ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ – ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು…….
ದೂರು ನೀಡಿದ ವಿವಾಹಿತ ಮಹಿಳೆಯನ್ನೇ ಪಟಾಯಿಸಿದ ‘ಪೋಲಿ’ಸಪ್ಪ: ನ್ಯಾಯಕ್ಕಾಗಿ ಪತಿ ಹೋರಾಟ
ಕೌಟುಂಬಿಕ ಕಲಹದಿಂದ ದೂರು ನೀಡಿದ್ದ ಮಹಿಳೆಯೊಂದಿಗೆ ಓರ್ವ ಪೊಲೀಸ್ ಅಧಿಕಾರಿ ಅನೈತಿಕ ಸಂಬಂಧ ಬೆಳೆಸಿ, ಸಂಸಾರವನ್ನೇ ಹಾಳು ಮಾಡಿರುವಂತಹ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವುದೂ ಬೆಳಕಿಗೆ ಬಂದಿದೆ. ನ್ಯಾಯ ಒದಗಿಸಬೇಕಾದವರೇ ಕುಟುಂಬ ನಾಶಪಡಿಸಿದ್ದರಿಂದ ಆಕ್ರೋಶ ವ್ಯಕ್ತವಾಗಿದೆ. ವಿಜಯಪುರ ಪೊಲೀಸರು ತನಿಖೆ ನಡೆಸಿದ್ದಾರೆ.
- Ashok Yadalli
- Updated on: Dec 27, 2025
- 6:42 pm
ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು?
ವಿಜಯಪುರ ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ದಿವಟಗೇರಿ ಗಲ್ಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ದಾಳಿ ನಡೆಸಿ ಕಿವಿ ಕತ್ತರಿಸಿ ಚಿನ್ನದ ಮಾಂಗಲ್ಯ ಮತ್ತು ಕಿವಿಯೋಲೆಯನ್ನು ಮುಸುಕುಧಾರಿಗಳು ಕಳವು ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಮುಂದುವರಿದಿದೆ.
- Ashok Yadalli
- Updated on: Dec 27, 2025
- 4:55 pm
ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ವಿಜಯಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ 2.50 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಕಂತೆ ಕಂತೆ ಹಣ, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಧಿಕಾರಿಗಳ ತಂಡ ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದೆ.
- Ashok Yadalli
- Updated on: Dec 24, 2025
- 10:14 am
ಕೊರೆಯುವ ಚಳಿಗೆ ನಡುಗಿದ ವಿಜಯಪುರ: ಶಾಲೆ ಸಮಯ ಬದಲಾವಣೆ, ಡಿಸಿ ಆದೇಶಕ್ಕೂ ಕಿಮ್ಮತ್ತಿಲ್ಲ
ವಿಜಯಪುರ ಜಿಲ್ಲೆಯಲ್ಲಿ ಚಳಿ ತೀವ್ರಗೊಂಡಿದೆ. ಮುಂದಿನ ದಿನಗಳನ್ನು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲಾ ಸಮಯವನ್ನು ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಆದರೆ ಬಹುತೇಕ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಈ ಆದೇಶವನ್ನು ಪಾಲಿಸುತ್ತಿಲ್ಲ. ಹೀಗಾಗಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ashok Yadalli
- Updated on: Dec 22, 2025
- 5:04 pm
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ಡಿಕೆಶಿ ಬಣಕ್ಕೆ ಮತ್ತೆ ರಾಜಣ್ಣ ಟಾಂಗ್
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ರಾಜಕೀಯ ಭವಿಷ್ಯ ಕುರಿತೂ ಮಾತನಾಡಿದ ಅವರು, ‘ನನ್ನದು ಆದರೆ ಆಗಬಹುದು, ಹೋದರೆ ಹೋಗಬಹುದು’ ಎಂದು ಮಾರ್ಮಿಕವಾಗಿ ಹೇಳಿದರು. ವರಿಷ್ಠರು ಕರೆದರೆ ಖಂಡಿತ ದೆಹಲಿಗೆ ಹೋಗುತ್ತೇನೆ ಎಂದರು.
- Ashok Yadalli
- Updated on: Dec 18, 2025
- 11:33 am
ಅಬ್ಬಬ್ಬಾ ಏನ್ ಚಳಿ ಗುರು: ಥಂಡಾ ಹೊಡೆದ ಉತ್ತರ ಕರ್ನಾಟಕ; ವಾಕಿಂಗ್ ತೆರಳದಂತೆ ಮನವಿ
ರಾಜ್ಯದಲ್ಲಿ ಮೈಕೊರೆಯುವ ಚಳಿ ಜನಜೀವನವನ್ನು ತತ್ತರಗೊಳಿಸಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಥಂಡಾ ಹೊಡೆದಿವೆ. ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೂಡ ನೀಡಿದೆ.
- Ashok Yadalli
- Updated on: Dec 14, 2025
- 10:07 pm
ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ: ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟಕ್ಕೆ ಸಜ್ಜು
ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭವಾಗಿದೆ. ಈ ಹಿನ್ನಲೆ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಮುಂದಾಗಿವೆ. ಈ ನಿಟ್ಟಿನಲ್ಲಿ ನಾಳೆ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ನಾಳೆ ಹೋರಾಟ ನಡೆಯಲಿದೆ.
