AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿ, ವಿಜಯಪುರ

Author - TV9 Kannada

ashok.yadalli@tv9.com

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….

Read More
ಮುಂಗಾರು ಹಂಗಾಮಿಗೂ ಮುನ್ನ ನಡೆಯುವ ಅನ್ನದಾತರ ಹಬ್ಬದ ಖದರ್: ಫೋಟೋಸ್​ ನೋಡಿ

ಮುಂಗಾರು ಹಂಗಾಮಿಗೂ ಮುನ್ನ ನಡೆಯುವ ಅನ್ನದಾತರ ಹಬ್ಬದ ಖದರ್: ಫೋಟೋಸ್​ ನೋಡಿ

ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮುಂಗಾರು ಹಂಗಾಮಿಗೂ ಮುನ್ನ ನಡೆಯುವ ಅನ್ನದಾತರ ಹಬ್ಬದ ಖದರ್ ಬೇರೆಯೇ ಆಗಿರುತ್ತದೆ. ಇಂಥ ಕಾರಹುಣ್ಣಿಮೆ ಆದ ನಂತರ ಏಳು ದಿನಗಳ ನಂತರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಕಾರಹುಣ್ಣಿಮೆ ಕರಿ ಹರಿಯಲಾಗುತ್ತದೆ. ಕರಿ ಹರಿಯುವ ಮುನ್ನ ಎತ್ತುಗಳನ್ನು ಬೆದರಿಸಲಾಗುತ್ತದೆ. ಎತ್ತುಗಳನ್ನು ಬೆದರಿಸಿ ಹತೋಟಿಗೆ ತರುವುದು ಸಾಹಸದ ಕೆಲಸ. ಈ ಕುರಿತು ವರದಿ ಇಲ್ಲಿದೆ

ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ, ಪೋಷಕರು ಫುಲ್ ಖುಷ್​

ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ, ಪೋಷಕರು ಫುಲ್ ಖುಷ್​

ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಶೈಕ್ಷಣಕವಾಗಿ ಹಿಂದುಳಿದ ಜಿಲ್ಲೆಯೆಂಬ ಖ್ಯಾತಿಗೆ ಪಾತ್ರವಾಗಿರೋ ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಹಾಗೂ ರಾಷ್ಟ್ರಮಟ್ಟದಲ್ಲಿ 17 ನೇ ರ್ಯಾಂಕ್ ಬರುವ ಮೂಲಕ ಸಾಧನೆ ಮಾಡಿದ್ದಾರೆ. ನಿಖಲಿ ಸೊನ್ನದ ಸಾಧನೆ ಮಾಡಿರೋ ವಿದ್ಯಾರ್ಥಿ. ವಿಜಯಪುರ ನಗರದ ವೈದ್ಯ ದಂಪತಿಯ ಪುತ್ರ ನಿಖಿಲ್ ನೀಟ್ ನ ಒಟ್ಟು 720 ಅಂಕಗಳಿಗೆ 670 ಅಂಕಗಳನ್ನು ಪಡೆಯೋ ಮೂಲಕ ಸಾಧನೆ ಮಾಡಿದ್ದಾನೆ. ಒಂದರಿಂದ ಐದನೇ ತರಗತಿ ಬಿಎಲ್​ ಡಿಇ ಸಂಸ್ಥೆಯ ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ನಂತರ ಆರರಿಂದ ಹತ್ತನೇ ತರಗತಿವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದ್ದಾರೆ.

ನೀಟ್​​ನಲ್ಲಿ ಕರ್ನಾಟಕಕ್ಕೆ ಫಸ್ಟ್​ ರ‍್ಯಾಂಕ್: ಗುಮ್ಮಟನಗರಿ ಹುಡುಗ ಮುಂದಿನ ಗುರಿ ಏನು ಗೊತ್ತಾ?

ನೀಟ್​​ನಲ್ಲಿ ಕರ್ನಾಟಕಕ್ಕೆ ಫಸ್ಟ್​ ರ‍್ಯಾಂಕ್: ಗುಮ್ಮಟನಗರಿ ಹುಡುಗ ಮುಂದಿನ ಗುರಿ ಏನು ಗೊತ್ತಾ?

ವಿಜಯಪುರದ ನಿಖಿಲ್ ಸೊನ್ನದ ಎಂಬ ವಿದ್ಯಾರ್ಥಿ 2025ರ ನೀಟ್ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 720ಕ್ಕೆ 670 ಅಂಕ ಗಳಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ 17ನೇ ರ‍್ಯಾಂಕ್‌ ಪಡೆದಿದ್ದಾರೆ. ಟಿವಿ9 ಗೆ ಫಸ್ಟ್​ ರ‍್ಯಾಂಕ್ ರಹಸ್ಯ ಬಿಚ್ಚಿಟ್ಟಿದ್ದಾರೆ.

