AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

Author - TV9 Kannada

ashwith.poornesha@tv9.com

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ನೋಡಿ,  ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು; ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು; ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ತಾಲೂಕಿನ ಭದ್ರಾ ಅಭಯಾರಣ್ಯದ ಮುತ್ತೋಡಿ ವಲಯವು ಇತ್ತೀಚೆಗೆ ವನ್ಯಜೀವಿ ಪ್ರಿಯರ ಗಮನ ಸೆಳೆದಿದೆ. ಇಲ್ಲಿ ಅಪರೂಪದ ಚಿರತೆಗಳ ದರ್ಶನವಾಗಿದ್ದು, ಪ್ರವಾಸಿಗರು ಅದ್ಭುತ ದೃಶ್ಯಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮುತ್ತೋಡಿ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಒಂದೇ ಮರದ ಮೇಲೆ ಕುಳಿತಿದ್ದ ಎರಡು ಚಿರತೆಗಳು ಕಾಣಿಸಿಕೊಂಡಿವೆ. ಬೇಟೆಗೆ ಹೊಂಚು ಹಾಕಿ ಕುಳಿತುಕೊಂಡಿದ್ದ ಚಿರತೆಗಳ ದೃಶ್ಯಗಳು ವನ್ಯಜೀವಿ ಛಾಯಾಗ್ರಾಹಕರ ಮತ್ತು ಪ್ರವಾಸಿಗರ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿವೆ . ಭದ್ರಾ ಅಭಯಾರಣ್ಯವು ತನ್ನ ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದ್ದು, ಇಂತಹ ವಿಸ್ಮಯಕಾರಿ ಕ್ಷಣಗಳು ಇಲ್ಲಿ ಸಾಮಾನ್ಯ. ಅಲ್ಲದೆ ಚಿರತೆಗಳು ಮರವನ್ನೇರಿ ವಿಶ್ರಮಿಸುವುದೂ ಕೂಡ ಅವುಗಳ ಗುಣಗಳಲ್ಲಿ ಒಂದು. ಚಿರತೆಗಳು ಮಾತ್ರವಲ್ಲ, ಬೆಕ್ಕಿನ ಜಾತಿಗೆ ಸೇರಿದ ಪ್ರಾಣಿಗಳಲ್ಲಿ ಈ ರೀತಿಯ ನಡವಳಿಕೆ ನೈಸರ್ಗಿಕವಾಗಿ ಬಂದಿರುತ್ತದೆ.

ಚಿಕ್ಕಮಗಳೂರಿನಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ: ಸಿಡಿದೆದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ: ಸಿಡಿದೆದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದದ ಬಳಿಕ ಇದೀಗ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ಹೊಸ ವಿವಾದ ಭುಗಿಲೆದ್ದಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಅನಧಿಕೃತ ಗೋರಿಗಳನ್ನು ನಿರ್ಮಿಸಿ, ಹಸಿರು ಬಟ್ಟೆ ಹೊದಿಸಿ ಹೊಸ ಆಚರಣೆ ನಡೆಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ಹೀಗಾಗಿ ಸ್ಥಳದಲ್ಲಿ ಉತ್ಖನನ ನಡೆಸುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ.

ಮಲೆನಾಡಿನಲ್ಲಿ ಕೈಕೊಟ್ಟ ಮುಂಗಾರು: ಆತಂಕದಲ್ಲಿ ಬೆಳೆಗಾರರು, ಪ್ರವಾಸಿಗರಿಲ್ಲದೆ ಕಳೆಗುಂದಿದ ಕಾಫಿನಾಡು

ಮಲೆನಾಡಿನಲ್ಲಿ ಕೈಕೊಟ್ಟ ಮುಂಗಾರು: ಆತಂಕದಲ್ಲಿ ಬೆಳೆಗಾರರು, ಪ್ರವಾಸಿಗರಿಲ್ಲದೆ ಕಳೆಗುಂದಿದ ಕಾಫಿನಾಡು

