AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

Author - TV9 Kannada

ashwith.poornesha@tv9.com

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸ್ವಗ್ರಾಮದಲ್ಲಿ ಮೂರು ದೇವಸ್ಥಾನ ಕಟ್ಟಿಸಿರುವ ಹೆಚ್​ಡಿಡಿ ಧರ್ಮಪತ್ನಿ: ಚೆನ್ನಮ್ಮರ ದೈವಭಕ್ತಿಗೆ ಹುಟ್ಟೂರೇ ಸಾಕ್ಷಿ!

ಸ್ವಗ್ರಾಮದಲ್ಲಿ ಮೂರು ದೇವಸ್ಥಾನ ಕಟ್ಟಿಸಿರುವ ಹೆಚ್​ಡಿಡಿ ಧರ್ಮಪತ್ನಿ: ಚೆನ್ನಮ್ಮರ ದೈವಭಕ್ತಿಗೆ ಹುಟ್ಟೂರೇ ಸಾಕ್ಷಿ!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ, ಪರಮ ದೈವಭಕ್ತೆ ಚೆನ್ನಮ್ಮನವರು ನಿಧನರಾಗಿದ್ದು, ಅವರ ತವರು ಗ್ರಾಮ ಮುತ್ತಿಗೆಹಿರೇಹಳ್ಳಿಯಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ರಾಜಮನೆತನದ ಹಿನ್ನೆಲೆ ಇದ್ದರೂ ಸದಾ ದೈವಾರಾಧನೆಯಲ್ಲೇ ಮುಳುಗಿದ್ದ ಅವರು ಹುಟ್ಟೂರಲ್ಲಿ ಮೂರು ದೇವಸ್ಥಾನಗಳನ್ನು ಕಟ್ಟಿಸಿದ್ದರು. ಜಾತ್ರೆಯಲ್ಲಿ ಮೊದಲ ಪೂಜೆ ಸ್ವೀಕರಿಸುತ್ತಿದ್ದ ತಾಯಿಯ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಊರಿಗೆ ತರಲು ಗ್ರಾಮಸ್ಥರು ವಿನಂತಿಸಿದ್ದಾರೆ.

ಆಟೋ ಡ್ರೈವರ್ ಅಕೌಂಟ್‌ನಲ್ಲಿ 29 ಲಕ್ಷ, ಪೌರಕಾರ್ಮಿಕನ ಖಾತೆಯಲ್ಲಿ 34 ಲಕ್ಷ! ಅಮಾಯಕರ ಬ್ಯಾಂಕ್ ಖಾತೆ ಬಳಸಿ ಕೋಟ್ಯಂತರ ರೂ. ವಂಚನೆ

ಆಟೋ ಡ್ರೈವರ್ ಅಕೌಂಟ್‌ನಲ್ಲಿ 29 ಲಕ್ಷ, ಪೌರಕಾರ್ಮಿಕನ ಖಾತೆಯಲ್ಲಿ 34 ಲಕ್ಷ! ಅಮಾಯಕರ ಬ್ಯಾಂಕ್ ಖಾತೆ ಬಳಸಿ ಕೋಟ್ಯಂತರ ರೂ. ವಂಚನೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಡವರ ಹಾಗೂ ದಿನಗೂಲಿ ನೌಕರರ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಂಡು ಲಕ್ಷಾಂತರ ರೂಪಾಯಿ ಅಕ್ರಮ ವಹಿವಾಟು ನಡೆಸಿರುವ ಸೈಬರ್ ವಂಚನೆ ಜಾಲ ಬೆಳಕಿಗೆ ಬಂದಿದೆ. ಆರು ರಾಜ್ಯಗಳ ಪೊಲೀಸರಿಂದ ನೋಟೀಸ್ ಬಂದ ಬಳಿಕ ಅಂತರರಾಷ್ಟ್ರೀಯ ಮಟ್ಟದ ಲಿಂಕ್ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.

ಚಿಕ್ಕಮಗಳೂರು: ಹಣಕ್ಕಾಗಿ‌ 20 ವರ್ಷದ ಮಗಳನ್ನೇ ಪಶ್ಚಿಮ ಆಫ್ರಿಕಾದಲ್ಲಿ ಮಾರಾಟ ಮಾಡಿದ ಪೋಷಕರು!

ಚಿಕ್ಕಮಗಳೂರು: ಹಣಕ್ಕಾಗಿ‌ 20 ವರ್ಷದ ಮಗಳನ್ನೇ ಪಶ್ಚಿಮ ಆಫ್ರಿಕಾದಲ್ಲಿ ಮಾರಾಟ ಮಾಡಿದ ಪೋಷಕರು!

