‘ಕೈ’ ನಾಯಕರಿಗೆ ಶಾಕ್ ಕೊಟ್ಟ ಖಾಕಿ: ದಾವಣಗೆರೆಯಲ್ಲಿ ಸಚಿವರ ಆಪ್ತರೇ ಡ್ರಗ್ಸ್ ದಂಧೆಕೋರರು!
ಸಚಿವರ ಆಪ್ತರೇ ಭಾಗಿಯಾಗಿದ್ದ ಬೃಹತ್ ಡ್ರಗ್ಸ್ ದಂಧೆಯನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಸಚಿವರ ಆಪ್ತರಿಂದಲೇ ಡ್ರಗ್ಸ್ ದಂಧೆ ನಡೆಯುತ್ತಿದ್ದರೂ ಪೊಲೀಸರು ನಿರ್ಭೀತಿಯಿಂದ ಕಿಂಗ್ ಪಿನ್ಗಳ ಹೆಡೆಮುರಿ ಕಟ್ಟಿರೋದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
- Basavaraj Doddamani
- Updated on: Dec 29, 2025
- 4:54 pm
ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ "ಅಧಿಕಾರಿಗಳ ನಡೆ ಗ್ರಾಮಗಳ ಕಡೆ" ಎಂಬ ವಿನೂತನ ಕಾರ್ಯಕ್ರಮದ ಮೂಲಕ ಜನರ ಗಮನ ಸೆಳೆದಿದ್ದಾರೆ. ಬೆಳಗ್ಗೆ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡುತ್ತಿದ್ದಾರೆ. ಈ ಮೂಲಕ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ.
- Basavaraj Doddamani
- Updated on: Dec 28, 2025
- 6:42 pm
ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಲ್ಲಿದೆ. ಈ ನಡುವೆಯೂ ಸಿದ್ದರಾಮಯ್ಯ ಮತ್ತು ಡಿಕೆಶಿ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದ್ದಾರೆ.
- Basavaraj Doddamani
- Updated on: Dec 26, 2025
- 2:21 pm
ಜಾತ್ರೆ, ಪೆಟ್ರೋಲ್ ಬಂಕ್ ಸೇರಿ ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ವಿಜಯನಗರ ಜಿಲ್ಲೆಯ ಅರಸೀಕೆರೆ ಪೊಲೀಸರು ಕೋಟಾ ನೋಟು ಚಲಾವಣೆ ಗ್ಯಾಂಗ್ ಅನ್ನು ಬಂಧಿಸಿದ್ದು, ಈ ಜಾಲದಲ್ಲಿ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಾರ್ವಜನಿಕರು ನೋಟು ಸ್ವೀಕರಿಸುವ ವೇಳೆ ಎಚ್ಚರಿಕೆ ವಹಿಸಬೇಕು ಹಾಗೂ ಸಂಶಯಾಸ್ಪದ ನೋಟುಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
- Basavaraj Doddamani
- Updated on: Dec 26, 2025
- 7:49 am
ದಾವಣಗೆರೆ: ಗಾಂಜಾ ಕೇಸ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅರೆಸ್ಟ್
ದಾವಣಗೆರೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಶ್ಯಾಮನೂರು ವೇದಮೂರ್ತಿಯವರನ್ನು ಗಾಂಜಾ ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಜೊತೆಗೆ ರಾಜಸ್ಥಾನ ಮೂಲದ ಇನ್ನು ಮೂವರನ್ನು ಬಂಧಿಸಲಾಗಿದೆ. 11 ಲಕ್ಷ ರೂ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಡಿಯೋ ನೋಡಿ.
- Basavaraj Doddamani
- Updated on: Dec 23, 2025
- 9:44 pm
ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್! ವಂಚಕನ ಖಾತೆಯಲ್ಲಿ 1000 ಕೋಟಿ ರೂ.ಗೂ ಹೆಚ್ಚು ವಹಿವಾಟು
ರಾಜ್ಯದಲ್ಲೇ ಅತಿದೊಡ್ಡ ಎಂದು ಪರಿಗಣಿಸಬಹುದಾದಂಥ 1000 ಕೋಟಿ ರೂ. ಸೈಬರ್ ವಂಚನೆ ಪ್ರಕರಣವನ್ನು ದಾವಣಗೆರೆ ಪೊಲೀಸರು ಬಯಲಿಗೆಳೆದಿದ್ದಾರೆ. ಕರೆಂಟ್ ಅಕೌಂಟ್ಗಳನ್ನು ಮಾರಾಟ ಮಾಡಿ ಅಕ್ರಮ ಆನ್ಲೈನ್ ಗೇಮಿಂಗ್, ವಹಿವಾಟುಗಳಿಗೆ ಬಳಸುತ್ತಿದ್ದ ಜಾಲ ಇದಾಗಿದೆ. ದುಬೈ ಸೇರಿದಂತೆ ವಿದೇಶಗಳಿಂದಲೂ ಹಣ ಹರಿದುಬರುತ್ತಿತ್ತು ಎನ್ನಲಾಗಿದ್ದು, ಸದ್ಯ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.
- Basavaraj Doddamani
- Updated on: Dec 20, 2025
- 12:16 pm
ವಿವಿಧ ಕೇಸ್ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ
ದಾವಣಗೆರೆ ಪೊಲೀಸರು ವಿವಿಧ ಕಳವು ಪ್ರಕರಣ ಭೇದಿಸಿ, 20.38 ಕೋಟಿ ರೂ. ಮೌಲ್ಯದ ಕಳವು ಸೊತ್ತನ್ನು ಆಯಾ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಮತ್ತು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ನಡೆದ ಪ್ರಾಪರ್ಟಿ ರಿಟರ್ಸ್ ಪೆರೇಡ್ನಲ್ಲಿ ಬಂಗಾರ, ಬೆಳ್ಳಿ ಸೇರಿದಂತೆ ಹಲವು ವಸ್ತುಗಳನ್ನು ಮರಳಿಸಿದ್ದಾರೆ. ತಮ್ಮ ವಸ್ತುಗಳನ್ನು ಪಡೆದು ವಾರಸುದಾರರು ಸಂತಸಗೊಂಡರು.
