ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ಕಾಮಗಾರಿ ವಿಚಾರವಾಗಿ ಹೈಡ್ರಾಮ: ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್!
ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆ ವೇಳೆ ಎಂಎಲ್ಸಿ ಸಿ.ಟಿ.ರವಿ ವಿರುದ್ಧ 'ಗೋ ಬ್ಯಾಕ್' ಘೋಷಣೆ ಮೊಳಗಿದ್ದು, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರಿ ಕಿತ್ತಾಟ ನಡೆದಿದೆ. ಶಾಸಕ ತಮ್ಮಯ್ಯ ವಿರುದ್ಧ ಆಕ್ರೋಶ ಹೊರಹಾಕಿರುವ ಸಿ.ಟಿ.ರವಿ, ರಸ್ತೆ ಕಾಮಗಾರಿ ಕ್ರೆಡಿಟ್ ವಿಚಾರವಾಗಿ ಯಾವ ದೇವಸ್ಥಾನದಲ್ಲಾದರೂ ಮುಖಾಮುಖಿ ಆಣೆ-ಪ್ರಮಾಣ ಮಾಡಲು ಸಿದ್ಧ ಎಂದು ನೇರ ಸವಾಲು ಎಸೆದಿದ್ದಾರೆ.
- Ashwith Mavinaguni
- Updated on: May 22, 2026
- 11:25 am
ನಿಪ್ಪಾಣಿ ಬೆನ್ನಲ್ಲೇ ಚಿಕ್ಕಮಗಳೂರಲ್ಲೂ ಕೈ, ಕಮಲ ಸಮರ: ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾ
ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆ ವೇಳೆ ಎಂಎಲ್ಸಿ ಸಿ.ಟಿ.ರವಿ ಎದುರೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. ವಿಧಾನ ಪರಿಷತ್ ಸದಸ್ಯರನ್ನು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ ಹಿನ್ನೆಲೆ ಆರಂಭವಾದ ಗಲಾಟೆ ವಿಕೋಪಕ್ಕೆ ಹೋಗಿದೆ. ಆ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದು, ಇಂತಹ ಗೂಂಡಾಗಳನ್ನು ಎದರಿಸಿಯೇ ನಾವು ಇಲ್ಲಿಯವರೆಗೆ ಬಂದಿದ್ದೇವೆ. ನನ್ನ ಮೇಲೆ ಹಲ್ಲೆಯ ಪ್ರಯತ್ನವೂ ನಡೆದಿದ್ದು, ಹೆದರಿ ಓಡಿಹೋಗುವ ಜಾಯಮಾನ ನನ್ನದಲ್ಲ ಎಂದವರು ಕಿಡಿ ಕಾರಿದ್ದಾರೆ.
- Ashwith Mavinaguni
- Updated on: May 22, 2026
- 10:15 am
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್ ಪಾಸ್, ಹೊಳೆಯಂತಾದ ರಸ್ತೆಗಳು
ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಬೀರೂರಿನಲ್ಲಿ ಭಾರೀ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೇ ಅಂಡರ್ಪಾಸ್ ಸಂಪೂರ್ಣ ಮುಳುಗಡೆಯಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ ಕೂಡ ಸಂಪೂರ್ಣ ಮುಳುಗಿದ್ದು, ಅದೇ ರಸ್ತೆಯಲ್ಲಿ ಕೆಲ ಸವಾರರು ವಾಹನಗಳ ಚಾಲನೆ ಮಾಡಿದ್ದಾರೆ.
- Ashwith Mavinaguni
- Updated on: May 20, 2026
- 7:38 pm
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ.
- Ashwith Mavinaguni
- Updated on: May 19, 2026
- 1:24 pm
ಮಲೆನಾಡಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ: ಹಿಂಡು ಹಿಂಡಾಗಿ ಕಾಣಿಸಿಕೊಂಡ ಕಾಡುಕೋಣಗಳು
ಮಲೆನಾಡಿನಲ್ಲಿ ಕಾಡುಕೋಣಗಳ ಉಪಟಳ ಹೆಚ್ಚಾಗಿದ್ದು, ಕಳಸ ತಾಲೂಕಿನ ಹೊರನಾಡು ಸಮೀಪದ ಎಳಕುಂಬ್ರಿಯಲ್ಲಿ 20ಕ್ಕೂ ಹೆಚ್ಚು ಕಾಡುಕೋಣಗಳ ಹಿಂಡು ರಸ್ತೆಯಲ್ಲಿ ಕಾಣಿಸಿಕೊಂಡಿದೆ. ಇದರಿಂದಾಗಿ ಸ್ಥಳೀಯ ಗ್ರಾಮಸ್ಥರು ಕಂಗಾಲಾಗಿದ್ದು, ರೈತರ ಬೆಳೆಗಳು ನಾಶವಾಗುತ್ತಿವೆ. ಕಾಡುಕೋಣಗಳ ಓಡಾಟದ ದೃಶ್ಯ ಸ್ಥಳೀಯ ನಿವಾಸಿಗಳ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
- Ashwith Mavinaguni
- Updated on: May 18, 2026
- 11:38 am
ಮಲೆನಾಡಲ್ಲಿ ವರುಣನ ಆರ್ಭಟ: ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ; ಮಂಜಿನ ನಗರಿಯಾದ ಕಾಫಿನಾಡು!
ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮೂಡಿಗೆರೆ, ಕಳಸದಲ್ಲಿ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು ಕವಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕೊಟ್ಟಿಗೆಹಾರ, ಬಣಕಲ್ನಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಮಳೆಯಿಂದ ಕಾಫಿ-ಅಡಿಕೆ ಬೆಳೆಗಾರರಿಗೆ ಸಂತಸವಾಗಿದ್ದು, ಘಾಟ್ ಪ್ರದೇಶಗಳಲ್ಲಿ ಸಂಚರಿಸುವವರು ಜಾಗರೂಕತೆ ವಹಿಸಲು ಸೂಚಿಸಲಾಗಿದೆ.
- Ashwith Mavinaguni
- Updated on: May 12, 2026
- 5:55 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಮೂರು ವರ್ಷಗಳ ಬಳಿಕ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಈ ಮೊದಲು ಗೆದ್ದಿದ್ದ ಕಾಂಗ್ರೆಸ್ನ ರಾಜೇಗೌಡ ಅವರಿಗೆ ನಿರಾಸೆಯಾಗಿದ್ದು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಆಣೆ-ಪ್ರಮಾಣ-ಪ್ರಾರ್ಥನೆಯ ರಾಜಕೀಯ ಶುರುವಾಗಿದೆ. ಏನಿದು ಹೊಸ ವಿವಾದ ಎನ್ನುವ ಮಾಹಿತಿ ಇಲ್ಲಿದೆ.
- Ashwith Mavinaguni
- Updated on: May 8, 2026
- 6:53 pm
ಕಾಫಿತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಸುರಕ್ಷಿತವಾಗಿ ಪತ್ತೆ: ಹೇಗಿತ್ತು ಗೊತ್ತಾ ಖಾಕಿ ಕಾರ್ಯಾಚರಣೆ?
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಆಟವಾಡುವಾಗ ಕಾಫಿ ತೋಟದಲ್ಲಿ ಕಾಣೆಯಾಗಿದ್ದ 1.5 ವರ್ಷದ ಮಗುವನ್ನು ಪೊಲೀಸರು 12 ಗಂಟೆಗಳ ಸತತ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಮಧ್ಯಪ್ರದೇಶ ಮೂಲದ ದಂಪತಿಯ ಮಗುವನ್ನು ಸುರಕ್ಷಿತವಾಗಿ ಪತ್ತೆ ಹಚ್ಚಿ ಪೋಷಕರಿಗೆ ಹಸ್ತಾಂತರಿಸುವಲ್ಲಿ ಬಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.
- Ashwith Mavinaguni
- Updated on: May 8, 2026
- 3:26 pm
ಚಿಕ್ಕಮಗಳೂರಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ಕು ಮಕ್ಕಳು ಜಲಸಮಾಧಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಕೆರೆಯಲ್ಲಿ ಆಟವಾಡಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಓರ್ವ ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತ ಪ್ರಕರಣ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
- Ashwith Mavinaguni
- Updated on: May 4, 2026
- 7:39 pm
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆದ್ದ ಬೆನ್ನಲ್ಲೇ ಎಫ್ಐಆರ್! ಬಿಜೆಪಿಯ ಜೀವರಾಜ್ ಹೇಳಿದ್ದೇನು?
ಶೃಂಗೇರಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದು ಶಾಸಕ ಸ್ಥಾನದ ಪ್ರಮಾಣಪತ್ರ ಪಡೆದ ಡಿ.ಎನ್. ಜೀವರಾಜ್, ತಮ್ಮ ಮೇಲೆ ದಾಖಲಾಗಿರುವ ಎಫ್ಐಆರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದ್ದು, ಅಕ್ರಮದ ಆರೋಪಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.
- Ashwith Mavinaguni
- Updated on: May 4, 2026
- 10:54 am
ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್ ಈಗ ಶೃಂಗೇರಿಗೆ ಹೊಸ ಶಾಸಕ: MLA ಪ್ರಮಾಣಪತ್ರ ಪಡೆದ ಬಿಜೆಪಿಗ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ನಡೆದ ಮರು ಎಣಿಕೆಯಲ್ಲಿ ಜೀವರಾಜ್ ವಿಜೇತರಾಗಿ, ಕಾಂಗ್ರೆಸ್ನ ಟಿ.ಡಿ. ರಾಜೇಗೌಡಗೆ ಸೋಲಾಗಿದೆ. ಈ ಗೆಲುವಿನೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಒಂದು ಪ್ರಮುಖ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಂದಂತಾಗಿದೆ. ಶಾಸಕ ಸ್ಥಾನದ ಪ್ರಮಾಣಪತ್ರವನ್ನೂ ಜೀವರಾಜ್ ಸ್ವೀಕರಿಸಿದ್ದಾರೆ.
- Ashwith Mavinaguni
- Updated on: May 4, 2026
- 10:23 am
ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿದ್ದೇನು?
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ.
- Ashwith Mavinaguni
- Updated on: May 3, 2026
- 11:30 am