ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ನಾಯಿ – ನಾಗರ ಹಾವಿನ ಮಧ್ಯೆ ಬಿಗ್ ಫೈಟ್: ಸಾವನ್ನಪ್ಪಿದ ಹಾವು, ನಾಯಿ ಸ್ಥಿತಿ ಏನಾಯಿತು ನೋಡಿ?
ಚಿಕ್ಕಮಗಳೂರಿನ ಇಟ್ಟಿಗೆ ಗ್ರಾಮದಲ್ಲಿ ರಾಟ್ ವಿಲರ್ ನಾಯಿ ಹಾಗೂ ನಾಗರಹಾವಿನ ನಡುವೆ ಭೀಕರ ಹೋರಾಟ ನಡೆಯಿತು. ಒಂದು ಗಂಟೆ ಕಾಲ ನಡೆದ ಈ ಕದನದಲ್ಲಿ ಎರಡೂ ಸಾವನ್ನಪ್ಪಿದವು. ನಾಯಿ ಹಾವನ್ನು ಕೊಂದರೂ, ವಿಷದ ಕಡಿತದಿಂದ ಅಸುನೀಗಿತು. ಸಾಕು ಪ್ರಾಣಿಗಳು ಮತ್ತು ಹಾವುಗಳ ಸಾವಿಗೆ ಗ್ರಾಮಸ್ಥರು ದುಃಖಿತರಾಗಿದ್ದು, ನಾಗರಹಾವಿಗೆ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು. ಈ ಘಟನೆ ಸ್ಥಳೀಯರಲ್ಲಿ ನೋವುಂಟುಮಾಡಿದೆ.
- Ashwith Mavinaguni
- Updated on: Jan 17, 2026
- 9:46 pm
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು: ವಿಡಿಯೋ ವೈರಲ್
ಪ್ರಯಾಣಿಕನ ಮೇಲೆ ಬಸ್ ಹರಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ KSRTC ಬಸ್ ನಿಲ್ದಾಣದಲ್ಲಿ ನಡೆದಿದೆ. ನಿರ್ಲಕ್ಷ್ಯದ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾತಾಳುವಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಜನವರಿ 7ರಂದು ನಡೆದ ಘಟನೆಯ ದೃಶ್ಯ ವೈರಲ್ ಆಗಿದೆ.
- Ashwith Mavinaguni
- Updated on: Jan 14, 2026
- 1:38 pm
ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ವರ್ಷದ ಮೊದಲ ಮಳೆಗೆ ಚಿಕ್ಕಮಗಳೂರು ಮಂದಿ ಕಂಗಾಲಾಗಿದ್ದಾರೆ. ಏಕಾಏಕಿ ವರುಣ ಅಬ್ಬರಿಸಿದ್ದು, ಒಣ ಹಾಕಿದ ಕಾಫಿ ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋದ ಪರಿಣಾಮ ಬೆಳೆಗಾರರಿಗೆ ಭರ್ಜರಿ ನಷ್ಟ ಉಂಟಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ.
- Ashwith Mavinaguni
- Updated on: Jan 13, 2026
- 7:30 pm
ನಟಿಯರಾಯ್ತು ಈಗ ರಾಜಕಾರಣಿಗಳ ಸರದಿ; ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ! ಆರೋಪಿ ಅರೆಸ್ಟ್
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕಿಯ ಬಟ್ಟೆ ವಿಚಾರವಾಗಿ ನಿರಂತರವಾಗಿ ಅವಮಾನಕಾರಿ ಕಾಮೆಂಟ್ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಪಿಎ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸೈಬರ್ ಕಿರುಕುಳದ ಬಗ್ಗೆ ನಯನಾ ಮೋಟಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ashwith Mavinaguni
- Updated on: Jan 12, 2026
- 10:49 am
ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಭಾಗ್ಯ! ಫ್ಲೈಟ್ನಲ್ಲಿ ಚಿಣ್ಣರ ಸಂಭ್ರಮ ನೋಡಿ
ಚಿಕ್ಕಮಗಳೂರು, ಜನವರಿ 8: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳೂ ಹುಬ್ಬೇರಿಸುವಂಥ ಅಪೂರ್ವ ಕೆಲಸವೊಂದನ್ನು ಮಾಡಿ ಗಮನ ಸೆಳೆದಿದೆ. 5, 6 ಮತ್ತು 7ನೇ ತರಗತಿಯ 32 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣದ ಅನುಭವ ನೀಡುವ ಮೂಲಕ, ಸರ್ಕಾರಿ ಶಾಲೆಯೊಂದು ಮಕ್ಕಳನ್ನು ಫ್ಲೈಟ್ ಟೂರ್ ಕರೆದುಕೊಂಡು ಹೋಗಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.
- Ashwith Mavinaguni
- Updated on: Jan 8, 2026
- 12:36 pm
ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!
ಹಣಕ್ಕಾಗಿ ತಂದೆ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಚಿಕ್ಕಮಗಳೂರಿನ ಬೀರೂರಿನಲ್ಲಿ ನಡೆದಿದೆ. ಸಂತ್ರಸ್ತೆಯ ಅಜ್ಜಿ ಮನೆಗೆ ಆಗಮಿಸಿದ್ದ ಮಂಗಳೂರಿನ ಕಿಂಗ್ಪಿನ್ನಿಂದ ಮಗಳ ಮೇಲೆ ಲೈಂಗಿಕ ಶೋಷಣೆ ನಡೆದಿತ್ತು. ಬಾಲಕಿ ದೂರಿನ ಮೇರೆಗೆ ತಂದೆ, ಅಜ್ಜಿ ಸೇರಿ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
- Ashwith Mavinaguni
- Updated on: Jan 7, 2026
- 10:38 am
Chikkamagaluru: ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಹುಲಿ ಕಳೇಬರ ಪತ್ತೆ
ಭದ್ರಾ ಹುಲಿ ಸಂರಕ್ಷಿತಾರಣ್ಯದ ಗಂಗೆ ಗಿರಿಯಲ್ಲಿ 8 ವರ್ಷದ ಗಂಡು ಹುಲಿಯ ಕಳೇಬರ ಪತ್ತೆಯಾಗಿದೆ. ಹುಲಿಗಳ ನಡುವಿನ ಕಾದಾಟದಿಂದ ನಿತ್ರಾಣಗೊಂಡು ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ವ್ಯಾಘ್ರಗಳ ಸರಣಿ ಸಾವು ಮುಂದುವರಿದಿದ್ದು, ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ. ಮೈಸೂರು ಮತ್ತು ನಾಗರಹೊಳೆಯಲ್ಲೂ ಇತ್ತೀಚೆಗೆ ಹುಲಿಗಳು ಸಾವನ್ನಪ್ಪಿದ್ದವು.
- Ashwith Mavinaguni
- Updated on: Jan 7, 2026
- 7:26 am
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಗಾಳಿ ಬೀಸಿದಂತೆ ಹೆಚ್ಚಾಗುತ್ತಿರುವ ಬೆಂಕಿಯ ಜ್ವಾಲೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಶ್ರಮಿಸಲಾಗುತ್ತಿದೆ. ವಿಡಿಯೋ ನೋಡಿ.
- Ashwith Mavinaguni
- Updated on: Jan 5, 2026
- 10:10 pm
ಹುಟ್ಟಿಸಿದ ಮಗನ ಬಲಿ ಪಡೆದ ತಂದೆ: ಅಪ್ಪನ ಚಟಕ್ಕೆ ಹೋಯ್ತು ಪುತ್ರನ ಪ್ರಾಣಪಕ್ಷಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಮದ್ಯದ ವಿಚಾರಕ್ಕೆ ಭೀಕರ ಘಟನೆ ನಡೆದಿದೆ. ನನಗೆ ಎಣ್ಣೆ ಕಡಿಮೆ, ನಿನಗೆ ಜಾಸ್ತಿ ಅನ್ನೋ ವಿಚಾರಕ್ಕೆ ನಡೆದ ಗಲಾಟೆ ಬಳಿಕ ಕುಡಿದ ಮತ್ತಿನಲ್ಲಿ ತಂದೆಯಿಂದಲೇ ಮಗನ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
- Ashwith Mavinaguni
- Updated on: Jan 5, 2026
- 7:32 pm
ಚಿಕ್ಕಮಗಳೂರು: ರೋಗಿ ಸ್ಟ್ರೆಚರ್ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ
ರೋಗಿಯೊಬ್ಬರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡದೆ ವೈದ್ಯರು ಮೊಬೈಲ್ನಲ್ಲಿ ಹರಟುತ್ತಾ ಕುಳಿತ ಘಟನೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊನೆಗೆ ರೋಗಿಗೆ ತಡವಾಗಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.
- Ashwith Mavinaguni
- Updated on: Jan 5, 2026
- 2:32 pm
ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್ಐಆರ್!
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅಸ್ಸಾಂ ಕಾರ್ಮಿಕರ ನೆಪದಲ್ಲಿ ಬಾಂಗ್ಲಾ ಅಕ್ರಮ ವಲಸಿಗರು ಆಶ್ರಯ ಪಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ಮತ್ತು ವಿಎಚ್ಪಿ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಕಾರ್ಮಿಕರ ಗುರುತು ಪತ್ರಗಳನ್ನು ಪರಿಶೀಲಿಸಿದ್ದಕ್ಕೆ, 9 ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
- Ashwith Mavinaguni
- Updated on: Jan 3, 2026
- 12:27 pm
Chikkamagaluru: ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್; ವಿಡಿಯೋ ವೈರಲ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿದ ಮತ್ತಲ್ಲಿದ್ದ ಯುವಕನೋರ್ವ ಬೀದಿ ನಾಯಿ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಕೆಲವರು ನಾಯಿ ಜೊತೆಗೆ ಯುವಕನ ಡ್ಯಾನ್ಸ್ಗೆ ಖುಷಿ ಪಟ್ಟಿದ್ದರೆ, ಇನ್ನು ಕೆಲವರು ಕುಡಿದ ಮತ್ತಿನಲ್ಲಿ ಬೀದಿ ನಾಯಿಗೆ ಹಿಂಸೆ ನೀಡಲಾಗಿದೆ ಎಂದು ದೂರಿದ್ದಾರೆ.
- Ashwith Mavinaguni
- Updated on: Jan 1, 2026
- 1:04 pm