ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ಚಿಕ್ಕಮಗಳೂರು: ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ
ಚಿಕ್ಕಮಗಳೂರಿನ ಕಳಸ ತಾಲೂಕಿನ ಹಳುವಳ್ಳಿಯ ಬಳಿ ಭದ್ರಾ ನದಿಯಲ್ಲಿ 10ನೇ ತರಗತಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮಾರ್ಚ್ 16ರಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಪೊಲೀಸರು ಹುಡುಕಿದ್ದರು. ಸದ್ಯ ಆತನ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
- Ashwith Mavinaguni
- Updated on: Mar 19, 2025
- 8:35 pm
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ: ಅಳಿಯನ ಕೈಯಲ್ಲೇ ಹೆಣವಾದ ಪಂಚನಹಳ್ಳಿ ಸಾಹುಕಾರ
ತಂದೆಯ ಆಸ್ತಿಗಾಗಿ ಅಕ್ಕ ತಮ್ಮನ ನಡುವೆ ಗಲಾಟೆ. 26 ಎಕರೆ ತೆಂಗಿನ ತೋಟ, 24 ವಾಣಿಜ್ಯ ಮಳಿಗೆ, ಸೈಟ್ ಗಾಗಿ ಅಕ್ಕ ತಮ್ಮನ ನಡುವೆ ನಡೆಯುತ್ತಿದ್ದ ಗಲಾಟೆಗೆ ಪಂಚನಹಳ್ಳಿಯ ಸಾಹುಕಾರನ ಹತ್ಯೆಯಾಗಿದೆ. ಆಸ್ತಿ ವಿಚಾರಕ್ಕೆ ಮಾವ ತನ್ನ ತಾಯಿಗೆ ಬೈದ ಎಂದು ಅಳಿಯ ಮಾವನನ್ನೇ ಹತ್ಯೆ ಮಾಡಿದ್ದಾನೆ. ಹತ್ಯೆ ಮಾಡುವ ಮೊದಲು ಮಾವನ ಬೈಕ್ನಲ್ಲೇ ರೌಂಡ್ ಹೊಡೆದಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.
- Ashwith Mavinaguni
- Updated on: Mar 19, 2025
- 8:23 pm
ಪೊಲೀಸರಿಂದಲೇ ಹಿಟ್ ಆ್ಯಂಡ್ ರನ್: ಬೈಕ್ ಸವಾರ ಸಾವು, ಜೀಪ್ ಚಾಲಕ ಸಸ್ಪೆಂಡ್
ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಪೊಲೀಸ್ ಜೀಪ್ ಡಿಕ್ಕಿಯಿಂದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ. ಸದ್ಯ ಚಾಲಕನನ್ನು ಅಮಾನತುಗೊಳಿಸಲಾಗಿದೆ ಮತ್ತು ಬಂಧಿಸಲಾಗಿದೆ. ಜೀಪನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
- Ashwith Mavinaguni
- Updated on: Mar 19, 2025
- 5:45 pm
ಎಣ್ಣೆಗಾಗಿ ಕ್ಯಾಶಿಯರ್ ಮೇಲೆ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ
ಕೊಪ್ಪದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ್ ಎಂಬುವವರು ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಎಣ್ಣೆ ಕೊಡದ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಬಾರ್ನ ಸಿಸಿಟಿವಿ ದೃಶ್ಯಗಳು ಹಲ್ಲೆಯನ್ನು ದೃಢಪಡಿಸುತ್ತವೆ. ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
- Ashwith Mavinaguni
- Updated on: Mar 18, 2025
- 8:22 am
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆ ಉಲ್ಬಣ: ಓರ್ವ ಮಹಿಳೆ ಸಾವು
ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (KFD) ಪ್ರಕರಣಗಳು ಹೆಚ್ಚುತ್ತಿದ್ದು, 65 ವರ್ಷದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. 51 ಜನರಲ್ಲಿ ಕಾಯಿಲೆ ದೃಢಪಟ್ಟಿದೆ. ಕೊಪ್ಪ ಮತ್ತು ಎನ್.ಆರ್.ಪುರ ತಾಲೂಕುಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಾಗೃತಿ ಮೂಡಿಸುತ್ತಿದೆ ಮತ್ತು DMPA ತೈಲ ಸಿಂಪಡಿಸುತ್ತಿದೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.