ಕ್ಯಾಡಗಿ ಪಂಚಾಯ್ತಿ ಕರ್ಮಕಾಂಡ: ನರೇಗಾದಲ್ಲಿ ಶಾಲಾ ಮೈದಾನ ನಿರ್ಮಾಣ,  ವಿದ್ಯಾರ್ಥಿಗಳೇ  ಕಾರ್ಮಿಕರು!

ಕ್ಯಾಡಗಿ ಪಂಚಾಯ್ತಿ ಕರ್ಮಕಾಂಡ: ನರೇಗಾದಲ್ಲಿ ಶಾಲಾ ಮೈದಾನ ನಿರ್ಮಾಣ, ವಿದ್ಯಾರ್ಥಿಗಳೇ ಕಾರ್ಮಿಕರು!

ದುಡಿಯೋ ಕೈಗಳಿಗೆ ಕೆಲಸ ನೀಡಬೇಕೆಂಬ ಕಾರಣದಿಂದ 2005 ರಲ್ಲಿ ಉದ್ಯೋಗ ಖಾತ್ರಿ ಯೋಜನೆ ಜಾರಿಯಾಗಿದೆ. ಅರ್ಹ ಫಲಾನುಭವಿಗಳಿಗೆ ವರ್ಷದಲ್ಲಿ ನಿರ್ಧಿಷ್ಟ ದಿನಗಳ ಕಾಲ ಕೆಸಲ ನೀಡಿ ನಿಗದಿಪಡಿಸಿದ ಸಂಬಳನ್ನು ನೀಡಬೇಕೆಂಬ ನಿಯಮವಿದೆ. ಆದ್ರೆ, ವಿಜಯಪುರ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನೇ ಕಾರ್ಮಿಕರು ಎಂದು ದಾಖಾತಿಗಳಲ್ಲಿ ತೋರಿಸಲಾಗಿದೆ.

ತನ್ನ ಜೊತೆ ಮಾತನಾಡದಿದ್ದಕ್ಕೆ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯನ್ನ ಇರಿದು ಕೊಂದ ಯುವಕ

ತನ್ನ ಜೊತೆ ಮಾತನಾಡದಿದ್ದಕ್ಕೆ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯನ್ನ ಇರಿದು ಕೊಂದ ಯುವಕ

ಇಂಡಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿ ರೇಣುಕಾ ಕನ್ನೊಳ್ಳಿ ಅವರನ್ನು ಅಗರಖೇಡದ ಸಂಜು ಬನಸೋಡೆ ಎಂಬ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ರೇಣುಕಾ ತನ್ನ ಜೊತೆ ಮಾತನಾಡಲು ನಿರಾಕರಿಸಿದ್ದಕ್ಕೆ ಸಂಜು ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಬಗೆಹರಿಯದ ಕೃಷ್ಣಾ ನದಿ ನೀರು ವಿವಾದ: ಕುಂಟು ನೆಪ ಹೇಳುತ್ತಾ ಓಡಾಡಬೇಡಿ ಎಂದ ರೈತರು

ಬಗೆಹರಿಯದ ಕೃಷ್ಣಾ ನದಿ ನೀರು ವಿವಾದ: ಕುಂಟು ನೆಪ ಹೇಳುತ್ತಾ ಓಡಾಡಬೇಡಿ ಎಂದ ರೈತರು

ಕೃಷ್ಣಾ ನದಿ ನೀರು ಮೊದಲ ನ್ಯಾಯಾಧೀಕರಣದಲ್ಲಿ ಬಚಾವತ್ ಆಯೋಗದ ವರದಿಯಂತೆ ನೀರಿನ ಹಂಚಿಕೆಯಾಗಿತ್ತು. ನಂತರ ಎರಡನೇ ನ್ಯಾಯಾಧೀಕರಣದಲ್ಲಿ ಬ್ರಿಜೇಶ್ ಕುಮಾರ್ ಆಯೋಗದ ವರದಿ ತೀರ್ಪು ಹೊರ ಬಂದು 15 ವರ್ಷಗಳಾಗಿವೆ. ಆದರೆ ತೀರ್ಪಿನಂತೆ ನೀರಿನ ಹಂಚಿಕೆ ಹಾಗೂ ಇತರೆ ಕೆಲಸ ಕಾರ್ಯಗಳು ಆಗಿಲ್ಲ. ಈ ಮಧ್ಯೆ ನೆರೆಯ ತೆಲಂಗಾಣ ಹಾಗೂ ಆಂಧ್ರಪ್ರದೇಶ ಸರ್ಕಾರಗಳು ನೀರು ಹಂಚಿಕೆ ಡ್ಯಾಂನ ಎತ್ತರ ಹೆಚ್ಚಿಸುವ ವಿಚಾರವನ್ನು ಸುಪ್ರೀಂ ಕೋರ್ಟ್​ವರೆಗೂ ತೆಗೆದುಕೊಂಡು ಹೋಗಿವೆ. ಇತ್ತ ಮಹಾರಾಷ್ಟ್ರವೂ ಈ ವಿಚಾರದಲ್ಲಿ ಕ್ಯಾತೆ ತೆಗೆದಿದೆ. ಹಾಗಾದರೆ ರಾಜ್ಯ ಸರ್ಕಾರ ಮಾಡಬೇಕಾಗಿರುವುದು ಏನು? ಇಲ್ಲಿದೆ ವಿವರ