Chikkamagaluru New: ಸದ್ಯ ರಾಜ್ಯದಲ್ಲಿ ಮಳೆ ಇಲ್ಲದೇ ಎಲ್ಲೆಡೆ ಬರದ ಛಾಯೆ ಆವರಿಸಿದೆ. ಇತ್ತ ಹಚ್ಚಹಸಿರಿನಿಂದ ಕಂಗೊಳಿಸುವ ಚಿಕ್ಕಮಗಳೂರಿನಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಮಲೆನಾಡಿನಲ್ಲಿ ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಿಂದ ಕಾಫಿ, ಅಡಿಕೆ, ಮೆಣಸು ಬೆಳೆ ಕುಂಠಿತಗೊಂಡಿದೆ. ಜೊತೆಗೆ ಪ್ರವಾಸಿಗರಿಲ್ಲದೇ ಪ್ರವಾಸಿ ತಾಣಗಳು ಕಳೆಗುಂದಿದೆ.

ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ

ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ

ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಕುರಿತು ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ. ಮೂವರು ಸದಸ್ಯರ ತಂಡ ಮಧ್ಯಂತರ ವರದಿ ಸಿದ್ಧಪಡಿಸಿದೆ. ಇದು ಗೌಪ್ಯವಾಗಿದ್ದು, ರಾಜ್ಯಾಧ್ಯಕ್ಷರು ದೆಹಲಿಯಿಂದ ಮರಳಿದ ನಂತರ ಅವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ವರದಿಯ ವಿವರಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ನಿರಾಕರಿಸಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಎಸಿಎಫ್​​ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

ಲೋಕಾಯುಕ್ತ ದಾಳಿ ವೇಳೆ ಎಸಿಎಫ್​​ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

ಚಿಕ್ಕಮಗಳೂರಿನಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸಿಎಫ್ ಮೋಹನ್ ಅವರ ಮನೆ, ಕಚೇರಿ ಸೇರಿದಂತೆ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೂರುಗಳ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​

ಎಐ (AI) ತಂತ್ರಜ್ಞಾನ ಬಳಸಿ ಯುವತಿಯ ಅಶ್ಲೀಲ ವಿಡಿಯೋ ಸೃಷ್ಟಿಸಿ, ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಮೈತುಂಬ ಸಾಲ ಮಾಡಿಕೊಂಡಿದ್ದ ಆರೋಪಿಗಳು ಹಣದ ಆಸೆಗೆ ಬಿದ್ದು ಈ ರೀತಿ ಕೃತ್ಯ ಎಸಗಿರೋದು ತನಿಖೆ ವೇಳೆ ಬಯಲಾಗಿದ್ದು, ಸಂತ್ರಸ್ತ ಯುವತಿ ಮತ್ತು ಆರೋಪಿಗಳು ಒಂದೇ ಗ್ರಾಮದವರು ಎಂಬ ವಿಷಯವೂ ಬೆಳಕಿಗೆ ಬಂದಿದೆ.

ಅಡ್ಡ ಬಂದ ನಾಗರ ಹಾವು: ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಅಡ್ಡ ಬಂದ ನಾಗರ ಹಾವು: ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಚಿಕ್ಕಮಗಳೂರು ಅಜ್ಜಂಪುರದಲ್ಲಿ ವಿಚಿತ್ರ ಸರಣಿ ಅಪಘಾತ ನಡೆದಿದೆ. ನಾಗರ ಹಾವು ರಸ್ತೆಗೆ ಅಡ್ಡ ಬಂದಾಗ ಬೈಕ್ ಸವಾರರು ಏಕಾಏಕಿ ಬ್ರೇಕ್ ಹಾಕಿದರು. ಇದರಿಂದ ಹಿಂದೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಬೈಕ್ ಸವಾರರಿಗೆ ಸಣ್ಣ ಗಾಯಗಳಾಗಿವೆ.

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ!

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ!

ಚಿಕ್ಕಮಗಳೂರಿನ ಸರ್ಕಾರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿದ ಉತ್ತರ ಪ್ರದೇಶದ ಕಾರ್ಮಿಕನನ್ನು ಯುವತಿಯರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಕಳ್ಳತನದ ಉದ್ದೇಶದಿಂದ ನುಗ್ಗಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ಹಿಂದೆಯೂ ಇದೇ ಮಾದರಿಯ ಘಟನೆಗಳು ಹಾಸ್ಟೆಲ್​​ನಲ್ಲಿ ನಡೆದಿದ್ದವು ಎನ್ನಲಾಗಿದೆ.

ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು: ಗಜಪಡೆ ಕಂಡು ಸಾರ್ವಜನಿಕರು ಕಂಗಾಲು

ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು: ಗಜಪಡೆ ಕಂಡು ಸಾರ್ವಜನಿಕರು ಕಂಗಾಲು

ಚಿಕ್ಕಮಗಳೂರು ಜಿಲ್ಲೆಯ ಕಡವಂತಿ ಸುತ್ತಮುತ್ತಲ ಗ್ರಾಮಗಳಲ್ಲಿ ಗಜಪಡೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಈ ನಡುವೆ ಕಡವಂತಿಯ ವಡ್ಡಿಗುಡ್ಡ ಎಸ್ಟೇಟ್​ನಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿರೋದು ಜನರ ಭೀತಿ ಹೆಚ್ಚಿಸಿದೆ. ಹೀಗಾಗಿ ಕಾಡಾನೆಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ

ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ

ರಾಜ್ಯ ಕಾಂಗ್ರೆಸ್​​ನಲ್ಲಿ ಪಟ್ಟದ ಫೈಟ್​​ಗೆ ಕೊನೆಗೂ ತೆರೆ ಬೀಳುವ ಸಾಧ್ಯತೆ ಗೋಚರಿಸಿದ್ದು, ಡಿಸಿಎಂ ಡಿಕೆಶಿ ಮುಖ್ಯಮಂತ್ರಿಯಾಗುವ ಕಾಲ ಸಮೀಪಿಸಿದೆ ಎನ್ನಲಾಗಿದೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದು, ಆ ಮೂಲಕ ಈ ಹಿಂದೆ ರಂಭಾಪುರಿ ಶ್ರೀಗಳು ನುಡಿದಿದ್ದ ಹೇಳಿಕೆ ಸತ್ಯವಾಗುವ ಕಾಲ ಬಂದಿದೆ. ಈ ಬೆನ್ನಲ್ಲೇ ಶಾಸಕ ತಮ್ಮಯ್ಯ ಶ್ರೀಗಳನ್ನು ಭೇಟಿಯಾಗಿದ್ದು, ನಿಮ್ಮ ಮಾತು ಸತ್ಯವಾಗುತ್ತಿದೆ. ನಿಮ್ಮ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​

ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಜನ ಜೀವನ್ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ನಗರದ ಹಳೆ ಉಪ್ಪಳ್ಳಿ, ಗೌರಿ ಕಾಲುವೆ ಬಡಾವಣೆಯ ಹತ್ತಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಟ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್​​ ಮರವೊಂದು ಬಿದ್ದ ಪರಿಣಾಮ ಚಿಕ್ಕಮಗಳೂರು-ಶಾಂತವೇರಿ, ಲಿಂಗದಹಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ.

ಬೀನ್ಸ್​​ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್​​ ಲಾಕ್​​ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್​​

ಬೀನ್ಸ್​​ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್​​ ಲಾಕ್​​ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್​​

ಚಿಕ್ಕಮಗಳೂರು ಎಪಿಎಂಸಿಯಲ್ಲಿ ಬೀನ್ಸ್ ಖರೀದಿಯಲ್ಲಿ ವ್ಯಾಪಾರಿಗಳು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ತಡರಾತ್ರಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಎಪಿಎಂಸಿ ಗೇಟ್​​ ಬಂದ್​​ ಮಾಡಿ ಅನ್ನದಾತರು ಆಕ್ರೋಶ ಹೊರಹಾಕಿದ್ದು, ಉಳಿದ ಮಾರುಕಟ್ಟೆಗಳಲ್ಲಿನ ಅರ್ಧ ದರಕ್ಕೂ ಇಲ್ಲಿನ ವ್ಯಾಪಾರಿಗಳು ಬೀನ್ಸ್​​ ಖರೀದಿದುತ್ತಿಲ್ಲ ಎಂದು ದೂರಿದ್ದಾರೆ. ಅಂತಿಮವಾಗಿ ಅಧಿಕಾರಿಗಳ ಭರವಸೆಯ ಬಳಿಕ ರೈತರು ಪ್ರತಿಭಟನೆ ಹಿಂಪಡೆದಿದ್ದಾರೆ.

ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು