಿಗೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಪ್ರೊಫೆಷನಲ್ ಹಾಗೂ ಸಾಮಾನ್ಯ ವಿಭಾಗಗಳಲ್ಲಿ ನೂರಾರು ಮಹಿಳಾ ಕ್ರೀಡಾಪಟುಗಳು ಭಾಗವಹಿಸಿ ಪದಕ ಮುಡಿಗೇರಿಸಿಕೊಂಡರು. 2028ರ ಒಲಿಂಪಿಕ್ಸ್ ಸಿದ್ಧತೆಗೆ ಪೂರಕವಾದ ಈ ಕ್ರೀಡಾಕೂಟದ ಕೆಲ ಚಿತ್ರಗಳು ಇಲ್ಲಿವೆ.
- Ashok Yadalli
- Updated on: Jun 14, 2026
- 9:41 am
ಚಡಚಣ ಬ್ಯಾಂಕ್ ದರೋಡೆಯಾಗಿ 9 ತಿಂಗಳಾದರೂ ಸಿಗದ ಚಿನ್ನ: ಬ್ಯಾಂಕ್ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ
ವಿಜಯಪುರ ಜಿಲ್ಲೆಯ ಚಡಚಣ ಎಸ್ಬಿಐ ಬ್ಯಾಂಕ್ನಲ್ಲಿ 9 ತಿಂಗಳ ಹಿಂದೆ ನಡೆದಿದ್ದ 20 ಕೆಜಿ ಚಿನ್ನದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾತು ಕೊಟ್ಟರೂ ಪರಿಹಾರ ನೀಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗ್ರಾಹಕರು ರಾತ್ರಿಯಿಡೀ ಬ್ಯಾಂಕ್ಗೆ ಬೀಗ ಹಾಕಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಸಂಧಾನ ನಡೆಸಿದ್ದಾರೆ.
- Ashok Yadalli
- Updated on: Jun 11, 2026
- 9:48 am