ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರಾತ್ರಿ ವೇಳೆ ವಿವಾಹಿತ ಹಿಂದೂ ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್ನ್ನು ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದ್ದು, ಇದೀಗ ಈ ಪ್ರಕರಣ ಬೇರೆ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಒಂದು ಹೇಳಿದ್ರೆ, ಈಕೆಯ ಪತಿ ರೆಡ್ ಹ್ಯಾಂಡ್ ಆಗಿ ಹಿಡಿದು ಕಣ್ಣಾರೆ ನೋಡಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾನೆ. ಹಾಗಾದ್ರೆ, ಹೆಂಡ್ತಿ ಹೇಳಿದ್ದೇನು? ವಿಡಿಯೋನಲ್ಲಿ ಗಂಡ ಹೇಳಿದ್ದೇನು ಎನ್ನುವ ಮಾಹಿತಿ ಇಲ್ಲಿದೆ.
- Ashwith Mavinaguni
- Updated on: Feb 5, 2026
- 10:55 pm
ಕಾಂಗ್ರೆಸ್ ಮುಖಂಡ ಬೇರೊಬ್ಬರ ಹೆಂಡ್ತಿ ಜತೆ ಸಿಕ್ಕಿಬಿದ್ದು ಏಟು ತಿಂದ ಪ್ರಕರಣ: ಸ್ಫೋಟಕ ವಿಚಾರ ಬಿಚ್ಚಿಟ್ಟ ಮಹಿಳೆಯ ಗಂಡ!
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿವಾಹಿತ ಮಹಿಳೆ ಜೊತೆ ಸಿಕ್ಕಿಬಿದ್ದು ಥಳಿತಕ್ಕೊಳಗಾದ ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ರಾತ್ರಿ ವೇಳೆ ರಾಹಿಲ್ ಷರೀಫ್ ತನ್ನ ಪತ್ನಿ ಮನೆಯ ಬೆಡ್ರೂಂನಲ್ಲಿ ಇದ್ದುದನ್ನು ಕಂಡಿದ್ದು, ಆತನಿಂದ ಹಲ್ಲೆ ಮತ್ತು ಕೊಲೆ ಬೆದರಿಕೆ ಇರುವುದಾಗಿ ಆರೋಪಿಸಿದ್ದಾರೆ.
- Ashwith Mavinaguni
- Updated on: Feb 5, 2026
- 2:38 pm
ದತ್ತಪೀಠದಲ್ಲಿ ಹೊಸ ವಿವಾದ: ‘ಕಲಮೆ ತಯ್ಯಬಾ’ ಆಚರಣೆಗೆ ಹಿಂದೂ ಸಂಘಟನೆಗಳ ಆಕ್ರೋಶ
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕಲಮೆ ತಯ್ಯಬಾ ಆಚರಣೆಯಿಂದ ಹೊಸ ವಿವಾದ ಭುಗಿಲೆದ್ದಿದೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಆಚರಣೆಗೆ ಅವಕಾಶ ನೀಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಅಲ್ಲದೆ, ಮುಜಾವರ್ಗಳ ನಿಯಮಬಾಹಿರ ಕಾರ್ಯನಿರ್ವಹಣೆ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿವೆ. ಆದರೆ ಶಾಖಾದ್ರಿ ವಂಶಸ್ಥರು ಹೊಸ ಆಚರಣೆಯನ್ನು ನಿರಾಕರಿಸಿದ್ದಾರೆ.
- Ashwith Mavinaguni
- Updated on: Feb 5, 2026
- 11:17 am
ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದರುವ ಆರೋಪ ಕೇಳಿ ಬಂದಿದೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಮಹಿಳೆಯು, ರಾಹಿಲ್ ಸ್ನೇಹಿತನಾಗಿದ್ದು, ಅನಾರೋಗ್ಯದಿಂದ ಔಷಧಿ ನೀಡಲು ಬಂದಿದ್ದಾಗ ಹಲ್ಲೆ ಪ್ರಯತ್ನ ನಡೆಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಗೆ ದೂರು ದಾಖಲಾಗಿದೆ.
- Ashwith Mavinaguni
- Updated on: Feb 5, 2026
- 2:18 pm
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ
ಮದುವೆಯೇ ಇರಲಿ, ಮನೆ ನಿರ್ಮಾಣವೇ ಆಗಲಿ, ಗೃಹ ಪ್ರವೇಶ ಇರಲಿ, ಸಮಸ್ಯೆಗಳ ಸುಳಿಗೆ ಸಿಲುಕಲಿ, ಕೆಲವರಂತೂ ಜ್ಯೋತಿಷ್ಯದ ಮೊರೆ ಹೋಗುತ್ತಾರೆ.ಬಳಿಕ ಜ್ಯೋತಿಷಿಗಳು ಏನೇನು ಹೇಳುತ್ತಾರೋ ಅದನ್ನೆಲ್ಲ ಅಚ್ಚುಕಟ್ಟಾಗಿ ಚಾಚುತಪ್ಪದೆ ಪಾಲನೆ ಮಾಡುತ್ತಾರೆ. ಆದ್ರೆ ಕೆಲವರು ಜನರ ನಂಬಿಕೆ, ಭಯವನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತಾರೆ. ಅಂತವರ ಪೈಕಿ ಇಲ್ಲೊಬ್ಬ ಜ್ಯೋತಿಷಿ ಯುವತಿಯ ಬದುಕನ್ನೇ ನರಕ ಮಾಡಿದ್ದಾನೆ.
