ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
Kodi Mutt Swamiji: ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಕೋಡಿಮಠ ಸ್ವಾಮೀಜಿ ಭವಿಷ್ಯ: ಕೋಡಿಮಠ ಸ್ವಾಮೀಜಿ ಆಗಾಗ ರಾಜಕೀಯ ವಿಚಾರಗಳ ಬಗ್ಗೆ ಭವಿಷ್ಯ, ಮುನ್ಸೂಚನೆ ನೀಡುತ್ತಿರುತ್ತಾರೆ. ಅವರ ಮಾರ್ಮಿಕ ಮಾತುಗಳ ಬಗ್ಗೆ ಜನರಲ್ಲಿಯೂ ಅಷ್ಟೇ ಕುತೂಹಲವಿರುತ್ತದೆ. ಇದೀಗ ಕೋಡಿಮಠ ಶ್ರೀಗಳು ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಮಾತನಾಡಿದ್ದಾರೆ. ಅವರ ಮಾತಿನ ವಿಡಿಯೋ ಇಲ್ಲಿದೆ.
- Ashok Yadalli
- Updated on: Apr 7, 2025
- 12:19 pm
ಮೊದಲ ಬಾರಿಗೆ ವಕ್ಫ್ ವಿರುದ್ಧ ಹೋರಾಟದ ಕಿಚ್ಚು ಹೊತ್ತಿಸಿದ್ದ ಗ್ರಾಮದಲ್ಲಿ ಸಂಭ್ರಮಾಚರಣೆ
Waqf Bill: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಹೊತ್ತಿದ ವಕ್ಫ್ ವಿರುದ್ಧದ ಬೆಂಕಿ ದೇಶಾದ್ಯಂತ ಹಬ್ಬಿತ್ತು. ವಕ್ಫ್ ಕಾಯ್ದೆ ತಿದ್ದುಪಡಿಗೆ ದೇಶಾದ್ಯಂತ ಆಗ್ರಹ ಕೇಳಿಬಂದಿತ್ತು. ದೇಶ್ಯಾದ್ಯಂತ ವ್ಯಾಪಕ ಆಗ್ರಹ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಸರ್ಕಾರ ವಕ್ಫ್ಗೆ ಕೆಲವು ತಿದ್ದುಪಡಿ ಮಾಡಿ, ಸಂಸತ್ತಿನಲ್ಲಿ ಮಂಡಿಸಿ ಅನುಮೋದನೆ ಪಡೆದಿದೆ. ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟಪತಿಗಳು ಸಹಿ ಹಾಕಿದ್ದು, ಕಾನೂನಾಗಿ ಮಾರ್ಪಟ್ಟಿದೆ. ಇದರಿಂದ ಹೊನವಾಡ ಗ್ರಾಮದ ರೈತರು ಸಂಭ್ರಮಿಸಿದ್ದಾರೆ.
- Ashok Yadalli
- Updated on: Apr 6, 2025
- 3:21 pm
ವಿಜಯಪುರ: ತೆಪ್ಪ ಮಗುಚಿ ಬಿದ್ದು ಇಬ್ಬರು ಯುವಕರು ಸಾವು, ನಾಲ್ವರು ಪ್ರಾಣಾಪಾಯದಿಂದ ಪಾರು
ವಿಜಯಪುರ ತಾಲೂಕಿನ ಕುಮಟಗಿ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಇಬ್ಬರು ಯುವಕರು ನೀರುಪಾಲಾಗಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅಲೋವೆರಾ ಜ್ಯೂಸ್ ಎಂದು ತಿಳಿದು ಕೀಟನಾಶಕ ಕುಡಿದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
- Ashok Yadalli
- Updated on: Apr 3, 2025
- 11:45 am
ಸಚಿವ ಎಂಪಿ ಪಾಟೀಲ್ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರು ಶ್ರೀ ಗುರು ಚಕ್ರವರ್ತಿ ಸದಾಶಿವ ಮಠಕ್ಕೆ ಇಂದು (ಮಾರ್ಚ್ 31) ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಇಂದು ಭೇಟಿ ನೀಡಿ. ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಇನ್ನು ಈ ವೇಳೆ ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಮಠದ ಕೊಠಡಿಯೊಳಗೆ ಹೋಗಿ ಚಿನ್ನದ ಉಂಗುರ ತಂದು ಸಚಿವ ಎಂಬಿ ಪಾಟೀಲ್ ಗೆಹಾಕಿ ಆರ್ಶಿವಾದ ಮಾಡಿದರು. ನಂತರ ಸಿಹಿ ತಿನ್ನಿಸಿ ಶುಭ ಹಾರೈಸಿದರು.
