AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

Author - TV9 Kannada

ashwith.poornesha@tv9.com

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಹೆದರಿ ಓಡುವಾಗ ಜಾರಿ ಬಿದ್ದು ವ್ಯಕ್ತಿ ಸಾವು

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಹೆದರಿ ಓಡುವಾಗ ಜಾರಿ ಬಿದ್ದು ವ್ಯಕ್ತಿ ಸಾವು

chikkamagaluru News: ಚಿಕ್ಕಮಗಳೂರಿನ ಬಸಾಪುರದಲ್ಲಿ ಇಸ್ಪೀಟ್ ಆಟವಾಡುವವರ ಮೇಲೆ ಪೊಲೀಸರು ದಾಳಿ ನಡೆಸಿದಾಗ, ಭೀತಿಯಿಂದ ಓಡಿದ ವ್ಯಕ್ತಿ ಜಾರಿ ಬಿದ್ದು ತಲೆಗೆ ಬಂಡೆ ಬಡಿದು ಮೃತಪಟ್ಟಿದ್ದಾರೆ. ಕಾಡಿನಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದೆ. ಬಾಳೆಹೊನ್ನೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಾಗಿದೆ.

ಈದ್ ಮಿಲಾದ್ ಆಚರಣೆ ವಿವಾದ: ಶಾಲೆಗೆ ನುಗ್ಗಿ ಹಿಂದೂ ಕಾರ್ಯಕರ್ತರು ಆಕ್ರೋಶ; ಎಫ್​ಐಆರ್ ದಾಖಲು

ಈದ್ ಮಿಲಾದ್ ಆಚರಣೆ ವಿವಾದ: ಶಾಲೆಗೆ ನುಗ್ಗಿ ಹಿಂದೂ ಕಾರ್ಯಕರ್ತರು ಆಕ್ರೋಶ; ಎಫ್​ಐಆರ್ ದಾಖಲು

Chikkamagaluru News: ಚಿಕ್ಕಮಗಳೂರಿನ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್​​ ಆಚರಣೆಗೆ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಲಾ ಪ್ರಿನ್ಸಿಪಾಲ್ ದೂರಿನ ಮೇರೆಗೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಮತ್ತೊಂದು ವಿವಾದ: ಟಿಪ್ಪು ನಗರದಲ್ಲಿ ರಾರಾಜಿಸಿದ ಐ ಲವ್ ಮೊಹಮ್ಮದ್ ಬ್ಯಾನರ್!

ಚಿಕ್ಕಮಗಳೂರಿನಲ್ಲಿ ಮತ್ತೊಂದು ವಿವಾದ: ಟಿಪ್ಪು ನಗರದಲ್ಲಿ ರಾರಾಜಿಸಿದ ಐ ಲವ್ ಮೊಹಮ್ಮದ್ ಬ್ಯಾನರ್!

ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾದ ‘ಐ ಲವ್ ಮೊಹಮ್ಮದ್’ ಬ್ಯಾನರ್ ಹೊಸ ವಿವಾದಕ್ಕೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ನ ವಿಡಿಯೋಯವನ್ನು ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ದೇಶವಿರೋಧಿ ಹಾಡನ್ನು ಬಳಸಿ ಹಂಚಿಕೊಂಡಿದ್ದ ವಿವಾದ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ: ಮದ್ಯ ಮಾರಾಟ ನಿಷೇಧ, ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ: ಮದ್ಯ ಮಾರಾಟ ನಿಷೇಧ, ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ, ಹೈ ಅಲರ್ಟ್ ಘೋಷಿಸಲಾಗಿದೆ. ಮದ್ಯ ಮಾರಾಟ, ವಾರದ ಸಂತೆ, ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಶಾಂತಿ ಕಾಪಾಡಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಟಿಪ್ಪು ಸುಲ್ತಾನ್ ವಿವಾದದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ತಿರಂಗಾಯಾತ್ರೆಗೆ ಅನುಮತಿ ನಿರಾಕರಿಸಲಾಗಿದ್ದು, ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Chikkamagaluru Tipu Cutout Row: ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪ್ರಮುಖ ಆರೋಪಿ ಅಫ್ರಿದ್ ಬಂಧನ!

Chikkamagaluru Tipu Cutout Row: ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪ್ರಮುಖ ಆರೋಪಿ ಅಫ್ರಿದ್ ಬಂಧನ!

ಚಿಕ್ಕಮಗಳೂರಿನಲ್ಲಿ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಅಫ್ರಿದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಮ್ ಖಾತೆ ನಿರ್ವಹಿಸುತ್ತಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ವಿಡಿಯೋ ಶೇರ್ ಹಾಗೂ ಸ್ಟೇಟಸ್ ಹಾಕಿಕೊಂಡವರ ಮೇಲೆಯೂ ತನಿಖೆ ಮುಂದುವರಿದಿದೆ.

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ

ಚಿಕ್ಕಮಗಳೂರಿನಲ್ಲಿ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ಒಟ್ಟು ಏಳು ಜನರನ್ನು ವಶಕ್ಕೆ ಪಡೆದಿದ್ದು, ಆರು ಜನರ ವಿಚಾರಣೆ ಮುಂದುವರಿದಿದೆ. ಈ ಘಟನೆಯು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮೊಟೋ ಪ್ರಕರಣ ದಾಖಲಾಗಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಕೆ: ಆರೋಪಿಗಳ ಬಂಧನಕ್ಕೆ ಎಸ್ಪಿ ವಿಶೇಷ ತಂಡ ರಚನೆ

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಕೆ: ಆರೋಪಿಗಳ ಬಂಧನಕ್ಕೆ ಎಸ್ಪಿ ವಿಶೇಷ ತಂಡ ರಚನೆ

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಿನ್ನೆಲೆ ಹಾಕಲಾದ ಟಿಪ್ಪು ಸುಲ್ತಾನ್ ಕಟೌಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಸಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಇನ್‌ಸ್ಟಾಗ್ರಾಮ್ ಖಾತೆದಾರರನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದ್ದು, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಎಚ್ಚರಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್!