- Ashwith Mavinaguni
- Updated on: Mar 17, 2025
- 11:04 am
ನಾಪತ್ತೆಯಾಗಿದ್ದ ಚಿಕ್ಕಮಗಳೂರು ವಸತಿ ಶಾಲೆಯ ಇಬ್ಬರೂ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ
ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಯಶ್ವಿತ್ ಮತ್ತು ತರುಣ್ ಎಂಬ ಇಬ್ಬರು 9ನೇ ತರಗತಿ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮಾರ್ಚ್ 3 ರಂದು ಶಾಲೆಯಿಂದ ಹೊರಟ ಈ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು. ಪೊಲೀಸರ ತೀವ್ರ ಹುಡುಕಾಟದ ನಂತರ ಅವರು ಪತ್ತೆಯಾಗಿದ್ದು, ಸುರಕ್ಷಿತವಾಗಿದ್ದಾರೆ.
- Ashwith Mavinaguni
- Updated on: Mar 15, 2025
- 10:58 am
ಪ್ರವಾಸಿಗರ ಗಮನಕ್ಕೆ: ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮಾರ್ಚ್ 15 ರಿಂದ 17 ರವರೆಗೆ ಮೂರು ದಿನಗಳ ಉರುಸ್ ನಡೆಯಲಿದೆ. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುವ ಈ ಉರುಸ್ಗೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪ್ರರ್ವತ ಸಾಲಿನ ಪ್ರವಾಸಿ ಸ್ಥಳಕ್ಕೆ ಭೇಟಿ ನೀಡಬೇಕೆಂದು ಯೋಚಿಸಿದ್ದರೇ, ಈ ಸುದ್ದಿ ಒಮ್ಮೆ ಓದಿ.
- Ashwith Mavinaguni
- Updated on: Mar 15, 2025
- 8:58 am
ಚಿಕ್ಕಮಗಳೂರಿನಲ್ಲಿ ಮತ್ತೆ ಮುನ್ನಲೆಗೆ ಬಂದ ಜಾಮಿಯಾ ಮಸೀದಿ-ನೆಲ್ಲೂರು ಮಠ ನಡುವಿನ ಜಾಗ ವಿವಾದ
ನೆಲ್ಲೂರು ಮಠ - ಜಾಮಿಯಾ ಮಸೀದಿ ನಡುವಿನ ಎರಡು ದಶಕದ ಕಾನೂನು ಹೋರಾಟ. ಕಾನೂನು ಹೋರಾಟದ ನಡುವೆಯೂ ಇಂದು ಬೆಳ್ಳಂಬೆಳಗ್ಗೆ ಏಕಾಏಕಿ ಜಾಮಿಯಾ ಮಸೀದಿ ಕಮಿಟಿ ವಿವಾದಿತ ಸ್ಥಳದಲ್ಲಿದ್ದ ಮನೆ ಮತ್ತು ಅಂಗಡಿಗಳನ್ನ ತೆರವುಗೊಳಿಸಿದ್ದು. ಕೆಡವಿದ ಜಾಗದಲ್ಲೇ ಮತ್ತೆ ಮನೆ ಮತ್ತು ಅಂಗಡಿ ಕಟ್ಟಿ ಕೊಡಿ ಇಲ್ಲ ನಾವೇ ಕಟ್ತೀವಿ ಎಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಸವಾಲ್ ಹಾಕಿ ತೊಡೆ ತಟ್ಟಿದೆ.
- Ashwith Mavinaguni
- Updated on: Mar 4, 2025
- 5:18 pm
ಪರಿಷತ್ ಚುನಾವಣಾ ಮರು ಮತ ಎಣಿಕೆ ಮುಕ್ತಾಯ: ಉಪಸಭಾಪತಿ ಎಂ ಕೆ ಪ್ರಾಣೇಶ್ಗೆ ಢವಢವ
ವಿಧಾನ ಪರಿಷತ್ ಉಪಸಭಾಪತಿ ಚುನಾವಣೆಯ ಮರು ಮತ ಎಣಿಕೆ ಸುಪ್ರೀಂ ಕೋರ್ಟ್ ಆದೇಶದಂತೆ ಪೂರ್ಣಗೊಂಡಿದೆ. ಎಂ.ಕೆ. ಪ್ರಾಣೇಶ್ ಮತ್ತು ಗಾಯತ್ರಿ ಶಾಂತೇಗೌಡರ ನಡುವಿನ ಕಾನೂನು ಹೋರಾಟದ ಅಂತಿಮ ಹಂತ ಇದಾಗಿದೆ. ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆದ ಈ ಮರು ಎಣಿಕೆಯ ಫಲಿತಾಂಶವು ಚುನಾವಣಾ ಆಯೋಗದಿಂದ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ.