- Ashok Yadalli
- Updated on: Mar 31, 2025
- 6:47 pm
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಸ್ಥಾಪಿಸುವ ಬಗ್ಗೆ ಆಲೋಚಿಸುತ್ತಿದ್ದಾರೆ. ಜನರ ಅಭಿಪ್ರಾಯವನ್ನು ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ಬಿಎಸ್ವೈ ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಿದ ಅವರು, ಹಿಂದೂ ಪರ ಪಕ್ಷದ ಬೇಡಿಕೆ ಹೆಚ್ಚುತ್ತಿದೆ ಎಂದಿದ್ದಾರೆ. ವಿದೇಶಗಳಿಂದಲೂ ಹಣಕಾಸಿನ ನೆರವು ನೀಡುವುದಾಗಿ ಕರೆ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.
- Ashok Yadalli
- Updated on: Mar 30, 2025
- 3:05 pm
ಯುಗಾದಿ ಹಬ್ಬದಂದು ಹೈಕಮಾಂಡ್ಗೆ ಹೊಸ ಸಂದೇಶ ರವಾನೆ: ಸಂಚಲನ ಮೂಡಿಸಿದ ಯತ್ನಾಳ್
ಬಿಜೆಪಿಯಿಂದ ಆರು ವರ್ಷಗಳ ಉಚ್ಛಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌ ಪಾಟೀಲ್ ಯತ್ನಾಳ್ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಪಕ್ಷದಿಂದ ಅಮಾನತುಗೊಂಡಿರು ಬಳಿಕ ಯತ್ನಾಳ್ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ತಮ್ಮ ಮಾತಿನ ಸಮುರ ಮತ್ತಷ್ಟು ಹೆಚ್ಚು ಮಾಡಿದ್ದು, ಪರೋಕ್ಷವಾಗಿ ಹೈಕಮಾಂಡ್ಗೆ ಎಚ್ಚರಿ ಸಂದೇಶ ರವಾನಿಸಿದ್ದಾರೆ. ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಯತ್ನಾಳ್ ಇಂದು ಯುಗಾದಿ ಹಬ್ಬದಂದು ಸ್ಫೋಟಕ ಹೇಳಿಕೊಂದನ್ನು ನೀಡಿದ್ದಾರೆ.
- Ashok Yadalli
- Updated on: Mar 30, 2025
- 1:33 pm
ಯತ್ನಾಳ್ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು
ಬಿಜೆಪಿಯಿಂದ ಯತ್ನಾಳ್ರನ್ನು ಉಚ್ಚಾಟನೆಯ ನಂತರ, ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದ ವಿಜಯಪುರದ ಬಿಜೆಪಿ ನಗರ ಎಸ್ಟಿ ಮೋರ್ಚಾ ಪದಾಧಿಕಾರಿ ಕಾರು ಅಪಘಾತದಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಜೊತೆಗೆ ಯತ್ನಾಳ್ ಉಚ್ಛಾಟನೆ ಖಂಡಿಸಿ ಪಕ್ಷದ ವಿವಿಧ ಪದಾಧಿಕಾರಿಗಳ ರಾಜೀನಾಮೆ ಪರ್ವ ಕೂಡ ಮುಂದುವರೆದಿದೆ.
- Ashok Yadalli
- Updated on: Mar 27, 2025
- 2:45 pm
ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ, ಮತ್ತೊಂದಡೆ ಸಂಭ್ರಮ: ಸತ್ಯವಂತರಿಗೆ ಕಾಲವಲ್ಲ ಎಂದ ಬಸನಗೌಡ
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಉಚ್ಚಾಟನೆಗೆ ಯತ್ನಾಳ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ಕೆಲ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು.