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್!

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಹಾಕಲಾದ 40 ಅಡಿ ಟಿಪ್ಪು ಸುಲ್ತಾನ್ ಕಟೌಟ್ ವಿಡಿಯೋಗೆ ಪಾಕಿಸ್ತಾನ ಮುಜಾಹಿದ್ ಸಂಬಂಧಿತ ದೇಶವಿರೋಧಿ ಹಾಡು ಬಳಸಿ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಮಾಡಲಾಗಿದೆ. 'ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್' ಖಾತೆಯ ಈ ಕೃತ್ಯಕ್ಕೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಗರ ಠಾಣೆ ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ  ಟ್ರೆಕ್ಕಿಂಗ್ ರೀ ಓಪನ್, ಚಾರಣಕ್ಕೆ ಹೋಗುವವರು ಇಲ್ಲಿ ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್, ಚಾರಣಕ್ಕೆ ಹೋಗುವವರು ಇಲ್ಲಿ ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ, ಯಾವುದೇ ಮುಂಜಾಗ್ರತಾ ಕ್ರಮವಹಿಸದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್ ಮಾಡಲಾಗಿದೆ. ಕಳೆದ ಹಲವು ತಿಂಗಳಿನಿಂದ ಬಂದ್ ಆಗಿದ್ದ ಚಾರಣವನ್ನು ಇದೀಗ ಯಾವುದೇ ಮುಂಜಾಗ್ರತಾ ಕ್ರಮವಹಿಸದೆ ಆನ್ಲೈನ್ ನಲ್ಲಿ ಟ್ರೆಕ್ಕಿಂಗ್ ಓಪನ್ ಆಗಿದ್ದು, 5 ಕಿಮೀ ಚಾರಣಕ್ಕೆ 300 ರೂಪಾಯಿ ನಿಗದಿ ಮಾಡಲಾಗಿದೆ. ಆದರೆ, ಆನ್ಲೈನ್ ನಲ್ಲಿ ಟ್ರೆಕ್ಕಿಂಗ್ ಬುಕ್ ಮಾಡಿಕೊಂಡು ಬಂದ ಪ್ರವಾಸಿಗರಿಗೆ ನರಕದರ್ಶನವಾಗಿದೆ. ಹೌದು...SOP ಪಾಲನೆ ಮಾಡದೆ ಗೈಡ್ ಸೇರಿದಂತೆ ಯಾವುದೇ ಸೌಕರ್ಯಗಳಿಲ್ಲ. ಅಲ್ಲದೇ ತುಂಬಾ ಮರಗಳು ಬಿದ್ದು ಟ್ರಕ್ಕಿಂಗ್ ಹೋಗುವ ಮಾರ್ಗ ಬ್ಲಾಕ್ ಆಗಿದೆ. ಇದರಿಂದ ಬುಕ್ ಮಾಡಿಕೊಂಡು ಬಂದ ಪ್ರವಾಸಿಗರು ದಟ್ಟ ಕಾಡಿನಲ್ಲಿ ದಾರಿ ಸಿಗದೇ ಪರದಾಡುವಂತಾಗಿದೆ.

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ: ಸತೀಶ್ ಪಾತ್ರಿ ವಿರುದ್ಧ ದೂರು!

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ: ಸತೀಶ್ ಪಾತ್ರಿ ವಿರುದ್ಧ ದೂರು!

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲಿನಲ್ಲಿ ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಸತೀಶ್ ಪಾತ್ರಿ ಎಂಬಾತನ ವಿರುದ್ಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸತೀಶ್ ಪಾತ್ರಿ ಮಾಧ್ಯಮಗಳ ಮುಂದೆ ಬಂದು, ಇದು ತನ್ನ ವಿರುದ್ಧ ನಡೆಯುತ್ತಿರುವ ಪಿತೂರಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟದ ಜಾಲ ಪತ್ತೆ

ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟದ ಜಾಲ ಪತ್ತೆ

ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ನಕಲಿ ನಾಟಿ ತುಪ್ಪ ತಯಾರಿಕಾ ದಂಧೆ ಪತ್ತೆಯಾಗಿದೆ. ಬಳ್ಳಾರಿ ಮೂಲದ ಸಿದ್ದೇಶ್, ಚೆನ್ನೇಶ್ ಸೇರಿದಂತೆ 25ಕ್ಕೂ ಹೆಚ್ಚು ಜನರ ಗ್ಯಾಂಗ್ ಕೆಮಿಕಲ್‌ಗಳನ್ನು ಬಳಸಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿತ್ತು. ಸ್ಥಳೀಯರ ದೂರಿನ ಮೇರೆಗೆ ದಾಳಿ ನಡೆದರೂ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು!

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು!

ಚಿಕ್ಕಮಗಳೂರಿನಲ್ಲಿ ಡಾಲ್ಡಾ, ವನಸ್ಪತಿ ಹಾಗೂ ರಾಸಾಯನಿಕ ಬಳಸಿ ನಕಲಿ ನಾಟಿ ತುಪ್ಪ ತಯಾರಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದು, ಎಸ್ಕೇಪ್ ಆಗಿರುವ ಬಳ್ಳಾರಿ ಮೂಲದ ಖದೀಮರಿಗಾಗಿ ಶೋಧ ನಡೆಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಇವರು ಇದೇ ಕೆಲಸ ಮಾಡಿಕೊಂಡು ಬಂದಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್