Chikkamagaluru news: ಚಿಕ್ಕಮಗಳೂರು ಮೂಲದ 20 ವರ್ಷದ ನಂದಿತಾ ಎಂಬ ಯುವತಿಯನ್ನು ಸೆನೆಗಲ್‌ನಲ್ಲಿ ಆಕೆಯ ಪೋಷಕರೇ ಹಣಕ್ಕಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಯುವತಿಯನ್ನು ರಕ್ಷಿಸಲಾಗಿದೆ. ಪ್ರಕರಣದ ಕುರಿತು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘ ಎಸ್ಪಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದೆ.

ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ  ಬಿದ್ದಿದ್ದ ಕಾರ್ಮಿಕನ ರಕ್ಷಣೆ

ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದಲ್ಲಿ, 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕ ವಿಶ್ವನಾಥ್ ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಕೊಳವೆ ಬಾವಿಯ ಮೇಲ್ಭಾಗ ಸ್ವಚ್ಛಗೊಳಿಸುವಾಗ ವಿಶ್ವನಾಥ್ ಆಳಕ್ಕೆ ಬಿದ್ದಿದ್ದು, ಗಂಭೀರ ಗಾಯಗಳಾಗಿವೆ. ಕೂಡಲೇ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಫಿನಾಡಿನಲ್ಲಿ ಬಯಲಾಯ್ತು ಬೃಹತ್‌ ಬ್ಯಾಂಕ್‌ ಹಗರಣ: ಬಡವರ ಖಾತೆ ಬಳಸಿ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್‌ ಮೂಲಕ ಕೋಟ್ಯಂತರ ರೂ. ಅಕ್ರಮ ವಹಿವಾಟು!

ಕಾಫಿನಾಡಿನಲ್ಲಿ ಬಯಲಾಯ್ತು ಬೃಹತ್‌ ಬ್ಯಾಂಕ್‌ ಹಗರಣ: ಬಡವರ ಖಾತೆ ಬಳಸಿ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್‌ ಮೂಲಕ ಕೋಟ್ಯಂತರ ರೂ. ಅಕ್ರಮ ವಹಿವಾಟು!

ಚಿಕ್ಕಮಗಳೂರಿನಲ್ಲಿ ಬಡವರ ದಾಖಲೆಗಳನ್ನು ಬಳಸಿ ನಕಲಿ ಖಾತೆಗಳನ್ನು ತೆರೆದು, ಕ್ರಿಕೆಟ್ ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಕೋಟ್ಯಂತರ ರೂ. ಅಕ್ರಮ ವಹಿವಾಟು ನಡೆಸಿರುವ ಬೃಹತ್ ಹಗರಣ ಬಯಲಾಗಿದೆ. ಈ ಜಾಲದ ಹಿಂದೆ ಜೆಡಿಎಸ್ ನಗರಸಭೆ ಸದಸ್ಯ ಗೋಪಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಬಿಐ ಹಾಗೂ ಇಡಿ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಶೃಂಗೇರಿಯಲ್ಲೂ ಭೂಕುಸಿತದ ಆತಂಕ: ಬಿರುಕುಗೊಂಡ ಬೃಹತ್ ತಡೆಗೋಡೆ

ಶೃಂಗೇರಿಯಲ್ಲೂ ಭೂಕುಸಿತದ ಆತಂಕ: ಬಿರುಕುಗೊಂಡ ಬೃಹತ್ ತಡೆಗೋಡೆ

Sringeri Retaining Wall Cracks: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದ ಬೃಹತ್​ ತಡೆಗೋಡೆ ಬಿರುಕು ಬಿಟ್ಟಿದೆ. ನಿರ್ಮಾಣವಾಗಿ ಕೆಲವೇ ತಿಂಗಳಲ್ಲಿ ತಡೆಗೋಡೆ ಬಿರುಕು ಬಿಟ್ಟಿದ್ದು, ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ. ಮಳೆ ಹೆಚ್ಚಾದರೆ ತಡೆಗೋಡೆ ಕೆಳಭಾಗದಲ್ಲಿರುವ ಮನೆ, ಅಂಗಡಿಗಳು ತುಂಗಾ ನದಿ ಪಾಲಾಗುವ ಭೀತಿ ಎದುರಾಗಿದೆ.