- Ashok Yadalli
- Updated on: Mar 26, 2025
- 8:18 pm
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ
ವಿಜಯಪುರದ ವೃದ್ಧೆಯೊಬ್ಬರು ಇಂಡಿ-ಚಡಚಣ ಮಾರ್ಗದ ಸರ್ಕಾರಿ ಬಸ್ನಲ್ಲಿ ತಮ್ಮ ಉಚಿತ ಪ್ರಯಾಣ ಟಿಕೆಟ್ ಕಳೆದುಕೊಂಡು ಇಡೀ ಬಸ್ ಹುಡುಕಾಡಿರುವಂತಹ ಘಟನೆ ನಡೆದಿದೆ. ಎಷ್ಟೇ ಹುಡುಕಿದರೂ ಸಿಗದಿದ್ದಾಗ ಕಂಡಕ್ಟರ್ಗೆ ಮತ್ತೊಂದು ಟಿಕೆಟ್ ನೀಡುವಂತೆ ಮನವಿ ಮಾಡಿದ್ದು, ಹಾಗೆಲ್ಲಾ ಕೊಡಲು ಬರಲ್ಲವೆಂದು ಕಂಡಕ್ಟರ್ ಹೇಳಿದ್ದಾರೆ.
- Ashok Yadalli
- Updated on: Mar 26, 2025
- 12:40 pm
ವಿಜಯಪುರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್ ಸೇರಿ 35 ಸದಸ್ಯರ ಸದಸ್ಯತ್ವ ಅನರ್ಹ: ಇಲ್ಲಿದೆ ಕಾರಣ
ವಿಜಯಪುರ ಮಹಾನಗರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್ ಸೇರಿದಂತೆ 35 ಸದಸ್ಯರ ಸದಸ್ಯತ್ವವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರು ಅನರ್ಹಗೊಳಿಸಿದ್ದಾರೆ. ಕಲಬುರಗಿ ಹೈಕೋರ್ಟ್ ಪೀಠ ಆದೇಶ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಆಸ್ತಿ ಘೋಷಣೆ ಸಂಬಂಧಿತ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯನ್ನು ಪರಿಗಣಿಸಿದ ಪೀಠ, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಪಾಲಿಕೆ ಚುನಾವಣೆ ಮತ್ತೆ ನಡೆಯುವ ಸಾಧ್ಯತೆ ಇದೆ.
- Ashok Yadalli
- Updated on: Mar 24, 2025
- 8:57 pm
ವಿಜಯಪುರದಲ್ಲೊಂದು ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಸ್ವಿಫ್ಟ್ ಡಿಸೈರ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರನ್ನು ಉತ್ನಾಳ ಮತ್ತು ಜುಮನಾಳ ಗ್ರಾಮಗಳ ನಿವಾಸಿಗಳೆಂದು ಗುರುತಿಸಲಾಗಿದೆ.
- Ashok Yadalli
- Updated on: Mar 17, 2025
- 4:01 pm
ರನ್ಯಾ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಸಚಿವರ ನಂಟಿನ ರಹಸ್ಯದ ಬಗ್ಗೆ ಯತ್ನಾಳ್ ಸ್ಫೋಟಕ ಸುಳಿವು
ರನ್ಯಾ ರಾವ್ ಚಿನ್ನ ಅಕ್ರಮ ಸಾಗಾಟ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಟಿ ಜೊತೆ ಲಿಂಕ್ ಹೊಂದಿರುವ ಸಚಿವರ ಹೆಸರನ್ನು ಸೋಮವಾರ ಸದನದಲ್ಲಿ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಇದರೊಂದಿಗೆ, ಚಿನ್ನ ಸ್ಮಗ್ಲಿಂಗ್ ಪ್ರಕರಣ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದ ನಂಟು ಹೊಂದಿರುವ ಸಚಿವರು ಯಾರು? ನಾಳೆ ಯತ್ನಾಳ್ ಹೆಸರು ಬಹಿರಂಗಪಡಿಸಿದ ನಂತರ ಏನಾಗಬಹುದು? ಸದನದಲ್ಲಿ ಭಾರಿ ಕೋಲಹಲ ಮೂಡಬಹುದೇ ಎಂಬ ಪ್ರಶ್ನೆಗಳು ಸೃಷ್ಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಯತ್ನಾಳ್ ಹೇಳಿಕೆಯ ವಿವರಗಳು ಇಲ್ಲಿವೆ.
- Ashok Yadalli
- Updated on: Mar 16, 2025
- 3:36 pm