ವಿಜಯಪುರ ವಿಮಾನ ನಿಲ್ದಾಣಕ್ಕೆ ಮತ್ತೆ ತಡೆ: ಉದ್ಘಾಟನೆಗೆ ಹಸಿರು ಪೀಠದ ವಿಘ್ನ

ವಿಜಯಪುರ ವಿಮಾನ ನಿಲ್ದಾಣಕ್ಕೆ ಮತ್ತೆ ತಡೆ: ಉದ್ಘಾಟನೆಗೆ ಹಸಿರು ಪೀಠದ ವಿಘ್ನ

ವಿಜಯಪುರದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದ ಉದ್ಘಾಟನೆಗೆ ಸುಪ್ರೀಂ ಕೋರ್ಟ್‌ನ ಹಸಿರು ಪೀಠ ತಡೆ ನೀಡಿದೆ. ಪರಿಸರ ಅನುಮತಿ ಪಡೆಯದೇ ಕಾಮಗಾರಿ ಆರಂಭಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ತಡೆ ಉಂಟಾಗಿದೆ. 2008ರಲ್ಲಿ ಶಿಲಾನ್ಯಾಸಗೊಂಡ ಈ ಯೋಜನೆ 2021ರಲ್ಲಿ ಕಾಮಗಾರಿ ಆರಂಭಿಸಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದ್ದರೂ, ಹಸಿರು ಪೀಠದ ಅನುಮತಿಯಿಲ್ಲದೆ ಉದ್ಘಾಟನೆ ಸಾಧ್ಯವಾಗುತ್ತಿಲ್ಲ.

ಧಾರವಾಡದಲ್ಲಿ ಹೈಟೆಕ್​​ ಕೈಗಾರಿಕಾ ಘಟಕ ಆರಂಭ: 3 ಸಾವಿರ ಜನರಿಗೆ ಉದ್ಯೋಗವಕಾಶ

ಧಾರವಾಡದಲ್ಲಿ ಹೈಟೆಕ್​​ ಕೈಗಾರಿಕಾ ಘಟಕ ಆರಂಭ: 3 ಸಾವಿರ ಜನರಿಗೆ ಉದ್ಯೋಗವಕಾಶ

ಉತ್ತರ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಧಾರವಾಡದಲ್ಲಿ 600 ಕೋಟಿ ರೂಪಾಯಿ ವೆಚ್ಚದ ಹೈಟೆಕ್​ ಕೈಗಾರಿಕಾ ಘಟಕ ಆರಂಭವಾಗಿದೆ. ಇದು 800 ಜನರಿಗೆ ಉದ್ಯೋಗ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ 3000ಕ್ಕೆ ಏರಿಕೆಯಾಗಲಿದೆ. ಫ್ರೆಂಚ್ ಮತ್ತು ಜಪಾನೀ ತಂತ್ರಜ್ಞಾನವನ್ನು ಬಳಸುವ ಈ ಘಟಕವು ಜಾಗತಿಕ ಮಾರುಕಟ್ಟೆಗೆ ರಫ್ತು ಮಾಡುವ ಗುರಿ ಹೊಂದಿದೆ. ಶಿವಮೊಗ್ಗ ಮತ್ತು ವಿಜಯಪುರದಲ್ಲಿ ವಿಮಾನ ತರಬೇತಿ ಕೇಂದ್ರಗಳ ಸ್ಥಾಪನೆಯೂ ಯೋಜನೆಯಲ್ಲಿದೆ.

