ದಾವಣಗೆರೆ: ಮೂರೇ ತಿಂಗಳಲ್ಲಿ 50 ಲಕ್ಷ ರೂ. ತೆರಿಗೆ ಸಂಗ್ರಹಿಸಿದ ಮಹಿಳೆಯರು! ಇದು ಕರ್ನಾಟಕದಲ್ಲೇ ಮೊದಲು
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಕೇವಲ ಮೂರು ತಿಂಗಳಲ್ಲಿ 50 ಲಕ್ಷ ರೂಪಾಯಿಗಳನ್ನು ತೆರಿಗೆಯಾಗಿ ಸಂಗ್ರಹಿಸಿ ರಾಜ್ಯದಲ್ಲೇ ಅಪೂರ್ವ ಸಾಧನೆ ಮಾಡಿದ್ದಾರೆ. ಇದರಿಂದ ಅವರಿಗೆ 5 ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ದೊರೆಯಲಿದೆ. ಇದರೊಂದಿಗೆ, ರಾಜ್ಯ ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವನ್ನು ಅನುಷ್ಠಾನಗೊಳಿಸಿ ಯಶಸ್ವಿಯಾದ ಮೊದಲ ಪಾಲಿಕೆ ಎಂಬ ಹೆಗ್ಗಳಿಗೆ ದಾವಣಗೆರೆಯದ್ದಾಗಿದೆ.
- Basavaraj Doddamani
- Updated on: Jul 10, 2025
- 9:37 am
PM, CMಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ, ವಿಡಿಯೋ ಮಾಡಿಟ್ಟು ಯುವಕ ನೇಣಿಗೆ ಶರಣು
ಆನ್ಲೈನ್ ಗೇಮ್ನಲ್ಲಿ (Online Game) ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25) ಎಂದು ಗುರುತಿಸಲಾಗಿದೆ. ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ. ಆದ್ರೆ ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
- Basavaraj Doddamani
- Updated on: Jul 3, 2025
- 8:46 pm
ಬೆಣ್ಣೆ ನಗರಿ ದಾವಣಗೆರೆಯಲ್ಲೂ ಹೃದಯಾಘಾತ ಆತಂಕ ..ಆಸ್ಪತ್ರೆಗಳಲ್ಲಿ ಜನಜಂಗುಳಿ
ಬೆಣ್ಣೆ ನಗರಿ ದಾವಣಗೆರೆಯಲ್ಲಿ ಗೊತ್ತಿಲ್ಲದೇ ಜನರ ಹೃದಯ ಹಿಂಡುವ ಘಟನೆ ಬೆಳಕಿಗೆ ಬರುತ್ತಿವೆ. ದಾವಣಗೆರೆ ಜಿಲ್ಲಾ ಆಸ್ಪತ್ರೆ ಯೊಂದರಲ್ಲಿಯೇ ಹೃದಯಾಘಾತದಿಂದ ಮೂರು ತಿಂಗಳಲ್ಲಿ ಬರೋಬರಿ 75 ಜನ ಸಾವನ್ನಪ್ಪಿದ್ದಾರೆ. ಇವರೆಲ್ಲಾ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪಿದ್ದು.ಹೀಗೆ ಸಾವಿನ ಸುದ್ದಿ ಕೇಳುತ್ತಿದ್ದಂತೆ ಜನರು ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದು, ಇಸಿಜಿ ಮಾಡಿಸಿಕೊಂಡು ತಮ್ಮ ಹೃದಯದ ಆರೋಗ್ಯದ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ.
- Basavaraj Doddamani
- Updated on: Jul 2, 2025
- 8:06 pm
ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಗೆ ಬೀಗ: ಸೂರು ಇಲ್ಲದೇ ಅಂಗಳದಲ್ಲೇ ವೃದ್ಧ ದಂಪತಿ ಜೀವನ
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ವೃದ್ಧ ದಂಪತಿಯನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಯಿಂದ ಹೊರ ಹಾಕಿ, ಬೀಗ ಜಡಿದು ನೋಟಿಸ್ ಅಂಟಿಸಿ ಹೋಗಿದ್ದಾರೆ. ವೃದ್ಧ ದಂಪತಿ ಕಳೆದ ಐದು ತಿಂಗಳಿಂದ ಹಣ ಪಾವತಿಸಲು ವಿಫಲರಾಗಿದ್ದರಿಂದ, ಮನೆಯಿಂದ ಹೊರಗೆ ಹಾಕಲಾಗಿದೆ.ಸರ್ಕಾರದ ಸುಗ್ರೀವಾಜ್ಞೆ ಜಾರಿ ನಂತರವೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿದೆ.
- Basavaraj Doddamani
- Updated on: Jul 1, 2025
- 6:21 pm
ಅಳಿಯನ ಜೊತೆ ಅತ್ತೆ ಪರಾರಿ: ಮೊಬೈಲ್ ನಲ್ಲಿ ತಾಯಿಯೊಂದಿಗೆ ಗಂಡನ ಸರಸ ನೋಡಿ ಪತ್ನಿ ಶಾಕ್!