- Ashwith Mavinaguni
- Updated on: Feb 4, 2026
- 10:11 pm
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಿಕ್ಕಮಗಳೂರಿನ ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗಾಳಿಯ ವೇಗಕ್ಕೆ ಬೆಂಕಿ ವ್ಯಾಪಿಸುತ್ತಿದ್ದು, ಕಿಡಿಗೇಡಿಗಳ ಕೃತ್ಯದ ಶಂಕೆ ವ್ಯಕ್ತವಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
- Ashwith Mavinaguni
- Updated on: Feb 2, 2026
- 10:02 pm
ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು!
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನವರಿಯಲ್ಲಿ 1000ಕ್ಕೂ ಹೆಚ್ಚು ಜನರಿಗೆ ಕಡಿತವಾಗಿದೆ. ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದ ಆಕ್ರೋಶಗೊಂಡಿರುವ ಜನತೆ, ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆಯಿದೆ.
- Ashwith Mavinaguni
- Updated on: Jan 30, 2026
- 1:08 pm
ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ
ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ (ಕೆಎಫ್ಡಿ) ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 9 ಪ್ರಕರಣಗಳು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ರೋಗ ಹರಡದಂತೆ ತಡೆಯಲು ರಕ್ತ ಮಾದರಿ ಸಂಗ್ರಹಿಸಿ, ಕಾಡಂಚಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಏತನ್ಮಧ್ಯೆ, ಶಿವಮೊಗ್ಗದಲ್ಲಿ ಈ ಕಾಯಿಲೆಯಿಂದ ಈ ವರ್ಷ ಮೊದಲ ಸಾವು ಸಂಭವಿಸಿದ್ದು, ಅತಂಕ ಹೆಚ್ಚಳಕ್ಕೆ ಕಾರಣವಾಗಿದೆ.
- Ashwith Mavinaguni
- Updated on: Jan 30, 2026
- 8:55 am
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು
ಚಿಕ್ಕಮಗಳೂರಿನ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರವಾಸಿಗರ ಅಸಭ್ಯ ವರ್ತನೆ ಮತ್ತು ಪಾವಿತ್ರ್ಯತೆಗೆ ಧಕ್ಕೆ ಆರೋಪ ಕೇಳಿಬಂದಿದೆ. ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಹಲವು ಸ್ಥಳಗಳಲ್ಲಿ ಶೂ, ಚಪ್ಪಲಿ ಹಾಕಿ ಓಡಾಟ, ಅನೈತಿಕ ಚಟುವಟಿಕೆ ನಡೆಯುತ್ತಿದ್ದು, ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
- Ashwith Mavinaguni
- Updated on: Jan 27, 2026
- 3:48 pm
Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ
ಅಪರೂಪದ ಸನ್ನಿವೇಶಕ್ಕೆ ಕಾಫಿನಾಡು ಸಾಕ್ಷಿಯಾಗಿದ್ದು, ಚೀನಾ ಯುವತಿಯ ಜೊತೆ ಚಿಕ್ಕಮಗಳೂರಿನ ಯುವಕನ ಅದ್ಧೂರಿ ವಿವಾಹ ನೆರವೇರಿದೆ. ಹಿಂದೂ ಸಂಪ್ರದಾಯಂತೆ ಮದುವೆ ಸಮಾರಂಭ ನಡೆದಿದ್ದು, ದೇಶ-ಭಾಷೆಯ ಅಡೆತಡೆ ಮೀರಿ ನಡೆದ ಈ ಪ್ರೇಮ ವಿವಾಹ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಸಾಂಸ್ಕೃತಿಕ ಸಮ್ಮಿಲನಕ್ಕೆ ಸಾಕ್ಷಿಯಾಯಿಗಿದೆ.
- Ashwith Mavinaguni
- Updated on: Jan 23, 2026
- 6:21 pm
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದ ಸರ್ವೆ ನಂಬರ್ 58ರಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶವನ್ನು 2011ರಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಎಂದು ಘೋಷಿಸಲಾಗಿದೆ. ಇದು ಪರಿಸರ ಸೂಕ್ಷ್ಮ ಪ್ರದೇಶವೂ ಆಗಿರುವುದರಿಂದ ಇಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಕಠಿಣ ನಿರ್ಬಂಧಗಳಿವೆ.
- Ashwith Mavinaguni
- Updated on: Jan 23, 2026
- 2:29 pm
ಕಾಂಗ್ರೆಸ್ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ಅಕ್ರಮ ರೆಸಾರ್ಟ್ ನಿರ್ಮಿಸುತ್ತಿದ್ದಾರೆ. ಇದು ಹುಲಿ ಸಂರಕ್ಷಿತ ಬಫರ್ ಝೋನ್ ಆಗಿದ್ದು, ಅರಣ್ಯ ಇಲಾಖೆ ನಿಯಮಗಳನ್ನು ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಉಲ್ಲಂಘಿಸಲಾಗಿದೆ. ಎನ್ಒಸಿ ಇಲ್ಲದೆ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ 50 ಕೋಟಿಗೂ ಹೆಚ್ಚು ಮೌಲ್ಯದ ರೆಸಾರ್ಟ್ ನಿರ್ಮಾಣವಾಗುತ್ತಿದ್ದು, ಅರಣ್ಯಾಧಿಕಾರಿಗಳ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ.
- Ashwith Mavinaguni
- Updated on: Jan 21, 2026
- 7:36 pm