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಸಮಾಧಾನ ಸ್ಫೋಟ: ಸ್ವಪಕ್ಷದವರಿಂದಲೇ ಬಿಕೆ ಹರಿಪ್ರಸಾದ್​​ಗೆ ದೂರು

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಸಮಾಧಾನ ಸ್ಫೋಟ: ಸ್ವಪಕ್ಷದವರಿಂದಲೇ ಬಿಕೆ ಹರಿಪ್ರಸಾದ್​​ಗೆ ದೂರು

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷರಿಗೆ 16 ಅಂಶಗಳನ್ನೊಳಗೊಂಡ ದೂರು ನೀಡಿದ್ದಾರೆ. ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ, ಆರ್‌ಎಸ್‌ಎಸ್-ಬಜರಂಗದಳದೊಂದಿಗೆ ಆಪ್ತತೆ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬರುವ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು

ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು

Charmadi Ghat Landslide: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್‌ನಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಸಂಭವಿಸಿದೆ. ಅಲೇಖಾನ್ ಸಮೀಪ ರಸ್ತೆಗೆ ಬೃಹತ್ ಬಂಡೆಗಳು ಮತ್ತು ಮಣ್ಣು ಕುಸಿದಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆ ಮುಂದುವರಿದರೆ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ.

ಹಸಿರ ಮಡಿಲಲ್ಲಿ ಹಾಲಿನ ಹೊನಲು: ಮನಸೆಳೆಯುತ್ತಿದೆ ಕುದುರೆಮುಖದ ಹನುಮನಗುಂಡಿ ಜಲಪಾತ

ಹಸಿರ ಮಡಿಲಲ್ಲಿ ಹಾಲಿನ ಹೊನಲು: ಮನಸೆಳೆಯುತ್ತಿದೆ ಕುದುರೆಮುಖದ ಹನುಮನಗುಂಡಿ ಜಲಪಾತ

ಚಿಕ್ಕಮಗಳೂರಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಹನುಮನಗುಂಡಿ ಜಲಪಾತವು ಮುಂಗಾರು ಮಳೆಯಿಂದ ಕಣ್ಮನ ಸೆಳೆಯುತ್ತಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಪಾತವು ಹಾಲಿನ ಹೊನಲಿನಂತೆ ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಪ್ರೇಮಿಗಳಿಗೆ ರಮಣೀಯ ದೃಶ್ಯ ನೀಡಿದೆ. ಪ್ರವಾಸಿಗರು ಜಲಪಾತಕ್ಕೆ ಭೇಟಿ ನೀಡುವಾಗ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಫಿನಾಡಿನಲ್ಲಿ ಮುಂಗಾರು ಮಳೆ ಆರ್ಭಟ: ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ

ಕಾಫಿನಾಡಿನಲ್ಲಿ ಮುಂಗಾರು ಮಳೆ ಆರ್ಭಟ: ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ

Surumane Falls: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಮೂಡಿಗೆರೆ, ಶೃಂಗೇರಿ, ಕಳಸ ಸೇರಿದಂತೆ ವಿವಿಧ ತಾಲೂಕುಗಳು ಜಲಾವೃತಗೊಂಡಿವೆ. ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರಸಿದ್ಧ ಸೂರುಮನೆ ಜಲಪಾತ ಭೋರ್ಗರೆದು ಹರಿಯುತ್ತಿದೆ. ಸೂರುಮನೆ ಜಲಪಾತದಲ್ಲಿ ಜಲರಾಶಿ ಧುಮ್ಮಿಕ್ಕುತ್ತಿರುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ: ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ: ವಾಹನ ಸವಾರರ ಪರದಾಟ

ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ ಹಾಗೂ ದಟ್ಟ ಮಂಜು ಆವರಿಸಿದ್ದು, ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ವಾಹನ ಸವಾರರು ಸಂಚರಿಸಲು ತೀವ್ರ ಪರದಾಡುವಂತಾಗಿದೆ. ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿದ್ದು, ಪ್ರಯಾಣಿಕರು ಹಾಗೂ ಪ್ರವಾಸಿಗರನ್ನು ಸೆಳೆಯುತ್ತಿದೆ.

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!

ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಸಿರು ರಾಶಿಯ ಮೇಲೆ ದಟ್ಟ ಮಂಜು ಚಿತ್ತಾರ ಬಿಡಿಸಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಈ ಘಾಟಿಯಲ್ಲಿ ಒಮ್ಮೆ ದಟ್ಟ ಮಂಜು ಕವಿದರೆ, ಮತ್ತೊಂದು ಕ್ಷಣದಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆಯಮಾರುತಗಳ ಈ ಮೋಡಿ ವಾಹನ ಸವಾರರಿಗೆ ಸವಾಲಾಗಿದ್ದರೂ, ಪ್ರವಾಸಿಗರನ್ನು ಮಾತ್ರ ಮಂತ್ರಮುಗ್ಧರನ್ನಾಗಿಸಿದೆ. ಪ್ರಕೃತಿಯ ಈ ಅದ್ಭುತ ಸೌಂದರ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‌ಗಳಲ್ಲಿ ಫುಲ್ ಖುಷಿಯಿಂದ ಸೆರೆಹಿಡಿದಿದ್ದಾರೆ.