ಅಳಿಯನೋರ್ವ ಹೆಂಡ್ತಿ ತಾಯಿ ಅಂದರೆ ಅತ್ತೆಯೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುವುದನ್ನು ನೋಡಿದ್ದೇವೆ, ಕೇಳುತ್ತಿದ್ದೆವು. ಆದ್ರೆ, ಅಚ್ಚರಿ ಎಂಬಂತೆ ಕರ್ನಾಟಕದಲ್ಲಿ ಇಂತಹದ್ದೊಂದು ಪ್ರಕರಣ ನಡೆದಿದೆ. ದಾವಣಗೆರೆಯಲ್ಲಿ 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಮೊಬೈಲ್ ನಲ್ಲಿ ತಾಯಿ-ಗಂಡನ ಸರಸ ಸಲ್ಲಾಪ ನೋಡಿ ಪತ್ನಿ ಶಾಕ್ ಆಗಿದ್ದಾಳೆ.
- Basavaraj Doddamani
- Updated on: Jun 27, 2025
- 5:03 pm
ಅಬ್ಬಬ್ಬಾ…ಒಂದೇ ಬೈಕ್ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಬೈಕ್ ನಲ್ಲಿ ಒಬ್ಬರು, ಇಬ್ಬರು, ಲಾಸ್ಟ್ ಅಂದ್ರೆ ಮೂವರು ಹೋಗಬಹುದು. ಅದು ತ್ರಿಬಲ್ ರೈಡಿಂಗ್ ಮಾಡುವಮತಿಲ್ಲ. ಸಂಚಾರಿ ನಿಯಮ ಉಲ್ಲಂಘನೆಯಾಗುತ್ತೆ. ಆದರೂ ಸಹ ಸಂಚಾರಿ ನಿಯಮವನ್ನು ಗಾಳಿಗೆ ತೂರಿ ಒಂದೇ ಬೈಕ್ ನಲ್ಲಿ ಐದು ಜನ ಸವಾರಿ ಮಾಡಿದ್ದಾರೆ. ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಈ ದೃಶ್ಯ ಕಂಡುಬಂದಿದ್ದು, ವಿಡಿಯೋ ವೈರಲ್ ಆಗಿದೆ.
- Basavaraj Doddamani
- Updated on: Jun 24, 2025
- 9:23 pm
ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್: ಅನ್ನದಾತ ಸುಖೀಭವ
ಮೆಕ್ಕೆಜೋಳ ಬೆಳೆದು ಬೇಸತ್ತಿದ್ದ ಸಾವಿರಾರು ರೈತರಿಗೆ ಯುವ ರೈತ ಆಶಾಕಿರಣ ಆಗಿದ್ದಾರೆ. ಕಡಿಮೆ ಖರ್ಚಿನಲ್ಲೇ ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯುವು ಹೇಗೆ ಎಂಬುವುದನ್ನು ಯುವ ರೈತ ತೋರಿಸಿಕೊಟ್ಟಿದ್ದಾರೆ. ಯುವ ರೈತನ ಕಾರ್ಯಕ್ಕೆ ಇತರ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಯುವ ರೈತ ಒಂದು ವರ್ಷಕ್ಕೆ ಪ್ರತಿ ಎಕರೆಯಲ್ಲಿ 2-6 ಲಕ್ಷ ರೂಪಾಯಿ ಲಾಭ ಗಳಿಸಿದ್ದಾರೆ. ಇಲ್ಲಿದೆ ವರದಿ.
- Basavaraj Doddamani
- Updated on: Jun 23, 2025
- 10:32 pm
ಇದೇ ವಿಧಿಯಾಟ: ತಂಗಿ ಶವಸಂಸ್ಕಾರಕ್ಕೆ ಬಂದವರು ಅಕ್ಕನ ಅಂತ್ಯಸಂಸ್ಕಾರ ಮಾಡಬೇಕಾಯ್ತು!
ಸಾವು ಯಾವಾಗ? ಯಾವ ರೀತಿ ಬರುತ್ತೆ ಅಂತ ಯೋಚನೆ ಸಹ ಮಾಡುವುದಕ್ಕೂ ಆಗುತ್ತಿಲ್ಲ. ಮನೆಯಿಂದ ಆಚೆ ಹೋದವರು ವಾಪಸ್ ಬರ್ತಾರೆ ಎನ್ನುವದೇ ಗ್ಯಾರಂಟಿ ಇಲ್ಲ. ಇನ್ನು ರಾತ್ರಿ ಮಲಗಿದ್ದವರು ಬೆಳಗ್ಗೆ ಎದ್ದೇಳುತ್ತಾರೆ ಎನ್ನುವುದು ಗೊತ್ತಿಲ್ಲ. ಅದರಂತೆ ತಂಗಿ ಅಂತ್ಯಸಂಸ್ಕಾರಕ್ಕೆಂದು ಹೊರಟ್ಟಿದ್ದ ಅಕ್ಕನೂ ಸಹ ಮಸಣ ಸೇರುವಂತಾಗಿದೆ. ತಂಗಿ ಶವ ಸಂಸ್ಕಾರದ ಬಳಿಕ ಸಂಬಂಧಿಕರು ಅಕ್ಕನ ಅಂತ್ಯಸಂಸ್ಕಾರವನ್ನ ನೆರವೇರಿಸಿದ್ದಾರೆ.
