ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.
ಚಿಕ್ಕಮಗಳೂರು: ಧರ್ಮ ಸಂಘರ್ಷಕ್ಕೆ ಕಾರಣವಾಯ್ತು ಕ್ರಿಸ್ಮಸ್ ಶಾಲಾ ರಜೆ
ಕ್ರಿಶ್ಚಿಯನ್ ಒಡೆತನದ ಶಾಲೆಗಳಲ್ಲಿ ಕ್ರಿಸ್ಮಸ್ಗೆ ನೀಡುವ 10 ದಿನದ ರಜೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಕುರಿತಾಗಿ ಶ್ರೀರಾಮಸೇನೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಿಸ್ಮಸ್ಗೆ ಒಂದೇ ದಿನ ರಜೆ ನೀಡುವಂತೆ ಪಟ್ಟುಹಿಡಿದೆ. ಇಲ್ಲಾಂದ್ರೆ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದೆ. ಏನಿದು ಹೊಸ ವಿವಾದ?
- Ashwith Mavinaguni
- Updated on: Dec 12, 2025
- 8:40 pm
ಕಾಂಗ್ರೆಸ್ ಮುಖಂಡನ ಹತ್ಯೆ ಕೇಸ್: ಮಧುರೈನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ 6 ಜನರ ಬಂಧನ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದ್ದ ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಪ್ರಮುಖ ಆರೋಪಿ ಸೇರಿ 6 ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಕೇಸ್ಗೆ ಸಂಬಂಧಿಸಿದಂತೆ 12 ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ.
- Ashwith Mavinaguni
- Updated on: Dec 11, 2025
- 6:28 pm
ಚಿಕ್ಕಮಗಳೂರು: ಮುತ್ತೋಡಿ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ, ಆತಂಕದಲ್ಲಿ ಗ್ರಾಮಸ್ಥರು
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಅಂಚಿನ ಮುತ್ತೋಡಿ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ಮತ್ತೊಂದೆಡೆ, ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಶೀರ್ಲು, ಕೆರೆಗದ್ದೆ, ಅಣಲಕ್ಕಿ ಸೇರಿ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗುತ್ತಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ.
- Ashwith Mavinaguni
- Updated on: Dec 10, 2025
- 9:02 am
ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆಯಾದವನ ವಿರುದ್ಧವೇ ದಾಖಲಾಯ್ತು ಎಫ್ಐಆರ್!
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ ಪ್ರಕರಣಕ್ಕೆ ಈಗ ಟ್ವಿಸ್ಟ್ ದೊರೆತಿದೆ. ಆರಂಭದಲ್ಲಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿ ಬಂಧನವಾಗಿತ್ತು. ಆದರೆ ಈಗ ಕೊಲೆ ಆಗಿರುವವನ ಮೇಲೆಯೇ ಹಲ್ಲೆ ಕೇಸ್ ದಾಖಲಾಗಿದೆ! ಅದ್ಯಾಕೆ? ಇಲ್ಲಿದೆ ಮಾಹಿತಿ.
- Ashwith Mavinaguni
- Updated on: Dec 9, 2025
- 7:25 am
ಚಿಕ್ಕಮಗಳೂರು: ಗಣೇಶ್ ಮರ್ಡರ್ ಕೇಸ್ನಲ್ಲಿ ಬಜರಂಗದಳ ಕಾರ್ಯಕರ್ತ ಅರೆಸ್ಟ್
ಚಿಕ್ಕಮಗಳೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತ ಬಂಧನಕ್ಕೊಳಗಾಗಿದ್ದಾನೆ. ದತ್ತ ಜಯಂತಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿತ್ತು. ತಲೆಮರೆಸಿಕೊಂಡಿರುವ ಇತರ ಮೂವರು ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಖರಾಯಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
- Ashwith Mavinaguni
- Updated on: Dec 7, 2025
- 10:44 am
ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಮುಂಜಾಗ್ರತಾ ಕ್ರಮವಾಗಿ ಸಖರಾಯಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಸಖರಾಯಪಟ್ಟಣದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ವಿಡಿಯೋ ಇಲ್ಲಿದೆ.
- Ashwith Mavinaguni
- Updated on: Dec 6, 2025
- 10:37 am
ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದ್ದು, ಐವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.
- Ashwith Mavinaguni
- Updated on: Dec 6, 2025
- 11:51 am
ಮದ್ವೆಯಾಗಿದ್ರೂ ಅತ್ತೆ ಮಗಳ ಮೇಲಾಸೆ: ಆಕೆ ದೂರವಾದ ಸಿಟ್ಟಿಗೆ ಮಾವ ಮಾಡಿದ್ದೇನು ಗೊತ್ತಾ?
ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ಗೃಹಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನದ ಬಳಿಕ ಹಂತಕ ಪೊಲೀಸರಿಗೆ ಸಿಕ್ಕಿಬಿದ್ದಾನೆ. ತನ್ನಿಂದ ದೂರವಾದ ಸಿಟ್ಟಿಗೆ ಅತ್ತೆ ಮಗಳನ್ನೇ ಆರೋಪಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಆಲ್ದೂರು ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
- Ashwith Mavinaguni
- Updated on: Dec 4, 2025
- 10:02 pm
ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್: ಪ್ರಾಣಕ್ಕೆ ಸಂಚು ತಂತಾ ಲವ್ವಿಡವ್ವಿ?
ಆಕೆ ಮೂರು ಮಕ್ಕಳ ತಾಯಿ. ಅದ್ಯಾವುದೋ ಕಾರಣಕ್ಕೆ ಕಳೆದ ಮೂರು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ತವರು ಮನೆ ಸೇರಿದ್ದಳು. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ ಕಳೆದ ಕೆಲದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದಾಳೆ. ಎಷ್ಟು ಹುಡುಕಿದರೂ ಮಗಳು ಸಿಗದ ಹಿನ್ನಲೆ ತಂದೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಆದ್ರೆ ಆ ಬೆನ್ನಲ್ಲೇ ಮನೆಗೆ ಹಿಂದಿರುಗಿ ಬಂದಿದ್ದ ಮಹಿಳೆ, ಮರುದಿನ ಭೀಕರವಾಗಿ ಕೊಲೆಯಾಗಿದ್ದಾಳೆ. ಆಕೆಯನ್ನು ಕೊಂದಿದ್ದು ಯಾರು? ಘಟನೆ ಏನು ಎನ್ನುವ ಮಾಹಿತಿ ಇಲ್ಲಿದೆ.
- Ashwith Mavinaguni
- Updated on: Dec 3, 2025
- 2:56 pm
ದತ್ತ ಜಯಂತಿ ಶೋಭಾಯಾತ್ರೆ: ಚಿಕ್ಕಮಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್, ಬಿಗಿ ಬಂದೋಬಸ್ತ್
ದತ್ತಜಯಂತಿ ಆಚರಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಿರುವುದಾಗಿ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮ್ಟೆ ತಿಳಿಸಿದ್ದಾರೆ. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಶೋಭಾಯಾತ್ರೆ ನಡೆಯಲಿದ್ದು, ಪ್ರಚೋದನಕಾರಿ ಘೋಷಣೆ ಕೂಗಿದರೆ ಸುಮೋಟೋ ಕೇಸ್ ದಾಖಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಶಾಂತಿ–ಸೌಹಾರ್ದ ಕಾಪಾಡುವಂತೆ ಮನವಿ ಮಾಡಿದ್ದಾರೆ.
- Ashwith Mavinaguni
- Updated on: Dec 3, 2025
- 10:46 am
ಕಾರ್ಕಳ – ಶೃಂಗೇರಿ ಹೆದ್ದಾರಿ ಬದಿಯಲ್ಲೇ ಕಾಡಾನೆ ಸಂಚಾರ: ವಾಹನ ಸವಾರರಲ್ಲಿ ಅತಂಕ
ಕಾರ್ಕಳ - ಶೃಂಗೇರಿ ಮಧ್ಯೆ ಸಂಚರಿಸುವ ವಾಹನ ಸವಾರರಲ್ಲಿ ಒಂಟಿ ಸಲಗವೊಂದು ಆತಂಕ ಸೃಷ್ಟಿಸಿದೆ. ಕಾಡಾನೆಯು ಕಳೆದ ಕೆಲವು ದಿನಗಳಿಂದ ಕುದುರೆಮುಖ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಓಡಾಡುತ್ತಿದೆ. ಸದ್ಯ ಗಂಗಾಮೂಲ ಪ್ರದೇಶದ ಕುರಿಂಜಾಲು ಮತ್ತು ಗಂಗಡಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ವಿಡಿಯೋ ಇಲ್ಲಿದೆ.
- Ashwith Mavinaguni
- Updated on: Dec 2, 2025
- 9:51 am
ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್: ಭುಗಿಲೆದ್ದ ಆಕ್ರೋಶ
ಡಿಸೆಂಬರ್ 2 ರಿಂದ ಪ್ರಾರಂಭವಾಗುವ ಮೂರು ದಿನಗಳ ದತ್ತ ಜಯಂತಿ ಉತ್ಸವಕ್ಕೆ ಚಿಕ್ಕಮಗಳೂರು ಸಜ್ಜಾಗಿದೆ. ಹೀಗಾಗಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದರ ಮಧ್ಯೆ ಶಬರಿಮಲೆ ಅಯ್ಯಪ್ಪ ಮಾಲೆ ವಿಚಾರವಾಗಿ ವಿವಾದವೊಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿಬಂದಿದ್ದರಿಂದ ಕಾಲೇಜಿನಿಂದ ಹೊರಹಾಕಿರುವ ಘಟನೆ ನಡೆದಿದೆ.
- Ashwith Mavinaguni
- Updated on: Dec 1, 2025
- 3:00 pm