AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

Author - TV9 Kannada

ashwith.poornesha@tv9.com

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪ

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ 1,822 ಅಂಚೆ ಮತಗಳ ಮರು ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ನ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಗೆದ್ದಿದ್ದರು. ಜೀವರಾಜ್ ಅವರು ಮರು ಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದರಿಂದ ಈ ಪ್ರಕ್ರಿಯೆ ಆರಂಭವಾಗಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ‌ ಮರು ಎಣಿಕೆ: ಹೇಗಿರಲಿದೆ ಎಣಿಕೆ ವಿಧಾನ?

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ‌ ಮರು ಎಣಿಕೆ: ಹೇಗಿರಲಿದೆ ಎಣಿಕೆ ವಿಧಾನ?

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್ ಆದೇಶಿಸಿದೆ. ಹೀಗಾಗಿ ನಾಳೆ (ಮೇ 02) ಮರು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇನ್ನು ಜಿಲ್ಲಾಡಳಿತ ಸಹ ಸಿದ್ಧತೆ ಹೇಗಿದೆ ಎನ್ನುವ ಬಗ್ಗೆ ಚಿಕ್ಕಮಗಳೂರು ಡಿ.ಸಿ ನಾಗರಾಜ್ ಮಾಹಿತಿ ನೀಡಿದ್ದಾರೆ.

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ!

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ!

SSLC ಫಲಿತಾಂಶ ಪ್ರಕಟವಾಗಿದ್ದು, ಮೌಲ್ಯಮಾಪಕರ ಯಡವಟ್ಟಿನಿಂದ ವಿದ್ಯಾರ್ಥಿ ರಾಮದತ್ತ ಶರ್ಮ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ ಅವರಿಗೆ ಬರಬೇಕಿದ್ದ 92 ಅಂಕಗಳ ಬದಲು, ಕಂಪ್ಯೂಟರ್ ಮಾರ್ಕ್ಸ್ ಎಂಟ್ರಿ ವೇಳೆ ಕೇವಲ 48 ಅಂಕಗಳನ್ನು ನಮೂದಿಸಲಾಗಿದೆ. ಶೃಂಗೇರಿಯ ರಾಮಕೃಷ್ಣ ಇಂಗ್ಲೀಷ್ ಮಾಧ್ಯಮ ಶಾಲೆಯ ಈ ವಿದ್ಯಾರ್ಥಿ ಫಲಿತಾಂಶದ ತಿದ್ದುಪಡಿಗೆ ಆಗ್ರಹಿಸಿದ್ದಾರೆ.

ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು

ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವಬೃಂದದಲ್ಲಿ ತಂದೆಯ ಬೈಗುಳಕ್ಕೆ ನೊಂದು 22 ವರ್ಷದ ಸೌಜನ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಂಬಾರ್ ಮಾಡಿಲ್ಲವೆಂದು ತಂದೆ ನಟೇಶ್ ಬೈದಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ಊಟದ ವಿಚಾರವಾಗಿ ನಡೆದ ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!

ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!

ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ದಿನೇದಿನೇ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಡಿ ಭಾಗದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಗಡೆ ಶಾಲೆ ಸಮೀಪ ಒಂಟಿ ಕೋರೆ ಸಲಗ ರಸ್ತೆ ಮೇಲೆ ಬಿಂದಾಸ್ ಸಂಚಾರ ನಡೆಸಿ, ಜನರಲ್ಲಿ ಭೀತಿ ಉಂಟುಮಾಡಿದೆ. ದೇವನಗೂಲ್ ಹಾಗೂ ವಗಡೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಆನೆ ಓಡಾಡುತ್ತಿರುವುದು ಸ್ಥಳೀಯರ ನಿದ್ರೆ ಕೆಡಿಸಿದೆ. ಅಲ್ಲದೆ ಆನೆ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಹಿನ್ನೆಲೆಯಲ್ಲಿ ಜೀವಭಯ ಹೆಚ್ಚಾಗಿದೆ. ಕೂಡಲೇ ಈ ಕೋರೆ ಸಲಗವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಘಟನೆ ಮೂಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

Chikkamagaluru Rain: ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

Chikkamagaluru Rain: ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಚಿಕ್ಕಮಗಳೂರು ಜಿಲ್ಲೆಯ (Chikkamagaluru) ಕೊಟ್ಟಿಗೆಹಾರ, ಚಾರ್ಮಾಡಿ ,ಬಣಕಲ್, ಆಲ್ದೂರು ಹಾಗೂ ಮತ್ತಿಕಟ್ಟೆಯಲ್ಲಿ ಭಾರೀ ಗಾಳಿ, ಗುಡುಗು-ಸಿಡಿಲಿನ ಸಹಿತ ಮಳೆ ಸುರಿಯುತ್ತಿದೆ. ಹಲವೆಡೆ ಭಾರೀ ಆಲಿಕಲ್ಲಿನ ಮಳೆಯಾಗಿದೆ. ಇನ್ನು ಮೂಡಿಗೆರೆ ತಾಲೂಕಿನ ಬಾಳೂರು ಬಳಿ ರಸ್ತೆಗೆ ಅಡ್ಡಲಾಗಿ ಮರ ಬದ್ದಿದ್ದು, ಬಾಳೂರು ಕಳಸ‌ ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಆಟೋ ಚಾಲಕರ ಹುಚ್ಚಾಟ

KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಆಟೋ ಚಾಲಕರ ಹುಚ್ಚಾಟ

ಚಿಕ್ಕಮಗಳೂರಿನಲ್ಲಿ ಕುಡಿದ ಅಮಲಿನಲ್ಲಿದ್ದ ಮೂವರು ಆಟೋ ಚಾಲಕರು ರಸ್ತೆ ಮಧ್ಯೆ KSRTC ಬಸ್ ಅಡ್ಡಗಟ್ಟಿ ಕಿರಿಕ್ ಮಾಡಿದ್ದಾರೆ. ಚಾಲಕ ಮನವಿ ಮಾಡಿದರೂ ಕೇಳದೆ ಸೆಲ್ಫಿ ತೆಗೆಯುತ್ತ ಹುಚ್ಚಾಟ ನಡೆಸಿದ ವಿಡಿಯೋ ವೈರಲ್ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದ ಅರಳಿಕೊಪ್ಪ ರಬ್ಬರ್ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಇದು ಕೊಲೆಯಾಗಿರಬಹುದು ಎಂದು ಬಲವಾಗಿ ಶಂಕಿಸಲಾಗಿದೆ. ನಾಪತ್ತೆಯಾಗಿದ್ದ ಕೇರಳ ಮೂಲದ ಕಾರ್ಮಿಕ ಬಿಬಿನ್‌ನದ್ದೇ ಈ ಶವವಾಗಿರಬಹುದು ಎಂದು ಊಹಿಸಲಾಗಿದೆ, ಏಕೆಂದರೆ ಆತನ ಜರ್ಕಿನ್ ಸ್ಥಳದಲ್ಲಿ ಸಿಕ್ಕಿದೆ. ಪೊಲೀಸರು ಎಫ್‌ಎಸ್‌ಎಲ್ ತಂಡದೊಂದಿಗೆ ತನಿಖೆ ನಡೆಸುತ್ತಿದ್ದು, ಆರೋಪಿಗಳ ಶೀಘ್ರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.

ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ನಡು ರಸ್ತೆಯಲ್ಲೇ ಕೆಟ್ಟು ನಿಂತ KSRTC ಬಸ್

ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ನಡು ರಸ್ತೆಯಲ್ಲೇ ಕೆಟ್ಟು ನಿಂತ KSRTC ಬಸ್

ಇತ್ತೀಚೆಗೆ ಸರ್ಕಾರಿ ಬಸ್​​ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು KSRTC ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ಏಕಾಏಕಿ ಚಿಕ್ಕಮಗಳೂರು ನಗರದ NMC ಸಿಗ್ನಲ್ ಬಳಿ ಕೆಂಟು ನಿಂತಿದೆ. ಇದರಿಂದ ಪ್ರಯಾಣಿಕರು ಬಸ್ ತಳ್ಳಿ ತಳ್ಳಿ ಸುಸ್ತಾದರು.

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ?

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ?

ಬಿಸಿಲಿನ ತಾಪಕ್ಕೆ ತಂಪು ಅರಸಿ ತೆರಳುವವರು ಕೃಷಿಹೊಂಡ, ನದಿ, ಕೆರೆಗಳಲ್ಲಿ ಮುಳುಗಿ ಸಾಯುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಈಜಲು ಹೋಗಿ ಇಬ್ಬರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕೃಷಿ ಹೊಂಡದ ಸಮೀಪ ಪತ್ತೆಯಾಗಿದ್ದ ಚಪ್ಪಲಿಗಳನ್ನು ಆಧರಿಸಿ ಶೋಧ ನಡೆಸಲಾಗಿತ್ತು. ನಿನ್ನೆ ಭದ್ರಾ ಹಿನ್ನೀರಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕ ನಿತಿನ್ ಶವವೂ ಇಂದು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಾಡುಕೋಣದ ದಾಳಿಗೆ ಪ್ರಾಣಬಿಟ್ಟ ಕಾಫಿ ತೋಟದ ಕೆಲಸಗಾರ: 30 ವರ್ಷದ ಯುವಕನ ದಾರುಣ ಸಾವು

ಕಾಡುಕೋಣದ ದಾಳಿಗೆ ಪ್ರಾಣಬಿಟ್ಟ ಕಾಫಿ ತೋಟದ ಕೆಲಸಗಾರ: 30 ವರ್ಷದ ಯುವಕನ ದಾರುಣ ಸಾವು

ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ 30 ವರ್ಷದ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಮರಸಣಿಗೆ ಸಮೀಪದ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದೆ. ಕಾಡಾನೆಗಳ ಹಾವಳಿಯ ಬೆನ್ನಲ್ಲೇ ಕಾಡುಕೋಣಗಳ ಉಪಟಳ ಹೆಚ್ಚಿದ್ದು, ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ತೀವ್ರಗೊಂಡಿದೆ. ಅರಣ್ಯ ಇಲಾಖೆ ಕಾಡುಕೋಣಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಮುಂದಾಗಿದೆಯಾದರೂ ರೈತರು ಮತ್ತು ಕಾರ್ಮಿಕರಲ್ಲಿ ಆತಂಕ ಹೆಚ್ಚಿದೆ.

ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ

ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ

ಚಿಕ್ಕಮಗಳೂರಿನ NR ಪುರದ ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ನಡುವೆ ನಡೆದ ಗಲಾಟೆ ವಿಡಿಯೋ ವೈರಲ್ ಆಗಿದೆ. ಮಹಿಳಾ ಸಿಬ್ಬಂದಿ ಕ್ಯಾಶಿಯರ್ ವಿರುದ್ಧ ಅಸಭ್ಯ ವರ್ತನೆಯ ಆರೋಪ ಮಾಡಿದ್ದು, ಅಷ್ಟೇ ಅಲ್ಲದೆ ಆತನ ಕೊರಳಪಟ್ಟಿ ಹಿಡಿದು ಜಗಳವಾಡಿದ್ದಾರೆ. ಗ್ರಾಹಕರ ಸಮ್ಮುಖದಲ್ಲೇ ಘಟನೆ ನಡೆದಿದೆ.

ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