ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್
14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸದ್ಯ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
- Ashwith Mavinaguni
- Updated on: Apr 8, 2026
- 2:20 pm
ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ: ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಇದೀಗ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆಗಳು ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ.
- Ashwith Mavinaguni
- Updated on: Apr 8, 2026
- 8:43 am
ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಭದ್ರಾ ನದಿಯಲ್ಲಿ ಬೆಂಗಳೂರಿನ ಐಟಿ ಉದ್ಯೋಗಿ ಅಭಿಷೇಕ್ ಮುಳುಗಿ ಸಾವನ್ನಪ್ಪಿದ್ದಾರೆ. ಸ್ನೇಹಿತನ ಮದುವೆಗೆ ಬಂದಿದ್ದ ಅವರು, ಈಜಲು ತೆರಳಿದಾಗ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಹಲವು ಗಂಟೆಗಳ ಶೋಧದ ನಂತರ ಮೃತದೇಹ ಪತ್ತೆಯಾಗಿದ್ದು, ಮದುವೆ ಸಂಭ್ರಮದಲ್ಲಿದ್ದ ಕುಟುಂಬ ಮತ್ತು ಸ್ನೇಹಿತರಲ್ಲಿ ತೀವ್ರ ಶೋಕ ಆವರಿಸಿದೆ. ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- Ashwith Mavinaguni
- Updated on: Apr 6, 2026
- 10:38 am
ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಜಿಗುಪ್ಸೆ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಕುರಿಗಾಹಿ ಯುವಕ ಆತ್ಮಹತ್ಯೆ!
ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದ ಶಿರಾ ಮೂಲದ ಕುರಿಗಾಹಿ ಯುವಕ ಕುಮಾರ್ (26), ಕಡೂರು ತಾಲ್ಲೂಕಿನ ಬೋರಗಾನಹಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಣ್ಣಂದಿರ ಮದುವೆಯ ನಂತರ ನಿನ್ನ ಮದುವೆ ಮಾಡುವುದಾಗಿ ಪೋಷಕರು ಹೇಳಿದ್ದರಿಂದ ಜಿಗುಪ್ಸೆಗೊಂಡು ಈ ನಿರ್ಧಾರ ಕೈಗೊಂಡಿದ್ದಾನೆ.
- Ashwith Mavinaguni
- Updated on: Apr 4, 2026
- 9:33 am
ಪ್ರವಾಸಿಗರ ಸ್ವರ್ಗದಲ್ಲಿ ಹೊಸ ರೂಲ್ಸ್: ಚಿಕ್ಕಮಗಳೂರು ಟ್ರಿಪ್ ಹೋಗುವವರು ತಿಳಿದುಕೊಳ್ಳಲೇಬೇಕು
ಕಾಫಿನಾಡು ಚಿಕ್ಕಮಗಳೂರು ಹಚ್ಚ ಹಸಿರಿನ ಪರ್ವತ ಶ್ರೇಣಿಗಳು, ಮಂಜಿನ ಮುಸುಕು, ಸುರಿಯುವ ಜರಿಗಳಿಗೆ ಹೆಸರಾಗಿದೆ. ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಬಗೆ ಬಗೆಯ ಹೂವು, ಗಿಡ-ಮರಗಳನ್ನೊಳಗೊಂಡ ಪ್ರಕೃತಿ ಪ್ರವಾಸಿಗರನ್ನು ಕೈ ಬೀಸಿ ತನ್ನತ್ತ ಕರೆಯುತ್ತೆ. ಗಿರಿ-ಪರ್ವತ ಶ್ರೇಣಿಗಳ ಸಾಲುಗಳ ಸೌಂದರ್ಯವನ್ನು ಸವಿಯಲು ಪ್ರವಾಸಿಗರೂ ಸಹ ಹೆಚ್ಚಾಗಿ ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಆದ್ರೆ, ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಜಾರಿ ಮಾಡಲಾಗಿದೆ.
- Ashwith Mavinaguni
- Updated on: Apr 2, 2026
- 6:41 pm
ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪ್ರೌಢಶಾಲೆಯಲ್ಲಿ ಓರ್ವ SSLC ವಿದ್ಯಾರ್ಥಿಯು ತೀವ್ರ ಅನಾರೋಗ್ಯದ ನಡುವೆಯೂ ಪರೀಕ್ಷೆ ಬರೆದಿದ್ದಾರೆ. ಆರೋಗ್ಯದಲ್ಲಿ ಏರುಪೇರಾದರೂ, ಕೈಗೆ ಡ್ರಿಪ್ಸ್ ಹಾಕಿಸಿಕೊಂಡೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ತಮ್ಮ ವಿದ್ಯಾಭ್ಯಾಸದ ಮೇಲಿನ ಛಲವನ್ನು ಪ್ರದರ್ಶಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಯ ಧೈರ್ಯ ಮತ್ತು ದೃಢ ಸಂಕಲ್ಪಕ್ಕೆ ನಿದರ್ಶನವಾಗಿದೆ.