Onion Price: ಈರುಳ್ಳಿ ದರ ಕುಸಿತ, ವಿಜಯಪುರದಲ್ಲಿ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ರೈತರ ಪ್ರತಿಭಟನೆ

Onion Price: ಈರುಳ್ಳಿ ದರ ಕುಸಿತ, ವಿಜಯಪುರದಲ್ಲಿ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ರೈತರ ಪ್ರತಿಭಟನೆ

ಬೇರೆಡೆಗಳಲ್ಲಿ ಕ್ವಿಂಟಾಲ್​ಗೆ ಸಾವಿರ ರೂಪಾಯಿಗೆ ಮಾರಾಟವಾಗುವ ಈರುಳ್ಳಿ ವಿಜಯಪುರದಲ್ಲಿ 200 ರೂ.ಗೆ ಮಾರಾಟವಾಗುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಅದರ ಮೇಲೆ ಹೊರಳಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಾರೆ. ರೈತರ ಪ್ರತಿಭಟನೆಯ ವಿಡಿಯೋ ಇಲ್ಲಿದೆ.

ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ! ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ

ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ! ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ

ಬೀದರ್, ಮಂಗಳೂರಿನಲ್ಲಿ ನಡೆದ ಬ್ಯಾಂಕ್​ ಕಳ್ಳತನ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳೀಸಿದ್ದವು. ಈ ಪ್ರಕರಣ ಬೆನ್ನಲ್ಲೇ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನವಾಗಿತ್ತು. ಬ್ಯಾಂಕ್​ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಈ ಪ್ರಕರಣ ಪೊಲೀಸರಿಗೆ ಸವಾಲಾಗಿದೆ. ಪ್ರಕರಣದ ತನಿಖೆಗಾಗಿ 8 ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಶೀಘ್ರದಲ್ಲೇ ಕಳ್ಳರನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.

ವಿಜಯಪುರ: ವಾಮಾಚಾರ ಮಾಡಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ ಕಳ್ಳತನ

ವಿಜಯಪುರ: ವಾಮಾಚಾರ ಮಾಡಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ ಕಳ್ಳತನ

ಇತ್ತೀಚಿಗೆ ಕರ್ನಾಟಕದಲ್ಲಿ ಬ್ಯಾಂಕ್​ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿವೆ. ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬ್ಯಾಂಕ್​ನಲ್ಲಿ ಕಳ್ಳತನವಾಗಿತ್ತು. ಸಾಮಾನ್ಯವಾಗಿ ಕಳ್ಳರು ಬ್ಯಾಂಕ್​ ಒಳಗೆ ನುಗ್ಗಿ ಹಣ ಮತ್ತು ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗುತ್ತಾರೆ. ಆದರೆ, ವಿಜಯಪುರ ಜಿಲ್ಲೆಯ ಬಸವನವಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್​ನಲ್ಲಿ ನಡೆದ ಕಳ್ಳತನ ಮಾತ್ರ ವಿಚಿತ್ರವಾಗಿದೆ. ಕಳ್ಳರು ಬ್ಯಾಂಕ್​ನಲ್ಲಿನ ಹಣ ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಲ್ಲದೇ ಬ್ಯಾಂಕ್​ನಲ್ಲೇ ವಾಮಾಚಾರ ಮಾಡಿದ್ದಾರೆ. ಇಲ್ಲಿದೆ ವಿವರ

ಭಾರಿ ಮಳೆ ಕಾರಣ ಮೇ ತಿಂಗಳಲ್ಲೇ ಆಲಮಟ್ಟಿ ಡ್ಯಾಂಗೆ 52,650 ಕ್ಯೂಸೆಕ್ ಒಳ ಹರಿವು: ಸಂಭ್ರಮದಲ್ಲಿ ರೈತರು

ಭಾರಿ ಮಳೆ ಕಾರಣ ಮೇ ತಿಂಗಳಲ್ಲೇ ಆಲಮಟ್ಟಿ ಡ್ಯಾಂಗೆ 52,650 ಕ್ಯೂಸೆಕ್ ಒಳ ಹರಿವು: ಸಂಭ್ರಮದಲ್ಲಿ ರೈತರು

ಕರ್ನಾಟಕದಾದ್ಯಂತ ಮುಂಗಾರು ಮಳೆ ಬಿರುಸುಗೊಂಡಿದೆ. ಈ ವರ್ಷ ಮೇ ಕೊನೆಯ ವಾರದಲ್ಲೇ ಮಾನ್ಸೂನ್ ಪ್ರವೇಶವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಕಾರಣ ಆಲಮಟ್ಟಿ ಡ್ಯಾಂಗೆ ಒಳ ಹರಿವು ಹೆಚ್ಚಾಗಿದೆ. ಆಲಮಟ್ಟಿ ಡ್ಯಾಂಗೆ ಪ್ರತಿ ವರ್ಷ ಜೂನ್ ಕೊನೆಯ ವಾರದಲ್ಲಿ ಅಥವಾ ಜುಲೈನಲ್ಲಿ ಒಳ ಹರಿವು ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮೇ ಕೊನೆಯ ವಾರದಲ್ಲೇ ಒಳ ಹರಿವು ಆರಂಭವಾಗಿದ್ದು, ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್