- Ashok Yadalli
- Updated on: Dec 8, 2025
- 4:55 pm
ಗಂಡು ಮಗುವಿನಾಸೆಗೆ ಮಾಟಗಾತಿಯ ಮಾತು ಕೇಳಿ ಹೆಂಡತಿ ತಲೆ ಕೂದಲನ್ನೇ ಕತ್ತರಿಸಿದ ಪತಿ!
ವಿಜಯಪುರದ ಹೊನ್ನುಟಗಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದ್ದು, ನಾಗರಿಕ ಸಮಾಜ ನಾಚುವಂತಾಗಿದೆ. ಮೂಢ ನಂಬಿಕೆಗೊಳಗಾಗಿದ್ದ ಪತಿ, ಗಂಡು ಮಗುವಿಗಾಗಿ ಮಾಟಗಾತಿಯ ಮಾತಿನಂತೆ ಮಹಿಳೆಯ ಕೂದಲು ಬಲವಂತವಾಗಿ ಕತ್ತರಿಸಿದ್ದಾರೆ.ಘಟನೆಯ ಬಳಿಕ ರಕ್ತಸ್ರಾವದಿಂದ ಬಳಲಿದ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ದೂರು ದಾಖಲಿಸಿದ್ದಾರೆ.
- Ashok Yadalli
- Updated on: Dec 8, 2025
- 8:21 am
ರೈಲ್ವೇ ಇಲಾಖೆಯಲ್ಲಿ ಉದ್ಯೋಗದ ಆಮಿಷ: 15 ಯುವಕರಿಗೆ ಒಟ್ಟು 1.50 ಕೋಟಿ ಮಕ್ಮಲ್ ಟೋಪಿ
ವಿಜಯಪುರದಲ್ಲಿ ರೈಲ್ವೇ ಉದ್ಯೋಗದ ಆಮಿಷವೊಡ್ಡಿ 15 ನಿರುದ್ಯೋಗಿ ಯುವಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಟಿಸಿ, ಸಿ ಮತ್ತು ಡಿ ದರ್ಜೆ ಹಾಗೂ ಸ್ಟೇಷನ್ ಮಾಸ್ಟರ್ ಹುದ್ದೆ ಕೊಡಿಸುವುದಾಗಿ ನಂಬಿಸಿ, ಆರೋಪಿಗಳು ನಕಲಿ ನೇಮಕಾತಿ ಪತ್ರಗಳನ್ನು ನೀಡಿದ್ದರು. ನಕಲಿ ತರಬೇತಿಯನ್ನೂ ಏರ್ಪಡಿಸಿದ್ದಾರೆ. ಐದು ವರ್ಷಗಳ ಹಿಂದೆಯೇ ಹಣ ನೀಡಿದ್ದ ಯುವಕರು ಈಗ ನ್ಯಾಯಕ್ಕಾಗಿ ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ.
- Ashok Yadalli
- Updated on: Dec 3, 2025
- 3:37 pm
ಕೂಲಿ ಕೆಲಸದವನ ಪ್ರಾಣ ಪಡೆದ ಅಕ್ರಮ ಸಂಬಂಧ: 6 ತಿಂಗಳ ಬಳಿಕ ಪ್ರಕರಣ ಭೇದಿಸಿದ ಖಾಕಿ
ವಿಜಯಪುರ ಜಿಲ್ಲಾ ಪೊಲೀಸರು 6 ತಿಂಗಳ ಹಿಂದೆ ಸಿಂದಗಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಯಾವುದೇ ಸಾಕ್ಷ್ಯ ದೊರೆಯದಿದ್ದರೂ, ಪೊಲೀಸರು ನಡೆಸಿದ ತೀವ್ರ ತನಿಖೆ ಹಾಗೂ ಬ್ರೇನ್ ಮ್ಯಾಪಿಂಗ್ ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎಂಬುದನ್ನು ಬಯಲಿಗೆಳೆದಿದೆ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
- Ashok Yadalli
- Updated on: Nov 21, 2025
- 5:37 pm
ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್
ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ದೈಹಿಕ ಸಂಬಂಧದ ವಿಡಿಯೋ ಮಾಡಿ 10 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ್ದರು. ಮ್ಯಾನೇಜರ್ ದೂರು ನೀಡಿದ ನಂತರ ನಾಲ್ವರಲ್ಲಿ ಪೈಕಿ ಆರೋಪಿ ಬಂಧಿತನಾಗಿದ್ದಾನೆ. ಇದು ಸರಣಿ ಹನಿಟ್ರ್ಯಾಪ್ ಪ್ರಕರಣಗಳ ಭಾಗವಾಗಿರುವ ಶಂಕೆ ವ್ಯಕ್ತವಾಗಿದೆ.
- Ashok Yadalli
- Updated on: Nov 19, 2025
- 9:04 am
ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ ಹತ್ಯೆ: ಕಾರಣವೇನು?
ಕಳೆದ ತಿಂಗಳು ಡಬಲ್ ಮರ್ಡರ್ ಹಾಗೂ ಮತ್ತೊಂದು ಕೊಲೆಗೆ ಸಾಕ್ಷಿಯಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಹೆಣ ಬಿದ್ದಿದೆ. ಸಹೋದರನ ಸಹಾಯದೊಂದಿಗೆ ಮಹಿಳೆ ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ತನ್ನ ಪ್ರಿಯಕರನನ್ನು ಕೊಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಪೊಲೀಸರು ಮಹಿಳೆ ಹಾಗೂ ಆಕೆಯ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
- Ashok Yadalli
- Updated on: Nov 17, 2025
- 3:31 pm