- Basavaraj Doddamani
- Updated on: Jun 20, 2025
- 4:50 pm
ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಬಂದ ಇಬ್ಬರು ವಿದ್ಯಾರ್ಥಿನಿಯರು: ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ
ದಾವಣಗೆರೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ಕರ್ನಾಟಕಕ್ಕೆ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ. ಇಬ್ಬರೂ 624 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮರುಮೌಲ್ಯಮಾಪನದ ನಂತರ ಅವರಿಗೆ ತಲಾ ಎರಡು ಅಂಕಗಳು ಹೆಚ್ಚಾಗಿವೆ.
- Basavaraj Doddamani
- Updated on: May 26, 2025
- 2:25 pm
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
10ನೇ ತರಗತಿಯಲ್ಲಿ ಉತ್ತೀರ್ಣರಾದ ಆರು ವಿದ್ಯಾರ್ಥಿಗಳಿಗೆ ಮೊನ್ನೇ ಅಷ್ಟೇ ಸಚಿವ ಜಮೀರ್ ಅಹ್ಮದ್ ಖಾನ್ 3.5 ಲಕ್ಷ ಹಣ ಹಾಗೂ 6 ಸ್ಕೂಟಿಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ತಮ್ಮ ಅಪ್ಪಟ ಅಭಿಮಾನಿಯೊಬ್ಬರ ಕುಟುಂಬಕ್ಕೆ 5 ಲಕ್ಷ ರೂಪಾಯಿ ದನ ಸಹಾಯ ಮಾಡಿದ್ದಾರೆ. ಹಾವೇರಿಯ ಹಾನಗಲ್ ತಾಲೂಕಿನ ನಾಗರಹಳ್ಳಿ ಗ್ರಾಮದ ಮಹಮ್ಮದ್ ಜಾಫರ್ ಎನ್ನುವರು ಅಪ್ಪಟ ಜಮೀರ್ ಅಹ್ಮದ್ ಅವರ ಅಭಿಮಾನಿ ಆಗಿದ್ದರು.
- Basavaraj Doddamani
- Updated on: May 25, 2025
- 6:05 pm
ದಾವಣಗೆರೆ: ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದಲೇ ಚಿನ್ನಾಭರಣ ಕದ್ದು ಬೇರೆ ಬ್ಯಾಂಕ್ಗಳಲ್ಲಿ ಅಡವಿಟ್ಟ ಗೋಲ್ಡ್ ಲೋನ್ ಆಫೀಸರ್!
ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದಲೇ 3 ಕೆಜಿಯಷ್ಟು ಚಿನ್ನಾಭರಣ ಕಳವು ಮಾಡಿ ಪೊಲೀಸರ ಅತಿಥಿಯಾದ ವಿದ್ಯಮಾನ ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ನಡೆದಿದೆ. ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಹಣ ಹೊಂದಿಸುವುದಕ್ಕಾಗಿ ಆತ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
- Basavaraj Doddamani
- Updated on: May 15, 2025
- 10:28 am
ದಾವಣಗೆರೆ ರೌಡಿಶೀಟರ್ ಸಂತೋಷ್ ಹತ್ಯೆ ಪ್ರಕರಣ: ಆರೋಪಿಗಳು ಪೊಲೀಸರ ಮುಂದೆ ಶರಣು
ದಾವಣಗೆರೆಯಲ್ಲಿ ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದಲ್ಲಿ 10 ಆರೋಪಿಗಳು ಹೊಳಲ್ಕೆರೆ ಪೊಲೀಸರ ಎದುರು ಶರಣಾಗಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ 12 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹತ್ಯೆಯಾದ ಸಂತೋಷ್ ಕುಮಾರ್ ಅವರ ಆಪ್ತರೇ ಹೆಚ್ಚಿನ ಆರೋಪಿಗಳು. ಬುಳ್ಳ ನಾಗ ಹತ್ಯೆಯಲ್ಲೂ ಇವರೇ ಭಾಗಿ ಎನ್ನಲಾಗಿದೆ. ಸಂತೋಷ್ ಕುಮಾರ್ ತನ್ನ ಸಹಚರರಿಗೆ ನೀಡಿದ್ದ ವಾಗ್ದಾನ ಉಳಿಸಿಕೊಳ್ಳದ ಕಾರಣ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.
- Basavaraj Doddamani
- Updated on: May 6, 2025
- 9:02 pm