- Ashwith Mavinaguni
- Updated on: Apr 2, 2026
- 3:44 pm
‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು
ಚಿಕ್ಕಮಗಳೂರು ಜಿಲ್ಲೆಯ ಹೊಸಪೇಟೆ ಗ್ರಾಮದಲ್ಲಿ ಮತಾಂತರ ಪ್ರಚೋದಿತ ಪುಸ್ತಕಗಳನ್ನು ಹಂಚುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ, ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸಹ ಸೇರಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಗಳನ್ನು ವಶಕ್ಕೆ ಪಡೆದು 2000ಕ್ಕೂ ಹೆಚ್ಚು ಪುಸ್ತಕಗಳನ್ನು ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆದಿದೆ.
- Ashwith Mavinaguni
- Updated on: Mar 31, 2026
- 5:36 pm
ಫೇಸ್ಬುಕ್ ಜಾಹೀರಾತು ನಂಬಿ 1.28 ಕೋಟಿ ರೂ ಕಳೆದುಕೊಂಡ ಚಿಕ್ಕಮಗಳೂರಿನ ವ್ಯಕ್ತಿ
ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆಂದು ಫೇಸ್ಬುಕ್ನಲ್ಲಿ ಐಷಾರಾಮಿ ಕಾರುಗಳ ಫೋಟೋ ಹಾಕಿ ಜನರನ್ನು ಯಾಮಾರಿಸುತ್ತಿದ್ದ ಅಂತಾರಾಜ್ಯ ಗ್ಯಾಂಗ್ವೊಂದನ್ನು ಮೈಸೂರು ಪೊಲೀಸರು ಪತ್ತೆ ಮಾಡಿದ್ದಾರೆ. ಇದೀಗ ಅಂತಹದೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಫೇಸ್ಬುಕ್ ಜಾಹೀರಾತು ನಂಬಿ ಓರ್ವ ವ್ಯಕ್ತಿ ಕೋಟ್ಯಂತರ ರೂ ಹಣ ಕಳೆದುಕೊಂಡಿದ್ದಾರೆ.
- Ashwith Mavinaguni
- Updated on: Mar 29, 2026
- 3:10 pm
ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!
ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿತ್ತು. ಚಿಕ್ಕಮಗಳೂರು ನಗರದಲ್ಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮಳೆಯಿಂದ ಪರದಾಡಿದ ದೃಶ್ಯಗಳು ಕಂಡುಬಂದಿವೆ. ಬಿರುಗಾಳಿ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ ಏಪ್ರಿಲ್ 4ರವರೆಗೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
- Ashwith Mavinaguni
- Updated on: Mar 29, 2026
- 10:01 am
ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ
ಬೇಸಿಗೆಯ ನಡುವೆ ರಾಜ್ಯದ ಹಲವೆಡೆ ಸುರಿದ ಅಕಾಲಿಕ ಮಳೆ ಮತ್ತು ಬಿರುಗಾಳಿ ತೀವ್ರ ಅವಾಂತರ ಸೃಷ್ಟಿಸಿದೆ. ಮನೆಯ ಹೆಂಚುಗಳು, ಮರಗಳು ನೆಲಕ್ಕುರುಳಿವೆ. ಆಲಿಕಲ್ಲು ಮಳೆಯಿಂದ ಮಾವು, ಅಡಿಕೆ ಬೆಳೆಗಳು ಹಾಳಾಗಿವೆ. ಸಿಡಿಲಿಗೆ ಐವರಿಗೆ ಗಾಯಗಳಾಗಿವೆ. ಮಳೆಯ ರಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ ಆಗಿದೆ.
- Ashwith Mavinaguni
- Updated on: Mar 28, 2026
- 9:49 pm
ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!
ಚಿಕ್ಕಮಗಳೂರಿನಲ್ಲಿ ಹವಾಮಾನ ದಿಢೀರ್ ಬದಲಾಗಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ, ವಿಶೇಷವಾಗಿ ಆಲ್ದೂರು ಮತ್ತು ಮೂಡಿಗೆರೆಗಳಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ರಸ್ತೆಗಳು ನದಿಯಂತಾಗಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಾಫಿ ತೋಟಗಳಿಗೆ ಅನುಕೂಲವಾದರೂ, ಮರಗಳು ಉರುಳುವ ಭೀತಿ ಆವರಿಸಿದೆ.
- Ashwith Mavinaguni
- Updated on: Mar 28, 2026
- 2:46 pm
ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ
ಚಿಕ್ಕಮಗಳೂರಿನ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿಯೋರ್ವರು ಹಣ ದುರ್ಬಳಕೆ ಆರೋಪ ಮತ್ತು ಆ ಸಂಬಂಧ ಕಿರುಕುಳ ತಾಳಲಾರದೆ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತಿಯ ದೂರಿನ ಮೇರೆಗೆ, ಕಿರುಕುಳ ನೀಡಿದ 10 ಜನರ ವಿರುದ್ಧ ತರೀಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
- Ashwith Mavinaguni
- Updated on: Mar 27, 2026
- 7:12 pm