- Basavaraj Doddamani
- Updated on: Dec 19, 2025
- 4:58 pm
ಮಹೇಶ್ವರಸ್ವಾಮಿ ಜಾತ್ರೆಗೆ ಪುರುಷರಿಗೆ ಮಾತ್ರ ಅವಕಾಶ: ಅಪ್ಪಿತಪ್ಪಿ ಮಹಿಳೆಯರು ಬಂದ್ರೆ ನಡೆಯುತ್ತೆ ಅನಾಹುತ
ದಾವಣಗೆರೆ ಹೊರವಲಯದ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಇದು ಒಂದು ವಿಶಿಷ್ಟ ಜಾತ್ರೆ, ಏಕೆಂದರೆ ಇಲ್ಲಿ ಪುರುಷರಿಗೆ ಮಾತ್ರ ಪ್ರವೇಶವಿದೆ, ಮಹಿಳೆಯರಿಗೆ ಪ್ರವೇಶ ನಿಷಿದ್ಧ. ಪುಷ್ಯ ಮಾಸದ ಎಳ್ಳು ಅಮವಾಸ್ಯೆಯಂದು ಮೂರು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಬಾಳೆಹಣ್ಣಿನ ಸಿಪ್ಪೆಗಳ ವಿಸರ್ಜನೆಯ ಮೂಲಕ ಗ್ರಾಮದ ಭವಿಷ್ಯವನ್ನು ಊಹಿಸುವ ನಂಬಿಕೆಯೂ ಇದೆ. ಈ ಪ್ರಾಚೀನ ಪದ್ಧತಿ 50-60 ವರ್ಷಗಳಿಂದ ನಡೆದುಕೊಂಡು ಬಂದಿದೆ.
- Basavaraj Doddamani
- Updated on: Dec 18, 2025
- 8:15 am
ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ
ವಿಚಿತ್ರ ಹಾಗೂ ನಿಗೂಢ ಸ್ಫೋಟದ ಸದ್ದು ಕೇಳಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಜನರ ಆತಂಕಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಗ್ರಾಮಗಳಿಗೂ ಈ ಸದ್ದು ಕೇಳಿದ್ದು, ಸ್ಫೋಟದ ಸದ್ದಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಚಿಕ್ಕಮಲ್ಲನಹೊಳೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Basavaraj Doddamani
- Updated on: Dec 16, 2025
- 8:36 am
Shamanur Shivashankarappa Funeral: ಪಂಚಪೀಠ ಶ್ರೀಗಳ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ
ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿವಿಧಾನ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಪಂಚಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಪತ್ನಿ ಸಮಾಧಿ ಪಕ್ಕದಲ್ಲೇ ಅವರನ್ನು ಕ್ರಿಯಾ ಸಮಾಧಿ ಮಾಡಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ, ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ವಿಧಿವಿಧಾನ ನೆರವೇರಿಸಿದರು. ಗಣ್ಯರು, ಮಠಾಧೀಶರು, ಸಾವಿರಾರು ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.
- Basavaraj Doddamani
- Updated on: Dec 15, 2025
- 6:35 pm
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದಾರೆ. ದಾವಣಗೆರೆಯ ಅಪ್ಪಾಜಿ ಎಂದು ಕರೆಸಿಕೊಳ್ಳುತ್ತಿದ್ದ ಇವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಬರುತ್ತಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳು ಹೇಗೆ ನಡೆಯುತ್ತವೆ ಎಂಬುದನ್ನು ದಾರುಕಾ ಶಾಸ್ತ್ರಿಗಳು ವಿವರಿಸಿದ್ದಾರೆ.
- Basavaraj Doddamani
- Updated on: Dec 15, 2025
- 11:07 am
ದಾವಣಗೆರೆಯಲ್ಲಿ ಇಂದು ಶಾಮನೂರು ಅಂತಿಮ ದರ್ಶನ: ಪತ್ನಿ ಸಮಾಧಿ ಪಕ್ಕದಲ್ಲೇ ಚಿರನಿದ್ರೆಗೆ ಶಾಮನೂರು ಶಿವಶಂಕರಪ್ಪ
ಹಿರಿಯ ರಾಜಕಾರಣಿ ಹಾಗೂ ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಲಿಂಗೈಕ್ಯರಾಗಿದ್ದಾರೆ. ದಾವಣಗೆರೆಗೆ ವಿದ್ಯಾಕಾಶಿ ಎಂಬ ಇನ್ನೊಂದು ತಂದು ಕೊಟ್ಟವರು ಶಾಮನೂರ ಶಿವಶಂಕರಪ್ಪ. ಇಂತಹ ಶಾಮನೂರ ಶಿವಶಂಕರಪ್ಪ ಇನ್ನು ನೆನಪು ಮಾತ್ರ. ಅವರ ಅಂತಿಮ ದರ್ಶನಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ಇಂದು ಸಂಜೆಯೇ ಶಾಮನೂರು ಶಿವಶಂಕರಪ್ಪ ಪತ್ನಿ ಸಮಾಧಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಲಿದ್ದಾರೆ.
- Basavaraj Doddamani
- Updated on: Dec 15, 2025
- 6:27 am