- Ashwith Mavinaguni
- Updated on: Mar 1, 2025
- 10:57 am
ಚಿಕ್ಕಮಗಳೂರು: 2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಭಕ್ತನ ಬೇಡಿಕೆ ಪತ್ರ
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ ಒಂದು ವಿಚಿತ್ರ ಬೇಡಿಕೆ ಪತ್ರ ಪತ್ತೆಯಾಗಿದೆ. ಶಿವರಾತ್ರಿಯಂದು ಒಬ್ಬ ಭಕ್ತ "ಎರಡು ಕೋಟಿ ರೂಪಾಯಿ ಬೇಕು" ಎಂದು ಬರೆದ ಚೀಟಿಯನ್ನು ಹುಂಡಿಯಲ್ಲಿ ಹಾಕಿದ್ದರು. ಹುಂಡಿಯ ಹಣ ಎಣಿಕೆ ಸಮಯದಲ್ಲಿ ಈ ಪತ್ರ ಪತ್ತೆಯಾಗಿದ್ದು, ಈ ಘಟನೆ ಸಾಕಷ್ಟು ಕುತೂಹಲ ಮೂಡಿಸಿದೆ. ಭಕ್ತರ ವಿಚಿತ್ರ ಹರಕೆಗಳು ಮತ್ತು ಅವರ ನಂಬಿಕೆಗಳ ಬಗ್ಗೆ ಈ ಘಟನೆ ಬೆಳಕು ಚೆಲ್ಲುತ್ತದೆ.
- Ashwith Mavinaguni
- Updated on: Feb 28, 2025
- 11:35 am
ಚಂದ್ರದ್ರೋಣ ಪರ್ವತಕ್ಕೆ ಡ್ರೋನ್ ಕಣ್ಗಾವಲು: ಬೆಂಕಿಯಿಂದ ಅರಣ್ಯ ನಾಶ ತಡೆಗೆ ಕ್ರಮ
ಪಶ್ಚಿಮಘಟ್ಟದ ಚಂದ್ರದ್ರೋಣ ಪರ್ವತ ಸಾಲಿನ ಶೋಲಾ ಹುಲ್ಲುಗಾವಲು ಪ್ರದೇಶದಲ್ಲಿ ಮಂಗಳವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗಿಸಿ ಉರಿದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನ ಗಿರಿ ಗಾಳಿಕೆರೆ ಭಾಗದ 6 ಕಡೆ ಬೆಂಕಿ ಹೊತ್ತಿಕೊಂಡು ಅರಣ್ಯ ಸಂಪತ್ತು ನಾಶವಾಗಿದೆ.
- Ashwith Mavinaguni
- Updated on: Feb 26, 2025
- 1:07 pm
ಚಿಕ್ಕಮಗಳೂರು: 13 ವರ್ಷಗಳ ನಂತರ ರೈತನಿಗೆ ಬಂತು ಬರೋಬ್ಬರಿ 3 ಲಕ್ಷ ರೂ. ವಿದ್ಯುತ್ ಬಿಲ್!
ಇಂಧನ ಸಚಿವ ಜಾರ್ಜ್ ಅವರು ಉಸ್ತುವಾರಿ ವಹಿಸಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ಬೆಳೆಗಾರರೊಬ್ಬರಿಗೆ ಬರೋಬ್ಬರಿ 13 ವರ್ಷಗಳ ನಂತರ ಮೂರು ಲಕ್ಷ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಪಾವತಿಸುವಂತೆ ಮೆಸ್ಕಾಂ ನೋಟಿಸ್ ನೀಡಿದೆ. ಈ ನಡೆಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
- Ashwith Mavinaguni
- Updated on: Feb 26, 2025
- 9:34 am